Homeಮುಖಪುಟವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

ವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

- Advertisement -
- Advertisement -

ಜಮ್ಮು ಕಾಶ್ಮೀರ ವಿಚಾರದಲ್ಲಿ ಬಹು-ರಾಷ್ಟ್ರೀಯ ಸಂಸ್ಥೆಗಳ ಬ್ರಾಂಡ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೆ ಪ್ರಕಟಿಸುವುದು ಮತ್ತು ಕ್ಷಮೆಯಾಚಿಸುವುದು ಕಳೆದ ಕೆಲವು ದಿನಗಳಿಂದ ಸುದ್ದಿಯಲ್ಲಿದೆ. ಮಾರುತಿ ಸುಜುಕಿ, ಫಿಜ್ಜಾ, ಡೊಮಿನೋಸ್, ಕಿಯಾ, ಕೆಎಫ್‌ಸಿ, ಹೋಂಡಾ ಮತ್ತು ಹ್ಯೂಂಡೈ ಸೇರಿದಂತೆ ಬಹುತೇಕ ಸಂಸ್ಥೆಗಳು ತಮ್ಮ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಪ್ರಕಟವಾದ ವಿಚಾರಗಳಿಗೆ ಸಂಬಂಧಿಸಿ ಭಾರತದ ಬಳಿ ಕ್ಷಮೆಯಾಚಿಸಿವೆ.

ಸೋಮವಾರದಂದು ಕೆಎಫ್‌ಸಿ ಇಂಡಿಯಾ, “ದೇಶದ ಹೊರಗಿನ ಕೆಲವು ಕೆಎಫ್‌ಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟವಾದ ಪೋಸ್ಟ್‌ಗಳ ಬಗ್ಗೆ ತೀವ್ರವಾಗಿ ಕ್ಷಮೆಯಾಚಿಸುತ್ತೇವೆ” ಎಂದು ಟ್ವೀಟ್ ಮಾಡಿದೆ. ಕೆಎಫ್‌ಸಿ ತನ್ನ ಅಧಿಕೃತ ಫೇಸ್ಬುಕ್ ಖಾತೆಯಲ್ಲಿ ಕಾಶ್ಮೀರ ಒಗ್ಗಟ್ಟಿನ ದಿನವನ್ನು ಬೆಂಬಲಿಸಿ ಹಾಕಿದ ಸಂದೇಶವನ್ನು ಪೋಸ್ಟಿಗೆ ಸಾಮಾಜಿಕ ಮಾಧ್ಯಮದಲ್ಲಿ ಬಳಕೆದಾರರು ಖಂಡಿಸಿದ್ದರು.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಪಾಕಿಸ್ತಾನದ ಹ್ಯೂಂಡೈ ಡೀಲರ್‌ನ ಟ್ವಿಟರ್ ಖಾತೆಯು, “ಸ್ವಾತಂತ್ರ್ಯಕ್ಕಾಗಿ ಹೋರಾಟ” ಎಂದು ಮಾಡಿದ ಪೋಸ್ಟ್ ವಿವಾದಕ್ಕೆ ಎಡೆಮಾಡಿದ ನಂತರ, ಹ್ಯೂಂಡೈ ಮೋಟಾರ್ಸ್ “ಕಾಶ್ಮೀರ ಸಂಬಂಧಿಸಿ ಸಂಸ್ಥೆಯ ಅಧಿಕೃತವಲ್ಲದ ಅಭಿಪ್ರಾಯ ಸಾಮಾಜಿಕ ಮಾಧ್ಯಮದ ಹೇಳಿಕೆಗಳಿಂದ ಭಾರತೀಯರ ಭಾವನೆಗಳಿಗೆ ಧಕ್ಕೆಯಾಗಿರುವುದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತಿದ್ದೇವೆ ಮತ್ತು ಈ ಕ್ರಮವು ಸಂಸ್ಥೆಯ ಜಾಗತಿಕ ನೀತಿಗೆ ವಿರುದ್ಧವಾಗಿದೆ” ಎಂದು ಸ್ಪಷ್ಟನೆ ನೀಡಿದ್ದಾರೆ.

ಫೆಬ್ರವರಿ 6 ರಂದು ಹ್ಯೂಂಡೈ‌‌ ಕಂಪೆನಿಯ ಭಾರತದಲ್ಲಿನ ಅಂಗಸಂಸ್ಥೆ ಕೂಡ ಕ್ಷಮೆಯಾಚಿಸಿದೆ, “ಭಾರತವು ಹ್ಯೂಂಡೈ ಬ್ರಾಂಡ್‌ಗೆ ಎರಡನೇ ನೆಲೆಯಾಗಿದೆ. ಈ ವಿಚಾರಗಳ ಸಂವಹನದ ಬಗ್ಗೆ ನಾವು ಶೂನ್ಯ ಸಹಿಷ್ಣುತೆ ನೀತಿ ಹೊಂದಿದ್ದೇವೆ ಮತ್ತು ಅಂತಹ ಯಾವುದೇ ದೃಷ್ಟಿಕೋನವನ್ನು ಬಲವಾಗಿ ಖಂಡಿಸುತ್ತೇವೆ” ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಇದನ್ನು ಅನುಸರಿಸಿ ಕೆಎಫ್‌ಸಿ, ಡೊಮಿನೋಸ್ ಸಂಸ್ಥೆಯೂ ತನ್ನ ಪಾಕಿಸ್ತಾನಿ ಹ್ಯಾಂಡಲ್‌ನಿಂದ ಕಾಶ್ಮೀರ ಕುರಿತ ಸಂದೇಶಕ್ಕಾಗಿ ಕ್ಷಮೆಯಾಚವಿಸಿದೆ. ಟ್ವಿಟ್ಟರ್‌ನಲ್ಲಿ #boycottdominos ಟ್ರೆಂಡ್‌ ಆದ ನಂತರ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಾಗಿ ಡೊಮಿನೋಸ್ ಕಂಪನಿ ಕ್ಷಮೆಯಾಚಿಸಿದೆ. “ಕಳೆದ 25 ವರ್ಷಗಳಿಂದ ಭಾರತ ನಮಗೆ ತವರು ದೇಶವೆನ್ನುವಷ್ಟು ಆಪ್ತವಾಗಿದೆ ಮತ್ತು ಅದರ ಪರಂಪರೆಯನ್ನು ಶಾಶ್ವತವಾಗಿ ರಕ್ಷಿಸಲು ನಾವು ಬದ್ಧರಾಗಿದ್ದೇವೆ” ಎಂದು ಅದು ಹೇಳಿದೆ.

ಇದನ್ನೂ ಓದಿ: ಯುಪಿ ಕೇರಳವಾದರೆ ಅತ್ಯುತ್ತಮ ಶಿಕ್ಷಣ, ಆರೋಗ್ಯ, ಜೀವನಮಟ್ಟ ಸಿಗಲಿದೆ: ಆದಿತ್ಯನಾಥ್‌ಗೆ ಪಿಣರಾಯಿ ತಿರುಗೇಟು

ಮತ್ತೊಂದು ಅಂತರಾಷ್ಟ್ರೀಯ ಕಂಪೆನಿ ಪಿಜ್ಜಾ, ಪಿಜ್ಜಾ ಹಟ್‌ನ ಪಾಕಿಸ್ತಾನಿ ಹ್ಯಾಂಡಲ್ ಇನ್‌ಸ್ಟಾಗ್ರಾಂನಲ್ಲಿ ಬುಧವಾರ ಇದೇ ರೀತಿಯ ಕಾಶ್ಮಿರ ಪರ ಸಂದೇಶವನ್ನು ಪೋಸ್ಟ್ ಮಾಡಿದೆ. ನಂತರ ಕಂಪನಿಯ ಅಧಿಕೃತ ಖಾತೆಯಲ್ಲಿ, “ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುವ ಇಂತಹ ಪೋಸ್ಟ್‌ಗಳನ್ನು ಕ್ಷಮಿಸಲಾಗುವುದಿಲ್ಲ, ಬೆಂಬಲಿಸುವುದಿಲ್ಲ ಅಥವಾ ಒಪ್ಪುವುದಿಲ್ಲ” ಎಂದು ಹೇಳಿದೆ.

ಮಾರುತಿ ಸುಜುಕಿ ಸಂಸ್ಥೆಯೂ ಸಾಮಾಜಿಕ ಜಾಲತಾಣದಲ್ಲಾದ ತಪ್ಪಿಗೆ ಇಂತಹುದೇ ಸ್ಪಷ್ಟನೆ ನೀಡಿದೆ. “ಕಾರ್ಪೊರೇಟ್ ನೀತಿಯಂತೆ, ನಾವು ಪ್ರಪಂಚದ ಯಾವುದೇ ಭಾಗದಲ್ಲಿ ಯಾವುದೇ ರಾಜಕೀಯ ಅಥವಾ ಧಾರ್ಮಿಕ ಒಲವುಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಈ ವಿಷಯಗಳ ಕುರಿತು ನಮ್ಮ ವಿತರಕರು ಅಥವಾ ವ್ಯಾಪಾರ ಸಹವರ್ತಿಗಳಿಂದ ಅಂತಹ ಸಂವಹನವು ನಮ್ಮ ಕಂಪನಿಯ ಸ್ಥಾನವನ್ನು ಪ್ರತಿನಿಧಿಸುವುದಿಲ್ಲ ಅಥವಾ ನಮ್ಮಿಂದ ಅಧಿಕೃತವಾಗಿಲ್ಲ” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಸನಾತನಾ ಸಂಸ್ಥೆಯ ವಿರೇಂದ್ರಸಿನ್ಹ ತಾವ್ಡೆ ಸಮಾಜಕ್ಕೆ ಅಪಾಯಕಾರಿ: ಜಾಮೀನು ನೀಡದಂತೆ ಸಿಬಿಐ ಒತ್ತಾಯ

ದಕ್ಷಿಣ ಕೊರಿಯಾ ಮೂಲದ ಮತ್ತೊಂದು ಆಟೋಮೊಬೈಲ್ ತಯಾರಕ, ಕಿಯಾ ಬುಧವಾರದಂದು ಟ್ವೀಟ್ ಮಾಡಿದ್ದು “ಭಾರತದ ಹೊರಗಿರುವ ಕಿಯಾ ಸಂಸ್ಥೆಯ ಹ್ಯಾಂಡಲ್‌ಗಳು ಸ್ವತಂತ್ರ ಅಭಿವ್ಯಕ್ತಿಯಲ್ಲಿ ಸಂಸ್ಥೆಯ ಖಾತೆಗಳನ್ನು ಬಳಸಿಕೊಂಡು ಮಾಡಿರುವ ಹೇಳಿಕೆಯಾಗಿದೆ. ಅದು ಸಂಸ್ಥೆಯ ಅಭಿಪ್ರಾಯವಲ್ಲ. ಕಿಯಾ ಬ್ರ್ಯಾಂಡ್ ಗುರುತಿನ ಇಂತಹ ದುರುಪಯೋಗವನ್ನು ತಪ್ಪಿಸಲು ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಇಂತಹ ಸಮಸ್ಯೆ ಮರುಕಳಿಸದಿರುವಂತೆ ತಡೆಯಲು ಪ್ರಕ್ರಿಯೆಗಳನ್ನು ಜಾರಿಗೆ ತಂದಿದ್ದೇವೆ” ಎಂದು ಹೇಳಿದೆ.

ದಕ್ಷಿಣ ಕೊರಿಯಾ ಮೂಲದ ಹ್ಯೂಂಡೈ ಮತ್ತು ಕಿಯಾ ಮೋಟಾರ್ಸ್ ಸಂಸ್ಥೆಗಳ ಪೋಸ್ಟ್‌ಗಳಿಗಾಗಿ ಆ ದೇಶದ ವಿದೇಶಾಂಗ ಸಚಿವ ಚುಂಗ್ ಇಯು ಯೋಂಗ್ ಅವರು ಭಾರತೀಯ ವಿದೇಶಾಂಗ ಸಚಿವ ಎಸ್ ಜೈಶಂಕರ್‌ರಿಗೆ ಕರೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳ ಪೋಸ್ಟ್‌ಗಳಿಂದ ಭಾರತದ ಭಾವನೆಗಳಿಗೆ ಧಕ್ಕೆ ತಂದಿರುವುದಕ್ಕೆ ವಿಷಾದಿಸಿದ್ದಾರೆ ಮತ್ತು ಅಂತಹ ಪೋಸ್ಟ್‌ಗಳನ್ನು ಖಂಡಿಸುತ್ತೇವೆ ಎಂದು ದಕ್ಷಿಣ ಕೊರಿಯಾದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

ಭಾರತೀಯ ವಿದೇಶಾಂಗ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ, “ಕಾಶ್ಮೀರ ಒಗ್ಗಟ್ಟಿನ ದಿನ ಎಂದು ಕರೆಯಲ್ಪಡುವ ಸಾಮಾಜಿಕ ಮಾಧ್ಯಮ ಪೋಸ್ಟ್ ಅನ್ನು ಹ್ಯೂಂಡೈ ಸಂಸ್ಥೆಯ ಪಾಕಿಸ್ತಾನ ಘಟಕ ಮಾಡಿರುವುದನ್ನು ಗಮನಿಸಿದ್ದೇವೆ. 2022 ಫೆಬ್ರವರಿ 6ರ ಭಾನುವಾರದಂದು ಈ ಸಾಮಾಜಿಕ ಮಾಧ್ಯಮ ಪೋಸ್ಟ್ ಕಂಡ ತಕ್ಷಣ, ದಕ್ಷಿಣ ಕೊರಿಯಾ ರಾಜಧಾನಿ ಸಿಯೋಲ್‌ನಿಂದ ನಮ್ಮ ರಾಯಭಾರಿ ಹ್ಯೂಂಡೈ ಪ್ರಧಾನ ಕಚೇರಿಯನ್ನು ಸಂಪರ್ಕಿಸಿ ವಿವರಣೆ ಕೇಳಿದ್ದರು. ನಂತರ ಆಕ್ಷೇಪಾರ್ಹ ಪೋಸ್ಟ್ ತೆಗೆದುಹಾಕಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...