Homeಮುಖಪುಟವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

ವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

- Advertisement -
- Advertisement -

ಜಮ್ಮು ಕಾಶ್ಮೀರ ವಿಚಾರದಲ್ಲಿ ಬಹು-ರಾಷ್ಟ್ರೀಯ ಸಂಸ್ಥೆಗಳ ಬ್ರಾಂಡ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ಪ್ರಕಟಿಸುವುದು ಮತ್ತು ಕ್ಷಮೆಯಾಚಿಸುವುದು ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದೆ. ಮಾರುತಿ ಸುಜುಕಿ, ಫಿಜ್ಜಾ, ಡೊಮಿನೋಸ್, ಕಿಯಾ, ಕೆಎಫ್‌ಸಿ, ಹೋಂಡಾ ಮತ್ತು ಹ್ಯೂಂಡೈ ಸೇರಿದಂತೆ ಬಹುತೇಕ ಸಂಸ್ಥೆಗಳು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಪ್ರಕಟವಾದ ವಿಚಾರಗಳಿಗೆ ಸಂಬಂಧಿಸಿ ಭಾರತದ ಬಳಿ ಕ್ಷಮೆಯಾಚಿಸಿವೆ.

ಸೋಮವಾರದಂದು ಕೆಎಫ್‌ಸಿ ಇಂಡಿಯಾ, “ದೇಶದ ಹೊರಗಿನ ಕೆಲವು ಕೆಎಫ್‌ಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾದ ಪೋಸ್ಟ್‌ಗಳ ಬಗ್ಗೆ ತೀವ್ರವಾಗಿ ಕ್ಷಮೆಯಾಚಿಸುತ್ತೇವೆ” ಎಂದು ಟ್ವೀಟ್ ಮಾಡಿದೆ. ಕೆಎಫ್‌ಸಿ ತನ್ನ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಕಾಶ್ಮೀರ ಒಗ್ಗಟ್ಟಿನ ದಿನವನ್ನು ಬೆಂಬಲಿಸಿ ಹಾಕಿದ ಸಂದೇಶವನ್ನು ಪೋಸ್ಟಿಗೆ ಸಾಮಾಜಿಕ ಮಾಧ್ಯಮದಲ್ಲಿ ಬಳಕೆದಾರರು ಖಂಡಿಸಿದ್ದರು.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಪಾಕಿಸ್ತಾನದ ಹ್ಯೂಂಡೈ ಡೀಲರ್‌ನ ಟ್ವಿಟರ್ ಖಾತೆಯು, “ಸ್ವಾತಂತ್ರ್ಯಕ್ಕಾಗಿ ಹೋರಾಟ” ಎಂದು ಮಾಡಿದ ಪೋಸ್ಟ್ ವಿವಾದಕ್ಕೆ ಎಡೆಮಾಡಿದ ನಂತರ, ಹ್ಯೂಂಡೈ ಮೋಟಾರ್ಸ್ “ಕಾಶ್ಮೀರ ಸಂಬಂಧಿಸಿ ಸಂಸ್ಥೆಯ ಅಧಿಕೃತವಲ್ಲದ ಅಭಿಪ್ರಾಯ ಸಾಮಾಜಿಕ ಮಾಧ್ಯಮದ ಹೇಳಿಕೆಗಳಿಂದ ಭಾರತೀಯರ ಭಾವನೆಗಳಿಗೆ ಧಕ್ಕೆಯಾಗಿರುವುದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತಿದ್ದೇವೆ ಮತ್ತು ಈ ಕ್ರಮವು ಸಂಸ್ಥೆಯ ಜಾಗತಿಕ ನೀತಿಗೆ ವಿರುದ್ಧವಾಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಫೆಬ್ರವರಿ 6 ರಂದು ಹ್ಯೂಂಡೈ‌‌ ಕಂಪೆನಿಯ ಭಾರತದಲ್ಲಿನ ಅಂಗಸಂಸ್ಥೆ ಕೂಡ ಕ್ಷಮೆಯಾಚಿಸಿದೆ, “ಭಾರತವು ಹ್ಯೂಂಡೈ ಬ್ರಾಂಡ್‌ಗೆ ಎರಡನೇ ನೆಲೆಯಾಗಿದೆ. ಈ ವಿಚಾರಗಳ ಸಂವಹನದ ಬಗ್ಗೆ ನಾವು ಶೂನ್ಯ ಸಹಿಷ್ಣುತೆ ನೀತಿ ಹೊಂದಿದ್ದೇವೆ ಮತ್ತು ಅಂತಹ ಯಾವುದೇ ದೃಷ್ಟಿಕೋನವನ್ನು ಬಲವಾಗಿ ಖಂಡಿಸುತ್ತೇವೆ” ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಇದನ್ನು ಅನುಸರಿಸಿ ಕೆಎಫ್‌ಸಿ, ಡೊಮಿನೋಸ್ ಸಂಸ್ಥೆಯೂ ತನ್ನ ಪಾಕಿಸ್ತಾನಿ ಹ್ಯಾಂಡಲ್‌ನಿಂದ ಕಾಶ್ಮೀರ ಕುರಿತ ಸಂದೇಶಕ್ಕಾಗಿ ಕ್ಷಮೆಯಾಚವಿಸಿದೆ. ಟ್ವಿಟ್ಟರ್‌ನಲ್ಲಿ #boycottdominos ಟ್ರೆಂಡ್‌ ಆದ ನಂತರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಾಗಿ ಡೊಮಿನೋಸ್ ಕಂಪನಿ ಕ್ಷಮೆಯಾಚಿಸಿದೆ. “ಕಳೆದ 25 ವರ್ಷಗಳಿಂದ ಭಾರತ ನಮಗೆ ತವರು ದೇಶವೆನ್ನುವಷ್ಟು ಆಪ್ತವಾಗಿದೆ ಮತ್ತು ಅದರ ಪರಂಪರೆಯನ್ನು ಶಾಶ್ವತವಾಗಿ ರಕ್ಷಿಸಲು ನಾವು ಬದ್ಧರಾಗಿದ್ದೇವೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು

ಮತ್ತೊಂದು ಅಂತರಾಷ್ಟ್ರೀಯ ಕಂಪೆನಿ ಪಿಜ್ಜಾ, ಪಿಜ್ಜಾ ಹಟ್‌ನ ಪಾಕಿಸ್ತಾನಿ ಹ್ಯಾಂಡಲ್ ಇನ್‌ಸ್ಟಾಗ್ರಾಂನಲ್ಲಿ ಬುಧವಾರ ಇದೇ ರೀತಿಯ ಕಾಶ್ಮಿರ ಪರ ಸಂದೇಶವನ್ನು ಪೋಸ್ಟ್ ಮಾಡಿದೆ. ನಂತರ ಕಂಪನಿಯ ಅಧಿಕೃತ ಖಾತೆಯಲ್ಲಿ, “ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುವ ಇಂತಹ ಪೋಸ್ಟ್‌ಗಳನ್ನು ಕ್ಷಮಿಸಲಾಗುವುದಿಲ್ಲ, ಬೆಂಬಲಿಸುವುದಿಲ್ಲ ಅಥವಾ ಒಪ್ಪುವುದಿಲ್ಲ” ಎಂದು ಹೇಳಿದೆ.

ಮಾರುತಿ ಸುಜುಕಿ ಸಂಸ್ಥೆಯೂ ಸಾಮಾಜಿಕ ಜಾಲತಾಣದಲ್ಲಾದ ತಪ್ಪಿಗೆ ಇಂತಹುದೇ ಸ್ಪಷ್ಟನೆ ನೀಡಿದೆ. “ಕಾರ್ಪೊರೇಟ್ ನೀತಿಯಂತೆ, ನಾವು ಪ್ರಪಂಚದ ಯಾವುದೇ ಭಾಗದಲ್ಲಿ ಯಾವುದೇ ರಾಜಕೀಯ ಅಥವಾ ಧಾರ್ಮಿಕ ಒಲವುಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಈ ವಿಷಯಗಳ ಕುರಿತು ನಮ್ಮ ವಿತರಕರು ಅಥವಾ ವ್ಯಾಪಾರ ಸಹವರ್ತಿಗಳಿಂದ ಅಂತಹ ಸಂವಹನವು ನಮ್ಮ ಕಂಪನಿಯ ಸ್ಥಾನವನ್ನು ಪ್ರತಿನಿಧಿಸುವುದಿಲ್ಲ ಅಥವಾ ನಮ್ಮಿಂದ ಅಧಿಕೃತವಾಗಿಲ್ಲ” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸನಾತನಾ ಸಂಸ್ಥೆಯ ವಿರೇಂದ್ರಸಿನ್ಹ ತಾವ್ಡೆ ಸಮಾಜಕ್ಕೆ ಅಪಾಯಕಾರಿ: ಜಾಮೀನು ನೀಡದಂತೆ ಸಿಬಿಐ ಒತ್ತಾಯ

ದಕ್ಷಿಣ ಕೊರಿಯಾ ಮೂಲದ ಮತ್ತೊಂದು ಆಟೋಮೊಬೈಲ್ ತಯಾರಕ, ಕಿಯಾ ಬುಧವಾರದಂದು ಟ್ವೀಟ್ ಮಾಡಿದ್ದು “ಭಾರತದ ಹೊರಗಿರುವ ಕಿಯಾ ಸಂಸ್ಥೆಯ ಹ್ಯಾಂಡಲ್‌ಗಳು ಸ್ವತಂತ್ರ ಅಭಿವ್ಯಕ್ತಿಯಲ್ಲಿ ಸಂಸ್ಥೆಯ ಖಾತೆಗಳನ್ನು ಬಳಸಿಕೊಂಡು ಮಾಡಿರುವ ಹೇಳಿಕೆಯಾಗಿದೆ. ಅದು ಸಂಸ್ಥೆಯ ಅಭಿಪ್ರಾಯವಲ್ಲ. ಕಿಯಾ ಬ್ರ್ಯಾಂಡ್ ಗುರುತಿನ ಇಂತಹ ದುರುಪಯೋಗವನ್ನು ತಪ್ಪಿಸಲು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇಂತಹ ಸಮಸ್ಯೆ ಮರುಕಳಿಸದಿರುವಂತೆ ತಡೆಯಲು ಪ್ರಕ್ರಿಯೆಗಳನ್ನು ಜಾರಿಗೆ ತಂದಿದ್ದೇವೆ” ಎಂದು ಹೇಳಿದೆ.

ದಕ್ಷಿಣ ಕೊರಿಯಾ ಮೂಲದ ಹ್ಯೂಂಡೈ ಮತ್ತು ಕಿಯಾ ಮೋಟಾರ್ಸ್ ಸಂಸ್ಥೆಗಳ ಪೋಸ್ಟ್‌ಗಳಿಗಾಗಿ ಆ ದೇಶದ ವಿದೇಶಾಂಗ ಸಚಿವ ಚುಂಗ್ ಇಯು ಯೋಂಗ್ ಅವರು ಭಾರತೀಯ ವಿದೇಶಾಂಗ ಸಚಿವ ಎಸ್ ಜೈಶಂಕರ್‌ರಿಗೆ ಕರೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳಿಂದ ಭಾರತದ ಭಾವನೆಗಳಿಗೆ ಧಕ್ಕೆ ತಂದಿರುವುದಕ್ಕೆ ವಿಷಾದಿಸಿದ್ದಾರೆ ಮತ್ತು ಅಂತಹ ಪೋಸ್ಟ್‌ಗಳನ್ನು ಖಂಡಿಸುತ್ತೇವೆ ಎಂದು ದಕ್ಷಿಣ ಕೊರಿಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಭಾರತೀಯ ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ, “ಕಾಶ್ಮೀರ ಒಗ್ಗಟ್ಟಿನ ದಿನ ಎಂದು ಕರೆಯಲ್ಪಡುವ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಹ್ಯೂಂಡೈ ಸಂಸ್ಥೆಯ ಪಾಕಿಸ್ತಾನ ಘಟಕ ಮಾಡಿರುವುದನ್ನು ಗಮನಿಸಿದ್ದೇವೆ. 2022 ಫೆಬ್ರವರಿ 6ರ ಭಾನುವಾರದಂದು ಈ ಸಾಮಾಜಿಕ ಮಾಧ್ಯಮ ಪೋಸ್ಟ್ ಕಂಡ ತಕ್ಷಣ, ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್‌ನಿಂದ ನಮ್ಮ ರಾಯಭಾರಿ ಹ್ಯೂಂಡೈ ಪ್ರಧಾನ ಕಚೇರಿಯನ್ನು ಸಂಪರ್ಕಿಸಿ ವಿವರಣೆ ಕೇಳಿದ್ದರು. ನಂತರ ಆಕ್ಷೇಪಾರ್ಹ ಪೋಸ್ಟ್ ತೆಗೆದುಹಾಕಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...