Homeಕರ್ನಾಟಕದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

- Advertisement -
- Advertisement -

ಈ ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಅವತ್ತು ಕೆಂಪು ಕೋಟೆಯ ಮೇಲೆ ಕೂಡಾ ಕೇಸರಿ ಧ್ವಜ ಹಾರಿಸುತ್ತೇವೆ. ಮುಂದೊಂದು ದಿನ ಭಗವಾಧ್ವಜವೇ ರಾಷ್ಟ್ರಧ್ವಜ ಆಗಹುದು ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಬುಧವಾರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ವಿವಾದದ ಬಗ್ಗೆ ಮಾಧ್ಯಮದ ಜೊತೆಗೆ ಮಾತನಾಡಿದ ಈಶ್ವರಪ್ಪ, “ಇವತ್ತು ಇಡೀ ದೇಶದಲ್ಲಿ ತ್ರಿವರ್ಣ ಧ್ವಜ ರಾಷ್ಟ್ರಧ್ವಜ ಆಗಿದೆ. ಇದರಲ್ಲಿ ಏನೂ ಅನುಮಾನ ಇಲ್ಲ. ಅದಕ್ಕೆ ನಾವೆಲ್ಲರೂ ಕೂಡಾ ಗೌರವ ಕೊಡುತ್ತೇವೆ. ಅಲ್ಲಿ ಭಗವಾಧ್ವಜ ಹಾರಿಸಿದ್ದು ಹೌದು. ಕೇಸರಿ ಧ್ವಜ ಹಾರಿಸಬಾರದೇನು?” ಎಂದು ಕೇಳಿದ್ದಾರೆ.

ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿಧ್ವಜ ಹಾರಿಸಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, “ಕೇಸರಿ ಯಾವ ಧ್ವಜ ಸ್ಥಂಭದಲ್ಲಿ ಬೇಕಾದರೂ ಹಾರಿಸಬಹುದು. ಯಾವುದೇ ಸ್ಥಳದಲ್ಲಿ ಬೇಕಾದರೂ ಕೇಸರಿ ಧ್ವಜ ಹಾರಿಸಬಹುದು. ಆದರೆ ರಾಷ್ಟ್ರಧ್ವಜವನ್ನು ತೆಗೆದು ಯಾವುದೇ ಕೇಸರಿ ಧ್ವಜ ಹಾಕಿಲ್ಲ, ಹಾಕುವುದು ಇಲ್ಲ. ಹಿಂದೂ ಮುಸಲ್ಮಾನರಲ್ಲಿ ಧ್ವೇಷ ಬೆಳೆಸುವುದಕ್ಕೋಸ್ಕರ ರಾಷ್ಟ್ರ ಧ್ವಜವನ್ನು ಬಳಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾಕಿದ್ದಾರೆ ಎಂದು ಡಿಕೆ ಶಿವಕುಮಾರ್‌ ಸುಳ್ಳು ಹೇಳಿದ್ದಾರೆ. ರಾಷ್ಟ್ರಧ್ವಜದ ಬಗ್ಗೆ ಡಿಕೆ ಶಿವಕುಮಾರ್‌‌ಗಿಂತಲೂ ಹೆಚ್ಚು ಗೌರವ ನಮಗೆ ಇದೆ. ರಾಷ್ಟ್ರಧ್ವಜವನ್ನು ತೆಗೆದಿಲ್ಲ. ಧ್ವಜಸ್ಥಂಭಗಳಲ್ಲಿ ಕೇಸರಿ ಧ್ವಜವನ್ನು ಹಾಕಿಕೊಂಡು ಬಂದಿದ್ದಾರೆ. ಅದನ್ನು ತಿರುಗಿಸಿ ಹಿಂದೂ ಮುಸಲ್ಮಾನರ ಬಗ್ಗೆ ಗೊಂದಲ ಉಂಟು ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಕೇಸರಿ ಧ್ವಜ ಎಲ್ಲಿ ಬೇಕಾದರೂ ಹಾರಿಸಬಹುದು. ಮುಂದಿನ ದಿನದಲ್ಲಿ ಕೆಂಪುಕೋಟೆ ಮೇಲೆ ಹಾರಿಸುತ್ತೇವೆ. ನೂರಾರು ವರ್ಷಗಳ ಹಿಂದೆ ರಾಮ, ಮಾರುತಿಯ ರಥಗಳಲ್ಲಿ ಕೇಸರಿ ಧ್ವಜ ಇತ್ತು. ಆಗ ತ್ರಿವರ್ಣ ಧ್ವಜ ನಮ್ಮ ದೇಶದಲ್ಲಿ ಇತ್ತಾ? ಅದು ಈಗ ರಾಷ್ಟ್ರಧ್ವಜ ಆಗಿದೆ. ಆದರೆ ಈಗ ಈ ದೇಶದಲ್ಲಿ ಅನ್ನ ತಿಂದ ಪ್ರತಿಯೊಬ್ಬನೂ ರಾಷ್ಟ್ರಧ್ವಜಕ್ಕೆ ಗೌರವ ಕೊಡಬೇಕು, ಇದರ ಬಗ್ಗೆ ಪ್ರಶ್ನೆಯೆ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ಇವತ್ತು ಹಿಂದೂ ವಿಚಾರದ ಬಗ್ಗೆ, ಹಿಂದುತ್ವದ ಬಗ್ಗೆ ದೇಶದಲ್ಲಿ ಚರ್ಚೆಯಾಗುತ್ತಿದೆ. ಒಂದು ಕಾಲದಲ್ಲಿ ಅಯೋಧ್ಯೆ ರಾಮಮಂದಿರ ಕಟ್ಟುವ ಬಗ್ಗೆ ಕೇಳಿ ನಗುತ್ತಿದ್ದರು. ಈಗ ಕಟ್ಟಿದ್ದೇವೆ ಅಲ್ಲವೇ? ಹಾಗೆಯೆ ಯಾವುದೋ ಕಾದಲ್ಲಿ, ನೂರು, ಇನ್ನೂರು ಅಥವಾ ಐನೂರು ವರ್ಷಗಳಲ್ಲಿ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು. ಅದರ ಬಗ್ಗೆ ನನಗೆ ಗೊತ್ತಿಲ್ಲ. ಅದು ಎಲ್ಲಿ ಬೇಕಾದರೂ ಹಾರಾಡಬಹುದು. ಆದರೆ ಈಗ ಸಂವಿಧಾನ ಬದ್ದವಾಗಿ ತ್ರಿವರ್ಣ ಧ್ವಜವೇ ನಮ್ಮ ರಾಷ್ಟ್ರಧ್ವಜ ಎಂದು ಒಪ್ಪಿಕೊಂಡಿದ್ದೇವೆ. ಅದಕ್ಕೆ ಯಾರೇ ತಪ್ಪಿದರೂ ಅವ ರಾಷ್ಟ್ರದ್ರೋಹಿಯಾಗುತ್ತಾನೆ” ಎಂದು ಈಶ್ವರಪ್ಪ ಹೇಳಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಈಶ್ವರಪ್ಪನವರು ವರಿಷ್ಠರನ್ನು ತೃಷ್ಟಿಕರಿಸಿ ಮಂತ್ರಿಪದವಿ ಉಳಿಸಿಕೊಳ್ಳುವುದಕೋಸ್ಕರ ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ

  2. ಹುಚ್ಚು ಈಶ್ವರಪ್ಪ! ಹುಂಭುತನ ಏನೇನು ಮಾತಾನಾಡುತ್ತಾನೆ ಎಂಬುದು ಅವನಿಗೆ ಗೋತ್ತಿರುವದಿಲ್ಲವಂತೆ ಈಗಾಗೀ ಆತ ಬಿ.ಜೆ.ಪಿಯ ಹಳೆಯ ಕಾರ್ಯಕರ್ತರಾದರೂ ಆತನನ್ನು ಅವರು ಮುಖ್ಯಮಂತ್ರಿ ಮಾಡಲೇ ಇಲ್ಲ !

  3. ಅಭಿವೃದ್ಧಿ ಪರ ಕೆಲಸ ಮಾಡ್ರಿ ಜಾತಿ ಮತ ಧರ್ಮ ಕೇಸರಿ ಹಸಿರು ಕಪ್ಪು ನೀಲಿ ಅಂತಾ ರಾಜಕೀಯ ಮಾಡಿ ದೇಶದ ಸ್ವಾಸ್ತ್ಯ ಹಾಳು ಮಾಡಬೇಡಿ
    ಇದು ನಿಮ್ಮ ತಪ್ಪಲ್ಲಜಾತಿ ಧರ್ಮದ ಅಮಲಿನಲ್ಲಿ ನಿಮ್ಮಂತ ವರಿಗೆ vote ಹಾಕ್ತಾರಲ್ಲ ಅವ್ರೆಲ್ಲಾ ಬದಲಾಗಬೇಕು

  4. ಈಶ್ವರಪ್ಪ ಅಂತಹ ಅವಿವೇಕಿ ಮತ್ತು ವಿಕೃತ ಮನಸ್ಸಿನ ರಾಜಕಾರಣಿಗೆ ನಮ್ಮ ಜನ ವೋಟು ಹಾಕಿ ಗೆಲ್ಲಿಸಿರುವುದೇ ದೊಡ್ಡ ದುರಂತ!

    ಈಶ್ವರಪ್ಪ ಅವರ ಹೇಳಿಕೆ ದೇಶ ದ್ರೋಹಿ ಹೇಳಿಕೆಯಾಗಿದ್ದು, ರಾಷ್ಟ್ರ ಭಕ್ತರು ಎಂದು ಹೇಳಿಕೊಳ್ಳುವ ಕೇಸರಿಯಾ ರಾಷ್ಟ್ರೀಯ ಸುಲಭ್ ಸೌಚಾಲಯದ ಸ್ವಯಂ ಘೋಷಿತ ಮುಠ್ಠಾಳರು ಮೌನವಾಗಿರುವುದು ಏಕೆ?

    ಹಣ ಮತ್ತು ಅಧಿಕಾರದ ಅಹಂ ಹೊದ್ದುಕೊಂಡಿರುವ ಈಶ್ವರಪ್ಪ ಅವರೇ ಕಾಲಯ ತಸ್ಮೈಯೇ ನಮಃ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....