Homeಕರ್ನಾಟಕಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

- Advertisement -
- Advertisement -

ರಾಜ್ಯದಲ್ಲಿ ಆರಂಭವಾಗಿ ದೇಶಾದ್ಯಂತ ಹಬ್ಬುತ್ತಿರುವ ಹಿಜಾಬ್ ವಿವಾದದ ಬಗ್ಗೆ ಬಾಲಿವುಡ್ ನಟಿ ಸೋನಮ್ ಕಪೂರ್ ಸಾಮಾಜಿಕ ಜಾಲತಾಣದಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಇನ್‌ಸ್ಟ್ರಾಗ್ರಾಮ್‌ನಲ್ಲಿ (Instagram) ಸ್ಟೋರೀಸ್‌ನಲ್ಲಿ ಅಪ್‌ಲೋಡ್ ಮಾಡಿದ್ದ ಅವರು, ಎರಡು ಚಿತ್ರಗಳನ್ನು ಕೊಲಾಜ್ ಮಾಡಿರುವ ಫೋಟೋವನ್ನು ಹಂಚಿಕೊಂಡು ಟರ್ಬನ್ ಒಂದು ಆಯ್ಕೆಯಾಗಿಬಹುದಾದರೆ, ಹಿಜಾಬ್ ಏಕೆ ಆಗಬಾರದು? ಎಂದು ಪ್ರಶ್ನಿಸಿದ್ದಾರೆ.

ಹಿಜಾಬ್ ವಿರೋಧಿಸುತ್ತಿರುವುದನ್ನು ಖಂಡಿಸಿರುವ ನಟಿ ಸೋನಮ್ ಕಪೂರ್ ಹಂಚಿಕೊಂಡಿರುವ ಚಿತ್ರದ ಎಡಭಾಗದಲ್ಲಿ ಟರ್ಬನ್ ಧರಿಸಿರುವ ವ್ಯಕ್ತಿಯ ಚಿತ್ರವಿದ್ದು, ಅದರ ಮೇಲೆ “ಇದು ಆಯ್ಕೆಯಾಗಬಹುದು” ಎಂಬ ಸಾಲಿದೆ. ಅದರ ಪಕ್ಕದಲ್ಲಿ ಹಿಜಾಬ್ ಧರಿಸಿರುವ ಮಹಿಳೆಯ ಫೋಟೋವಿದ್ದು, ಅವರ ಮೇಲೆ “ಆದರೆ ಇದು ಸಾಧ್ಯವಿಲ್ಲವೇ?” ಎಂಬ ಸಾಲಿದೆ.

ಇದನ್ನೂ ಓದಿ: ಸಿಂಧೂರ ಧರಿಸುವುದು ನನ್ನ ಆಯ್ಕೆ, ಹಿಜಾಬ್ ಧರಿಸುವುದು ಮುಸ್ಕಾನ್ ಆಯ್ಕೆ: ’ಹಮ್ ಸಬ್ ಹಿಂದೂಸ್ತಾನಿ’ ಎಂದ ತೆಲಂಗಾಣ ಸಿಎಂ ಪುತ್ರಿ ಕವಿತಾ

ನಟಿ ರಮ್ಯಾ ಕೂಡ ಹಿಜಾಬ್- ಕೇಸರಿ ಶಾಲು ವಿವಾದದಕ್ಕೆ ಪ್ರತಿಕ್ರಿಯಿಸಿದ್ದರು. ವಿದ್ಯಾರ್ಥಿಗಳ ವಿಡಿಯೊವೊಂದನ್ನು ಹಂಚಿಕೊಂಡಿದ್ದ ಅವರು ’ಭಾರತದ ಯುವಜನತೆ ಈ ರೀತಿ ಛಿದ್ರವಾಗಿರುವುದನ್ನು ನೋಡಲು ನನಗೆ ಬೇಸರವಾಗುತ್ತದೆ’ ಎಂದಿದ್ದರು.

ಕಳೆದ ಡಿಸೆಂಬರ್‌ನಲ್ಲಿ ಉಡುಪಿಯ ಆರು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ನಿರ್ಬಮಧ ಹೇರಿದ ಬಳಿಕ ಇದು ರಾಜ್ಯದಲ್ಲಿ ದೊಡ್ಡ ಸುದ್ದಿಯಾಗಿತ್ತು. ಬಳಿಕ ಕುಂದಾಒಉರದ ಕಾಲೇಜಿನಲ್ಲೂ ವಿದ್ಯಾರ್ಥಿನಿಯರಿಗೆ ಹಿಜಾಬ್ ಮೇಲೆ ನಿರ್ಬಂಧ ಹೇರಲಾಯಿತು. ಅಲ್ಲಿಂದ ಕೇಸರಿ ಶಾಲು ವಿವಾದ ಆರಂಭವಾಗಿ ಉಳಿದ ಜಿಲ್ಲೆಗಳಿಗೂ ಹಬ್ಬಿ ಅಂತರರಾಷ್ಟ್ರೀಯ ಸುದ್ದಿಯಾಗಿದೆ.

ಘರ್ಷಣೆ ಹೆಚ್ಚಾಗುತ್ತಿದ್ದಂತೆ ಫೆಬ್ರವರಿ 5 ರಂದು ಕರ್ನಾಟಕ ಸರ್ಕಾರವು “ಸಮಾನತೆ, ಸಮಗ್ರತೆ ಮತ್ತು ಸಾರ್ವಜನಿಕ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವ” ಉಡುಪುಗಳನ್ನು ನಿಷೇಧಿಸುವುದರೊಂದಿಗೆ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ಕರ್ನಾಟಕ ಹೈಕೋರ್ಟ್‌ ನೀಡಿರುವ ಮಧ್ಯಂತರ ತಡೆ ಆದೇಶವನ್ನು ಪ್ರಶ್ನಿಸಿ ಹಿಜಾಬ್ ಧರಿಸುವ ಧಾರ್ಮಿಕ ಹಕ್ಕಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿನಿಯೊಬ್ಬರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಶಾಲಾ-ಕಾಲೇಜುಗಳನ್ನು ಮತ್ತೆ ತೆರೆಯಬಹುದು. ಆದರೆ ವಿದ್ಯಾರ್ಥಿಗಳು ಧಾರ್ಮಿಕ ಉಡುಪುಗಳನ್ನು ವಿಚಾರಣೆ ಮುಗಿಯುವವರೆಗೂ ಧರಿಸುವಂತಿಲ್ಲ ಎಂಬ ಕರ್ನಾಟಕ ಹೈಕೋರ್ಟ್ ಸೂಚನೆಯು ಭಾರತೀಯ ಸಂವಿಧಾನದ 14, 15, 19, 21 ಮತ್ತು 25ನೇ ವಿಧಿಯನ್ನು ಉಲ್ಲಂಘಿಸುತ್ತದೆ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾದ ವಿಶೇಷ ರಜೆ ಅರ್ಜಿಯಲ್ಲಿ ತಿಳಿಸಲಾಗಿದೆ.


ಇದನ್ನೂ ಓದಿ: ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...