Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

- Advertisement -
- Advertisement -

ವಿದ್ಯಾರ್ಥಿಗಳು ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗುವುದನ್ನು ನಿಷೇಧಿಸಿದ ಬಳಿಕ ಕರ್ನಾಟಕ ಗೊಂದಲದ ಗೂಡಾಗಿದೆ. ಮುಸ್ಲಿಂ ವಿದ್ಯಾರ್ಥಿಗಳ ಸಾಂವಿಧಾನಿಕ ಪ್ರತಿಭಟನೆಯನ್ನು ಹತ್ತಿಕ್ಕಲು ಬಲಪಂಥೀಯ ಸಂಘಟನೆಗಳು ವಿದ್ಯಾರ್ಥಿಗಳನ್ನು ಪ್ರಚೋದಿಸಿದವು. ಉನ್ಮಾದಿತರಾದ ವಿದ್ಯಾರ್ಥಿಗಳು ಹಿಜಾ‌ಬ್ ವಿರೋಧಿಸಿ ಕೇಸರಿ ಶಾಲು ಧರಿಸಿ ಬಂದಿದ್ದು ಪ್ರಕರಣ ತೀವ್ರಗೊಳ್ಳಲು ಕಾರಣವಾಗಿದೆ.

ಈ ಪ್ರತಿಭಟನೆಗಳ ಸಂದರ್ಭದಲ್ಲಿ ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಕೇಸರಿ ಶಾಲು ಹಾಕಿದ್ದ ಯುವಕರ ಗುಂಪೊಂದು ಮುಸ್ಲಿಂ ವಿದ್ಯಾರ್ಥಿಯ ಮೇಲೆರಗಲು ಬಂದರು. ಜೈ ಶ್ರೀರಾಮ್ ಎಂದು ಬಂದವರ ಎದುರು ತಿರುಗಿಬಿದ್ದ ಏಕಾಂಗಿ ವಿದ್ಯಾರ್ಥಿನಿಯ ವಿಡಿಯೊ ವೈರಲ್ ಆಗಿದೆ.

ಬಲಪಂಥೀಯರಿಂದ ಪ್ರೇರೇಪಿತರಾದ ಹುಡುಗರು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗುತ್ತ ನುಗ್ಗಿದಾಗ ವಿದ್ಯಾರ್ಥಿನಿಯು ‘ಅಲ್ಲಾ-ಹು-ಅಕ್ಬರ್’ ಎಂದು ಕೂಗಿದ ವಿಡಿಯೊ ಭಾರಿ ಸಂಚಲನ ಮೂಡಿಸಿತು. ಈ ವಿದ್ಯಾರ್ಥಿನಿಯನ್ನು ಬೀಬಿ ಮುಸ್ಕಾನ್ ಖಾನ್ ಎಂದು ಗುರುತಿಸಲಾಗಿದೆ. ಮುಸ್ಕಾನ್‌ ಘೋಷಣೆಯ ವಿಡಿಯೊ ಟ್ವಿಟರ್‌ನಲ್ಲಿ #Sherni (ಸಿಂಹಿಣಿ) ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಟ್ರೆಂಡ್ ಆಗಿದೆ.

ಈ ಹಿನ್ನೆಲೆಯಲ್ಲಿ, ರಾಹುಲ್ ಗಾಂಧಿ ಅವರ ಪಕ್ಕದಲ್ಲಿ ನಿಂತಿರುವ ಮಹಿಳೆಯ ಚಿತ್ರವನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಈಕೆ “ಹಿಜಾಬ್ ಧರಿಸಿರುವ ಸಿಂಹಿಣಿ” ಎಂದು ಬಿಂಬಿಸಲಾಗಿದೆ. ಕರ್ನಾಟಕದಾದ್ಯಂತ ನಡೆಯುತ್ತಿರುವ ವ್ಯಾಪಕ ಪ್ರತಿಭಟನೆಗಳು ಕಾಂಗ್ರೆಸ್ ಪಕ್ಷದ ಯೋಜಿತ ಪಿತೂರಿ ಎಂದು ಪ್ರಕರಣವನ್ನು ತಿರುಚಲಾಗುತ್ತಿದೆ.

ಈ ಫೋಟೋ ಫೇಸ್‌ಬುಕ್‌ನಲ್ಲಿ ಹೆಚ್ಚು ವೈರಲ್ ಆಗಿದೆ. #ToolKitInAction ಎಂಬ ಹ್ಯಾಶ್‌ಟ್ಯಾಗ್‌ ಹಂಚಿಕೊಳ್ಳಲಾಗುತ್ತಿದೆ. ಆದರೆ ಈ ಫೋಟೋದ ಸತ್ಯಾಸತ್ಯತೆಯನ್ನು ಆಲ್ಟ್‌ ನ್ಯೂಸ್‌ ಬಯಲಿಗೆಳೆದಿದೆ.

ಫೋಟೋದಲ್ಲಿ ಇರುವವರು ಯಾರು?

ವೈರಲ್ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಮಾಡಿದಾಗ ಈ ಫೋಟೋ ಅಂಬಾ ಪ್ರಸಾದ್ ಅವರ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಅಪ್‌ಲೋಡ್ ಆಗಿರುವುದು ಕಂಡುಬಂದಿದೆ. ಅಂಬಾ ಪ್ರಸಾದ್ ಅವರು ಜಾರ್ಖಂಡ್‌ನ ಬರ್ಕಗಾಂವ್‌ನ ಕಾಂಗ್ರೆಸ್ ಶಾಸಕರಾಗಿದ್ದಾರೆ. ಫೆಬ್ರವರಿ 2022ರಲ್ಲಿ ಅಂಬಾ ಪ್ರಸಾದ್ ಅವರು ಜಾರ್ಖಂಡ್‌ನ ಇತರ ಕಾಂಗ್ರೆಸ್ ಶಾಸಕರೊಂದಿಗೆ ರಾಹುಲ್ ಗಾಂಧಿಯನ್ನು ಭೇಟಿಯಾದಾಗ ತೆಗೆಸಿಕೊಂಡಿರುವ ಫೋಟೋವನ್ನು ತಪ್ಪಾಗಿ ಹರಿಬಿಡಲಾಗಿದೆ. ಈ ಭೇಟಿಯ ಫೋಟೋಗಳನ್ನು ಕಾಂಗ್ರೆಸ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿಯೂ ಕಾಣಬಹುದು.

ನಾವು ಅಂಬಾ ಪ್ರಸಾದ್ ಅವರ ಟ್ವಿಟರ್ ಹ್ಯಾಂಡಲ್ ಅನ್ನು ಸಹ ಪರಿಶೀಲಿಸಿದ್ದೇವೆ. ವೈರಲ್‌ ಫೋಟೋದ ಕುರಿತು ಅವರು ಫೆಬ್ರವರಿ 10ರಂದು ಸ್ಪಷ್ಟನೆಯನ್ನೂ ನೀಡಿ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಜಾರ್ಖಂಡ್ ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ.

ಕಾಂಗ್ರೆಸ್ ಶಾಸಕಿ ಅಂಬಾ ಪ್ರಸಾದ್ ಅವರ ಫೋಟೋವನ್ನು ಮುಸ್ಕಾನ್ ಖಾನ್ ಎಂದು ಬಿಂಬಿಸಿ ದಾರಿತಪ್ಪಿಸಲಾಗುತ್ತಿದೆ. ಜನತಾ ದಳ (ಜಾತ್ಯತೀತ) ಸದಸ್ಯೆ ನಜ್ಮಾ ನಜೀರ್ ಅವರ ಫೋಟೋವನ್ನು ಮುಸ್ಕಾನ್‌ ಎಂದು ತಪ್ಪಾಗಿ ಬಿಂಬಿಸಿ ವೈರಲ್ ಮಾಡಲಾಗಿತ್ತು.


ಇದನ್ನೂ ಓದಿರಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...