Homeಮುಖಪುಟಮಾಜಿ ಸಿಎಂ ಹರೀಶ್ ರಾವತ್ ತಿರುಚಿದ ಚಿತ್ರ ಬಳಕೆ: ಬಿಜೆಪಿಗೆ ಚುನಾವಣಾ ಆಯೋಗದ ಎಚ್ಚರಿಕೆ

ಮಾಜಿ ಸಿಎಂ ಹರೀಶ್ ರಾವತ್ ತಿರುಚಿದ ಚಿತ್ರ ಬಳಕೆ: ಬಿಜೆಪಿಗೆ ಚುನಾವಣಾ ಆಯೋಗದ ಎಚ್ಚರಿಕೆ

- Advertisement -
- Advertisement -

ಕಾಂಗ್ರೆಸ್ ನಾಯಕ, ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ತಿರುಚಿದ ಚಿತ್ರವನ್ನು ಟ್ವೀಟ್ ಮಾಡಿರುವ ಆರೋಪದ ಮೇಲೆ ಉತ್ತರಾಖಂಡ ಬಿಜೆಪಿಗೆ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ.

ಕಳೆದ ವಾರ, ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ತಿರುಚಿದ ಚಿತ್ರವನ್ನು ಟ್ವೀಟ್ ಮಾಡಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಉತ್ತರಾಖಂಡ ಘಟಕಕ್ಕೆ ಚುನಾವಣಾ ಸಮಿತಿಯು ನೋಟಿಸ್ ನೀಡಿತ್ತು. ಈ ಚಿತ್ರದಲ್ಲಿ ಹರೀಶ್ ರಾವತ್‌ ಅವರನ್ನು ಮುಸ್ಲಿಂ ಧರ್ಮಗುರು ಎಂದು ತೋರಿಸಲಾಗಿತ್ತು.

’ಚುನಾವಣಾ ಮಾದರಿ ನೀತಿ ಸಂಹಿತೆಯ ಯಾವುದೇ ನಿಬಂಧನೆಗಳನ್ನು ಉಲ್ಲಂಘಿಸುವುದು ಅಥವಾ ಧರ್ಮ, ಜನಾಂಗ, ಜಾತಿ, ಭಾಷೆಯ ಆಧಾರದ ಮೇಲೆ ಗುಂಪುಗಳ ನಡುವೆ ಯಾವುದೇ ವ್ಯತ್ಯಾಸವನ್ನು ಸೃಷ್ಟಿಸುವುದು ಟ್ವೀಟ್‌ನ ಉದ್ದೇಶವಲ್ಲ. ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಟ್ವೀಟ್ ಅನ್ನು ಅಳಿಸಲಾಗಿದೆ ಎಂದು ಉತ್ತರಾಖಂಡ ಬಿಜೆಪಿ ಉತ್ತರ ಸಲ್ಲಿಸಿದೆ ಎಂದು ಆಯೋಗ ತಿಳಿಸಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ನೋಟಿಸ್‌ಗೆ ಬಿಜೆಪಿ ಪಕ್ಷ ಸಲ್ಲಿಸಿರುವ ಉತ್ತರವು ಸಮಾಧಾನಕರವಾಗಿಲ್ಲ ಎಂದಿರುವ ಚುನಾವಣಾ ಆಯೋಗ, ಮುಂದೆ ಹೆಚ್ಚು ಜಾಗರೂಕರಾಗಿರಲು ಎಚ್ಚರಿಕೆ ನೀಡಿದ್ದು, ಚುನಾವಣಾ ನೀತಿ ಸಂಹಿತೆಯ ಎಲ್ಲಾ ನಿಬಂಧನೆಗಳನ್ನು ಅನುಸರಿಸಲು ಸಲಹೆ ನೀಡಿದೆ.

ಫೆಬ್ರವರಿ 3 ರಂದು ರಾತ್ರಿ 9.34 ಕ್ಕೆ ಬಿಜೆಪಿ ಉತ್ತರಾಖಂಡ್ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ರಾವತ್ ಅವರ ತಿರುಚಿದ ಚಿತ್ರವನ್ನು ಟ್ವೀಟ್ ಮಾಡಿದ್ದು, ಅದರಲ್ಲಿ ಅವರನ್ನು ನಿರ್ದಿಷ್ಟ ಸಮುದಾಯಕ್ಕೆ ಸೇರಿದವರು ಎಂದು ತಪ್ಪಾಗಿ ಚಿತ್ರಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದ ಬಳಿಕ ಚುನಾವಣಾ ಸಂಸ್ಥೆ ಕ್ರಮ ಕೈಗೊಂಡಿದೆ.

ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಅವರು ಶನಿವಾರ ಮುಖ್ಯ ಚುನಾವಣಾ ಆಯುಕ್ತರೊಂದಿಗೆ (ಸಿಇಸಿ) ಮಾತನಾಡಿ ಬಿಜೆಪಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದರು.

70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಗೆ ಫೆಬ್ರವರಿ 14 ರಂದು ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿ: ‘ಉತ್ತರಾಖಂಡದಲ್ಲಿ ಬಿಜೆಪಿ ಸೋಲಲಿದೆ’: ಬಿಜೆಪಿ ಸ್ಟಾರ್‌ ಪ್ರಚಾರಕ, ಮಧ್ಯಪ್ರದೇಶ ಸಿಎಂ ಚೌಹಾಣ್ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...