Homeಮುಖಪುಟಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ಸಂಸದ ತೇಜಸ್ವಿ ಸೂರ್ಯನನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರಿಯಾ, ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ಯಾರು ಗೊತ್ತೆ ಎಂದು ಕೇಳಿದ್ದಾರೆ

- Advertisement -
- Advertisement -

ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್‌ಸಿಪಿ)ದ ಸಂಸದೆ ಸುಪ್ರಿಯಾ ಸುಲೆ ಅವರು ಇತ್ತೀಚೆಗೆ ಲೋಕಸಭೆಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ತರಾಟಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮ ಬಳಕೆದಾರರು ಸುಪ್ರಿಯಾ ಸುಳೆ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕಳೆದ ವಾರ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಮಾಡಿದ್ದ ‘ಎರಡು ಭಾರತ’ ಎಂಬ ಭಾಷಣವನ್ನು ಉಲ್ಲೇಖಿಸಿ ಸಂಸದ ತೇಜಸ್ವಿ ಸೂರ್ಯ ಟೀಕಿಸಿದ್ದರು. ಇದರ ನಂತರ ಸುಪ್ರಿಯಾ ಸುಲೆ ಅವರು ಲೋಕಸಭೆಯಲ್ಲಿ ಮಾತನಾಡಿದ್ದು, ತೇಜಸ್ವಿ ಸೂರ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇಷ್ಟೇ ಅಲ್ಲದೆ, ರಾಜ್ಯ ಸರ್ಕಾರ ಹಿಜಾಬ್ ನಿಷೇಧ ಮಾಡಿರುವುದನ್ನು ಸಂಸದೆ ಸುಪ್ರಿಯಾ ಸುಲೆ ಖಂಡಿಸಿದ್ದು, “ವ್ಯಕ್ತಿಯೊಬ್ಬರು ಏನು ಧರಿಸಬೇಕು, ಏನು ತಿನ್ನಬೇಕು, ಏನು ಮಾತನಾಡಬೇಕು ಮತ್ತು ಏನು ಯೋಚಿಸಬೇಕು ಎಂಬುದು ವ್ಯಕ್ತಿಯ ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದೆ. ಅದನ್ನು ಯಾರೂ ತಡೆಯಬಾರದು. ಕರ್ನಾಟಕ ಸರ್ಕಾರ ಹಿಜಾಬ್ ನಿಷೇಧಿಸಿರುವ ಕ್ರಮವು ಸರ್ವಾಧಿಕಾರಿ ಸ್ವಭಾವದ್ದಾಗಿದೆ” ಎಂದು ಅವರು ಕರೆದಿದ್ದಾರೆ.

“ಕಾಂಗ್ರೆಸ್ ಮತ್ತು ಅದರ ಕುಟುಂಬ ರಾಜಕಾರಣದ ನಾಯಕರು ತಮ್ಮ ರಾಜಕೀಯ ನಿರುದ್ಯೋಗವನ್ನು ದೇಶದ ನಿರುದ್ಯೋಗ ಎಂದು ಗೊಂದಲಗೊಳಿಸುತ್ತಿದ್ದಾರೆ. ಈ ದೇಶದಲ್ಲಿ ನಿರುದ್ಯೋಗಿಯೊಬ್ಬರು ಇದ್ದರೆ ಅದು ಕಾಂಗ್ರೆಸ್ ಪಕ್ಷದ ಯುವರಾಜ ಮತ್ತು ಕಾಂಗ್ರೆಸ್ ಪಕ್ಷದ ವಂಶಸ್ಥರು” ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದರು.

ಇದನ್ನು ಉಲ್ಲೇಖಿಸಿದ ಸುಪ್ರಿಯಾ ಸುಲೆ, ಬಿಜೆಪಿ ಶಾಸಕ ರವಿ ಸುಬ್ರಹ್ಮಣ್ಯ ಅವರೊಂದಿಗೆ ತೇಜಸ್ವಿ ಸೂರ್ಯ ಅವರ ಸಂಬಂಧದ ಬಗ್ಗೆ ಕೇಳಿದ್ದಾರೆ. ಶಾಸಕ ರವಿ ಸುಬ್ರಹ್ಮಣ್ಯ ತೇಜಸ್ವಿ ಸೂರ್ಯ ಅವರ ಸೋದರ ಸಂಬಂಧಿಯಾಗಿದ್ದಾರೆ. ಇಷ್ಟೇ ಅಲ್ಲದೆ, ಪ್ರೀತಮ್ ಮುಂಡೆ, ಪೂನಂ ಮಹಾಜನ್, ಹೀನಾ ಗಾವಿತ್, ರಕ್ಷಾ ಖಡ್ಸೆ, ಸುಜಯ್ ವಿಖೆ ಪಾಟೀಲ್ ಸೇರಿದಂತೆ ರಾಜಕೀಯ ಕುಟುಂಬಗಳಿಗೆ ಸೇರಿದ ಬಿಜೆಪಿ ನಾಯಕರ ಹೆಸರನ್ನು ಪಟ್ಟಿ ಮಾಡಿದ್ದಾರೆ.

“ರವಿ ಸುಬ್ರಹ್ಮಣ್ಯ ಕರ್ನಾಟಕದ ಬಿಜೆಪಿ ಶಾಸಕ. ನಾನು ತೇಜಸ್ವಿ ಸೂರ್ಯ ಅವರನ್ನು ಕೇಳಲು ಬಯಸುತ್ತೇನೆ, ಅವರಿಗೆ ರವಿ ಸುಬ್ರಹ್ಮಣ್ಯ ಅವರ ಬಗ್ಗೆ ತಿಳಿದಿದೆಯೇ. ಒಂದು ವೇಳೆ ಅವರು ಅವರನ್ನು ತಿಳಿದಿದ್ದರೆ, ಅವರು ಆಕಸ್ಮಿಕವಾಗಿ ಯಾವುದೇ ದೂರದ ಸಂಬಂಧ ಹೊಂದಿದ್ದಾರೆಯೇ?” ಸುಪ್ರಿಯಾ ಸುಲೆ ಕೇಳಿದ್ದಾರೆ.

“ನಾವೆಲ್ಲರೂ ರಾಜಕೀಯ ಕುಟುಂಬಗಳಲ್ಲಿ ಹುಟ್ಟಿದ್ದೇವೆ ಎಂಬುದು ಸಾಮಾನ್ಯ ಸಂಗತಿಯಾಗಿದೆ. ನಾನು ರಾಜಕೀಯ ಕುಟುಂಬದಲ್ಲಿ ಹುಟ್ಟಿದ್ದಕ್ಕೆ ನನಗೆ ತುಂಬಾ ಹೆಮ್ಮೆ ಇದೆ. ನಾನು ಯಾರ ಮಗಳು ಎಂಬ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ” ಎಂದು ಸುಪ್ರಿಯಾ ಹೇಳಿದ್ದಾರೆ.

ಮೋದಿ ಬರುವುದಕ್ಕಿಂತ ಮುಂಚೆ ಭಾರತದಲ್ಲಿ ಯಾವುದೇ ಉದ್ದಿಮೆಗಳು ಇರಲಿಲ್ಲ ಎಂಬ ತೇಜಸ್ವಿ ಸೂರ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ ಸುಪ್ರಿಯಾ, “ವಿಪ್ರೋ ಬಹುಶಃ ಬೆಂಗಳೂರಿನಲ್ಲಿರುವುದಾಗಿದೆ. ಭಾರತದಲ್ಲಿ ಅತಿ ದೊಡ್ಡ ಕಂಪನಿಯಾಗಿರುವ ಇನ್ಫೋಸಿಸ್ ಕೂಡ ಬೆಂಗಳೂರಿನಲ್ಲಿ ತನ್ನ ಅಸ್ತಿತ್ವವನ್ನು ಹೊಂದಿದೆ. ನಮ್ಮ ರಾಜ್ಯದಲ್ಲಿ ಅವರು ಇದ್ದಾರೆ ಎಂಬುದಕ್ಕೆ ತುಂಬಾ ಹೆಮ್ಮೆ ಇದೆ. ಪೂನಾವಾಲರ ಲಸಿಕೆ ಕಂಪನಿಗೆ ಈ ಸರ್ಕಾರ ಪ್ರಶಸ್ತಿ ನೀಡಿತು. ಆ ವ್ಯಕ್ತಿ ಶೂನ್ಯದಿಂದ ಪ್ರಾರಂಭಿಸಿದ್ದರು, ಅವರು ನನ್ನ ತಂದೆಯೊಂದಿಗೆ ಶಾಲೆಗೆ ಹೋದವರಾಗಿದ್ದರು, ಹಾಗಾಗಿ ನನಗೆ ಸಂಪೂರ್ಣ ಹಿನ್ನೆಲೆ ತಿಳಿದಿದೆ” ಎಂದು ಸುಪ್ರಿಯಾ ಸುಲೆ ಅವರು ಹಲವು ಕಂಪೆನಿಗಳ ಪಟ್ಟಿಯನ್ನು ಓದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...