Homeಮುಖಪುಟಹಿಜಾಬ್‌ live Updates: ಅಧಿಕೃತ ಮಧ್ಯಂತರ ಆದೇಶ ಪ್ರಕಟಿಸಿದ ಕರ್ನಾಟಕ ಹೈಕೋರ್ಟ್

ಹಿಜಾಬ್‌ live Updates: ಅಧಿಕೃತ ಮಧ್ಯಂತರ ಆದೇಶ ಪ್ರಕಟಿಸಿದ ಕರ್ನಾಟಕ ಹೈಕೋರ್ಟ್

- Advertisement -
- Advertisement -

ಸಮಯ: ಮಧ್ಯಾಹ್ನ 12 ಗಂಟೆ, ಶುಕ್ರವಾರ: ಗುರುವಾರ ಮೌಖಿಕ ಆದೇಶ ನೀಡಿದ್ದ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಧ್ಯಂತರ ಆದೇಶ ಪ್ರಕಟಿಸಿದೆ.

“ಎಲ್ಲಾ ವಿದ್ಯಾರ್ಥಿಗಳಿಗೂ ನಾವು ನಿರ್ಬಂಧ ಹೇರುತ್ತಿದ್ದೇವೆ. ಅವರವರ ಧರ್ಮಾನುಸಾರ ಕೇಸರಿ ಶಾಲನ್ನಾಗಲೀ, ಹಿಜಾಬ್ ಅನ್ನಾಗಲೀ, ಧಾರ್ಮಿಕ ಬಾವುಟಗಳನ್ನಾಗಲೀ ತರಗತಿಯೊಳಗೆ ತರಬಾರದು. ಮುಂದಿನ ಆದೇಶದವರೆಗೂ ಇವುಗಳನ್ನು ತರದಂತೆ ನಿರ್ಬಂಧಿಸುತ್ತಿದ್ದೇವೆ” ಎಂದು ಹೈಕೋರ್ಟ್ ತಿಳಿಸಿದೆ.

“ನಮ್ಮದು ನಾಗರಿಕ ಸಮಾಜ. ಧರ್ಮ, ಸಂಸ್ಕೃತಿ ಹೆಸರಲ್ಲಿ ಶಾಂತಿ, ಸಾಮರಸ್ಯಕ್ಕೆ ಧಕ್ಕೆ ಸರಿಯಲ್ಲ. ಯಾವುದೇ ವ್ಯಕ್ತಿ ಇಂತಹ ಕೃತ್ಯ ನಡೆಸಲು ಅವಕಾಶವಿಲ್ಲ. ಕಡಿವಾಣವಿರದ ಪ್ರತಿಭಟನೆಗಳಿಂದ ಶಾಲೆ ಕಾಲೇಜುಗಳು ಬಂದ್ ಆಗಬಾರದು” ಎಂದು ಹೇಳಿದೆ.

“ಶಿಕ್ಷಣ ಸಂಸ್ಥೆಗಳು ಅನಿರ್ದಿಷ್ಟ ಕಾಲ ಬಂದ್ ಆಗುವುದು ಸಂತಸದ ಸಂಗತಿಯಲ್ಲ. ಈ ಪ್ರಕರಣದ ವಿಚಾರಣೆಯನ್ನು ತುರ್ತು ಆಧಾರದ ಮೇಲೆ ನಡೆಸಲಾಗುತ್ತಿದೆ. ಶೈಕ್ಷಣಿಕ ವರ್ಷವನ್ನು ವಿಳಂಬಿಸುವುದರಿಂದ ವಿದ್ಯಾರ್ಥಿಗಳ ಹಿತಕ್ಕೆ ಧಕ್ಕೆಯಾಗುತ್ತದೆ. ಉನ್ನತ ಶಿಕ್ಷಣದ ಪ್ರವೇಶಕ್ಕೆ ಸಮಯ ಈಗಾಗಲೇ ನಿಗದಿಯಾಗಿರುತ್ತದೆ. ನಿಗದಿತ ಸಮಯದೊಳಗೆ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವುದು ಕಡ್ಡಾಯವಾಗುತ್ತದೆ” ಎಂದು ಹೈಕೋರ್ಟ್ ತಿಳಿಸಿದೆ.


ಸಮಯ: ಬೆಳಿಗ್ಗೆ 11 ಗಂಟೆ, 12 ನಿಮಿಷ, ಶುಕ್ರವಾರ: ಹಿಜಾಬ್ ಅರ್ಜಿಗಳಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ನ ನಿರ್ದೇಶನದ ವಿರುದ್ಧ ಸಲ್ಲಿಕೆಯಾಗಿದ್ದ ವಿಶೇಷ ರಜೆ ಅರ್ಜಿಯ ವಿಚಾರಣೆಗೆ ತುರ್ತು ಪಟ್ಟಿಯನ್ನು ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಸುಪ್ರೀಂ ಕೋರ್ಟ್ ಈ ವಿಷಯವನ್ನು ಸೂಕ್ತ ಸಮಯದಲ್ಲಿ ಕೈಗೆತ್ತಿಕೊಳ್ಳಲಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಹೇಳಿದ್ದಾರೆ.

ಈ ವಿಷಯವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಸ್ತಾಪಿಸಿದ ಹಿರಿಯ ವಕೀಲ ದೇವದತ್ತ್ ಕಾಮತ್ ಅವರಿಗೆ, ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯವರು, “ಈ ವಿಷಯವನ್ನು ದೊಡ್ಡ ಮಟ್ಟದಲ್ಲಿ ಹರಡಲು ಬಯಸುವುದಿಲ್ಲ” ಎಂದಿದ್ದಾರೆ.

“ನಾನು ಏನನ್ನೂ ವ್ಯಕ್ತಪಡಿಸಲು ಬಯಸುವುದಿಲ್ಲ. ಈ ವಿಷಯಗಳನ್ನು ದೊಡ್ಡ ಮಟ್ಟಕ್ಕೆ ಹರಡಬೇಡಿ. ಈ ವಿಷಯಗಳನ್ನು ದೆಹಲಿಗೆ ತರುವುದು ಸರಿಯೇ, ರಾಷ್ಟ್ರೀಯ ಮಟ್ಟದ ಸಮಸ್ಯೆಯೇ, ಎಲ್ಲದಕ್ಕೂ ನೀವು ಯೋಚಿಸಬೇಕು” ಎಂದು ತಿಳಿಸಿದ್ದಾರೆ.

ತ್ರಿಸದಸ್ಯ ಪೀಠದ ಮುಂದೆ ನಡೆಯುತ್ತಿರುವ ವಿಚಾರಣೆಗಳು ಹಾಗೂ ಹಿಜಾಬ್ ಸಮಸ್ಯೆಯನ್ನು ವಿಚಾರಣೆ ನಡೆಸುತ್ತಿರುವ ಹೈಕೋರ್ಟ್‌ನ ನಿರ್ದೇಶನಕ್ಕೆ ತಡೆಯಾಜ್ಞೆ ನೀಡಬೇಕು ಎಂದು ವಿದ್ಯಾರ್ಥಿಯೊಬ್ಬರು ಸಲ್ಲಿಸಿರುವ ಮನವಿಯಲ್ಲಿ ಕೋರಲಾಗಿದೆ. ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶ ನೀಡದೆ ಅವರ ಮೂಲಭೂತ ಹಕ್ಕನ್ನು ಮೊಟಕುಗೊಳಿಸಲು ಹೈಕೋರ್ಟ್ ಪ್ರಯತ್ನಿಸಿದೆ ಎಂದು ಮೇಲ್ಮನವಿಯಲ್ಲಿ ಪ್ರತಿಪಾದಿಸಲಾಗಿದೆ.

ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ನೀಡಿರುವ ಮಧ್ಯಂತರ ತಡೆ ಆದೇಶವನ್ನು ಪ್ರಶ್ನಿಸಿ ಹಿಜಾಬ್ ಧರಿಸುವ ಧಾರ್ಮಿಕ ಹಕ್ಕಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿನಿಯೊಬ್ಬರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದರು.

ಶಾಲಾ-ಕಾಲೇಜುಗಳನ್ನು ಮತ್ತೆ ತೆರೆಯಬಹುದು. ಆದರೆ ವಿದ್ಯಾರ್ಥಿಗಳು ಧಾರ್ಮಿಕ ಉಡುಪುಗಳನ್ನು ವಿಚಾರಣೆ ಮುಗಿಯುವವರೆಗೂ ಧರಿಸುವಂತಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ಸೂಚನೆಯು ಭಾರತೀಯ ಸಂವಿಧಾನದ 14, 15, 19, 21 ಮತ್ತು 25ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ವಿಶೇಷ ರಜೆ ಅರ್ಜಿಯಲ್ಲಿ ತಿಳಿಸಲಾಗಿದೆ.

ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರಗಳನ್ನು ಧರಿಸುವುದನ್ನು ಮೌಖಿಕವಾಗಿ ನಿಷೇಧಿಸಿರುವ ಕರ್ನಾಟಕ ಹೈಕೋರ್ಟ್‌ನ ಸೂಚನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ.

“ಮಧ್ಯಂತರ ಆದೇಶವು ವ್ಯಕ್ತಿಗಳ, ವಿಶೇಷವಾಗಿ ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳ ಆತ್ಮಸಾಕ್ಷಿಯ ಆಯ್ಕೆಯನ್ನು ಪ್ರಶ್ನಿಸಿದೆ” ಎಂದು ವಿದ್ಯಾರ್ಥಿಯೊಬ್ಬರು ವಿಶೇಷ ರಜೆ ಅರ್ಜಿಯನ್ನು ಸಲ್ಲಿಸಿದ್ದರು.

ಹೈಕೋರ್ಟ್ ಆದೇಶದ ಪ್ರತಿಯನ್ನು ಇನ್ನೂ ಬಿಡುಗಡೆ ಮಾಡದ ಕಾರಣ ಅರ್ಜಿದಾರರು, ಕರ್ನಾಟಕ ಹೈಕೋರ್ಟ್ ಪ್ರೊಸೀಡಿಂಗ್ಸ್ ಲೈವ್ ಲಾನಲ್ಲಿ ಆಗಿರುವ ಲೈವ್ ಟ್ವೀಟ್‌ಗಳ ಪಠ್ಯವನ್ನು ಸಲ್ಲಿಸಲಾಗಿದೆ.


ಸಮಯ: ಬೆಳಿಗ್ಗೆ 11.08. ಶುಕ್ರವಾರ

ವೈಯಕ್ತಿಕ ವಿವರ ಸೋರಿಕೆ: ದೂರು ದಾಖಲು

ಹಿಜಾಬ್‌ ಹಕ್ಕಿಗಾಗಿ ಪ್ರತಿಭಟಿಸಿದ ವಿದ್ಯಾರ್ಥಿನಿಯ ವೈಯಕ್ತಿಕ ವಿವರಗಳು ಸೋರಿಕೆಯಾಗಿರುವ ಸಂಬಂಧ ವಿದ್ಯಾರ್ಥಿನಿಯರ ಪೋಷಕರು ದೂರು ದಾಖಲಿಸಿದ್ದಾರೆ.

ಉಡುಪಿಯ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸುವ ಹಕ್ಕಿಗಾಗಿ ಪ್ರತಿಭಟನೆ ನಡೆಸುತ್ತಿರುವ ಆರು ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರು ತಮ್ಮ ಮಕ್ಕಳ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹಂಚಿಕೊಳ್ಳುತ್ತಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಅವರಿಗೆ ದೂರು ಸಲ್ಲಿಸಿರುವ ಪೋಷಕರು, ಮೊಬೈಲ್ ಸಂಖ್ಯೆ ಸೇರಿದಂತೆ ಬಾಲಕಿಯರ ವೈಯಕ್ತಿಕ ವಿವರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ಕ್ರಮ ಜರುಗಿಸುವಂತೆ ಕೋರಿದ್ದಾರೆ. ಈ ವಿವರಗಳನ್ನು ಬಳಸಿಕೊಂಡು ದುಷ್ಕರ್ಮಿಗಳು ಬಾಲಕಿಯರಿಗೆ ಬೆದರಿಕೆ ಹಾಕಬಹುದು ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.

ಬಾಲಕಿಯರ ಪೋಷಕರು ತಮಗೆ ಲಿಖಿತ ದೂರು ಸಲ್ಲಿಸಿದ್ದಾರೆ ಎಂದು ವಿಷ್ಣುವರ್ಧನ್ ಹೇಳಿದ್ದಾರೆ. ಸೂಕ್ತ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕೇಳಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

(ವಿವಾದಕ್ಕೆ ಸಂಬಂಧಿಸಿದ ವಿವರಗಳನ್ನು ಅಪ್‌ಡೇಟ್‌ ಮಾಡಲಾಗುತ್ತಿದೆ. ಆಗಾಗ್ಗೆ ರೀಫ್ರೆಶ್‌ ಮಾಡಿರಿ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...