Homeಮುಖಪುಟಹಕ್ಕು- ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಧಿಗಳ ಬಗ್ಗೆ ಸಂಕ್ಷಿಪ್ತ ವಿವರ

ಹಕ್ಕು- ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ವಿಧಿಗಳ ಬಗ್ಗೆ ಸಂಕ್ಷಿಪ್ತ ವಿವರ

- Advertisement -
- Advertisement -

ಹಿಜಾಬ್ ವಿವಾದ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗುತ್ತಿರುವಾಗ ಕರ್ನಾಟಕ ಹೈಕೋರ್ಟ್‍ನಲ್ಲಿ ನಡೆಯುತ್ತಿರುವ ಸಂಬಂಧಿತ ವಿಚಾರಣೆಯ ಪ್ರತೀ ಪ್ರಕ್ರಿಯೆಯೂ ಸುದ್ದಿಯಾಗುತ್ತಿವೆ. ಈ ಸಂದರ್ಭದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಮತ್ತು ಸಂವಿಧಾನದಲ್ಲಿ ನೀಡಲಾದ ಹಕ್ಕುಗಳ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಆ ಕುರಿತ ಸಂಕ್ಷಿಪ್ತ ವಿವರ ಇಲ್ಲಿದೆ:

ನಮ್ಮ ಮೂಲಭೂತ ಹಕ್ಕುಗಳೇನು?

ಭಾರತೀಯರು ಘನತೆಯಿಂದ ಜೀವನ ನಡೆಸುವ ಸಲುವಾಗಿ ಸಂವಿಧಾನದ 3ನೇ ಭಾಗದಲ್ಲಿ 12 ರಿಂದ 35ನೇ ವಿಧಿಗಳಲ್ಲಿ 6 ಮೂಲಭೂತ ಹಕ್ಕುಗಳನ್ನು (Fundamental Rights) ನೀಡಲಾಗಿದೆ.

ಅವುಗಳೆಂದರೆ:-

1. ಸಮಾನತೆಯ ಹಕ್ಕು

2. ಸ್ವಾತಂತ್ರ್ಯದ ಹಕ್ಕು

3. ಶೋಷಣೆಯ ವಿರುದ್ಧದ ಹಕ್ಕು

4. ಧಾರ್ಮಿಕ ಸ್ವಾತಂತ್ರ್ಯದ ಹಕ್ಕು

5. ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಕ್ಕು

6. ಸಂವಿಧಾನಬದ್ಧ ಪರಿಹಾರದ ಹಕ್ಕು

ನಮ್ಮ ಹಕ್ಕುಗಳ ರಕ್ಷಕ ಯಾರು?

ಹಕ್ಕುಗಳು ವ್ಯಕ್ತಿಯ ವ್ಯಕ್ತಿತ್ವ ವಿಕಾಸಕ್ಕೆ, ವ್ಯಕ್ತಿಯ ಅಭಿವೃದ್ದಿಗೆ ಅಗತ್ಯ ಎಂಬುದು ಸಂವಿಧಾನದ ನಿಲುವು. ಇದೇ ಕಾರಣಕ್ಕೆ ಮೂಲಭೂತ ಹಕ್ಕುಗಳ ರಕ್ಷಣೆಯನ್ನು ಸವೋಚ್ಛ ಹಾಗೂ ಉಚ್ಚನ್ಯಾಯಾಲಯಗಳಿಗೆ ನೀಡಲಾಗಿದೆ. ಆದರೆ, ಭಾರತದಲ್ಲಿ ಈ ಹಕ್ಕುಗಳು ಪೈಕಿ ಆಗಿಂದಾಗ್ಗೆ ಚರ್ಚೆಗೆ ಒಳಪಡುವ ಮತ್ತು ವಿವಾದದ ಕೇಂದ್ರ ಬಿಂದುವಾಗಿರುವುದು ಧಾರ್ಮಿಕ ಹಕ್ಕು. ಹೀಗಾಗಿ ಧಾರ್ಮಿಕ ಹಕ್ಕಿನ ಬಗ್ಗೆ ಸಂವಿಧಾನ ಏನು ಹೇಳುತ್ತದೆ ಎನ್ನುವುದು ಇಂದಿನ ದಿನಗಳಲ್ಲಿ ಪ್ರಸ್ತುತವೆನಿಸುತ್ತಿದೆ.

ಧಾರ್ಮಿಕ ಸ್ವಾತಂತ್ರ್ಯದ ಹಕ್ಕು (ವಿಧಿ 25-28) ಏನು ಹೇಳುತ್ತದೆ?

  • 25ನೇ ವಿಧಿ ಅನ್ವಯ – ಪ್ರತಿಯೊಬ್ಬ ವ್ಯಕ್ತಿಯು ತನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಯಾವುದೇ ಧರ್ಮವನ್ನು ಸ್ವೀಕರಿಸುವ, ಆಚರಿಸುವ, ಆರಾಧಿಸುವ ಮತ್ತು ಪ್ರಚಾರ ಮಾಡುವ ಸ್ವಾತಂತ್ರ್ಯವನ್ನು ಹೊಂದಿರುತ್ತಾನೆ.
  • 26ನೇ ವಿಧಿ ಅನ್ವಯ – ಪ್ರತಿಯೊಂದು ಧರ್ಮವು ಧಾರ್ಮಿಕ ದಾನದತ್ತಿ ಉದ್ದೇಶಗಳಿಗಾಗಿ ತಮ್ಮದೇ ಆದ ಧಾರ್ಮಿಕ ಸಂಸ್ಥೆಗಳನ್ನು ಸ್ಥಾಪಿಸಿಕೊಳ್ಳುವ, ಚರ ಮತ್ತು ಸ್ಥಿರಾಸ್ತಿ ಹೊಂದುವ ಸ್ವಾತಂತ್ರ್ಯವನ್ನು ಹೊಂದಿರುತ್ತದೆ.

a) ಧಾರ್ಮಿಕ ಮತ್ತು ಧರ್ಮಾರ್ಥ ಉದ್ದೇಶಗಳಿಗಾಗಿ ಧಾರ್ಮಿಕ ಸಂಸ್ಥೆಯೊಂದನ್ನು ಸ್ಥಾಪಿಸುವ ಮತ್ತು ಅದನ್ನು ಮುಂದುವರಿಸಿಕೊಂಡು ಹೋಗುವ,

b) ಧಾರ್ಮಿಕ ವಿಷಯಗಳಿಗೆ ಸಂಬಂಧಿಸಿದಂತೆ ತನ್ನ ವ್ಯವಹಾರವನ್ನು ತಾನೇ ನಿರ್ವಹಿಸುವ,

c) ಸ್ಥಿರ ಮತ್ತು ಚರ ಆಸ್ತಿಯನ್ನು ಹೊಂದುವ,

d) ಕಾನೂನಿನನ್ವಯ ಅಂತಹ ಆಸ್ತಿಯ ವಹಿವಾಟು ನಡೆಸುವ; ಹಕ್ಕನ್ನು ಹೊಂದಿರತಕ್ಕದ್ದು.

27ನೇ ವಿಧಿ ಅನ್ವಯ – ಯಾವುದೇ ಧರ್ಮದ ರಕ್ಷಣೆಗೆ ಪೋಷಣೆಗೆ ಅಥವಾ ಪ್ರಚಾರದ ಸಲುವಾಗಿ ತೆರಿಗೆ ಅಥವಾ ವಂತಿಗೆ ನೀಡುವಂತೆ ಒಬ್ಬ ವ್ಯಕ್ತಿಯನ್ನು ಬಲವಂತಪಡಿಸುವಂತಿಲ್ಲ.

28ನೇ ವಿಧಿ ಅನ್ವಯ – ಕೇಂದ್ರ ಅಥವಾ ರಾಜ್ಯ ಸರ್ಕಾರದ ಅನುದಾನಕ್ಕೊಳಪಟ್ಟ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಧಾರ್ಮಿಕ ಬೋಧನೆ ಮಾಡುವಂತಿಲ್ಲ. ಆದರೆ, ಧಾರ್ಮಿಕ ದತ್ತಿ ವಿದ್ಯಾಸಂಸ್ಥೆಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ. ಇದಲ್ಲದೆ, ಧಾರ್ಮಿಕ ಶಿಕ್ಷಣ ಅಥವಾ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳದಿರುವ ಹಕ್ಕು.

ಸಂಪೂರ್ಣವಾಗಿ ಸರ್ಕಾರದ ನಿಧಿಯಿಂದ ನಿರ್ವಹಿಸಲ್ಪಡುವ ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಯಾವುದೇ ಧಾರ್ಮಿಕ ಶಿಕ್ಷಣವನ್ನು ನೀಡ ತಕ್ಕದ್ದಲ್ಲ. ಅಲ್ಲದೆ ಇಂಥ ಶೈಕ್ಷಣಿಕ ಸಂಸ್ಥೆಯಲ್ಲಿ ಯಾವುದೇ ಧಾರ್ಮಿಕ ಕಾರ್ಯಕ್ರಮದಲ್ಲಿ ಅಥವಾ ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವಂತೆ ಯಾವುದೇ ವ್ಯಕ್ತಿಯನ್ನು ಒತ್ತಾಯಿಸತಕ್ಕದ್ದಲ್ಲ.

29ನೇ ವಿಧಿಯಲ್ಲಿ ನೀಡಲಾದ ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಹಕ್ಕು ಏನು ಹೇಳುತ್ತದೆ?

a) ಅಲ್ಪಸಂಖ್ಯಾತರ ಹಿತಾಸಕ್ತಿಗಳ ರಕ್ಷಣೆ – ಭಾರತ ರಾಷ್ಟ್ರಕ್ಷೇತ್ರದ ಯಾವುದೇ ಭಾಗದಲ್ಲಿ ವಾಸಿಸುವ ನಾಗರಿಕರ ಯಾವುದೇ ಪಂಗಡ ತನ್ನದೇ ಆದ ಭಾಷೆ, ಲಿಪಿ ಅಥವಾ ಸಂಸ್ಕೃತಿ ಹೊಂದಿದ್ದಲ್ಲಿ ಅದು ಅವುಗಳನ್ನು ಸಂರಕ್ಷಿಸಿಕೊಳ್ಳುವ ಹಕ್ಕನ್ನು ಹೊಂದಿರತಕ್ಕದ್ದು.

b) ಶೈಕ್ಷಣಿಕ ಸಂಸ್ಥೆಗಳಿಗೆ ಪ್ರವೇಶ ನಿರಾಕರಣೆ ವಿರುದ್ಧ ಹಕ್ಕು ಮತ್ತು ರಾಜ್ಯದಿಂದ ನಿರ್ವಹಿಸಲ್ಪಟ್ಟ ಅಥವಾ ರಾಜ್ಯ ನಿಧಿಯಿಂದ ನೆರವು ಪಡೆಯುವ ಯಾವುದೇ ಶೈಕ್ಷಣಿಕ ಸಂಸ್ಥೆಯು ಯಾವುದೇ ನಾಗರಿಕನಿಗೆ ಆತನ ಧರ್ಮ, ಮೂಲ ವಂಶ, ಜಾತಿ, ಭಾಷೆ ಇವುಗಳಲ್ಲಿ ಯಾವುದೊಂದರ ಆಧಾರದ ಮೇಲಿಂದ ಪ್ರವೇಶವನ್ನು ನಿರಾಕರಿಸಿದ್ದಲ್ಲ.

30ನೇ ವಿಧಿ – ಶೈಕ್ಷಣಿಕ ಸಂಸ್ಥೆಗಳ ಸ್ಥಾಪನೆ ಹಾಗೂ ಅವುಗಳ ಆಡಳಿತ ನಿರ್ವಹಣೆಯ ಸಂಬಂಧ ಅಲ್ಪಸಂಖ್ಯಾತರ ಹಕ್ಕು

a) ಧಾರ್ಮಿಕ ಅಥವಾ ಭಾಷಾ ಅಲ್ಪಸಂಖ್ಯಾತರು ತಮ್ಮ ಆಯ್ಕೆಯ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸುವ ಮತ್ತು ಅವುಗಳ ಆಡಳಿತವನ್ನು ನಿರ್ವಹಿಸುವ ಹಕ್ಕನ್ನು ಹೊಂದಿರತಕ್ಕದ್ದು.

b) ರಾಜ್ಯವು ಶೈಕ್ಷಣಿಕ ಸಂಸ್ಥೆಗಳಿಗೆ ನೆರವು ಅನುದಾನ ಮಂಜೂರು ಮಾಡುವಾಗ ಯಾವುದೇ ಶಿಕ್ಷಣ ಸಂಸ್ಥೆಯ ವಿರುದ್ಧ ಅದು ಧಾರ್ಮಿಕ ಅಥವಾ ಭಾಷಾ ಅಲ್ಪಸಂಖ್ಯಾತರ ಆಡಳಿತ ಕ್ಕೊಳಪಟ್ಟಿದೆ ಎನ್ನುವ ಕಾರಣದಿಂದ ತಾರತಮ್ಯ ಎಸಗತಕ್ಕದ್ದಲ್ಲ.

ಹಕ್ಕು ಚ್ಯುತಿಯಾದಾಗ ಏನು ಮಾಡಬೇಕು?

ಪ್ರತಿಯೊಬ್ಬನ ಮೂಲಭೂತ ಹಕ್ಕಿಗೆ ಚ್ಯುತಿ ಉಂಟಾದಲ್ಲಿ ತನಗೆ ಸಂವಿಧಾನ ಕೊಡ ಮಾಡಿದ ಹಕ್ಕಿನ ಜಾರಿಗಾಗಿ ನೇರವಾಗಿ ಸರ್ವೋಚ್ಚ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಸಾಂವಿಧಾನಿಕ ಪರಿಹಾರ ಪಡೆಯುವ ಹಕ್ಕನ್ನೂ ಸಹ ಸಂವಿಧಾನ ತನ್ನ ಪ್ರಜೆಗಳಿಗೆ ನೀಡಿದೆ. ಸಂವಿಧಾನದ ಪರಿಹಾರೋಪಯವೂ ಸಹ ಮೂಲಭೂತ ಹಕ್ಕೇ ಆಗಿದ್ದು ಇದನ್ನು ಸರ್ಕಾರವು ಯಾರಿಗೂ ನಿರಾಕರಿಸುವಂತಿಲ್ಲ ಎಂದೂ ಸಹ ಉಲ್ಲೇಖಿಸಲಾಗಿದೆ.

ಯಾವಾಗ ಈ ಹಕ್ಕು ಅನ್ವಯಿಸುವುದಿಲ್ಲ?

ಆದರೆ, ಈ ಯಾವುದೇ ಮೂಲಭೂತ ಹಕ್ಕು ಸ್ವಯಂ ಪರಿಪೂರ್ಣವಲ್ಲ. ದೇಶದ ಸಾರ್ವಭೌಮತ್ವಕ್ಕೆ ಭಂಗ ತರುವ ಸಾಧ್ಯತೆ ಇದ್ದಲ್ಲಿ ಈ ಹಕ್ಕುಗಳನ್ನು 1983 ಸೆಕ್ಷನ್ 7 (2A) ಅಡಿಯಲ್ಲಿ ಹಿಂಪಡೆಯುವ ಅಧಿಕಾರವನ್ನು ಸರ್ಕಾರ ಹೊಂದಿರುತ್ತದೆ. ಆದರೆ, ಹಕ್ಕುಗಳನ್ನು ಹೀಗೆ ಹಿಂಪಡೆಯುವ ಸರ್ಕಾರದ ಪ್ರಕ್ರಿಯೆ ತಾತ್ಕಾಲಿಕವೇ ಹೊರತು ಶಾಶ್ವತವಲ್ಲ ಮತ್ತು ಯಾವುದೇ ಸರ್ಕಾರ ಸಂವಿಧಾನದ ವಿರುದ್ಧ ಹೆಜ್ಜೆ ಇಡುವುದು ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಷ್ಟು ಸುಲಭದ ಮಾತೂ ಅಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...

ತಮಿಳುನಾಡು| ಮರ್ಯಾದೆಗೇಡು ಹತ್ಯೆ ಶಂಕೆ; 25 ವರ್ಷದ ದಲಿತ ಯುವಕನ ಭೀಕರ ಕೊಲೆ

ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನೊಬ್ಬನನ್ನು ಕೊಚ್ಚಿ ಕೊಲೆ ಮಾಡಲಾಗಿದ್ದು, ಮರ್ಯಾದೆಗೇಡು ಕೊಲೆಯ ಶಂಕೆ ವ್ಯಕ್ತವಾಗಿದೆ. ಆಗಸ್ಟ್ 16 ರಂದು ರಾತ್ರಿ ಚೆಂಗಲ್ಪಟ್ಟುವಿನ ಕೇಳಂಬಾಕ್ಕಂ ನಿವಾಸಿ ಪ್ರವೀಣ್ ಅವರ ಮೇಲೆ ದಾಳಿಕೋರರಾದ...