Homeಮುಖಪುಟಹಕ್ಕು- ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಧಿಗಳ ಬಗ್ಗೆ ಸಂಕ್ಷಿಪ್ತ ವಿವರ

ಹಕ್ಕು- ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಧಿಗಳ ಬಗ್ಗೆ ಸಂಕ್ಷಿಪ್ತ ವಿವರ

- Advertisement -
- Advertisement -

ಹಿಜಾಬ್ ವಿವಾದ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿರುವಾಗ ಕರ್ನಾಟಕ ಹೈಕೋರ್ಟ್‍ನಲ್ಲಿ ನಡೆಯುತ್ತಿರುವ ಸಂಬಂಧಿತ ವಿಚಾರಣೆಯ ಪ್ರತೀ ಪ್ರಕ್ರಿಯೆಯೂ ಸುದ್ದಿಯಾಗುತ್ತಿವೆ. ಈ ಸಂದರ್ಭದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಂವಿಧಾನದಲ್ಲಿ ನೀಡಲಾದ ಹಕ್ಕುಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಆ ಕುರಿತ ಸಂಕ್ಷಿಪ್ತ ವಿವರ ಇಲ್ಲಿದೆ:

ನಮ್ಮ ಮೂಲಭೂತ ಹಕ್ಕುಗಳೇನು?

ಭಾರತೀಯರು ಘನತೆಯಿಂದ ಜೀವನ ನಡೆಸುವ ಸಲುವಾಗಿ ಸಂವಿಧಾನದ 3ನೇ ಭಾಗದಲ್ಲಿ 12 ರಿಂದ 35ನೇ ವಿಧಿಗಳಲ್ಲಿ 6 ಮೂಲಭೂತ ಹಕ್ಕುಗಳನ್ನು (Fundamental Rights) ನೀಡಲಾಗಿದೆ.

ಅವುಗಳೆಂದರೆ:-

1. ಸಮಾನತೆಯ ಹಕ್ಕು

2. ಸ್ವಾತಂತ್ರ್ಯದ ಹಕ್ಕು

3. ಶೋಷಣೆಯ ವಿರುದ್ಧದ ಹಕ್ಕು

4. ಧಾರ್ಮಿಕ ಸ್ವಾತಂತ್ರ್ಯದ ಹಕ್ಕು

5. ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಕ್ಕು

6. ಸಂವಿಧಾನಬದ್ಧ ಪರಿಹಾರದ ಹಕ್ಕು

ನಮ್ಮ ಹಕ್ಕುಗಳ ರಕ್ಷಕ ಯಾರು?

ಹಕ್ಕುಗಳು ವ್ಯಕ್ತಿಯ ವ್ಯಕ್ತಿತ್ವ ವಿಕಾಸಕ್ಕೆ, ವ್ಯಕ್ತಿಯ ಅಭಿವೃದ್ದಿಗೆ ಅಗತ್ಯ ಎಂಬುದು ಸಂವಿಧಾನದ ನಿಲುವು. ಇದೇ ಕಾರಣಕ್ಕೆ ಮೂಲಭೂತ ಹಕ್ಕುಗಳ ರಕ್ಷಣೆಯನ್ನು ಸವೋಚ್ಛ ಹಾಗೂ ಉಚ್ಚನ್ಯಾಯಾಲಯಗಳಿಗೆ ನೀಡಲಾಗಿದೆ. ಆದರೆ, ಭಾರತದಲ್ಲಿ ಈ ಹಕ್ಕುಗಳು ಪೈಕಿ ಆಗಿಂದಾಗ್ಗೆ ಚರ್ಚೆಗೆ ಒಳಪಡುವ ಮತ್ತು ವಿವಾದದ ಕೇಂದ್ರ ಬಿಂದುವಾಗಿರುವುದು ಧಾರ್ಮಿಕ ಹಕ್ಕು. ಹೀಗಾಗಿ ಧಾರ್ಮಿಕ ಹಕ್ಕಿನ ಬಗ್ಗೆ ಸಂವಿಧಾನ ಏನು ಹೇಳುತ್ತದೆ ಎನ್ನುವುದು ಇಂದಿನ ದಿನಗಳಲ್ಲಿ ಪ್ರಸ್ತುತವೆನಿಸುತ್ತಿದೆ.

ಧಾರ್ಮಿಕ ಸ್ವಾತಂತ್ರ್ಯದ ಹಕ್ಕು (ವಿಧಿ 25-28) ಏನು ಹೇಳುತ್ತದೆ?

  • 25ನೇ ವಿಧಿ ಅನ್ವಯ – ಪ್ರತಿಯೊಬ್ಬ ವ್ಯಕ್ತಿಯು ತನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಯಾವುದೇ ಧರ್ಮವನ್ನು ಸ್ವೀಕರಿಸುವ, ಆಚರಿಸುವ, ಆರಾಧಿಸುವ ಮತ್ತು ಪ್ರಚಾರ ಮಾಡುವ ಸ್ವಾತಂತ್ರ್ಯವನ್ನು ಹೊಂದಿರುತ್ತಾನೆ.
  • 26ನೇ ವಿಧಿ ಅನ್ವಯ – ಪ್ರತಿಯೊಂದು ಧರ್ಮವು ಧಾರ್ಮಿಕ ದಾನದತ್ತಿ ಉದ್ದೇಶಗಳಿಗಾಗಿ ತಮ್ಮದೇ ಆದ ಧಾರ್ಮಿಕ ಸಂಸ್ಥೆಗಳನ್ನು ಸ್ಥಾಪಿಸಿಕೊಳ್ಳುವ, ಚರ ಮತ್ತು ಸ್ಥಿರಾಸ್ತಿ ಹೊಂದುವ ಸ್ವಾತಂತ್ರ್ಯವನ್ನು ಹೊಂದಿರುತ್ತದೆ.

a) ಧಾರ್ಮಿಕ ಮತ್ತು ಧರ್ಮಾರ್ಥ ಉದ್ದೇಶಗಳಿಗಾಗಿ ಧಾರ್ಮಿಕ ಸಂಸ್ಥೆಯೊಂದನ್ನು ಸ್ಥಾಪಿಸುವ ಮತ್ತು ಅದನ್ನು ಮುಂದುವರಿಸಿಕೊಂಡು ಹೋಗುವ,

b) ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿದಂತೆ ತನ್ನ ವ್ಯವಹಾರವನ್ನು ತಾನೇ ನಿರ್ವಹಿಸುವ,

c) ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದುವ,

d) ಕಾನೂನಿನನ್ವಯ ಅಂತಹ ಆಸ್ತಿಯ ವಹಿವಾಟು ನಡೆಸುವ; ಹಕ್ಕನ್ನು ಹೊಂದಿರತಕ್ಕದ್ದು.

27ನೇ ವಿಧಿ ಅನ್ವಯ – ಯಾವುದೇ ಧರ್ಮದ ರಕ್ಷಣೆಗೆ ಪೋಷಣೆಗೆ ಅಥವಾ ಪ್ರಚಾರದ ಸಲುವಾಗಿ ತೆರಿಗೆ ಅಥವಾ ವಂತಿಗೆ ನೀಡುವಂತೆ ಒಬ್ಬ ವ್ಯಕ್ತಿಯನ್ನು ಬಲವಂತಪಡಿಸುವಂತಿಲ್ಲ.

28ನೇ ವಿಧಿ ಅನ್ವಯ – ಕೇಂದ್ರ ಅಥವಾ ರಾಜ್ಯ ಸರ್ಕಾರದ ಅನುದಾನಕ್ಕೊಳಪಟ್ಟ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ಬೋಧನೆ ಮಾಡುವಂತಿಲ್ಲ. ಆದರೆ, ಧಾರ್ಮಿಕ ದತ್ತಿ ವಿದ್ಯಾಸಂಸ್ಥೆಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ. ಇದಲ್ಲದೆ, ಧಾರ್ಮಿಕ ಶಿಕ್ಷಣ ಅಥವಾ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳದಿರುವ ಹಕ್ಕು.

ಸಂಪೂರ್ಣವಾಗಿ ಸರ್ಕಾರದ ನಿಧಿಯಿಂದ ನಿರ್ವಹಿಸಲ್ಪಡುವ ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಯಾವುದೇ ಧಾರ್ಮಿಕ ಶಿಕ್ಷಣವನ್ನು ನೀಡ ತಕ್ಕದ್ದಲ್ಲ. ಅಲ್ಲದೆ ಇಂಥ ಶೈಕ್ಷಣಿಕ ಸಂಸ್ಥೆಯಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮದಲ್ಲಿ ಅಥವಾ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವಂತೆ ಯಾವುದೇ ವ್ಯಕ್ತಿಯನ್ನು ಒತ್ತಾಯಿಸತಕ್ಕದ್ದಲ್ಲ.

29ನೇ ವಿಧಿಯಲ್ಲಿ ನೀಡಲಾದ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಕ್ಕು ಏನು ಹೇಳುತ್ತದೆ?

a) ಅಲ್ಪಸಂಖ್ಯಾತರ ಹಿತಾಸಕ್ತಿಗಳ ರಕ್ಷಣೆ – ಭಾರತ ರಾಷ್ಟ್ರಕ್ಷೇತ್ರದ ಯಾವುದೇ ಭಾಗದಲ್ಲಿ ವಾಸಿಸುವ ನಾಗರಿಕರ ಯಾವುದೇ ಪಂಗಡ ತನ್ನದೇ ಆದ ಭಾಷೆ, ಲಿಪಿ ಅಥವಾ ಸಂಸ್ಕೃತಿ ಹೊಂದಿದ್ದಲ್ಲಿ ಅದು ಅವುಗಳನ್ನು ಸಂರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿರತಕ್ಕದ್ದು.

b) ಶೈಕ್ಷಣಿಕ ಸಂಸ್ಥೆಗಳಿಗೆ ಪ್ರವೇಶ ನಿರಾಕರಣೆ ವಿರುದ್ಧ ಹಕ್ಕು ಮತ್ತು ರಾಜ್ಯದಿಂದ ನಿರ್ವಹಿಸಲ್ಪಟ್ಟ ಅಥವಾ ರಾಜ್ಯ ನಿಧಿಯಿಂದ ನೆರವು ಪಡೆಯುವ ಯಾವುದೇ ಶೈಕ್ಷಣಿಕ ಸಂಸ್ಥೆಯು ಯಾವುದೇ ನಾಗರಿಕನಿಗೆ ಆತನ ಧರ್ಮ, ಮೂಲ ವಂಶ, ಜಾತಿ, ಭಾಷೆ ಇವುಗಳಲ್ಲಿ ಯಾವುದೊಂದರ ಆಧಾರದ ಮೇಲಿಂದ ಪ್ರವೇಶವನ್ನು ನಿರಾಕರಿಸಿದ್ದಲ್ಲ.

30ನೇ ವಿಧಿ – ಶೈಕ್ಷಣಿಕ ಸಂಸ್ಥೆಗಳ ಸ್ಥಾಪನೆ ಹಾಗೂ ಅವುಗಳ ಆಡಳಿತ ನಿರ್ವಹಣೆಯ ಸಂಬಂಧ ಅಲ್ಪಸಂಖ್ಯಾತರ ಹಕ್ಕು

a) ಧಾರ್ಮಿಕ ಅಥವಾ ಭಾಷಾ ಅಲ್ಪಸಂಖ್ಯಾತರು ತಮ್ಮ ಆಯ್ಕೆಯ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ಅವುಗಳ ಆಡಳಿತವನ್ನು ನಿರ್ವಹಿಸುವ ಹಕ್ಕನ್ನು ಹೊಂದಿರತಕ್ಕದ್ದು.

b) ರಾಜ್ಯವು ಶೈಕ್ಷಣಿಕ ಸಂಸ್ಥೆಗಳಿಗೆ ನೆರವು ಅನುದಾನ ಮಂಜೂರು ಮಾಡುವಾಗ ಯಾವುದೇ ಶಿಕ್ಷಣ ಸಂಸ್ಥೆಯ ವಿರುದ್ಧ ಅದು ಧಾರ್ಮಿಕ ಅಥವಾ ಭಾಷಾ ಅಲ್ಪಸಂಖ್ಯಾತರ ಆಡಳಿತ ಕ್ಕೊಳಪಟ್ಟಿದೆ ಎನ್ನುವ ಕಾರಣದಿಂದ ತಾರತಮ್ಯ ಎಸಗತಕ್ಕದ್ದಲ್ಲ.

ಹಕ್ಕು ಚ್ಯುತಿಯಾದಾಗ ಏನು ಮಾಡಬೇಕು?

ಪ್ರತಿಯೊಬ್ಬನ ಮೂಲಭೂತ ಹಕ್ಕಿಗೆ ಚ್ಯುತಿ ಉಂಟಾದಲ್ಲಿ ತನಗೆ ಸಂವಿಧಾನ ಕೊಡ ಮಾಡಿದ ಹಕ್ಕಿನ ಜಾರಿಗಾಗಿ ನೇರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಸಾಂವಿಧಾನಿಕ ಪರಿಹಾರ ಪಡೆಯುವ ಹಕ್ಕನ್ನೂ ಸಹ ಸಂವಿಧಾನ ತನ್ನ ಪ್ರಜೆಗಳಿಗೆ ನೀಡಿದೆ. ಸಂವಿಧಾನದ ಪರಿಹಾರೋಪಯವೂ ಸಹ ಮೂಲಭೂತ ಹಕ್ಕೇ ಆಗಿದ್ದು ಇದನ್ನು ಸರ್ಕಾರವು ಯಾರಿಗೂ ನಿರಾಕರಿಸುವಂತಿಲ್ಲ ಎಂದೂ ಸಹ ಉಲ್ಲೇಖಿಸಲಾಗಿದೆ.

ಯಾವಾಗ ಈ ಹಕ್ಕು ಅನ್ವಯಿಸುವುದಿಲ್ಲ?

ಆದರೆ, ಈ ಯಾವುದೇ ಮೂಲಭೂತ ಹಕ್ಕು ಸ್ವಯಂ ಪರಿಪೂರ್ಣವಲ್ಲ. ದೇಶದ ಸಾರ್ವಭೌಮತ್ವಕ್ಕೆ ಭಂಗ ತರುವ ಸಾಧ್ಯತೆ ಇದ್ದಲ್ಲಿ ಈ ಹಕ್ಕುಗಳನ್ನು 1983 ಸೆಕ್ಷನ್ 7 (2A) ಅಡಿಯಲ್ಲಿ ಹಿಂಪಡೆಯುವ ಅಧಿಕಾರವನ್ನು ಸರ್ಕಾರ ಹೊಂದಿರುತ್ತದೆ. ಆದರೆ, ಹಕ್ಕುಗಳನ್ನು ಹೀಗೆ ಹಿಂಪಡೆಯುವ ಸರ್ಕಾರದ ಪ್ರಕ್ರಿಯೆ ತಾತ್ಕಾಲಿಕವೇ ಹೊರತು ಶಾಶ್ವತವಲ್ಲ ಮತ್ತು ಯಾವುದೇ ಸರ್ಕಾರ ಸಂವಿಧಾನದ ವಿರುದ್ಧ ಹೆಜ್ಜೆ ಇಡುವುದು ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಷ್ಟು ಸುಲಭದ ಮಾತೂ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...