Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

- Advertisement -
- Advertisement -

ವಿದ್ಯಾರ್ಥಿಗಳು ಹಿಜಾಬ್ ಧರಿಸಿ ತರಗತಿಗಳಿಗೆ ಹಾಜರಾಗುವುದನ್ನು ನಿಷೇಧಿಸಿದ ಬಳಿಕ ಕರ್ನಾಟಕ ಗೊಂದಲದ ಗೂಡಾಗಿದೆ. ಮುಸ್ಲಿಂ ವಿದ್ಯಾರ್ಥಿಗಳ ಸಾಂವಿಧಾನಿಕ ಪ್ರತಿಭಟನೆಯನ್ನು ಹತ್ತಿಕ್ಕಲು ಬಲಪಂಥೀಯ ಸಂಘಟನೆಗಳು ವಿದ್ಯಾರ್ಥಿಗಳನ್ನು ಪ್ರಚೋದಿಸಿದವು. ಉನ್ಮಾದಿತರಾದ ವಿದ್ಯಾರ್ಥಿಗಳು ಹಿಜಾ‌ಬ್ ವಿರೋಧಿಸಿ ಕೇಸರಿ ಶಾಲು ಧರಿಸಿ ಬಂದಿದ್ದು ಪ್ರಕರಣ ತೀವ್ರಗೊಳ್ಳಲು ಕಾರಣವಾಗಿದೆ.

ಈ ಪ್ರತಿಭಟನೆಗಳ ಸಂದರ್ಭದಲ್ಲಿ ಮಂಡ್ಯದ ಪಿಇಎಸ್ ಕಾಲೇಜಿನಲ್ಲಿ ಕೇಸರಿ ಶಾಲು ಹಾಕಿದ್ದ ಯುವಕರ ಗುಂಪೊಂದು ಮುಸ್ಲಿಂ ವಿದ್ಯಾರ್ಥಿಯ ಮೇಲೆರಗಲು ಬಂದರು. ಜೈ ಶ್ರೀರಾಮ್ ಎಂದು ಬಂದವರ ಎದುರು ತಿರುಗಿಬಿದ್ದ ಏಕಾಂಗಿ ವಿದ್ಯಾರ್ಥಿನಿಯ ವಿಡಿಯೊ ವೈರಲ್ ಆಗಿದೆ.

ಬಲಪಂಥೀಯರಿಂದ ಪ್ರೇರೇಪಿತರಾದ ಹುಡುಗರು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗುತ್ತ ನುಗ್ಗಿದಾಗ ವಿದ್ಯಾರ್ಥಿನಿಯು ‘ಅಲ್ಲಾ-ಹು-ಅಕ್ಬರ್’ ಎಂದು ಕೂಗಿದ ವಿಡಿಯೊ ಭಾರಿ ಸಂಚಲನ ಮೂಡಿಸಿತು. ಈ ವಿದ್ಯಾರ್ಥಿನಿಯನ್ನು ಬೀಬಿ ಮುಸ್ಕಾನ್ ಖಾನ್ ಎಂದು ಗುರುತಿಸಲಾಗಿದೆ. ಮುಸ್ಕಾನ್‌ ಘೋಷಣೆಯ ವಿಡಿಯೊ ಟ್ವಿಟರ್‌ನಲ್ಲಿ #Sherni (ಸಿಂಹಿಣಿ) ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಟ್ರೆಂಡ್ ಆಗಿದೆ.

ಈ ಹಿನ್ನೆಲೆಯಲ್ಲಿ, ರಾಹುಲ್ ಗಾಂಧಿ ಅವರ ಪಕ್ಕದಲ್ಲಿ ನಿಂತಿರುವ ಮಹಿಳೆಯ ಚಿತ್ರವನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ಈಕೆ “ಹಿಜಾಬ್ ಧರಿಸಿರುವ ಸಿಂಹಿಣಿ” ಎಂದು ಬಿಂಬಿಸಲಾಗಿದೆ. ಕರ್ನಾಟಕದಾದ್ಯಂತ ನಡೆಯುತ್ತಿರುವ ವ್ಯಾಪಕ ಪ್ರತಿಭಟನೆಗಳು ಕಾಂಗ್ರೆಸ್ ಪಕ್ಷದ ಯೋಜಿತ ಪಿತೂರಿ ಎಂದು ಪ್ರಕರಣವನ್ನು ತಿರುಚಲಾಗುತ್ತಿದೆ.

ಈ ಫೋಟೋ ಫೇಸ್‌ಬುಕ್‌ನಲ್ಲಿ ಹೆಚ್ಚು ವೈರಲ್ ಆಗಿದೆ. #ToolKitInAction ಎಂಬ ಹ್ಯಾಶ್‌ಟ್ಯಾಗ್‌ ಹಂಚಿಕೊಳ್ಳಲಾಗುತ್ತಿದೆ. ಆದರೆ ಈ ಫೋಟೋದ ಸತ್ಯಾಸತ್ಯತೆಯನ್ನು ಆಲ್ಟ್‌ ನ್ಯೂಸ್‌ ಬಯಲಿಗೆಳೆದಿದೆ.

ಫೋಟೋದಲ್ಲಿ ಇರುವವರು ಯಾರು?

ವೈರಲ್ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಮಾಡಿದಾಗ ಈ ಫೋಟೋ ಅಂಬಾ ಪ್ರಸಾದ್ ಅವರ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಅಪ್‌ಲೋಡ್ ಆಗಿರುವುದು ಕಂಡುಬಂದಿದೆ. ಅಂಬಾ ಪ್ರಸಾದ್ ಅವರು ಜಾರ್ಖಂಡ್‌ನ ಬರ್ಕಗಾಂವ್‌ನ ಕಾಂಗ್ರೆಸ್ ಶಾಸಕರಾಗಿದ್ದಾರೆ. ಫೆಬ್ರವರಿ 2022ರಲ್ಲಿ ಅಂಬಾ ಪ್ರಸಾದ್ ಅವರು ಜಾರ್ಖಂಡ್‌ನ ಇತರ ಕಾಂಗ್ರೆಸ್ ಶಾಸಕರೊಂದಿಗೆ ರಾಹುಲ್ ಗಾಂಧಿಯನ್ನು ಭೇಟಿಯಾದಾಗ ತೆಗೆಸಿಕೊಂಡಿರುವ ಫೋಟೋವನ್ನು ತಪ್ಪಾಗಿ ಹರಿಬಿಡಲಾಗಿದೆ. ಈ ಭೇಟಿಯ ಫೋಟೋಗಳನ್ನು ಕಾಂಗ್ರೆಸ್‌ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿಯೂ ಕಾಣಬಹುದು.

ನಾವು ಅಂಬಾ ಪ್ರಸಾದ್ ಅವರ ಟ್ವಿಟರ್ ಹ್ಯಾಂಡಲ್ ಅನ್ನು ಸಹ ಪರಿಶೀಲಿಸಿದ್ದೇವೆ. ವೈರಲ್‌ ಫೋಟೋದ ಕುರಿತು ಅವರು ಫೆಬ್ರವರಿ 10ರಂದು ಸ್ಪಷ್ಟನೆಯನ್ನೂ ನೀಡಿ ಟ್ವೀಟ್ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಜಾರ್ಖಂಡ್ ಪೊಲೀಸರನ್ನು ಟ್ಯಾಗ್ ಮಾಡಿದ್ದಾರೆ.

ಕಾಂಗ್ರೆಸ್ ಶಾಸಕಿ ಅಂಬಾ ಪ್ರಸಾದ್ ಅವರ ಫೋಟೋವನ್ನು ಮುಸ್ಕಾನ್ ಖಾನ್ ಎಂದು ಬಿಂಬಿಸಿ ದಾರಿತಪ್ಪಿಸಲಾಗುತ್ತಿದೆ. ಜನತಾ ದಳ (ಜಾತ್ಯತೀತ) ಸದಸ್ಯೆ ನಜ್ಮಾ ನಜೀರ್ ಅವರ ಫೋಟೋವನ್ನು ಮುಸ್ಕಾನ್‌ ಎಂದು ತಪ್ಪಾಗಿ ಬಿಂಬಿಸಿ ವೈರಲ್ ಮಾಡಲಾಗಿತ್ತು.


ಇದನ್ನೂ ಓದಿರಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...