Homeಕರ್ನಾಟಕಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ

ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ

- Advertisement -
- Advertisement -

ರಾಜ್ಯದಲ್ಲಿ ಭುಗಿಲೆದ್ದಿರುವ ಹಿಜಾಬ್- ಕೇಸರಿ ವಿವಾದದಲ್ಲಿ ಮುನ್ನೆಲೆಗೆ ಬಂದ ಮುಸ್ಲಿಂ ವಿದ್ಯಾರ್ಥಿನಿ ಬೀಬಿ ಮುಸ್ಕಾನ್ ಖಾನ್‌ಗೆ ಆರ್‌ಎಸ್‌ಎಸ್‌ನ ಮುಸ್ಲಿಂ ವಿಭಾಗವಾದ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‌ಎಂ) ಬೆಂಬಲ ನೀಡಿದೆ. ಆದರೆ, ಇದೆ ಆರ್‌ಎಸ್‌ಎಸ್‌ನ ಮುಖಂಡರೊಬ್ಬರು ಆಕೆಯನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ.

‘ಪರ್ದಾ’ ಭಾರತೀಯ ಸಂಸ್ಕೃತಿಯ ಭಾಗ ಎಂದು ಹೇಳುವ ಮೂಲಕ ಮಂಡ್ಯದ ಕಾಲೇಜಿನಲ್ಲಿ ಯುವಕರು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿದಕ್ಕೆ ಪ್ರತಿಯಾಗಿ ಅಲ್ಲಾ ಹು ಅಕ್ಬರ್‌ ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್‌ ಖಾನ್‌ಗೆ ಆರ್‌ಎಸ್‌ಎಸ್‌ನ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್‌ಎಂ) ಬೆಂಬಲ ನೀಡಿದೆ.

“ಬೀಬಿ ಮುಸ್ಕಾನ್ ಖಾನ್‌ ನಮ್ಮ ಸಮುದಾಯದ ಮಗಳು ಮತ್ತು ಸಹೋದರಿ, ಈ ಬಿಕ್ಕಟ್ಟಿನ ಸಮಯದಲ್ಲಿ ನಾವು ಅವರ ಪರ ನಿಲ್ಲುತ್ತೇವೆ” ಎಂದು ಎಂಆರ್‌ಎಂನ ಪ್ರಾಂತ ಸಂಚಾಲಕ ಅನಿಲ್ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.

ಪಿಟಿಐಗೆ ನೀಡಿರುವ ಹೇಳಿಕೆಯಲ್ಲಿ, “ಹಿಂದೂ ಸಂಸ್ಕೃತಿಯು ಮಹಿಳೆಯರಿಗೆ ಗೌರವವನ್ನು ಕಲಿಸುತ್ತದೆ. ಆದರೆ, ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿ, ಆ ವಿದ್ಯಾರ್ಥಿನಿಯನ್ನು ಬೆದರಿಸಲು ಪ್ರಯತ್ನಿಸಿದ್ದು ತಪ್ಪು. ದೇಶದ ಸಂವಿಧಾನವು ಹೆಣ್ಣು ಮಗುವಿಗೆ ಹಿಜಾಬ್ ಧರಿಸುವ ಹಕ್ಕನ್ನು ನೀಡಿದೆ. ಬಾಲಕಿ ತಾನು ಓದುತ್ತಿರುವ ಸಂಸ್ಥೆಯ ಯಾವುದೇ ವಸ್ತ್ರ ಸಂಹಿತಿಯನ್ನು ಉಲ್ಲಂಘಿಸಿದ್ದರೆ ಮಾತ್ರ ಸಂಸ್ಥೆ ಆಕೆಯ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರದ ವೈಫಲ್ಯವನ್ನು ಹಿಜಾಬ್ ಮತ್ತು ಕೇಸರಿ ಶಾಲುಗಳ ಹಿಂದೆ ಬಚ್ಚಿಟ್ಟುಕೊಳ್ಳಲು ಸಾಧ್ಯವಿಲ್ಲ: ಕರ್ನಾಟಕ ಜನಶಕ್ತಿ

“ಹಿಜಾಬ್ ಭಾರತೀಯ ಸಂಸ್ಕೃತಿ ಮತ್ತು ನಮ್ಮ ಸಮಾಜದ ಒಂದು ಭಾಗವಾದ ‘ಪರ್ದಾ’ ಆಗಿದೆ. ನಮ್ಮ ಸಮಾಜದಲ್ಲಿ ಹಿಂದೂ ಮಹಿಳೆಯರು ಕೂಡ ವ್ಯಕ್ತಿಗೆ ಅನುಗುಣವಾಗಿ ‘ಪರ್ದಾ’ ಧರಿಸುತ್ತಾರೆ. ಹಿಂದೂ ಮಹಿಳೆಯರು ತಮ್ಮ ಡ್ರೆಸ್ ಕೋಡ್ ಅನ್ನು ಆಯ್ಕೆ ಮಾಡಿಕೊಳ್ಳಲು ಸ್ವತಂತ್ರರಾಗಿದ್ದರೆ, ಇದು ಬೀಬಿ ಮುಸ್ಕಾನ್ ಅವರಿಗೂ ಅನ್ವಯಿಸುತ್ತದೆ’ ಎಂದಿದ್ದಾರೆ.

“ಮುಸ್ಲಿಮರು ನಮ್ಮ ಸಹೋದರರು. ಎರಡೂ ಸಮುದಾಯಗಳ ಡಿಎನ್ಎ ಒಂದೇ ಎಂದು ನಮ್ಮ ಸಂಘದ ಮುಖಂಡರು (sarsangh chalak) ಹೇಳಿದ್ದಾರೆ. ಹಾಗಾಗಿ ಮುಸ್ಲಿಮರನ್ನು ತಮ್ಮ ಸಹೋದರ ಸಹೋದರಿಯರಂತೆ ಸ್ವೀಕರಿಸುವಂತೆ ಹಿಂದೂ ಸಮುದಾಯದ ಎಲ್ಲ ಸದಸ್ಯರಿಗೆ ನಾನು ಮನವಿ ಮಾಡುತ್ತೇನೆ” ಎಂದು ಅನಿಲ್ ಸಿಂಗ್ ಹೇಳಿದ್ದಾರೆ.

ಇತ್ತ, ಇದೆ ಘಟನೆಗೆ ತದ್ವಿರುದ್ಧ ಪ್ರತಿಕ್ರಿಯೆ ನೀಡಿರುವ ಆರ್‌ಎಸ್‌ಎಸ್ ಮುಖಂಡ ಇಂದ್ರೇಶ್ ಕುಮಾರ್, ವಿದ್ಯಾರ್ಥಿನಿ ಬೀಬಿ ಮುಸ್ಕಾನ್ ಖಾನ್ ಅವರನ್ನು ಖಂಡಿಸಿದ್ದು, ರಾಜ್ಯದಲ್ಲಿ ಶಾಂತಿ ಕದಡಲು ಸಂಚು ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: BREAKING News| ಹಿಜಾಬ್‌: ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ವಿದ್ಯಾರ್ಥಿನಿ

“ಯಾವಾಗಲೂ ಜೀನ್ಸ್ ಧರಿಸುವ ಮುಸ್ಕಾನ್ ಖಾನ್, ರಾಜ್ಯದಲ್ಲಿನ ಶಾಂತಿಯುತ ವಾತಾವರಣವನ್ನು ಕದಡುವ ಪಿತೂರಿಯ ಭಾಗವಾಗಿ ಹಿಜಾಬ್ ಧರಿಸಿ ಪ್ರತಿಭಟಿಸಿದ್ದಾರೆ” ಎಂದು ಆರ್‌ಎಸ್‌ಎಸ್ ನಾಯಕ ಹೇಳಿದ್ದಾರೆ.

“ಮುಸ್ಕಾನ್ ಖಾನ್ ಯಾವಾಗಲೂ ಜೀನ್ಸ್ ಧರಿಸುತ್ತಾರೆ. ಅವರಿ ಇಂತಹ ಪಿತೂರಿ ಮಾಡಿದ್ದಾರೆ, ಇದು ಖಂಡನೀಯ. ಅವರು ಶಾಂತಿಯುತ ವಾತಾವರಣವನ್ನು ಹಾಳು ಮಾಡಲು ಯತ್ನಿಸುತ್ತಿದ್ದಾರೆ. ಕೆಲವು ಉಗ್ರಗಾಮಿಗಳು ಈ ಹೆಣ್ಣುಮಕ್ಕಳನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಇಂದ್ರೇಶ್ ಕುಮಾರ್ ‌ಆರೋಪಿಸಿದ್ದಾರೆ.

ಮಂಡ್ಯ ಪಿಇಎಸ್‌ ಕಾಲೇಜಿನಲ್ಲಿ ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕೆಲವು ಕೇಸರಿ ಶಾಲುಧಾರಿಗಳು, ಬುರ್ಖಾ ಧರಿಸಿ ಕಾಲೇಜು ಆವರಣಕ್ಕೆ ಬಂದ ಬೀಬಿ ಮುಸ್ಕಾನ್‌ ಅವರನ್ನು ಕಂಡ ಕೂಡಲೇ ಜೈ ಶ್ರೀರಾಮ್ ಘೋಷಣೆ ಕೂಗಿ ಹಿಂಬಾಲಿಸಿದ್ದರು. ಇದಕ್ಕೆ ತಕ್ಷಣದ ಪ್ರತಿಕ್ರಿಯೆಯಾಗಿ ಆಕೆ ಅಲ್ಲಾ ಹು ಅಕ್ಬರ್‌ ಘೋಷಣೆ ಕೂಗಿದ್ದರು. ಆಕೆಯ ಪ್ರತಿರೋಧ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದೆ.


ಇದನ್ನೂ ಓದಿ: Hijab Live | ಹಿಜಾಬ್‌ ಲೈವ್‌ | ವಿಚಾರಣೆ ಸೋಮವಾರಕ್ಕೆ ಮುಂದೂಡಿದ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ದೀರ ವಿದ್ಯಾರ್ಥಿನಿ ಬೀಬಿ ಮುಸ್ಕಾನ್ ಗೆ ಧನ್ಯವಾದಗಳು ಮತ್ತು ಅಭಿನಂದನೆಗಳು.

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...