Homeಚಳವಳಿವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

ವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

- Advertisement -
- Advertisement -

ವಿಶಾಖಪಟ್ಟಣಂ ಉಕ್ಕು ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ಒಕ್ಕೂಟ ಸರ್ಕಾರದ ನಿರ್ಧಾರಗಳ ವಿರುದ್ಧ ಕಳೆದ ಒಂದು ವರ್ಷದಿಂದ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ಜಗನ್‌ಮೋಹನ್ ರೆಡ್ಡಿಯವರ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರ ಈ ನಿರ್ಧಾರವನ್ನು ವಿರೋಧಿಸಿ, ಪ್ರತಿಭಟನಾಕಾರರಿಗೆ ಬೆಂಬಲಿಸಿದ್ದಾರೆ. ಈ ಹೋರಾಟವು ಭಾನುವಾರಕ್ಕೆ (ಫೆ.13) ಒಂದು ವರ್ಷವನ್ನು ಪೂರೈಸಲಿದ್ದು, ಅದರ ಭಾಗವಾಗಿ ಶನಿವಾರ ಬೃಹತ್ ಪ್ರತಿಭಟನೆಗಳು ಮತ್ತು ಭಾನುವಾರ ಜೈಲ್ ಭರೋ ಹೋರಾಟವನ್ನು ನಡೆಸಲು ನಿರ್ಧರಿಸಲಾಗಿದೆ.

ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ, ವಿಶಾಖಪಟ್ಟಣಂ ಸಂಸದ ಎಂವಿವಿ ಸತ್ಯನಾರಾಯಣ ಅವರು ಸೋಮವಾರ ಲೋಕಸಭೆಯಲ್ಲಿ ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಖಾಸಗೀಕರಣದ ವಿಷಯವನ್ನು ಪ್ರಸ್ತಾಪಿಸಿದ್ದು, “ವೈಜಾಗ್‌ ಸ್ಟೀಲ್ ಪ್ಲಾಂಟ್ ತೆಲುಗು ಜನರ ಸ್ವಾಭಿಮಾನವಾಗಿದೆ. ವಿಶಾಖ ಉಕ್ಕು-ಆಂಧ್ರ ಹಕ್ಕು ಎಂಬ ಘೋಷಣೆಯೊಂದಿಗೆ ಆಂಧ್ರ ಜನರ ಬಹುಕಾಲದ ಕನಸು 1982ರಲ್ಲಿ ವಿಶಾಖ ಉಕ್ಕು ಉದ್ಯಮದ ಸ್ಥಾಪನೆಯಿಂದ ನನಸಾಗಿದೆ. ಆ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ಒಕ್ಕೂಟ ಸರ್ಕಾರ ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ಆದರೆ, ಆಂಧ್ರ ಜನರ ಪ್ರತಿಭಟನೆ ಮತ್ತು ಆಂಧ್ರ ಸರ್ಕಾರ ಹಾಗೂ ಸಂಸದರ ಒತ್ತಾಯದ ವಿಚಾರವಾಗಿ ಒಕ್ಕೂಟ ಸರ್ಕಾರ ಯಾವುದೇ ರೀತಿಯ ಸ್ಪಂದನೆಯನ್ನಾಗಿಲೀ, ಪ್ರತಿಕ್ರಿಯೆಯನ್ನಾಗಲೀ ನೀಡಿಲ್ಲ.

ಈ ಹಿನ್ನೆಲೆಯಲ್ಲಿ, ಎರಡು ದಿನಗಳ ತೀವ್ರ ಆಂದೋಲನ ನಡೆಸಲು ಆಂಧ್ರದ ಸಂಘಟನೆಗಳು ನಿರ್ಧರಿಸಿವೆ. ಈ ಆಂದೋಲನದಲ್ಲಿ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. ಒಕ್ಕೂಟ ಸರ್ಕಾರವು ವೈಜಾಗ್‌ ಸ್ಟೀಲ್‌ ಪ್ಲಾಂಟ್‌ ಅನ್ನು ಮಾರಾಟ ಮಾಡುವ ನಿರ್ಧಾರವನ್ನು ಹಿಂಪಡೆಯುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸಿಐಟಿಯು ರಾಜ್ಯ ಅಧ್ಯಕ್ಷ ಸಿ.ಎಚ್. ನರಸಿಂಗ ರಾವ್ ಹೇಳಿದ್ದಾರೆ.

“ಈ ಪ್ರಮುಖ ಉದ್ಯಮವನ್ನು ದಕ್ಷಿಣ ಕೊರಿಯಾದ ಪೋಸ್ಕೋ ಕಂಪನಿಗೆ ಮಾರಾಟ ಮಾಡಲು ಬಿಜೆಪಿ ಸರ್ಕಾರ ಪಿತೂರಿ ನಡೆಸುತ್ತಿದೆ. ಕೊರಿಯಾದ ಪ್ರಮುಖ ಖಾಸಗೀ ಕಂಪನಿಗಳು ರೋಬೋಟ್‌ಗಳನ್ನು ಬಳಸುತ್ತಿದ್ದಾರೆ. ಅವರು ಕಡಿಮೆ ಮಾನವಶಕ್ತಿಯನ್ನು ಬಳಸುತ್ತಿದ್ದಾರೆ” ಎಂದು ನರಸಿಂಗ ರಾವ್ ಆರೋಪಿಸಿದ್ದಾರೆ.

“ಖಾಸಗಿ ಕಂಪನಿಗಳಲ್ಲಿ ಯಾವುದೇ ಸಾಮಾಜಿಕ ನ್ಯಾಯ ಇರುವುದಿಲ್ಲ. ಇದರಿಂದ ಈ ಭಾಗದ ಅಭಿವೃದ್ಧಿ ಕುಂಠಿತವಾಗಲಿದೆ. ಭೂಮಿ ಕಳೆದುಕೊಂಡ ಜನರು ತುಂಬಾ ತೊಂದರೆ ಅನುಭವಿಸುತ್ತಾರೆ. ಇಲ್ಲಿನ ಜನರಿಗೆ ಖಾಸಗೀಕರಣದ ವಿರುದ್ಧ ಹೋರಾಟ ಮಾಡದೆ ಬೇರೆ ದಾರಿ ಇಲ್ಲ. ಕಾಯಂ ನೌಕರರೊಂದಿಗೆ ಅಧಿಕಾರಿಗಳ ಸಂಘಗಳು, ಗುತ್ತಿಗೆ ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿ ‘ವಿಶಾಖ ಉಕ್ಕು ಪರಿರಕ್ಷಣಾ ಹೋರಾಟ ಸಮಿತಿ’ ರಚಿಸಲಾಗಿದೆ. ಈ ಸಮಿತಿಯಲ್ಲಿ ಬಿಜೆಪಿಯ ಅಂಗಸಂಸ್ಥೆಯಾದ ಬಿಎಂಎಸ್ ಕೂಡ ಇದೆ. ವೈಜಾಗ್ ಸ್ಟೀಲ್ ಪ್ಲಾಂಟ್ ಅನ್ನು ಮಾರಾಟ ಮಾಡಲು ನಾವು ಬಿಡುವುದಿಲ್ಲ ಎಂಬುದು ನಮ್ಮ ಏಕೈಕ ಅಜೆಂಡಾವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಮತಾ ಬ್ಯಾನರ್ಜಿ-ಅಭಿಷೇಕ್ ಬ್ಯಾನರ್ಜಿ ನಡುವೆ ಬಿರುಕು : ಮಧ್ಯದಲ್ಲಿ ಸಿಕ್ಕಿಕೊಂಡ ಪ್ರಶಾಂತ್ ಕಿಶೋರ್! 

ವೈಜಾಗ್ ಸ್ಟೀಲ್ ಪ್ಲಾಂಟ್‌ನಲ್ಲಿ ಸರ್ಕಾರಿ ಷೇರುಗಳನ್ನು 100% ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರ ನಿರ್ಧರಿಸಿದ್ದು, ಅಂದಿನಿಂದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಸರ್ಕಾರ 2ನೇ ಬಾರಿಗೆ ಆಡಳಿತಕ್ಕೆ ಬಂದ ನಂತರ ಪ್ರಮುಖ ಖಾಸಗೀ ಕೈಗಾರಿಕೆಗಳಿಗೆ ಆದ್ಯತೆ ನೀಡಲು ಆಕ್ರಮಣಕಾರಿಯಾಗಿ ಮುಂದುವರಿಯುತ್ತಿದೆ. ಆದರೆ, ವೈಜಾಗ್ ಸ್ಟೀಲ್ ಪ್ಲಾಂಟ್‌ನ ಖಾಸಗೀಕರಣದ ವಿರುದ್ಧ ಬೃಹತ್‌ ಹೋರಾಟ ನಡೆಯುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಕಾರ್ಖಾನೆಯು ಆಂಧ್ರಪ್ರದೇಶದ ಕೈಗಾರಿಕಾ ಕಿರೀಟದಲ್ಲಿರುವ ರತ್ನವಾಗಿದೆ. 32 ಜನರ ಜೀವ ತ್ಯಾಗದಿಂದ ಇದನ್ನು ಸ್ಥಾಪಿಸಲಾಗಿದೆ. ಭಾರತದ ಸಮುದ್ರ ತೀರದಲ್ಲಿರುವ ಏಕೈಕ ಸ್ಟೀಲ್ ಪ್ಲಾಂಟ್ ಇದು. ರೈತರ ತ್ಯಾಗದಿಂದ 22,000 ಎಕರೆ ಭೂಮಿಯಲ್ಲಿ ಸ್ಥಾಪನೆಯಾಗಿದೆ. ಈ ಕಾರ್ಖಾನೆ ವರ್ಷಕ್ಕೆ ಉತ್ತಮ ಗುಣಮಟ್ಟದ 60 ಲಕ್ಷ ಟನ್ ಉಕ್ಕನ್ನು ಉತ್ಪಾದಿಸುತ್ತದೆ. ಕಳೆದ ಒಂಬತ್ತು ತಿಂಗಳ ಅವಧಿಯಲ್ಲಿ 20,000 ಕೋಟಿ ರೂ. ವಹಿವಾಟು ನಡೆಸಿ 700 ಕೋಟಿ ರೂ. ಲಾಭ ಗಳಿಸಿದೆ. ಇಲ್ಲಿ ಸುಮಾರು 32,000 ಮಂದಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ವೈಜಾಗ್ ಸ್ಟೀಲ್ ಪ್ಲಾಂಟ್‌ನ ಏಕೈಕ ಸಮಸ್ಯೆ ಎಂದರೆ ಅದು ಯಾವುದೇ ಕಬ್ಬಿಣದ ಗಣಿಗಳನ್ನು ಹೊಂದಿರದ ಕಾರಣ ಕಬ್ಬಿಣದ ಅದಿರಿನ ಮೇಲೆ ವರ್ಷಕ್ಕೆ ಸುಮಾರು 3,000 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವಾಗುತ್ತಿದೆ ಎಂದು ಹೇಳಿರುವ ಸಿಐಟಿಯು ನಾಯಕ, “ಒಕ್ಕೂಟ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸಾರ್ವಜನಿಕ ಉಕ್ಕಿನ ಕಾರ್ಖಾನೆಗಳಿಗೆ ಸ್ವಂತ ಗಣಿಗಳನ್ನು ನೀಡಿದೆ. ಅಲ್ಲದೆ, ಯಾವುದೇ ಉದ್ಯಮವನ್ನು ಹೊಂದಿರದ ಗಾಲಿ ಜನಾರ್ದನ ರೆಡ್ಡಿಗೆ ಮತ್ತು ಪೋಸ್ಕೋ ಕಂಪನಿಗೂ ಸಹ ಗಣಿಗಳನ್ನು ಮಂಜೂರು ಮಾಡಿದೆ. ಆದರೆ, ವೈಜಾಗ್ ಸ್ಟೀಲ್ ಪ್ಲಾಂಟ್‌ಗೆ ಮಾತ್ರ ಯಾವುದೇ ಗಣಿಗಳನ್ನು ನೀಡಲಿಲ್ಲ. ಏಕೆಂದರೆ, ಇದನ್ನು ಖಾಸಗಿ ಕಾರ್ಪೊರೇಟ್‌ಗಳಿಗೆ ಮಾರಾಟ ಮಾಡುವ ಹುನ್ನಾರವನ್ನು ಸರ್ಕಾರ ಹೊಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...