Homeಮುಖಪುಟಮುಸುಕು, ಹಿಜಾಬ್‌, ಬಿಕಿನಿ, ಜೀನ್ಸ್‌ ಆಯ್ಕೆ ಮಹಿಳೆಯ ಹಕ್ಕು: ಪ್ರಿಯಾಂಕಾ

ಮುಸುಕು, ಹಿಜಾಬ್‌, ಬಿಕಿನಿ, ಜೀನ್ಸ್‌ ಆಯ್ಕೆ ಮಹಿಳೆಯ ಹಕ್ಕು: ಪ್ರಿಯಾಂಕಾ

- Advertisement -
- Advertisement -

ನವ ದೆಹಲಿ: ಕರ್ನಾಟಕದಲ್ಲಿ ತರಗತಿಯಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸಿರುವ ಕಾಲೇಜು ವಿದ್ಯಾರ್ಥಿಗಳನ್ನು ಬೆಂಬಲಿಸಿ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಮಾತನಾಡಿದ್ದು, ಯಾವ ಬಟ್ಟೆಯನ್ನು ಧರಿಸಬೇಕೆಂಬುದರ ಆಯ್ಕೆ ಅವರದು ಮತ್ತು ಈ ಹಕ್ಕನ್ನು ಸಂವಿಧಾನವು ರಕ್ಷಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.

“ಅದು ಬಿಕಿನಿಯಾಗಿರಲಿ, ಘೂಂಘಟ್‌ (ತಲೆ ಮೇಲೆ ಸೆರಗು ಮುಚ್ಚುವುದು) ಆಗಿರಲಿ, ಜೀನ್ಸ್ ಆಗಿರಲಿ ಅಥವಾ ಹಿಜಾಬ್ ಆಗಿರಲಿ, ಆಕೆ ಏನು ಧರಿಸಬೇಕೆಂದು ನಿರ್ಧರಿಸುವುದು ಮಹಿಳೆಯ ಹಕ್ಕು. ಈ ಹಕ್ಕು ಭಾರತೀಯ ಸಂವಿಧಾನದ ಮೂಲಕ ಖಾತರಿಪಡಿಸಿದೆ. ಮಹಿಳೆಯರಿಗೆ ಕಿರುಕುಳ ನೀಡುವುದನ್ನು ನಿಲ್ಲಿಸಿ” ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್ ಮಾಡಿದ್ದಾರೆ. #ladkihoonladsaktihoon (ಹುಡುಗಿಯಾಗಿದ್ದೇನೆ ಆದರೆ ಹೋರಾಟಬಲ್ಲೆ) ಎಂಬ ಹ್ಯಾಶ್‌ಟ್ಯಾಗ್‌ ಹಾಕಿದ್ದಾರೆ.

ನಾಳೆಯಿಂದ ಆರಂಭವಾಗಲಿರುವ ಏಳು ಹಂತದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಳಸಿರುವ ಧ್ಯೇಯವಾಕ್ಯ #ladkihoonladsaktihoon. ಕಾಂಗ್ರೆಸ್‌ ಪಕ್ಷವು ಮಹಿಳಾ ಹಕ್ಕುಗಳು ಮತ್ತು ಸಬಲೀಕರಣವನ್ನು ಚುನಾವಣೆಯ ಪ್ರಮುಖ ವಿಷಯಗಳಾಗಿ ಪರಿಗಣಿಸಿದೆ.

ಕಳೆದ ವಾರ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ತರಗತಿಗಳಲ್ಲಿ ಹಿಜಾಬ್ ಧರಿಸುವ ವಿದ್ಯಾರ್ಥಿಗಳ ಹಕ್ಕನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. “ವಿದ್ಯಾರ್ಥಿಗಳ ಹಿಜಾಬನ್ನು ಶಿಕ್ಷಣಕ್ಕೆ ಅಡ್ಡಿಯಾಗುವಂತೆ ಮಾಡಿ ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಕಸಿದುಕೊಳ್ಳುತ್ತಿದ್ದೇವೆ. ತಾಯಿ ಸರಸ್ವತಿಯು ಎಲ್ಲರಿಗೂ ಜ್ಞಾನವನ್ನು ನೀಡುತ್ತಾಳೆ. ಅವಳು ಯಾರೊಂದಿಗೂ ಭೇದ ತೋರಿಸುವುದಿಲ್ಲ” ಎಂದು ರಾಹುಲ್ ಟ್ವೀಟ್ ಮಾಡಿದ್ದರು.

ಕಾಲೇಜು ವಿದ್ಯಾರ್ಥಿಗಳು ತರಗತಿಯಲ್ಲಿ ಹಿಜಾಬ್ ಧರಿಸುವ ಹಕ್ಕಿನ ವಿರುದ್ಧ ಕರ್ನಾಟಕದ ಉಡುಪಿ, ಚಿಕ್ಕಮಗಳೂರು ಮತ್ತು ಮಂಡ್ಯ ಜಿಲ್ಲೆಗಳ ಹಲವಾರು ಕಡೆ ಆಘಾತಕಾರಿಯಾಗಿ ಪ್ರತಿಭಟನೆಗಳು ನಡೆಯುತ್ತಿವೆ.

ಮಂಡ್ಯದಲ್ಲಿ ಯುವಕರ ಗುಂಪೊಂದು ಯುವತಿಯೊಬ್ಬಳಿಗೆ ಕೇಸರಿ ಶಾಲುಗಳನ್ನು ಬೀಸುತ್ತಾ ‘ಜೈ ಶ್ರೀ ರಾಮ್’ ಎಂದು ಘೋಷಣೆ ಕೂಗುತ್ತಿರುವಾಗ ಮನಕಲಕುವ ದೃಶ್ಯ ವೈರಲ್‌ ಆಗಿದೆ. ಕೇಸರಿ ಪಡೆಯ ದೌರ್ಜನ್ಯವನ್ನು ಖಂಡಿಸಿದ ಏಕಾಂಗಿ ಹೆಣ್ಣುಮಗಳು ಧಾರ್ಮಿಕ ಹಕ್ಕನ್ನು ಪ್ರತಿಪಾದಿಸಿದ್ದು, ಪ್ರಶಂಸೆಗೆ ಪಾತ್ರವಾಗಿದೆ.

ವಿದ್ಯಾರ್ಥಿನಿ ಮುಸ್ಕಾನ್ ಎನ್‌ಡಿಟಿವಿಯೊಂದಿಗೆ ಮಾತನಾಡುತ್ತಾ, “ನಾನು ಚಿಂತಿಸಲಿಲ್ಲ. ನಾನು ಕಾಲೇಜಿಗೆ ಪ್ರವೇಶಿಸಿದಾಗ ನಾನು ಬುರ್ಖಾ ಧರಿಸಿದ್ದಕ್ಕಾಗಿ ಅವರು ನನಗೆ ಅವಕಾಶ ನೀಡಲಿಲ್ಲ. ಅವರು ನಮ್ಮ ಶಿಕ್ಷಣವನ್ನು ಹಾಳುಮಾಡುತ್ತಿದ್ದಾರೆ” ಎಂದು ಹೇಳಿಕೆ ನೀಡಿದ್ದಾರೆ.

ದಾವಣಗೆರೆ ಜಿಲ್ಲೆಯ ಎರಡು ಪಟ್ಟಣಗಳಲ್ಲಿ ಹಿಜಾಬ್ ಧರಿಸಿದ ಪ್ರತಿಭಟನಾಕಾರರು ಮತ್ತು ಕೇಸರಿ ಶಾಲು ಧರಿಸಿದವರು ಪರಸ್ಪರ ಕಲ್ಲು ತೂರಾಟ ನಡೆಸಿದ ನಂತರ ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೇಸರಿ ಸ್ಕಾರ್ಫ್ ಧರಿಸಿದ್ದ ಹುಡುಗರು ಶಾಲಾ ಆವರಣದಲ್ಲಿ ಕೇಸರಿ ಭಾವುಟ ಹಾರಿಸಿ ವಾತಾವರಣವನ್ನು ಕಲುಷಿತಗೊಳಿಸಿದ್ದಾರೆ.

ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಚಾಕು ಹಿಡಿದುಕೊಂಡಿದ್ದ ಇಬ್ಬರನ್ನು ಸೋಮವಾರ ಕುಂದಾಪುರದಲ್ಲಿ ಬಂಧಿಸಲಾಗಿದೆ.


ಇದನ್ನೂ ಓದಿರಿ: ಬಿಜೆಪಿಯನ್ನು ಸೋಲಿಸಲಿರುವ ಹಿಜಾಬ್: ಆಶ್ಚರ್ಯವಾದರೂ ಸತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....