Homeಮುಖಪುಟರಷ್ಯಾ ಸೇನಾ ಕಸರತ್ತು: ಉಕ್ರೇನ್‌ ತೊರೆಯುವಂತೆ ಅಮೆರಿಕನ್‌‌ ನಾಗರಿಕರಿಗೆ ಜೋ ಬೈಡನ್‌‌ ಕರೆ

ರಷ್ಯಾ ಸೇನಾ ಕಸರತ್ತು: ಉಕ್ರೇನ್‌ ತೊರೆಯುವಂತೆ ಅಮೆರಿಕನ್‌‌ ನಾಗರಿಕರಿಗೆ ಜೋ ಬೈಡನ್‌‌ ಕರೆ

- Advertisement -
- Advertisement -

ರಷ್ಯಾದ ಸೇನಾ ಬೆದರಿಕೆ ಹೆಚ್ಚಿರುವ ಕಾರಣ ಉಕ್ರೇನ್‌ನಲ್ಲಿ ಉಳಿದಿರುವ ಎಲ್ಲ ಅಮೆರಿಕನ್ ನಾಗರಿಕರು ತಕ್ಷಣವೇ ದೇಶವನ್ನು ತೊರೆಯಬೇಕು ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್‌‌ ಕರೆ ನೀಡಿದ್ದಾರೆ.

ಉಕ್ರೇನ್ ಮೇಲೆ ಮಾಸ್ಕೋ ಆಕ್ರಮಣ ಮಾಡಿದರೆ ಅಮೆರಿಕನ್ನರನ್ನು ರಕ್ಷಿಸಲು ಪಡೆಗಳನ್ನು ಕಳುಹಿಸುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಪ್ರದೇಶದಲ್ಲಿ ಪರಿಸ್ಥಿತಿ ಸ್ಥಿಮಿತ ಕಳೆದುಕೊಳ್ಳಬಹುದು ಎಂದು ಬೈಡನ್‌ ಎಚ್ಚರಿಸಿರುವುದಾಗಿ ಬಿಬಿಸಿ ವರದಿ ಮಾಡಿದೆ.

ಗಡಿಯಲ್ಲಿ 1,00,000ಕ್ಕೂ ಹೆಚ್ಚು ಸೈನಿಕರನ್ನು ಹೊಂದಿದ್ದರೂ ಉಕ್ರೇನ್ ಮೇಲೆ ಆಕ್ರಮಣ ಮಾಡುವ ಯಾವುದೇ ಯೋಜನೆಯನ್ನು ರಷ್ಯಾ ಪದೇ ಪದೇ ನಿರಾಕರಿಸಿದೆ.

PC: BBC

ಮುಂದಿನ ವಾರದಲ್ಲಿ ರಷ್ಯಾ ನೌಕಾ ಸಮರಾಭ್ಯಾಸಕ್ಕೆ ತಯಾರಿ ನಡೆಸುತ್ತಿದ್ದು, ಈ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ರಷ್ಯಾ ಸಮುದ್ರಕ್ಕೆ ತನ್ನ ಪ್ರವೇಶವನ್ನು ನಿರ್ಬಂಧಿಸುತ್ತಿದೆ ಎಂದು ಉಕ್ರೇನ್ ಆರೋಪಿಸಿದೆ.

ಅಜೋವ್ ಸಮುದ್ರಕ್ಕೆ ಪ್ರವೇಶಿಸುವುದನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ. ರಷ್ಯಾದ ಸೇನೆಗಳು ಕಪ್ಪು ಸಮುದ್ರದ ಸಂಪರ್ಕವನ್ನು ಕತ್ತರಿಸಿ ಹಾಕಿವೆ ಎಂದು ಉಕ್ರೇನಿನ ವಿದೇಶಾಂಗ ಸಚಿವ ಡಿಮಿಟ್ರೋ ಕುಲೆಬಾ ಹೇಳಿದ್ದಾರೆ.

ನೆರೆಯ ಬೆಲಾರಸ್‌ನೊಂದಿಗೆ ಬೃಹತ್ ಮಿಲಿಟರಿ ಕಸರತ್ತುಗಳನ್ನು ರಷ್ಯಾ ಪ್ರಾರಂಭಿಸಿದೆ. ಬೆಲಾರಸ್ ರಷ್ಯಾದ ನಿಕಟ ಮಿತ್ರರಾಷ್ಟ್ರವಾಗಿದೆ. ಉಕ್ರೇನ್‌ನೊಂದಿಗೆ ಸುದೀರ್ಘವಾದ ಗಡಿಯನ್ನು ಹೊಂದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರಾನ್ಸ್, “ಶೀತಲ ಸಮರದ ನಂತರ ಬೆಲಾರಸ್‌ಗೆ ರಷ್ಯಾದ ಅತಿದೊಡ್ಡ ನಿಯೋಜನೆ ಇದೆಂದು ನಂಬಲಾಗಿದೆ. ಇದು ಹಿಂಸೆಯ ಮುನ್ಸೂಚನೆ” ಎಂದಿದೆ. ಈ ಬೆಳವಣಿಗೆಯನ್ನು ಉಕ್ರೇನ್, “ಮಾನಸಿಕ ಒತ್ತಡ” ಎಂದು ಪರಿಗಣಿಸಿದೆ.

ಉಕ್ರೇನ್‌ನ ದಕ್ಷಿಣ ಭಾಗದಲ್ಲಿರುವ ಕಪ್ಪು ಸಮುದ್ರ ಮತ್ತು ಅಜೋವ್ ಸಮುದ್ರದಲ್ಲಿ ಮುಂದಿನ ವಾರ ರಷ್ಯಾದ ನೌಕಾ ಸಮರಾಭ್ಯಾಸ ನಡೆಯಲಿದೆ. ಕ್ಷಿಪಣಿ ಮತ್ತು ಗುಂಡಿನ ದಾಳಿಯ ಕಸರತ್ತುಗಳನ್ನು ಉಲ್ಲೇಖಿಸಿರುವ ರಷ್ಯಾ ಕರಾವಳಿ ಭಾಗದಲ್ಲಿ ಎಚ್ಚರಿಕೆಗಳನ್ನು ನೀಡಿದೆ.

ಉಕ್ರೇನ್‌ನಲ್ಲಿರುವ ಯುಎಸ್ ರಾಯಭಾರ ಕಚೇರಿ ಈ ಬೆಳವಣಿಗೆಗಳ ಕುರಿತು ಆತಂಕ ವ್ಯಕ್ತಪಡಿಸಿದ್ದು, “ಮಿಲಿಟರಿ ಕಸರತ್ತಿನ ನೆಪದಲ್ಲಿ ಉಕ್ರೇನ್‌ನ ಕಡಲ ಸಾರ್ವಭೌಮತ್ವವನ್ನು ರಷ್ಯಾ ನಿರ್ಬಂಧಿಸಲಿದೆ. ಕಪ್ಪು ಸಮುದ್ರ, ಅಜೋವ್ ಸಮುದ್ರದಲ್ಲಿ ನೌಕಾ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲಿದೆ. ಉಕ್ರೇನ್‌ನ ಆರ್ಥಿಕತೆಗೆ ಅಗತ್ಯವಾದ ಸಮುದ್ರ ಮಾರ್ಗಕ್ಕೆ ಅಡ್ಡಿಪಡಿಸಲಿದೆ” ಎಂದು ಟ್ವೀಟ್ ಮಾಡಿದೆ.


ಇದನ್ನೂ ಓದಿರಿ: ವಿವಾದಕ್ಕೆ ಎಡೆಮಾಡಿಕೊಟ್ಟ ವಿದೇಶಿ ಕಂಪನಿಗಳ ಸಾಮಾಜಿಕ ಜಾಲತಾಣಗಳ ಪೋಸ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...