Homeಮುಖಪುಟಮಮತಾ ಬ್ಯಾನರ್ಜಿ-ಅಭಿಷೇಕ್ ಬ್ಯಾನರ್ಜಿ ನಡುವೆ ಬಿರುಕು : ಮಧ್ಯದಲ್ಲಿ ಸಿಕ್ಕಿಕೊಂಡ ಪ್ರಶಾಂತ್ ಕಿಶೋರ್!

ಮಮತಾ ಬ್ಯಾನರ್ಜಿ-ಅಭಿಷೇಕ್ ಬ್ಯಾನರ್ಜಿ ನಡುವೆ ಬಿರುಕು : ಮಧ್ಯದಲ್ಲಿ ಸಿಕ್ಕಿಕೊಂಡ ಪ್ರಶಾಂತ್ ಕಿಶೋರ್!

- Advertisement -
- Advertisement -

ಕಳೆದ ವರ್ಷ ಪಶ್ಚಿಮ ಬಂಗಾಳದಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರಕ್ಕೆ ಬಂದ ಟಿಎಂಸಿಯಲ್ಲಿಗ ಭಿನ್ನಾಭಿಪ್ರಾಯದ ಬಿರುಕು ಕಾಣಿಸಿಕೊಂಡಿದೆ. ಸರ್ಕಾರದಲ್ಲಿನ ಹಲವು ಹುದ್ದೆಗಳಲ್ಲಿ ಪಕ್ಷದ ಹಿರಿಯ ಮುಖಂಡರೆ ತುಂಬಿಕೊಂಡಿದ್ದು, ಕೆಲವರು ಎರಡು ಮೂರು ಹುದ್ದೆಗಳನ್ನು ನಿರ್ವಹಿಸುವ ಮೂಲಕ ಉಳಿದವರಿಗೆ ಅವಕಾಶ ಸಿಗುತ್ತಿಲ್ಲ ಎಂದು ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಒಬ್ಬರಿಗೆ ಒಂದೇ ಹುದ್ದೆ (ಒನ್ ಮ್ಯಾನ್ ಒನ್ ಪೋಸ್ಟ್) ಎಂಬ ಪ್ರಚಾರಾಂದೋಲನ ಸಹ ಆರಂಭಿಸಿದ್ದು, ಇದು ಮಮತಾ ಬ್ಯಾನರ್ಜಿಗೆ ಇರಿಸುಮುರಿಸು ತಂದಿದೆ. ಈ ವಿಚಾರವನ್ನು ಬಗೆಹರಿಸಲು ಇಂದು ಟಿಎಂಸಿ ಹಿರಿಯ ನಾಯಕರ ಸಭೆ ಕರೆಯಲಾಗಿದೆ.

ಅಭಿಷೇಕ್ ಬ್ಯಾನರ್ಜಿ ಪಕ್ಷದ ಎರಡನೇ ಉನ್ನತ ಸ್ಥಾನದಲ್ಲಿದ್ದಾರೆ. ಪ್ರಶಾಂತ್ ಕಿಶೋರ್‌ರವರ ಐ ಪ್ಯಾಕ್ ಅನ್ನು ಪಕ್ಷಕ್ಕೆ ಪರಿಚಯಿಸಿದ್ದೆ ಅವರು. ಆ ಮೂಲಕ ಪಕ್ಷ ಪ್ರಚಂಡ ಬಹುಮತ ಸಹ ಗಳಿಸಿತು. ಆದರೆ ಈಗ ಅದೇ ಐ ಪ್ಯಾಕ್ ಬಳಸಿಕೊಂಡು ಹಿರಿಯ ನಾಯಕರ ವಿರುದ್ಧ ಪ್ರಚಾರಾಂದೋಲನ ನಡೆಸುತ್ತಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದಾರೆ. ಟಿಎಂಸಿ ನಾಯಕಿ ಚಂದ್ರಿಮ ಭಟ್ಟಾಚಾರ್ಯರವರು ನನ್ನ ಸಾಮಾಜಿಕ ಜಾಲತಾಣ ಖಾತೆಗಳ್ನು ಐ ಪ್ಯಾಕ್ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದ್ದರೆ. ಚುನಾವಣೆ ಸಮಯದಲ್ಲಿ ಐ ಪ್ಯಾಕ್ ನನ್ನ ಹೆಸರಿನಲ್ಲಿ ಟ್ವಿಟರ್ ಖಾತೆ ತೆರೆದಿತ್ತು. ಇಂದು ಅದರಲ್ಲಿ ನನ್ನ ಗಮನಕ್ಕೆ ತಾರದೆ ‘ಒನ್ ಮ್ಯಾನ್ ಒನ್ ಪೋಸ್ಟ್’ ಎಂಬುದಾಗಿ ಪೋಸ್ಟ್ ಮಾಡಲಾಗಿದೆ. ಇದನ್ನು ನಾನು ತೀವ್ರವಾಗಿ ವಿರೋಧಿಸುತ್ತೇನೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಐ ಪ್ಯಾಕ್, “ಟಿಎಂಸಿ ಅಥವಾ ಅದರ ಯಾವುದೇ ನಾಯಕರ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳನ್ನು ಹ್ಯಾಂಡಲ್ ಮಾಡುವುದಿಲ್ಲ. ಈ ರೀತಿಯ ಆರೋಪ ಮಾಡುತ್ತಿರುವುದು ಸಂಪೂರ್ಣ ಸುಳ್ಳಾಗಿದೆ” ಎಂದಿದೆ.

ಅಲ್ಲದೆ ಟಿಎಂಸಿ ನಾಯಕಿ ಚಂದ್ರಿಮ ಭಟ್ಟಾಚಾರ್ಯರವರು ಅಭಿಷೇಕ್ ಬ್ಯಾನರ್ಜಿ ವಿರುದ್ಧ ಸಹ ಕಿಡಿಕಾರಿದ್ದಾರೆ. ನೀವು ಗೋವಾಗೆ ಪ್ರಚಾರ ಮಾಡಲು ಹೋಗುವುದಿಲ್ಲವೇ ಎಂಬ ಪ್ರಶ್ನೆಗೆ, “ಇಲ್ಲ ಅಲ್ಲಿ ಕೆಲವರು ಪ್ರಚಾರ ಮಾಡುತ್ತಿದ್ದಾರೆ. ನಾನು ಸಮಾಜವಾದಿ ಪಕ್ಷಕ್ಕೆ ಬೆಂಬಲ ಸೂಚಿಸಲು ಉತ್ತರ ಪ್ರದೇಶಕ್ಕೆ ಹೋಗುತ್ತೇನೆ” ಎಂದು ಅಭಿಷೇಕ್ ಹೆಸರು ಹೇಳದೆ ಕಮೆಂಟ್ ಮಾಡಿದ್ದಾರೆ.

ಮಮತಾ ಬ್ಯಾನರ್ಜಿಯವರು ಪಕ್ಷದ ಹಿರಿಯ ನಾಯಕರ ಪರವಾಗಿದ್ದಾರೆ. ಆದರೆ ಅಭಿಷೇಕ್ ಅದರ ವಿರುದ್ಧ ದನಿಯೆತ್ತಿದ್ದು ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ. ಆದರೆ ಐ ಪ್ಯಾಕ್ ಆ ರೀತಿಯ ಭಿನ್ನಾಭಿಪ್ರಾಯ ಇಲ್ಲವೆಂದು ಹೇಳಿದೆ.


ಇದನ್ನೂ ಓದಿ: ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...