Homeಕರ್ನಾಟಕಹಿಜಾಬ್: ಸಮವಸ್ತ್ರದ ಕುರಿತ ಶಿಕ್ಷಣ ಇಲಾಖೆಯ ಮಾರ್ಗಸೂಚಿಗಳು, ಸರ್ಕಾರದ ಹೇಳಿಕೆಗಳು ತದ್ವಿರುದ್ಧ!

ಹಿಜಾಬ್: ಸಮವಸ್ತ್ರದ ಕುರಿತ ಶಿಕ್ಷಣ ಇಲಾಖೆಯ ಮಾರ್ಗಸೂಚಿಗಳು, ಸರ್ಕಾರದ ಹೇಳಿಕೆಗಳು ತದ್ವಿರುದ್ಧ!

- Advertisement -
- Advertisement -

ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ, ಬೇರೆ ರಾಜ್ಯಗಳಲ್ಲೂ ವಿವಾದಕ್ಕೆ ಕಾರಣವಾಗಿರುವ ರಾಜ್ಯದ ಹಿಜಾಬ್- ಕೇಸರಿ ಶಾಲು ವಿವಾದದ ಕುರಿತ ರಾಜ್ಯ ಸರ್ಕಾರದ ನಿಯಮಗಳು ಹಲವು ಅನುಮಾನಗಳಿಗೆ ಎಡೆ ಮಾಡುತ್ತಿವೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಹೊರಡಿಸಿರುವ 2021-22ರ ಪ್ರವೇಶ ಮಾರ್ಗಸೂಚಿಗಳು ಮತ್ತು ಸರ್ಕಾರದ ಹೇಳಿಕೆಗಳು ತದ್ವಿರುದ್ಧವಾಗಿವೆ.

ಹೌದು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಮಾರ್ಗಸೂಚಿಯಲ್ಲಿರುವ ಸಮವಸ್ತ್ರದ ಕುರಿತ ನಿಯಮಗಳು ಮತ್ತು ರಾಜ್ಯ ಸರ್ಕಾರ ಸಮವಸ್ತ್ರ ಜಾರಿ ಮಾಡಿ ಆದೇಶಿಸಿರುವುದು ನಿಜಕ್ಕೂ ತದ್ವಿರುದ್ಧ. ಇದು ಇಲಾಖೆಯೇ ಬಿಡುಗಡೆ ಮಾಡಿದ್ದ ಪ್ರವೇಶ ಮಾರ್ಗಸೂಚಿಗಳಲ್ಲಿ ಕಂಡು ಬಂದಿದೆ.

ಈ 2021-22ರ ಪ್ರವೇಶ ಮಾರ್ಗಸೂಚಿಗಳ ಪ್ರಕಾರ ಸಮವಸ್ತ್ರವನ್ನು ಕಡ್ಡಾಯವಲ್ಲ. ಕೆಲವು ಕಾಲೇಜು ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಗಳು ಸಮವಸ್ತ್ರವನ್ನು ಕಡ್ಡಾಯಗೊಳಿಸುವುದು ನಿಯಮ ಬಾಹಿರವಾಗಿರುತ್ತದೆ. ಮೇಲ್ಕಂಡ ಸೂಚನೆಗಳನ್ನು ಉಲ್ಲಂಘಿಸಿದ್ದಲ್ಲಿ ಗಂಭೀರವಾಗಿ ಪರಿಗಣಿಸುವುದಾಗಿಯೂ ತಿಳಿಸಿದೆ. ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಸಮವಸ್ತ್ರ ಕಡ್ಡಾಯ ಎಂದು ನೀಡಿರುವ ಹೇಳಿಕೆಗೆ ತದ್ವಿರುದ್ಧವಾಗಿದೆ.

ಇದನ್ನೂ ಓದಿ: ಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

ಪಿಯು ಬೋರ್ಡ್ ಹೊರಡಿಸಿರುವ ಮಾರ್ಗಸೂಚಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. http:// file:///C:/Users/lenovo/Downloads/ADM_GUIDELINES.pdf

ಇದೇ ಮಾರ್ಗಸೂಚಿಯಲ್ಲಿ “ವಿದ್ಯಾರ್ಥಿಗಳೊಡನೆ ಸೌಹಾರ್ದಯುತ ಸಂಬಂಧವನ್ನು ಕಾಪಾಡಿಕೊಂಡು, ಅವರಲ್ಲಿ ಇರಬಹುದಾದ ಸಣ್ಣ-ಪುಟ್ಟ ಸಮಸ್ಯೆಗಳಿಗೆ ಸಂಬಂಧಿಸಿದಂತೆ ವೈಯಕ್ತಿಕವಾಗಿ ಸಮಾಲೇಚನೆ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಸ್ಫೂರ್ತಿ/ಚೈತನ್ಯವನ್ನು ತುಂಬುವುದು ಹಾಗೂ ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸಿ ಉತ್ತೇಜನ ನೀಡಬೇಕು” ಎಂದು ತಿಳಿಸಲಾಗಿದೆ.

ಆದರೆ ಡಿಸೆಂಬರ್‌ ಕೊನೆಯಲ್ಲಿ ಉಡುಪಿ ಕಾಲೇಜಿನಲ್ಲಿ ಆರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದ ಬಳಿಕ ಈ ಮಾರ್ಗಸೂಚಿಯ ನಿಯಮಗಳು ಲೆಕ್ಕಕ್ಕೆ ಇಲ್ಲದಂತಾಗಿವೆ. ಪ್ರವೇಶ ಮಾರ್ಗಸೂಚಿಗಳ ಕುರಿತು ಮೊದಲು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೇಸ್ ವರದಿ ಮಾಡಿದೆ.

Hijab

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಸಚಿವರು, ಶಾಸಕರು ಸಮವಸ್ತ್ರ ಕಡ್ಡಾಯ ಎಂದಿದ್ದಾರೆ. ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿದ ಬೆನ್ನಲ್ಲೇ ಫೆ.5 ರಂದು ರಾಜ್ಯ ಸರ್ಕಾರ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶಿಸಿದೆ.

ಪಿಯುಸಿಗೆ ಪ್ರವೇಶ ಪಡೆಯುವಾಗ ಕಾಲೇಜುಗಳು, ವಿದ್ಯಾರ್ಥಿಗಳು ಅನುಸರಿಸಬೇಕಾದ ನಿಯಮಗಳನ್ನು ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸುತ್ತದೆ. ಆದರೆ, ಸಮಾನತೆ, ಸೌಹಾರ್ದತೆ ಕಾಪಾಡಬೇಕಾದ ಕಾಲೇಜು ಆಡಳಿತ ಮಂಡಳಿಗಳು ಹೀಗೆ ಏಕಾಏಕಿ ಹಿಜಾಬ್ ವಿರೋಧಿಸಿದ್ದು, ಅದಕ್ಕೆ ಬಿಜೆಪಿ ನಾಯಕರು ಒಪ್ಪಿಗೆ ಸೂಚಿಸಿದ್ದು, ಹಿಜಾಬ್ ವಿರೋಧಿ ಧೋರಣೆ ರಾಜ್ಯಾದಂತ ಕಾಲೇಜುಗಳಿಗೆ ಹರಡಿ ಘರ್ಷಣೆಗೆ ಕಾರಣವಾಗಿದ್ದು ಮಾತ್ರ ರಾಜ್ಯ ಸರ್ಕಾರದ ವೈಫಲ್ಯವೇ.


ಇದನ್ನೂ ಓದಿ: ಮಡಿಕೇರಿ: ಕೇಸರಿ ಶಾಲು ಧರಿಸಲು ಬಜರಂಗದಳ ನಾಯಕರಿಂದ ಪ್ರಚೋದನೆ; ವಿಡಿಯೊ ವೈರಲ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....