Homeಕರ್ನಾಟಕಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ

ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ

- Advertisement -
- Advertisement -

ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್- ಕೇಸರಿ ವಿವಾದದಲ್ಲಿ ಮುನ್ನೆಲೆಗೆ ಬಂದ ಮುಸ್ಲಿಂ ವಿದ್ಯಾರ್ಥಿನಿ ಬೀಬಿ ಮುಸ್ಕಾನ್ ಖಾನ್‌ಗೆ ಆರ್‌ಎಸ್‌ಎಸ್‌ನ ಮುಸ್ಲಿಂ ವಿಭಾಗವಾದ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‌ಎಂ) ಬೆಂಬಲ ನೀಡಿದೆ. ಆದರೆ, ಇದೆ ಆರ್‌ಎಸ್‌ಎಸ್‌ನ ಮುಖಂಡರೊಬ್ಬರು ಆಕೆಯನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ.

‘ಪರ್ದಾ’ ಭಾರತೀಯ ಸಂಸ್ಕೃತಿಯ ಭಾಗ ಎಂದು ಹೇಳುವ ಮೂಲಕ ಮಂಡ್ಯದ ಕಾಲೇಜಿನಲ್ಲಿ ಯುವಕರು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿದಕ್ಕೆ ಪ್ರತಿಯಾಗಿ ಅಲ್ಲಾ ಹು ಅಕ್ಬರ್‌ ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್‌ ಖಾನ್‌ಗೆ ಆರ್‌ಎಸ್‌ಎಸ್‌ನ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‌ಎಂ) ಬೆಂಬಲ ನೀಡಿದೆ.

“ಬೀಬಿ ಮುಸ್ಕಾನ್ ಖಾನ್‌ ನಮ್ಮ ಸಮುದಾಯದ ಮಗಳು ಮತ್ತು ಸಹೋದರಿ, ಈ ಬಿಕ್ಕಟ್ಟಿನ ಸಮಯದಲ್ಲಿ ನಾವು ಅವರ ಪರ ನಿಲ್ಲುತ್ತೇವೆ” ಎಂದು ಎಂಆರ್‌ಎಂನ ಪ್ರಾಂತ ಸಂಚಾಲಕ ಅನಿಲ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

ಪಿಟಿಐಗೆ ನೀಡಿರುವ ಹೇಳಿಕೆಯಲ್ಲಿ, “ಹಿಂದೂ ಸಂಸ್ಕೃತಿಯು ಮಹಿಳೆಯರಿಗೆ ಗೌರವವನ್ನು ಕಲಿಸುತ್ತದೆ. ಆದರೆ, ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿ, ಆ ವಿದ್ಯಾರ್ಥಿನಿಯನ್ನು ಬೆದರಿಸಲು ಪ್ರಯತ್ನಿಸಿದ್ದು ತಪ್ಪು. ದೇಶದ ಸಂವಿಧಾನವು ಹೆಣ್ಣು ಮಗುವಿಗೆ ಹಿಜಾಬ್ ಧರಿಸುವ ಹಕ್ಕನ್ನು ನೀಡಿದೆ. ಬಾಲಕಿ ತಾನು ಓದುತ್ತಿರುವ ಸಂಸ್ಥೆಯ ಯಾವುದೇ ವಸ್ತ್ರ ಸಂಹಿತಿಯನ್ನು ಉಲ್ಲಂಘಿಸಿದ್ದರೆ ಮಾತ್ರ ಸಂಸ್ಥೆ ಆಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದ ವೈಫಲ್ಯವನ್ನು ಹಿಜಾಬ್ ಮತ್ತು ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ: ಕರ್ನಾಟಕ ಜನಶಕ್ತಿ

“ಹಿಜಾಬ್ ಭಾರತೀಯ ಸಂಸ್ಕೃತಿ ಮತ್ತು ನಮ್ಮ ಸಮಾಜದ ಒಂದು ಭಾಗವಾದ ‘ಪರ್ದಾ’ ಆಗಿದೆ. ನಮ್ಮ ಸಮಾಜದಲ್ಲಿ ಹಿಂದೂ ಮಹಿಳೆಯರು ಕೂಡ ವ್ಯಕ್ತಿಗೆ ಅನುಗುಣವಾಗಿ ‘ಪರ್ದಾ’ ಧರಿಸುತ್ತಾರೆ. ಹಿಂದೂ ಮಹಿಳೆಯರು ತಮ್ಮ ಡ್ರೆಸ್ ಕೋಡ್ ಅನ್ನು ಆಯ್ಕೆ ಮಾಡಿಕೊಳ್ಳಲು ಸ್ವತಂತ್ರರಾಗಿದ್ದರೆ, ಇದು ಬೀಬಿ ಮುಸ್ಕಾನ್ ಅವರಿಗೂ ಅನ್ವಯಿಸುತ್ತದೆ’ ಎಂದಿದ್ದಾರೆ.

“ಮುಸ್ಲಿಮರು ನಮ್ಮ ಸಹೋದರರು. ಎರಡೂ ಸಮುದಾಯಗಳ ಡಿಎನ್ಎ ಒಂದೇ ಎಂದು ನಮ್ಮ ಸಂಘದ ಮುಖಂಡರು (sarsangh chalak) ಹೇಳಿದ್ದಾರೆ. ಹಾಗಾಗಿ ಮುಸ್ಲಿಮರನ್ನು ತಮ್ಮ ಸಹೋದರ ಸಹೋದರಿಯರಂತೆ ಸ್ವೀಕರಿಸುವಂತೆ ಹಿಂದೂ ಸಮುದಾಯದ ಎಲ್ಲ ಸದಸ್ಯರಿಗೆ ನಾನು ಮನವಿ ಮಾಡುತ್ತೇನೆ” ಎಂದು ಅನಿಲ್ ಸಿಂಗ್ ಹೇಳಿದ್ದಾರೆ.

ಇತ್ತ, ಇದೆ ಘಟನೆಗೆ ತದ್ವಿರುದ್ಧ ಪ್ರತಿಕ್ರಿಯೆ ನೀಡಿರುವ ಆರ್‌ಎಸ್‌ಎಸ್ ಮುಖಂಡ ಇಂದ್ರೇಶ್ ಕುಮಾರ್, ವಿದ್ಯಾರ್ಥಿನಿ ಬೀಬಿ ಮುಸ್ಕಾನ್ ಖಾನ್ ಅವರನ್ನು ಖಂಡಿಸಿದ್ದು, ರಾಜ್ಯದಲ್ಲಿ ಶಾಂತಿ ಕದಡಲು ಸಂಚು ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: BREAKING News| ಹಿಜಾಬ್‌: ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ

“ಯಾವಾಗಲೂ ಜೀನ್ಸ್ ಧರಿಸುವ ಮುಸ್ಕಾನ್ ಖಾನ್, ರಾಜ್ಯದಲ್ಲಿನ ಶಾಂತಿಯುತ ವಾತಾವರಣವನ್ನು ಕದಡುವ ಪಿತೂರಿಯ ಭಾಗವಾಗಿ ಹಿಜಾಬ್ ಧರಿಸಿ ಪ್ರತಿಭಟಿಸಿದ್ದಾರೆ” ಎಂದು ಆರ್‌ಎಸ್‌ಎಸ್ ನಾಯಕ ಹೇಳಿದ್ದಾರೆ.

“ಮುಸ್ಕಾನ್ ಖಾನ್ ಯಾವಾಗಲೂ ಜೀನ್ಸ್ ಧರಿಸುತ್ತಾರೆ. ಅವರಿ ಇಂತಹ ಪಿತೂರಿ ಮಾಡಿದ್ದಾರೆ, ಇದು ಖಂಡನೀಯ. ಅವರು ಶಾಂತಿಯುತ ವಾತಾವರಣವನ್ನು ಹಾಳು ಮಾಡಲು ಯತ್ನಿಸುತ್ತಿದ್ದಾರೆ. ಕೆಲವು ಉಗ್ರಗಾಮಿಗಳು ಈ ಹೆಣ್ಣುಮಕ್ಕಳನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಇಂದ್ರೇಶ್ ಕುಮಾರ್ ‌ಆರೋಪಿಸಿದ್ದಾರೆ.

ಮಂಡ್ಯ ಪಿಇಎಸ್‌ ಕಾಲೇಜಿನಲ್ಲಿ ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕೆಲವು ಕೇಸರಿ ಶಾಲುಧಾರಿಗಳು, ಬುರ್ಖಾ ಧರಿಸಿ ಕಾಲೇಜು ಆವರಣಕ್ಕೆ ಬಂದ ಬೀಬಿ ಮುಸ್ಕಾನ್‌ ಅವರನ್ನು ಕಂಡ ಕೂಡಲೇ ಜೈ ಶ್ರೀರಾಮ್ ಘೋಷಣೆ ಕೂಗಿ ಹಿಂಬಾಲಿಸಿದ್ದರು. ಇದಕ್ಕೆ ತಕ್ಷಣದ ಪ್ರತಿಕ್ರಿಯೆಯಾಗಿ ಆಕೆ ಅಲ್ಲಾ ಹು ಅಕ್ಬರ್‌ ಘೋಷಣೆ ಕೂಗಿದ್ದರು. ಆಕೆಯ ಪ್ರತಿರೋಧ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ.


ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೀರ ವಿದ್ಯಾರ್ಥಿನಿ ಬೀಬಿ ಮುಸ್ಕಾನ್ ಗೆ ಧನ್ಯವಾದಗಳು ಮತ್ತು ಅಭಿನಂದನೆಗಳು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...