Homeಅಂತರಾಷ್ಟ್ರೀಯ"ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ": ಯುಎಸ್ ಸಂಸ್ಥೆ ಟೀಕೆ

“ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ”: ಯುಎಸ್ ಸಂಸ್ಥೆ ಟೀಕೆ

ಇದಕ್ಕೆ ಭಾರತದ ವಿದೇಶಾಂಗ ಸಚಿವಾಲಯ ಪ್ರತಿಕ್ರಯಿಸಿದ್ದು, ಪ್ರೇರಿತ ಪ್ರತಿಕ್ರಿಯೆಗಳ ಸ್ವಾಗತಾರ್ಹವಲ್ಲ ಎಂದಿದೆ.

- Advertisement -
- Advertisement -

ಶಾಲಾ-ಕಾಲೇಜುಗಲಲ್ಲಿ ಹಿಜಾಬ್ ಧರಿಸಬೇಕೆಂಬ ಮುಸ್ಲಿಂ ವಿದ್ಯಾರ್ಥಿಗಳ ಬೇಡಿಕೆಯನ್ನು ಕರ್ನಾಟಕದಲ್ಲಿ ನಿರಾಕರಿಸುತ್ತಿರುವುದನ್ನು ವಿದೇಶಗಳಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ನಿಗಾ ವಹಿಸುವ ಮತ್ತು ವರದಿ ಮಾಡುವ ಯುಎಸ್ ಸರ್ಕಾರಿ ಸಂಸ್ಥೆಯು ಟೀಕಿಸಿದೆ.

ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ (International Religious Freedom)ನ ರಾಯಬಾರಿ ರಶಾದ್ ಹುಸೇನ್, “ಶಾಲೆಗಳಲ್ಲಿ ಹಿಜಾಬ್ ನಿಷೇಧವು ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ” ಎಂದು ಟ್ವೀಟ್ ಮಾಡಿದ್ದಾರೆ. “ಧಾರ್ಮಿಕ ಸ್ವಾತಂತ್ರ್ಯವು ವ್ಯಕ್ತಿಗಳು ತಮ್ಮ ಇಷ್ಟದ ಧಾರ್ಮಿಕ ಉಡುಪನ್ನು ಆಯ್ಕೆ ಮಾಡುವ ಸಾಮರ್ಥ್ಯವನ್ನು ಒಳಗೊಂಡಿದೆ. ಭಾರತದ ಕರ್ನಾಟಕ ರಾಜ್ಯವು ಧಾರ್ಮಿಕ ಉಡುಪುಗಳ ಅನುಮತಿಯನ್ನು ನಿರಾಕರಿಸಬಾರದು. ಶಾಲೆಗಳಲ್ಲಿ ಹಿಜಾಬ್ ನಿಷೇಧವು ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಹಾಗು ಮಹಿಳೆಯರು ಮತ್ತು  ಹುಡುಗಿಯರನ್ನು ಕಳಂಕಗೊಳಿಸುತ್ತದೆ ಮತ್ತು ಕಡೆಗಣಿಸುತ್ತದೆ” ಎಂದು ಹುಸೇನ್ ಅವರ ಕಚೇರಿ ಟ್ವೀಟ್ ಮಾಡಿದೆ.

ಹುಸೇನ್ ಅವರು ರಾಯಭಾರಿಯಾಗಿರುವ ಧಾರ್ಮಿಕ ಸ್ವಾತಂತ್ರ್ಯವನ್ನು ಮುನ್ನಡೆಸುವ ಸಚಿವಾಲಯವು ಇಂಟರ್ನ್ಯಾಷನಲ್ ರಿಲಿಜಿಯಸ್ ಫ್ರೀಡಮ್ ಯುಎಸ್ ಕಚೇರಿ ಅಡಿಯಲ್ಲಿ ಬರುತ್ತದೆ, ಇದು ಹಿಂದೆ ಭಾರತದಲ್ಲಿನ ಧಾರ್ಮಿಕ ಉದ್ವಿಗ್ನತೆಗಳ ಸಂದರ್ಭದಲ್ಲಿಯೂ ಸಹ ಪ್ರತಿಕ್ರಿಯಿಸಿದೆ.

ಈ ಬಗ್ಗೆ ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರತಿಕ್ರಿಯೆ ನೀಡಿದೆ. ಅಧಿಕೃತ ವಕ್ತಾರ ಶ್ರೀ ಅರಿಂದಮ್ ಬಾಗ್ಚಿ ಟ್ವೀಟ್ ಮಾಡಿ “ಕರ್ನಾಟಕ ರಾಜ್ಯದ ಕೆಲವು ಶಿಕ್ಷಣ ಸಂಸ್ಥೆಗಳಲ್ಲಿನ ಡ್ರೆಸ್ ಕೋಡ್‌ಗೆ ಸಂಬಂಧಿಸಿದ ವಿಷಯವು ಕರ್ನಾಟಕದ ಗೌರವಾನ್ವಿತ ಹೈಕೋರ್ಟ್‌ನಿಂದ ನ್ಯಾಯಾಂಗ ವಿಚಾರಣೆಯಲ್ಲಿದೆ. ನಮ್ಮ ಸಾಂವಿಧಾನಿಕ ಚೌಕಟ್ಟು ಮತ್ತು ಕಾರ್ಯವಿಧಾನಗಳು, ಹಾಗೆಯೇ ನಮ್ಮ ಪ್ರಜಾಪ್ರಭುತ್ವದ ನೀತಿ ಮತ್ತು ರಾಜಕೀಯದಲ್ಲಿನ ಸಮಸ್ಯೆಗಳನ್ನು ಪರಿಗಣಿಸಲಾಗಿದೆ ಮತ್ತು ಪರಿಹರಿಸಲಾಗಿದೆ. ಭಾರತವನ್ನು ಚೆನ್ನಾಗಿ ತಿಳಿದಿರುವವರು ಈ ವಾಸ್ತವಗಳ ಕುರಿತು ಸರಿಯಾದ ಮೆಚ್ಚುಗೆಯನ್ನು ಹೊಂದಿರುತ್ತಾರೆ. ನಮ್ಮ ಆಂತರಿಕ ಸಮಸ್ಯೆಗಳ ಬಗ್ಗೆ ಪ್ರೇರಿತ ಪ್ರತಿಕ್ರಿಯೆಗು ಸ್ವಾಗತಾರ್ಹವಲ್ಲ” ಎಂದಿದ್ದಾರೆ.

ಹುಸೇನ್ ಅವರನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ US ಸೆನೆಟ್‌ನಿಂದ IRF ಗೆ ರಾಯಭಾರಿಯಾಗಿ ನೇಮಿಸಲಾಗಿದೆ. ಅವರು IRF ಗೆ ಮೊದಲ ಮುಸ್ಲಿಂ ರಾಯಭಾರಿಯಾಗಿದ್ದಾರೆ. ಅವರು ಈ ಹಿಂದೆ ಒಬಾಮಾ ಆಡಳಿತದ ಅವಧಿಯಲ್ಲಿ ಇಸ್ಲಾಮಿಕ್ ಸಹಕಾರ ಸಂಘಟನೆಗೆ ವಿಶೇಷ ರಾಯಭಾರಿಯಾಗಿ ಸೇವೆ ಸಲ್ಲಿದ್ದರು.

ಹಿಜಾಬ್ ನಿರ್ಬಂಧಗಳನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸೋಮವಾರ ಪುನರಾರಂಭಿಸುವುದಾಗಿ ಕರ್ನಾಟಕ ಹೈಕೋರ್ಟ್ ಹೇಳಿದೆ. ಶಿಕ್ಷಣ ಸಂಸ್ಥೆಗಳ ಒಳಗೆ ಶಾಲು ಅಥವಾ ಹಿಜಾಬ್ ಯಾವುದೇ ಧಾರ್ಮಿಕ ಉಡುಗೆಯನ್ನು ಅನುಮತಿಸಲಾಗುವುದಿಲ್ಲ ಎಂದು ಹೈಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ಹೇಳಿದೆ.


ಇದನ್ನೂ ಓದಿ: ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...