“ಮತದಾರರು ತಪ್ಪು ಮಾಡಿದರೆ ಉತ್ತರ ಪ್ರದೇಶವು ಕಾಶ್ಮೀರ, ಕೇರಳ ಅಥವಾ ಬಂಗಾಳವಾಗಿ ಬದಲಾಗುತ್ತದೆ” ಎಂಬ ಯೋಗಿ ಆದಿತ್ಯನಾಥ್ ಅವರ ಹೇಳಿಕೆಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಟ್ವಿಟರ್ನಲ್ಲಿ ತಿರುಗೇಟು ನೀಡಿದ್ದಾರೆ.
ಉತ್ತರ ಪ್ರದೇಶದ ಮೊದಲ ಹಂತದ ಮತದಾನಕ್ಕೂ ಮುನ್ನ ವಿಡಿಯೋ ಬಿಡುಗಡೆ ಮಾಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತದಾರರಿಗೆ ತಮ್ಮ ಮತವು ರಾಜ್ಯದ ಭವಿಷ್ಯವನ್ನು ನಿರ್ಧರಿಸುತ್ತದೆ ಎಂದು ಎಚ್ಚರಿಸಿದ್ದರು. ಈ ವೇಳೆ ಮತದಾರರು ತಪ್ಪುಗಳನ್ನು ಮಾಡಿದರೆ ರಾಜ್ಯವು ಶೀಘ್ರದಲ್ಲೇ “ಕಾಶ್ಮೀರ, ಬಂಗಾಳ ಅಥವಾ ಕೇರಳ” ಆಗಬಹುದು ಎಂದು ಹೇಳಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ಕೇರಳ ಸಿಎಂ ಪಿಣರಾಯಿ ವಿಜಯನ್, “ಯೋಗಿ ಆದಿತ್ಯನಾಥ್ ಭಯಪಡುವಂತೆಯೇ ಉತ್ತರಪ್ರದೇಶವು ಕೇರಳವಾಗಿ ಬದಲಾದರೆ, ಅಲ್ಲಿನ ಜನರಿಗೆ ಅತ್ಯುತ್ತಮ ಶಿಕ್ಷಣ, ಆರೋಗ್ಯ ಸೇವೆಗಳು, ಸಮಾಜ ಕಲ್ಯಾಣ, ಜೀವನಮಟ್ಟ ದೊರೆಯಲಿದೆ. ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಜನರನ್ನು ಹತ್ಯೆ ಮಾಡದ ಸಾಮರಸ್ಯದ ಸಮಾಜವನ್ನು ಹೊಂದಿರುತ್ತದೆ. ಉತ್ತರ ಪ್ರದೇಶದ ಜನರು ಇದನ್ನೇ ಬಯಸುತ್ತಾರೆ” ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೇ ಹಿಂದಿ ಭಾಷೆಯಲ್ಲಿಯೂ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಶಾಲೆ ತೆರೆಯಲು ಹೈಕೋರ್ಟ್ ಮೌಖಿಕ ಆದೇಶ; ಹಿಜಾಬ್, ಕೇಸರಿ ವಿಚಾರಣೆ ಮುಂದೂಡಿಕೆ
If UP turns into Kerala as @myogiadityanath fears, it will enjoy the best education, health services, social welfare, living standards and have a harmonious society in which people won't be murdered in the name of religion and caste. That's what the people of UP would want.
— Pinarayi Vijayan (@vijayanpinarayi) February 10, 2022
ಯೋಗಿ ಆದಿತ್ಯನಾಥ್ ಅವರ ಹೇಳಿಕೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಕೂಡ ಟ್ವೀಟ್ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
“ಬಿಜೆಪಿ ಅಧಿಕಾರಕ್ಕೆ ಬರದಿದ್ದರೆ ಉತ್ತರ ಪ್ರದೇಶವು ಕಾಶ್ಮೀರ, ಬಂಗಾಳ ಅಥವಾ ಕೇರಳವಾಗಿ ಬದಲಾಗುತ್ತದೆ ಎಂದು ಮತದಾರರಿಗೆ ಯೋಗಿ ಆದಿತ್ಯನಾಥ್ ಹೇಳುತ್ತಾರೆ. ಯುಪಿ ಅದೃಷ್ಟ ಹೊಂದಿರಬೇಕು!! ಕಾಶ್ಮೀರದ ಸೌಂದರ್ಯ, ಬಂಗಾಳದ ಸಂಸ್ಕೃತಿ ಮತ್ತು ಕೇರಳದ ಶಿಕ್ಷಣವು ಈ ಸ್ಥಳವನ್ನು ಅದ್ಭುತವನ್ನಾಗಿಸುತ್ತದೆ” ಎಂದು ಶಶಿ ತರೂರ್ ಪೋಸ್ಟ್ ಮಾಡಿದ್ದಾರೆ.
UP will turn into Kashmir, Bengal or Kerala if BJP doesn't come to power, @myogiadityanath tells voters.
UP should be so lucky!! Kashmir's beauty, Bengal's culture & Kerala's education would do wonders for the place.
UP's wonderful: pity about its Govt.https://t.co/bn6ItSczm6
— Shashi Tharoor (@ShashiTharoor) February 10, 2022
ಉತ್ತರ ಪ್ರದೇಶದಲ್ಲಿ ಫೆ.10 ರಿಂದ ಚುನಾವಣೆ ಆರಂಭವಾಗಿದೆ. ಏಳು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ಮಾರ್ಚ್ 10 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಇದನ್ನೂ ಓದಿ: ಹಿಜಾಬ್ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್ ನಂಬರ್, ವಿಳಾಸ ಲೀಕ್ ಮಾಡಿದ ಉಡುಪಿ ಕಾಲೇಜು!



ಅದಕ್ಕೆ ಕೇರಳದಲ್ಲಿ ಅತ್ಯುತ್ತಮವಾದ ಶಿಕ್ಷಣ ಸಿಗುವುದರಿಂದ
ಅಲ್ಲಿನ ಜನ ಕೆಲಸಕ್ಕಾಗಿ ವಲಸೆ ಹೋಗುತ್ತಿರುವುದು
ಹಂಗೆ ಭಯೋತ್ಪಾದಕರ ತವರುಮನೆಯಾಗುತ್ತದೆ.