Homeಕರ್ನಾಟಕಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

ಹಿಜಾಬ್ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಮಹಿಳಾ ಸಂಘಟನೆಗಳ ಹಕ್ಕೋತ್ತಾಯ ಪತ್ರ

- Advertisement -
- Advertisement -

ರಾಜ್ಯದಲ್ಲಿ ಹಬ್ಬಿರುವ ಹಿಜಾಬ್-ಕೇಸರಿ ವಿವಾದದ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿರುವ ರಾಜ್ಯದ ಮಹಿಳಾ ಸಂಘಟನೆಗಳು, ಈ ವಿಚಾರ ನಮ್ಮನ್ನು ಬಹುದೊಡ್ಡ ಆಘಾತಕ್ಕೆ ನೂಕಿದೆ ಎಂದು ಆತಂಕ ವ್ಯಕ್ತಪಡಿಸಿವೆ. ಇಷು ದಿನ ಗೆಳೆಯರಾಗಿ ಒಟ್ಟಿಗೆ ಕುಳಿತು ಕಲಿಯುತ್ತಿದ್ದ ವಿದ್ಯಾರ್ಥಿಗಳ ಮನಸ್ಸಿನಲ್ಲಿ ಧರ್ಮದ ವಿಷಬೀಜವನ್ನು ಬಿತ್ತಿ ಪರಸ್ಪರ ದ್ವೇಷಿಸುವಂತೆ ಮಾಡಲಾಗಿದೆ. ಹೀಗೆ ಹರಡುವ ಮುಸ್ಲಿಂ ದ್ವೇಷವು ಮುಂದೆ ಹೆಮ್ಮರವಾಗಿ ಬೆಳೆಯುತ್ತದೆ ಮತ್ತು ‘ವಸುಧೈವ ಕುಟುಂಬಕಂ’ ಎಂಬ ವಿಚಾರಧಾರೆಗೆ ದೊಡ್ಡ ಹೊಡೆತ
ಕೊಡುತ್ತದೆ ಎಂದಿವೆ.

ಈಗ ಹಿಜಾಬ್ ಪರ ಮತ್ತು ವಿರುದ್ಧವಾಗಿ ಬೇಕಾದಷ್ಟು ವಾದ ವಿವಾದಗಳು ಹುಟ್ಟಿಕೊಂಡಿವೆ. ಆದರದು ಮುಖ್ಯ ಅಲ್ಲವೇ ಅಲ್ಲ. ತಿಳುವಳಿಕೆಯುಳ್ಳ ಪ್ರಜಾಪ್ರಭುತ್ವದ ಸಮಾಜದಲ್ಲಿ ನಮ್ಮ ಆಹಾರ, ಉಡುಪು, ಆಚರಣೆಗಳಿಗೆ ಆಯ್ಕೆ ಸ್ವಾತಂತ್ರ್ಯ ಇರುವಂತೆಯೇ ಹಿಜಾಬ್ ಕೂಡ ಅವರವರ ವೈಯಕ್ತಿಕ ಹಾಗೂ ವ್ಯಕ್ತಿಗತ ಆಯ್ಕೆಯಾಗಿದೆ. ಈ ಸ್ವಾತಂತ್ರ್ಯವು ಕೂಡಾ ಆಯಾ ಮಹಿಳೆಯ ವೈಯಕ್ತಿಕ ಆಯ್ಕೆಯಾಗಬೇಕೇ ಹೊರತು ಅವರವರ ಸಮುದಾಯದ ಪಿತೃಪ್ರಾಧಾನ್ಯದ ನಿರ್ಣಯವಾಗಕೂಡದು. ಸರಕಾರದ ನಿರ್ಧಾರವಂತೂ ಆಗಲೇಕೂಡದು. ಶಿಕ್ಷಣದ ವಿಚಾರ ಬಂದಾಗ ಅದು ಪ್ರತಿಯೊಬ್ಬರ ಹಕ್ಕು. ಅದನ್ನು ಸರಕಾರವು ಯಾವುದೇ ಕಾರಣಕ್ಕೂ,-ಲಿಂಗ, ಜಾತಿ, ಧರ್ಮದ ಆಧಾರದ ಮೇಲೆ- ನಿರಾಕರಿಸಕೂಡದು. ಸರಕಾರವು ಮಹಿಳೆಯರ ವೈಯಕ್ತಿಕ ಆಯ್ಕೆಯನ್ನು ಎತ್ತಿ ಹಿಡಿಯಬೇಕು, ಜೊತೆಗೇ ಅವರ ಮೂಲಭೂತ ಹಕ್ಕನ್ನು ಕೂಡ ಖಾತರಿಗೊಳಿಸಬೇಕು. ಆದರೆ ನಮ್ಮ ಸರಕಾರ ಎರಡನ್ನೂ ಮಾಡುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿವೆ.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ಜೊತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಹಕ್ಕೊತ್ತಾಯ ಪತ್ರವನ್ನು ಬರೆದಿವೆ.

ಹಕ್ಕೊತ್ತಾಯಗಳು:
೧. ಕರ್ನಾಟಕ ಶಿಕ್ಷಣ ಕಾಯಿದೆ ೧೯೮೩ರ ಸೆಕ್ಷನ್ ೧೩೩ (೨) ವಿದ್ಯಾರ್ಥಿಗಳು ಕಾಲೇಜು ಅಥಾರಿಟಿಂಯವರು ಆಯ್ಕೆ ಮಾಡಿರುವ ಸಮವಸ್ತ್ರಗಳನ್ನು ಹಾಕಿಕೊಂಡು ಬರಬೇಕು ಎಂಬ ಸೆಕ್ಷನ್ನಿಗೆ ಇತ್ತೀಚೆಗೆ ಸೇರಿಸಿರುವ ‘ಸಮಾನತೆ, ಸಹಬಾಳ್ವೆ, ಮತ್ತು ಸಾಮಾಜಿಕ ಕಾನೂನು ಭಂಗ ಮಾಡುವಂತಹ ವಸ್ತ್ರಗಳನ್ನು ಹಾಕಬಾರದು ಎನ್ನುವ ಸುತ್ತೋಲೆಯು ಈಗಿನ ಪರಿಸ್ಥಿತಿಯಲ್ಲಿ ಅನಗತ್ಯವಾಗಿದೆ. ಅದು ವಿದ್ಯಾರ್ಥಿಗಳ ಹಿತಾಸಕ್ತಿಯ ವಿರುದ್ಧವಾಗಿದ್ದು ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣಕ್ಕೇ ಅಡ್ಡ ಬರುವಂತಹದ್ದಾಗಿದೆ. ತಕ್ಷಣವೇ ಅದನ್ನು ಹಿಂತೆಗೆದುಕೊಳ್ಳಬೇಕು.

೨. ಎಲ್ಲಾ ಸಮುದಾಯದ ವಿದ್ಯಾರ್ಥಿಗಳು ಮತ್ತು ಅವರ ಪಾಲಕರು ಮತ್ತು ಸ್ಥಳೀಯ ಮಹಿಳಾಪರ ಚಿಂತಕರನ್ನು ಸೇರಿಸಿಕೊಂಡ ಶಾಂತಿ
ಸಮಿತಿಯ ರಚನೆ ಮಾಡಬೇಕು. ಯಾರದೇ ವೈಯಕ್ತಿಕ ಘನತೆ ಮತ್ತುಶಿಕ್ಷಣಕ್ಕೆ ಕುತ್ತು ಬಾರದ ರೀತಿಯಲ್ಲಿ ಸಾಂಸ್ಕೃತಿಕ ವೈವಿಧ್ಯತೆಯನ್ನು
ಗೌರವಿಸುವಂತೆ ಪರಸ್ಪರ ಸೌಹಾರ್ದ ಮಾತುಕತೆ ನಡೆಸಿ ಅದನ್ನು ಪಾಲಿಸಬೇಕು.

೩. ಹರಯದ ಹುಡುಗಿಯರಿಗೆ ತಮ್ಮ ಮಧ್ಯೆ ಇರುವ ಸಾಂಸ್ಕೃತಿಕ ಪರಂಪರೆಗಳಲ್ಲಿನ ಪ್ರಸ್ತುತ ಅಥವಾ ಅಪ್ರಸ್ತುತ ಎನಿಸುವ
ವಿಷಯಗಳ ಬಗ್ಗೆ ಆರೋಗ್ಯಕರವಾಗಿ ಚರ್ಚೆಗಳು ಏರ್ಪಡುವಂತಹ ವಾತಾವರಣವು ಇರುವಂತೆ ನೋಡಿಕೊಳ್ಳಬೇಕು.

೪. ಸಂವಿಧಾನದ ಚೌಕಟ್ಟಿನೊಳಗೇ ಇದ್ದು ಮಹಿಳೆಯರ ಶಿಕ್ಷಣದ ಹಕ್ಕು ಮತ್ತು ಅವರ ವಸ್ತ್ರಗಳ ಆಯ್ಕೆ ಸ್ವಾತಂತ್ರ್ಯಗಳನ್ನು
ರಕ್ಷಿಸುವ ನಿಟ್ಟಿನಲ್ಲಿ ಕ್ರಮಗಳಾಗಬೇಕು.

ಮಾಧ್ಯಮಗಳು ಮತ್ತು ಹಿಂದುತ್ವವಾದೀ ಶಕ್ತಿಗಳು ಇದನ್ನು ಹಿಜಾಬ್ ಮತ್ತು ಕೇಸರಿ ಶಾಲಿನ ಮಧ್ಯೆಯ ವಿವಾದವಾಗಿ
ಬಿಂಬಿಸುತ್ತಿವೆ. ಆದರೆ ಇದು ಮಹಿಳೆಯರ ಶಿಕ್ಷಣದ ಹಕ್ಕಿನ ಪ್ರಶ್ನೆಯಾಗಿದ್ದು, ಈ ಸಂದರ್ಭದಲ್ಲಿ ಇದು ಮುಸ್ಲಿಂ ಮಹಿಳೆಯರ ಶಿಕ್ಷಣ ಮತ್ತು
ಸುರಕ್ಷೆಯ ಪ್ರಶ್ನೆಯಾಗಿದ್ದು ಇಲ್ಲಿ ಯಾವುದೇ ರಾಜಿಯ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸುವುದಾಗಿ ತಿಳಿಸಿವೆ.

ಜಾಗೃತ ಮಹಿಳಾ ಒಕ್ಕೂಟ, ವಿ ದ ವುಮೆನ್, ಉತ್ತರ ಕರ್ನಾಟಕ ಜೋಗಪ್ಪ ಸಂಘ, ಒಂದೆಡೆ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ಒಕ್ಕೂಟ, ಕರ್ನಾಟಕ ಸೆಕ್ಸ್ ವರ್ಕರ್ಸ್ ಯೂನಿಯನ್, ಸ್ತ್ರೀ ಜಾಗೃತಿ ಸಮಿತಿ, ಧ್ವನಿ ಮಹಿಳಾ ಸಂಘಟನೆ, ಜನವಾದಿ ಮಹಿಳಾ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳು ಸೇರಿ ಹಕ್ಕೊತ್ತಾಯ ಮಾಡಿವೆ.


ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...