Homeಕರ್ನಾಟಕದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಭಗವಾಧ್ವಜ ರಾಷ್ಟ್ರಧ್ವಜ ಆಗುತ್ತದೆ; ಕೆಂಪುಕೋಟೆಯಲ್ಲಿ ಅದನ್ನು ಹಾರಿಸುತ್ತೇವೆ: ಕೆ.ಎಸ್‌. ಈಶ್ವರಪ್ಪ

- Advertisement -
- Advertisement -

ಈ ದೇಶದಲ್ಲಿ ಹಿಂದೂ ಧರ್ಮ ಬರುತ್ತದೆ, ಅವತ್ತು ಕೆಂಪು ಕೋಟೆಯ ಮೇಲೆ ಕೂಡಾ ಕೇಸರಿ ಧ್ವಜ ಹಾರಿಸುತ್ತೇವೆ. ಮುಂದೊಂದು ದಿನ ಭಗವಾಧ್ವಜವೇ ರಾಷ್ಟ್ರಧ್ವಜ ಆಗಹುದು ಎಂದು ಸಚಿವ ಕೆ.ಎಸ್‌.ಈಶ್ವರಪ್ಪ ಬುಧವಾರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಬಿಜೆಪಿ ಬೆಂಬಲಿತ ವಿದ್ಯಾರ್ಥಿಗಳು ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿ ಧ್ವಜ ಹಾರಿಸಿರುವ ವಿವಾದದ ಬಗ್ಗೆ ಮಾಧ್ಯಮದ ಜೊತೆಗೆ ಮಾತನಾಡಿದ ಈಶ್ವರಪ್ಪ, “ಇವತ್ತು ಇಡೀ ದೇಶದಲ್ಲಿ ತ್ರಿವರ್ಣ ಧ್ವಜ ರಾಷ್ಟ್ರಧ್ವಜ ಆಗಿದೆ. ಇದರಲ್ಲಿ ಏನೂ ಅನುಮಾನ ಇಲ್ಲ. ಅದಕ್ಕೆ ನಾವೆಲ್ಲರೂ ಕೂಡಾ ಗೌರವ ಕೊಡುತ್ತೇವೆ. ಅಲ್ಲಿ ಭಗವಾಧ್ವಜ ಹಾರಿಸಿದ್ದು ಹೌದು. ಕೇಸರಿ ಧ್ವಜ ಹಾರಿಸಬಾರದೇನು?” ಎಂದು ಕೇಳಿದ್ದಾರೆ.

ರಾಷ್ಟ್ರಧ್ವಜದ ಸ್ಥಂಭದಲ್ಲಿ ಕೇಸರಿಧ್ವಜ ಹಾರಿಸಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, “ಕೇಸರಿ ಯಾವ ಧ್ವಜ ಸ್ಥಂಭದಲ್ಲಿ ಬೇಕಾದರೂ ಹಾರಿಸಬಹುದು. ಯಾವುದೇ ಸ್ಥಳದಲ್ಲಿ ಬೇಕಾದರೂ ಕೇಸರಿ ಧ್ವಜ ಹಾರಿಸಬಹುದು. ಆದರೆ ರಾಷ್ಟ್ರಧ್ವಜವನ್ನು ತೆಗೆದು ಯಾವುದೇ ಕೇಸರಿ ಧ್ವಜ ಹಾಕಿಲ್ಲ, ಹಾಕುವುದು ಇಲ್ಲ. ಹಿಂದೂ ಮುಸಲ್ಮಾನರಲ್ಲಿ ಧ್ವೇಷ ಬೆಳೆಸುವುದಕ್ಕೋಸ್ಕರ ರಾಷ್ಟ್ರ ಧ್ವಜವನ್ನು ಬಳಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ರಾಷ್ಟ್ರಧ್ವಜ ತೆಗೆದು ಕೇಸರಿ ಧ್ವಜ ಹಾಕಿದ್ದಾರೆ ಎಂದು ಡಿಕೆ ಶಿವಕುಮಾರ್‌ ಸುಳ್ಳು ಹೇಳಿದ್ದಾರೆ. ರಾಷ್ಟ್ರಧ್ವಜದ ಬಗ್ಗೆ ಡಿಕೆ ಶಿವಕುಮಾರ್‌‌ಗಿಂತಲೂ ಹೆಚ್ಚು ಗೌರವ ನಮಗೆ ಇದೆ. ರಾಷ್ಟ್ರಧ್ವಜವನ್ನು ತೆಗೆದಿಲ್ಲ. ಧ್ವಜಸ್ಥಂಭಗಳಲ್ಲಿ ಕೇಸರಿ ಧ್ವಜವನ್ನು ಹಾಕಿಕೊಂಡು ಬಂದಿದ್ದಾರೆ. ಅದನ್ನು ತಿರುಗಿಸಿ ಹಿಂದೂ ಮುಸಲ್ಮಾನರ ಬಗ್ಗೆ ಗೊಂದಲ ಉಂಟು ಮಾಡುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

“ಕೇಸರಿ ಧ್ವಜ ಎಲ್ಲಿ ಬೇಕಾದರೂ ಹಾರಿಸಬಹುದು. ಮುಂದಿನ ದಿನದಲ್ಲಿ ಕೆಂಪುಕೋಟೆ ಮೇಲೆ ಹಾರಿಸುತ್ತೇವೆ. ನೂರಾರು ವರ್ಷಗಳ ಹಿಂದೆ ರಾಮ, ಮಾರುತಿಯ ರಥಗಳಲ್ಲಿ ಕೇಸರಿ ಧ್ವಜ ಇತ್ತು. ಆಗ ತ್ರಿವರ್ಣ ಧ್ವಜ ನಮ್ಮ ದೇಶದಲ್ಲಿ ಇತ್ತಾ? ಅದು ಈಗ ರಾಷ್ಟ್ರಧ್ವಜ ಆಗಿದೆ. ಆದರೆ ಈಗ ಈ ದೇಶದಲ್ಲಿ ಅನ್ನ ತಿಂದ ಪ್ರತಿಯೊಬ್ಬನೂ ರಾಷ್ಟ್ರಧ್ವಜಕ್ಕೆ ಗೌರವ ಕೊಡಬೇಕು, ಇದರ ಬಗ್ಗೆ ಪ್ರಶ್ನೆಯೆ ಇಲ್ಲ” ಎಂದು ಅವರು ತಿಳಿಸಿದ್ದಾರೆ.

“ಇವತ್ತು ಹಿಂದೂ ವಿಚಾರದ ಬಗ್ಗೆ, ಹಿಂದುತ್ವದ ಬಗ್ಗೆ ದೇಶದಲ್ಲಿ ಚರ್ಚೆಯಾಗುತ್ತಿದೆ. ಒಂದು ಕಾಲದಲ್ಲಿ ಅಯೋಧ್ಯೆ ರಾಮಮಂದಿರ ಕಟ್ಟುವ ಬಗ್ಗೆ ಕೇಳಿ ನಗುತ್ತಿದ್ದರು. ಈಗ ಕಟ್ಟಿದ್ದೇವೆ ಅಲ್ಲವೇ? ಹಾಗೆಯೆ ಯಾವುದೋ ಕಾದಲ್ಲಿ, ನೂರು, ಇನ್ನೂರು ಅಥವಾ ಐನೂರು ವರ್ಷಗಳಲ್ಲಿ ಭಗವಾಧ್ವಜವೇ ರಾಷ್ಟ್ರಧ್ವಜ ಆಗಬಹುದು. ಅದರ ಬಗ್ಗೆ ನನಗೆ ಗೊತ್ತಿಲ್ಲ. ಅದು ಎಲ್ಲಿ ಬೇಕಾದರೂ ಹಾರಾಡಬಹುದು. ಆದರೆ ಈಗ ಸಂವಿಧಾನ ಬದ್ದವಾಗಿ ತ್ರಿವರ್ಣ ಧ್ವಜವೇ ನಮ್ಮ ರಾಷ್ಟ್ರಧ್ವಜ ಎಂದು ಒಪ್ಪಿಕೊಂಡಿದ್ದೇವೆ. ಅದಕ್ಕೆ ಯಾರೇ ತಪ್ಪಿದರೂ ಅವ ರಾಷ್ಟ್ರದ್ರೋಹಿಯಾಗುತ್ತಾನೆ” ಎಂದು ಈಶ್ವರಪ್ಪ ಹೇಳಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

5 COMMENTS

  1. ಈಶ್ವರಪ್ಪನವರು ವರಿಷ್ಠರನ್ನು ತೃಷ್ಟಿಕರಿಸಿ ಮಂತ್ರಿಪದವಿ ಉಳಿಸಿಕೊಳ್ಳುವುದಕೋಸ್ಕರ ಶತಾಯಗತಾಯ ಪ್ರಯತ್ನಿಸುತ್ತಿದ್ದಾರೆ

  2. ಹುಚ್ಚು ಈಶ್ವರಪ್ಪ! ಹುಂಭುತನ ಏನೇನು ಮಾತಾನಾಡುತ್ತಾನೆ ಎಂಬುದು ಅವನಿಗೆ ಗೋತ್ತಿರುವದಿಲ್ಲವಂತೆ ಈಗಾಗೀ ಆತ ಬಿ.ಜೆ.ಪಿಯ ಹಳೆಯ ಕಾರ್ಯಕರ್ತರಾದರೂ ಆತನನ್ನು ಅವರು ಮುಖ್ಯಮಂತ್ರಿ ಮಾಡಲೇ ಇಲ್ಲ !

  3. ಅಭಿವೃದ್ಧಿ ಪರ ಕೆಲಸ ಮಾಡ್ರಿ ಜಾತಿ ಮತ ಧರ್ಮ ಕೇಸರಿ ಹಸಿರು ಕಪ್ಪು ನೀಲಿ ಅಂತಾ ರಾಜಕೀಯ ಮಾಡಿ ದೇಶದ ಸ್ವಾಸ್ತ್ಯ ಹಾಳು ಮಾಡಬೇಡಿ
    ಇದು ನಿಮ್ಮ ತಪ್ಪಲ್ಲಜಾತಿ ಧರ್ಮದ ಅಮಲಿನಲ್ಲಿ ನಿಮ್ಮಂತ ವರಿಗೆ vote ಹಾಕ್ತಾರಲ್ಲ ಅವ್ರೆಲ್ಲಾ ಬದಲಾಗಬೇಕು

  4. ಈಶ್ವರಪ್ಪ ಅಂತಹ ಅವಿವೇಕಿ ಮತ್ತು ವಿಕೃತ ಮನಸ್ಸಿನ ರಾಜಕಾರಣಿಗೆ ನಮ್ಮ ಜನ ವೋಟು ಹಾಕಿ ಗೆಲ್ಲಿಸಿರುವುದೇ ದೊಡ್ಡ ದುರಂತ!

    ಈಶ್ವರಪ್ಪ ಅವರ ಹೇಳಿಕೆ ದೇಶ ದ್ರೋಹಿ ಹೇಳಿಕೆಯಾಗಿದ್ದು, ರಾಷ್ಟ್ರ ಭಕ್ತರು ಎಂದು ಹೇಳಿಕೊಳ್ಳುವ ಕೇಸರಿಯಾ ರಾಷ್ಟ್ರೀಯ ಸುಲಭ್ ಸೌಚಾಲಯದ ಸ್ವಯಂ ಘೋಷಿತ ಮುಠ್ಠಾಳರು ಮೌನವಾಗಿರುವುದು ಏಕೆ?

    ಹಣ ಮತ್ತು ಅಧಿಕಾರದ ಅಹಂ ಹೊದ್ದುಕೊಂಡಿರುವ ಈಶ್ವರಪ್ಪ ಅವರೇ ಕಾಲಯ ತಸ್ಮೈಯೇ ನಮಃ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...