Homeಮುಖಪುಟರಷ್ಯಾ ಸೇನಾ ಕಸರತ್ತು: ಉಕ್ರೇನ್‌ ತೊರೆಯುವಂತೆ ಅಮೆರಿಕನ್‌‌ ನಾಗರಿಕರಿಗೆ ಜೋ ಬೈಡನ್‌‌ ಕರೆ

ರಷ್ಯಾ ಸೇನಾ ಕಸರತ್ತು: ಉಕ್ರೇನ್‌ ತೊರೆಯುವಂತೆ ಅಮೆರಿಕನ್‌‌ ನಾಗರಿಕರಿಗೆ ಜೋ ಬೈಡನ್‌‌ ಕರೆ

- Advertisement -
- Advertisement -

ರಷ್ಯಾದ ಸೇನಾ ಬೆದರಿಕೆ ಹೆಚ್ಚಿರುವ ಕಾರಣ ಉಕ್ರೇನ್‌ನಲ್ಲಿ ಉಳಿದಿರುವ ಎಲ್ಲ ಅಮೆರಿಕನ್ ನಾಗರಿಕರು ತಕ್ಷಣವೇ ದೇಶವನ್ನು ತೊರೆಯಬೇಕು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್‌‌ ಕರೆ ನೀಡಿದ್ದಾರೆ.

ಉಕ್ರೇನ್ ಮೇಲೆ ಮಾಸ್ಕೋ ಆಕ್ರಮಣ ಮಾಡಿದರೆ ಅಮೆರಿಕನ್ನರನ್ನು ರಕ್ಷಿಸಲು ಪಡೆಗಳನ್ನು ಕಳುಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಪರಿಸ್ಥಿತಿ ಸ್ಥಿಮಿತ ಕಳೆದುಕೊಳ್ಳಬಹುದು ಎಂದು ಬೈಡನ್‌ ಎಚ್ಚರಿಸಿರುವುದಾಗಿ ಬಿಬಿಸಿ ವರದಿ ಮಾಡಿದೆ.

ಗಡಿಯಲ್ಲಿ 1,00,000ಕ್ಕೂ ಹೆಚ್ಚು ಸೈನಿಕರನ್ನು ಹೊಂದಿದ್ದರೂ ಉಕ್ರೇನ್ ಮೇಲೆ ಆಕ್ರಮಣ ಮಾಡುವ ಯಾವುದೇ ಯೋಜನೆಯನ್ನು ರಷ್ಯಾ ಪದೇ ಪದೇ ನಿರಾಕರಿಸಿದೆ.

PC: BBC

ಮುಂದಿನ ವಾರದಲ್ಲಿ ರಷ್ಯಾ ನೌಕಾ ಸಮರಾಭ್ಯಾಸಕ್ಕೆ ತಯಾರಿ ನಡೆಸುತ್ತಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ರಷ್ಯಾ ಸಮುದ್ರಕ್ಕೆ ತನ್ನ ಪ್ರವೇಶವನ್ನು ನಿರ್ಬಂಧಿಸುತ್ತಿದೆ ಎಂದು ಉಕ್ರೇನ್ ಆರೋಪಿಸಿದೆ.

ಅಜೋವ್ ಸಮುದ್ರಕ್ಕೆ ಪ್ರವೇಶಿಸುವುದನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ. ರಷ್ಯಾದ ಸೇನೆಗಳು ಕಪ್ಪು ಸಮುದ್ರದ ಸಂಪರ್ಕವನ್ನು ಕತ್ತರಿಸಿ ಹಾಕಿವೆ ಎಂದು ಉಕ್ರೇನಿನ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಹೇಳಿದ್ದಾರೆ.

ನೆರೆಯ ಬೆಲಾರಸ್‌ನೊಂದಿಗೆ ಬೃಹತ್ ಮಿಲಿಟರಿ ಕಸರತ್ತುಗಳನ್ನು ರಷ್ಯಾ ಪ್ರಾರಂಭಿಸಿದೆ. ಬೆಲಾರಸ್ ರಷ್ಯಾದ ನಿಕಟ ಮಿತ್ರರಾಷ್ಟ್ರವಾಗಿದೆ. ಉಕ್ರೇನ್‌ನೊಂದಿಗೆ ಸುದೀರ್ಘವಾದ ಗಡಿಯನ್ನು ಹೊಂದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಾನ್ಸ್, “ಶೀತಲ ಸಮರದ ನಂತರ ಬೆಲಾರಸ್‌ಗೆ ರಷ್ಯಾದ ಅತಿದೊಡ್ಡ ನಿಯೋಜನೆ ಇದೆಂದು ನಂಬಲಾಗಿದೆ. ಇದು ಹಿಂಸೆಯ ಮುನ್ಸೂಚನೆ” ಎಂದಿದೆ. ಈ ಬೆಳವಣಿಗೆಯನ್ನು ಉಕ್ರೇನ್, “ಮಾನಸಿಕ ಒತ್ತಡ” ಎಂದು ಪರಿಗಣಿಸಿದೆ.

ಉಕ್ರೇನ್‌ನ ದಕ್ಷಿಣ ಭಾಗದಲ್ಲಿರುವ ಕಪ್ಪು ಸಮುದ್ರ ಮತ್ತು ಅಜೋವ್ ಸಮುದ್ರದಲ್ಲಿ ಮುಂದಿನ ವಾರ ರಷ್ಯಾದ ನೌಕಾ ಸಮರಾಭ್ಯಾಸ ನಡೆಯಲಿದೆ. ಕ್ಷಿಪಣಿ ಮತ್ತು ಗುಂಡಿನ ದಾಳಿಯ ಕಸರತ್ತುಗಳನ್ನು ಉಲ್ಲೇಖಿಸಿರುವ ರಷ್ಯಾ ಕರಾವಳಿ ಭಾಗದಲ್ಲಿ ಎಚ್ಚರಿಕೆಗಳನ್ನು ನೀಡಿದೆ.

ಉಕ್ರೇನ್‌ನಲ್ಲಿರುವ ಯುಎಸ್ ರಾಯಭಾರ ಕಚೇರಿ ಈ ಬೆಳವಣಿಗೆಗಳ ಕುರಿತು ಆತಂಕ ವ್ಯಕ್ತಪಡಿಸಿದ್ದು, “ಮಿಲಿಟರಿ ಕಸರತ್ತಿನ ನೆಪದಲ್ಲಿ ಉಕ್ರೇನ್‌ನ ಕಡಲ ಸಾರ್ವಭೌಮತ್ವವನ್ನು ರಷ್ಯಾ ನಿರ್ಬಂಧಿಸಲಿದೆ. ಕಪ್ಪು ಸಮುದ್ರ, ಅಜೋವ್ ಸಮುದ್ರದಲ್ಲಿ ನೌಕಾ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲಿದೆ. ಉಕ್ರೇನ್‌ನ ಆರ್ಥಿಕತೆಗೆ ಅಗತ್ಯವಾದ ಸಮುದ್ರ ಮಾರ್ಗಕ್ಕೆ ಅಡ್ಡಿಪಡಿಸಲಿದೆ” ಎಂದು ಟ್ವೀಟ್ ಮಾಡಿದೆ.


ಇದನ್ನೂ ಓದಿರಿ: ವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...