Homeಕರ್ನಾಟಕಹಿಜಾಬ್‌‌‌‌‌‌ ವಿರೋಧಿ ಹಿಂಸಾಚಾರವು ರಾಜ್ಯದ ಸಮ್ಮಿಶ್ರ ವೈವಿಧ್ಯ ಸಂಸ್ಕೃತಿಯನ್ನು ನಾಶ ಮಾಡುತ್ತಿದೆ: ‘ಬಹುತ್ವ ಕರ್ನಾಟಕ’ ಆಕ್ರೋಶ

ಹಿಜಾಬ್‌‌‌‌‌‌ ವಿರೋಧಿ ಹಿಂಸಾಚಾರವು ರಾಜ್ಯದ ಸಮ್ಮಿಶ್ರ ವೈವಿಧ್ಯ ಸಂಸ್ಕೃತಿಯನ್ನು ನಾಶ ಮಾಡುತ್ತಿದೆ: ‘ಬಹುತ್ವ ಕರ್ನಾಟಕ’ ಆಕ್ರೋಶ

- Advertisement -
- Advertisement -

“ಕಳೆದ ಕೆಲವು ತಿಂಗಳಿನಿಂದ ರಾಜ್ಯದಲ್ಲಿ ದ್ವೇಷ ಪ್ರೇರಿತ ಅಪರಾಧಗಳು ಮತ್ತು ದೊಂಬಿ ಅಪರಾಧಗಳು ಭೀಕರ ರೀತಿಯಲ್ಲಿ ಹೆಚ್ಚುತ್ತಿದ್ದು, ಈ ದಾಳಿಗಳು ಹೆಚ್ಚಾಗಿ ಮುಸಲ್ಮಾನ ಮತ್ತು ಕ್ರೈಸ್ತ ಸಮುದಾಯಗಳ ವಿರುದ್ಧ ನಡೆಯುತ್ತಿದೆ. ಇದೀಗ ಶೈಕ್ಷಣಿಕ ಸಂಸ್ಥೆಗಳು ಹೊಸತಾಗಿ ಹಿಂಸೆಯ ಕೇಂದ್ರಗಳಾಗಿ ಮಾರ್ಪಾಡಾಗುತ್ತಿದೆ, ಇದ್ದಕ್ಕಿದಂತೆಯೇ ಮುಸಲ್ಮಾನ ವಿದ್ಯಾರ್ಥಿನಿಯರು ತಮ್ಮ ಧಾರ್ಮಿಕ ಆಚರಣೆಯಾಗಿ ಪಾಲಿಸುತ್ತಿದ್ದ ಹಿಜಾಬ್‌‌ ಅನ್ನು ಹಿಂಸಾತ್ಮಕ ರೀತಿಯಲ್ಲಿ ವಿರೋಧಿಸಲಾಗುತ್ತಿದೆ. ಈ ಘಟನೆಗಳು ಕರ್ನಾಟಕದ ಸಮ್ಮಿಶ್ರ ವೈವಿಧ್ಯ ಸಂಸ್ಕೃತಿಯನ್ನೇ ನಾಶ ಮಾಡುತ್ತಿವೆ” ಎಂದು ‘ಬಹುತ್ವ ಕರ್ನಾಟಕ’ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದೆ.

ಶುಕ್ರವಾರದಂದು ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಪ್ರಸ್ತುತ ಕರ್ನಾಟಕದಲ್ಲಿರುವ ಸಂಧಿಗ್ಧ ಪರಿಸ್ಥಿತಿಯ ಬಗ್ಗೆ ಮಾತನಾಡಿದ ಬಹುತ್ವ ಕರ್ನಾಟಕದ ಮೈತ್ರೇಯಿ ಕೃಷ್ಣನ್‌ ಅವರು, “ಇಲ್ಲಿ ವ್ಯಕ್ತಿಗಳ ಸಮಾನತೆ, ಬಹುತ್ವ, ಭ್ರಾತೃತ್ವ ಮತ್ತು ಘನತೆಯ ಮೇಲೆ ದಾಳಿ ನಡೆಯುತ್ತಿದೆ. ಒಂದು ಕಡೆ ಮುಸ್ಲಿಂ ಮಹಿಳೆಯರ ಮೇಲೆ ಇಸ್ಲಾಮೋಫೋಬಿಕ್‌‌‌ ದಾಳಿ ನಡೆಯುತ್ತಿದ್ದರೆ ಮತ್ತೊಂದೆಡೆ ಗತಕಾಲದಿಂದಲೂ ಶಿಕ್ಷಣದ ನಿರಾಕರಣೆಗೆ ಒಳಪಟ್ಟಿದ್ದ ತಳಮಟ್ಟದಲ್ಲಿರುವ ಬಡ ವಿದ್ಯಾರ್ಥಿಗಳನ್ನು ತೀವ್ರಗಾಮಿಗಳನ್ನಾಗಿ ಮಾಡಲು ಪ್ರಯತ್ನಿಸಲಾಗುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ಪಿಯುಸಿಎಲ್‌‌‌ನ ಅರವಿಂದ್‌ ನಾರಾಯಣ್‌‌ ಮಾತನಾಡಿ, “ಹಿಜಾಬ್‌ ಧರಿಸಿದ ಕಾರಣಕ್ಕಾಗಿ ವಿದ್ಯಾರ್ಥಿನಿಯರಿಗೆ ಕಾಲೇಜ್‌ ಒಳಗಡೆ ಪ್ರವೇಶ ನಿರಾಕರಿಸಿದ ಕ್ರಮವು ಕಾನೂನು ಬಾಹಿರ. ಸರ್ಕಾರವು ಅಸಂವಿಧಾನಿಕವಾದ ಆದೇಶವನ್ನು ಹೊರಡಿಸುವುದರ ಮೂಲಕ ಇತರೆ ಕಾಲೇಜುಗಳಲ್ಲೂ ಸಹ ಇಂತಹ ಕಾನೂನು ಬಾಹಿರ ಕ್ರಮ ಹೆಚ್ಚಾಗುವಂತೆ ಮಾಡಿದೆ. ಸರಕಾರ ತನ್ನ ಕರ್ತವ್ಯ ನಿರ್ವಹಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ವಿದ್ಯಾರ್ಥಿಗಳ ಮೂಲಭೂತ ಹಕ್ಕುಗಳ ರಕ್ಷಣೆಗೆ ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್‌ ವಾದ)ಯ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್‌ ಮಾತನಾಡಿ, “ಕೋವಿಡ್‌ ನಂತರದ ರಾಜ್ಯದಲ್ಲಿ ಆರ್ಥಿಕ ಸ್ಥಿತಿಯು ಹದಗೆಟ್ಟಿದ್ದು, ಶಿಕ್ಷಣಕ್ಕೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳಿವೆ. ಸರ್ಕಾರವು ಈ ಸಮಸ್ಯೆಗಳನ್ನು ಬಗೆಹರಿಸುವ ಬದಲು ತಮ್ಮ ಕಾನೂನು ಬಾಹಿರ ಕ್ರಮಗಳ ಮೂಲಕ ಈ ಬಿಕ್ಕಟ್ಟಿಗೆ ಮತ್ತಷ್ಟು ಪ್ರಚೋದನೆ ನೀಡಿದೆ. ಬಹಿರಂಗವಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವವರ ವಿರುದ್ಧ ಸರಕಾರ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ?

ನಾರಾಯಣ ಗುರುಗಳಿರುವ ಸ್ತಬ್ಧಚಿತ್ರ ತೆರವು ವಿಚಾರದಲ್ಲಿ ಬಿಲ್ಲವರಲ್ಲಿ ಮೂಡಿರುವ ಅಸಮಾಧಾನದಿಂದ ಮತ್ತು ಗಣರಾಜ್ಯೋತ್ಸವ ಸಮಾರಂಭದಲ್ಲಿ ಡಾ.ಬಿ.ಆರ್‌.ಅ೦ಬೇಡ್ಕರ್‌ ಅವರ ಭಾವಚಿತ್ರ ತೆಗೆದಿರುವ ಬಗ್ಗೆ ರಾಜ್ಯಾದ್ಯಂತ ದಲಿತರು ಅಸಮಾಧಾನ ವ್ಯಕ್ತಪಡಿಸುತ್ತಿರುವುದರಿಂದ ಬಿಜೆಪಿ ಸರ್ಕಾರ ವಿಚಲಿತವಾಗಿದೆ. ತಳಮಟ್ಟದಲ್ಲಿರುವ ಸಮುದಾಯಗಳು ಇನ್ನೂ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿವೆ. ಇವೆಲ್ಲಾ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಈ ವಿವಾದವನ್ನು ಸರ್ಕಾರ ಸೃಷ್ಟಿ ಮಾಡಿದೆ ಎಂಬ ಆತಂಕ ರಾಜ್ಯದಾದ್ಯಂತ ಇದೆ” ಎಂದು ಹೇಳಿದರು.

ಇದನ್ನೂ ಓದಿ: ಸಿಂಧೂರ ಧರಿಸುವುದು ನನ್ನ ಆಯ್ಕೆ, ಹಿಜಾಬ್ ಧರಿಸುವುದು ಮುಸ್ಕಾನ್ ಆಯ್ಕೆ: `ಹಮ್ ಸಬ್ ಹಿಂದೂಸ್ತಾನಿ’ ಎಂದ ತೆಲಂಗಾಣ ಸಿಎಂ ಪುತ್ರಿ

ಜಮಾತೆ ಇಸ್ಲಾಮಿ ಹಿಂದ್ ಉಪಾಧ್ಯಕ್ಷ ಮೊಹಮ್ಮದ್‌ ಯೂಸುಫ್‌ ಕಣ್ಣಿ ಮಾತನಾಡಿ, “ಎಲ್ಲಾ ಜನತೆ, ಅದರಲ್ಲೂ ವಿಶೇಷವಾಗಿ ಅಲ್ಪಸಂಖ್ಯಾತರ ಮೂಲಭೂತ ಹಕ್ಕುಗಳನ್ನು ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಮುಸ್ಲಿಮರ ಸಾಮಾಜಿಕ-ಆರ್ಥಿಕ ಪರಿಸ್ಥಿತಿ ಹಿಂದುಳಿದಿದ್ದು, ಅದನ್ನು ಪರಿಹರಿಸಲು ಸರ್ಕಾರ ತೆಗೆದು ಕೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ‘ಸಾಚಾರ್‌ ಸಮಿತಿಯ ವರದಿ’ ವಿವರಿಸಿದೆ. ಇತ್ತೀಚಿಗೆ ನಡೆಯುತ್ತಿರುವ ವಿದ್ಯಾಮಾನಗಳು ಮುಸ್ಲಿಮರನ್ನು, ಅದರಲ್ಲೂ ವಿಶೇಷವಾಗಿ ಮಹಿಳೆಯರನ್ನು ಇನ್ನಷ್ಟು ದುರ್ಬಲ ಸ್ಥಾನಕ್ಕೆ ತಳ್ಳುತ್ತಿವೆ” ಎಂದು ಆತಂಕ ವ್ಯಕ್ತಪಡಿಸಿದರು.

ರೈತ ಮುಖಂಡ ವೀರಸಂಗಯ್ಯ ಜಿ ಎಂ ಮಾತನಾಡಿ, “ತಮ್ಮ ಮಕ್ಕಳಿಗೆ ಬೇಡದಿದ್ದರೂ ಬಲವಂತವಾಗಿ ಕೇಸರಿ ಶಾಲು ತೊಡಿಸುತ್ತಿದ್ದಾರೆ. ಮಕ್ಕಳ ಮನಸ್ಸಿನಲ್ಲಿ ದ್ವೇಷವನ್ನು ತುಂಬಿಸಲಾಗಿದ್ದು ಮತ್ತು ಇದರಿಂದಾಗಿ ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯುಂಟಾಗಿದೆ ಎಂದು ಎಷ್ಟೋ ಜನ ಪೋಷಕರು ನಮ್ಮ ಬಳಿ ಬಂದು ನೋವನ್ನು ಹಂಚಿಕೊಂಡಿದ್ದಾರೆ. ಈ ಕೋಮುವಾದಿ ಅಜೆಂಡಾ ಕೂಡಲೇ ನಿಲ್ಲಬೇಕು” ಎಂದು ಒತ್ತಾಯಿಸಿದರು.

ಅಕ್ಕೈ ಪದ್ಮಶಾಲಿಯವರು ಮಾತನಾಡಿ, “ಮಹಿಳೆಯರು ತಮಗೆ ಬೇಕಾದುದನ್ನು ಧರಿಸುವ ಹಕ್ಕನ್ನು ಹೊಂದಿದ್ದಾರೆ. ಸರ್ಕಾರ ಅಥವಾ ಯಾವುದೇ ವ್ಯಕ್ತಿ ಅದನ್ನು ಪ್ರಶ್ನಿಸಲು ಸಾಧ್ಯವಿಲ್ಲ. ಮಹಿಳೆಯರು ಯಾವ ರೀತಿಯ ಬಟ್ಟೆಯನ್ನು ಧರಿಸಬೇಕೆಂದು ನಿರ್ಧರಿಸಲು ನಿರಂತರವಾಗಿ ಪ್ರಯತ್ನ ಮಾಡಲಾಗುತ್ತಿದೆ. ಈಗ ಶಿಕ್ಷಣವನ್ನು ನಿರಾಕರಿಸಲು ಇದನ್ನು ಬಳಸಲಾಗುತ್ತಿದೆ. ಇದು ಸಂಪೂರ್ಣವಾಗಿ ಅಸಾಂವಿಧಾನಿಕ ಮತ್ತು ಮಹಿಳೆಯರ ಘನತೆ ಮತ್ತು ಸ್ವಾಯತ್ತತೆಯನ್ನು ಉಲ್ಲಂಘಿಸುತ್ತದೆ” ಎಂದು ಹೇಳಿದರು.

ಇದನ್ನೂ ಓದಿ: ಹಿಜಾಬ್ ವಿವಾದ ವಿಶೇಷ ವರದಿ: ಬಹುತ್ವ ಸಂಸ್ಕೃತಿಯ ಭಾರತದಲ್ಲಿ ಮತೀಯ ರಾಜಕಾರಣ

ಬಹುತ್ವ ಕರ್ನಾಟಕದ ಹಕ್ಕೊತ್ತಾಯಗಳು

  1. ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿಯೊಳಗಿನ ಶಾಸನಬದ್ಧ ಹಕ್ಕುಗಳನ್ನು ತಾರತಮ್ಯವಿಲ್ಲದೆ ಸಾಂವಿಧಾನಿಕವಾಗಿ ಪುನಃಸ್ಥಾಪಿಸಿ, ಇತ್ತೀಚಿನ ದ್ವೇಷಾತ್ಮಕ ಕೃತ್ಯಗಳಿಗೆ ಒಳಗಾಗಿರುವ ಮುಸಲ್ಮಾನ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆಯನ್ನು ನೀಡಿ ಅವರ ಶೈಕ್ಷಣಿಕ ಹಕ್ಕನ್ನು ಭದ್ರಪಡಿಸಬೇಕು.
  2. ಸರಕಾರದ ತಾರೀಕು 5 ಫಬ್ರವರಿ 2022 ರ ಸುತ್ತೋಲೆ ಕ್ರಮಾಂಕ No. 14 SHH 2022 Bengaluru ಅನ್ನು ಹಿಂಪಡೆಯಬೇಕು ಹಾಗೂ ಮುಸಲ್ಮಾನ ವಿದ್ಯಾರ್ಥಿನಿಯರ ಶೈಕ್ಷಣಿಕ ಹಕ್ಕನ್ನು ಕಾಪಾಡಬೇಕು.
  3. ದಲಿತ, ಬಹುಜನ, ಆದಿವಾಸಿ ಯುವಕರ ಮನಸ್ಸಿನಲ್ಲಿ ದ್ವೇಷ ತುಂಬಿ ಅವರ ಭವಿಷ್ಯ ಹಾಳು ಮಾಡುತ್ತಿರುವವರ ವಿರು‌ದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆಯಿಂದ ತನಿಖೆ ನಡಸಬೇಕು.
  4. ತಕ್ಷಣ ಶಾಲಾ ಕಾಲೇಜುಗಳಲ್ಲಿ, ಶೈಕ್ಷಣಿಕ ಸಂಸ್ಥೆಗಳಲ್ಲಿ ಕೋಮುವಾದಿ ದ್ವೇಷ ಹರಡುವುದನ್ನು ನಿಲ್ಲಿಸಿ, ಭಾರತ ಸರಕಾರದ 2008ರ ಕೋಮು ಸೌಹಾರ್ದತೆಗೆ ಮಾರ್ಗಸೂಚಿಗಳನ್ನು ಕ್ರಿಯಾಶೀಲವಾಗಿ ಅನುಸರಿಸಬೇಕು.
  5. ಕಾನೂನನ್ನು ಉಲ್ಲಂಘಿಸಿ ದ್ವೇಷ ಹರಡಿದ ಎಲ್ಲಾ ಚುನಾಯಿತ ಜನ ಪ್ರತಿನಿಧಿಗಳ ವಿರುದ್ಧ ತಕ್ಷಣ IPC 1980ರ ಕಲಂ 153A, 153B, 295A, 298 ಮತ್ತು 505(2)ಗಳ ಅಡಿಯಲ್ಲಿ FIRಗಳನ್ನು ದಾಖಲಿಸಿ, ಪೋಲಿಸ್‌ ಆಧಿಕಾರಿಗಳಿಗೆ ಕಾನೂನು ಪ್ರಕಾರ ಬಂಧಿಸಬೇಕೆಂಬ ಆದೇಶಗಳನ್ನು ಹೊರಡಿಸಬೇಕು.
  6. ರಾಜ್ಯದಲ್ಲಿ ಕೋಮುವಾದಿ ಕಲಹಗಳನ್ನು ಸೃಷ್ಟಿಸಿ ಪೋಷಿಸುತ್ತಿರುವ ಕೋಮುವಾದಿ ವ್ಯಕ್ತಿಗಳನ್ನು ಗುರುತಿಸಿ ತಕ್ಷಣ IPC 1980ರ ಕಲಂ 153A, 153B, 295A, 298 ಮತ್ತು 505(2)ಗಳ ಅಡಿಯಲ್ಲಿ FIRಗಳನ್ನು ದಾಖಲಿಸಿ, ಕಾನೂನು ಪ್ರಕಾರ ಬಂಧಿಸಬೇಕು.
  7. ರಾಜ್ಯದಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ಇತರ ಎಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು.

ಇದನ್ನೂ ಓದಿ: ಹಿಜಾಬ್‌‌ಗಾಗಿ ದನಿಯೆತ್ತಿದ ವಿದ್ಯಾರ್ಥಿನಿಯರ ಫೋನ್‌‌ ನಂಬರ್‌, ವಿಳಾಸ ಲೀಕ್‌ ಮಾಡಿದ ಉಡುಪಿ ಕಾಲೇಜು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...