Homeಚಳವಳಿವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

ವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

- Advertisement -
- Advertisement -

ವಿಶಾಖಪಟ್ಟಣಂ ಉಕ್ಕು ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ಒಕ್ಕೂಟ ಸರ್ಕಾರದ ನಿರ್ಧಾರಗಳ ವಿರುದ್ಧ ಕಳೆದ ಒಂದು ವರ್ಷದಿಂದ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ಜಗನ್‌ಮೋಹನ್ ರೆಡ್ಡಿಯವರ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರ ಈ ನಿರ್ಧಾರವನ್ನು ವಿರೋಧಿಸಿ, ಪ್ರತಿಭಟನಾಕಾರರಿಗೆ ಬೆಂಬಲಿಸಿದ್ದಾರೆ. ಈ ಹೋರಾಟವು ಭಾನುವಾರಕ್ಕೆ (ಫೆ.13) ಒಂದು ವರ್ಷವನ್ನು ಪೂರೈಸಲಿದ್ದು, ಅದರ ಭಾಗವಾಗಿ ಶನಿವಾರ ಬೃಹತ್ ಪ್ರತಿಭಟನೆಗಳು ಮತ್ತು ಭಾನುವಾರ ಜೈಲ್ ಭರೋ ಹೋರಾಟವನ್ನು ನಡೆಸಲು ನಿರ್ಧರಿಸಲಾಗಿದೆ.

ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ, ವಿಶಾಖಪಟ್ಟಣಂ ಸಂಸದ ಎಂವಿವಿ ಸತ್ಯನಾರಾಯಣ ಅವರು ಸೋಮವಾರ ಲೋಕಸಭೆಯಲ್ಲಿ ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಖಾಸಗೀಕರಣದ ವಿಷಯವನ್ನು ಪ್ರಸ್ತಾಪಿಸಿದ್ದು, “ವೈಜಾಗ್‌ ಸ್ಟೀಲ್ ಪ್ಲಾಂಟ್ ತೆಲುಗು ಜನರ ಸ್ವಾಭಿಮಾನವಾಗಿದೆ. ವಿಶಾಖ ಉಕ್ಕು-ಆಂಧ್ರ ಹಕ್ಕು ಎಂಬ ಘೋಷಣೆಯೊಂದಿಗೆ ಆಂಧ್ರ ಜನರ ಬಹುಕಾಲದ ಕನಸು 1982ರಲ್ಲಿ ವಿಶಾಖ ಉಕ್ಕು ಉದ್ಯಮದ ಸ್ಥಾಪನೆಯಿಂದ ನನಸಾಗಿದೆ. ಆ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ಒಕ್ಕೂಟ ಸರ್ಕಾರ ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ಆದರೆ, ಆಂಧ್ರ ಜನರ ಪ್ರತಿಭಟನೆ ಮತ್ತು ಆಂಧ್ರ ಸರ್ಕಾರ ಹಾಗೂ ಸಂಸದರ ಒತ್ತಾಯದ ವಿಚಾರವಾಗಿ ಒಕ್ಕೂಟ ಸರ್ಕಾರ ಯಾವುದೇ ರೀತಿಯ ಸ್ಪಂದನೆಯನ್ನಾಗಿಲೀ, ಪ್ರತಿಕ್ರಿಯೆಯನ್ನಾಗಲೀ ನೀಡಿಲ್ಲ.

ಈ ಹಿನ್ನೆಲೆಯಲ್ಲಿ, ಎರಡು ದಿನಗಳ ತೀವ್ರ ಆಂದೋಲನ ನಡೆಸಲು ಆಂಧ್ರದ ಸಂಘಟನೆಗಳು ನಿರ್ಧರಿಸಿವೆ. ಈ ಆಂದೋಲನದಲ್ಲಿ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. ಒಕ್ಕೂಟ ಸರ್ಕಾರವು ವೈಜಾಗ್‌ ಸ್ಟೀಲ್‌ ಪ್ಲಾಂಟ್‌ ಅನ್ನು ಮಾರಾಟ ಮಾಡುವ ನಿರ್ಧಾರವನ್ನು ಹಿಂಪಡೆಯುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸಿಐಟಿಯು ರಾಜ್ಯ ಅಧ್ಯಕ್ಷ ಸಿ.ಎಚ್. ನರಸಿಂಗ ರಾವ್ ಹೇಳಿದ್ದಾರೆ.

“ಈ ಪ್ರಮುಖ ಉದ್ಯಮವನ್ನು ದಕ್ಷಿಣ ಕೊರಿಯಾದ ಪೋಸ್ಕೋ ಕಂಪನಿಗೆ ಮಾರಾಟ ಮಾಡಲು ಬಿಜೆಪಿ ಸರ್ಕಾರ ಪಿತೂರಿ ನಡೆಸುತ್ತಿದೆ. ಕೊರಿಯಾದ ಪ್ರಮುಖ ಖಾಸಗೀ ಕಂಪನಿಗಳು ರೋಬೋಟ್‌ಗಳನ್ನು ಬಳಸುತ್ತಿದ್ದಾರೆ. ಅವರು ಕಡಿಮೆ ಮಾನವಶಕ್ತಿಯನ್ನು ಬಳಸುತ್ತಿದ್ದಾರೆ” ಎಂದು ನರಸಿಂಗ ರಾವ್ ಆರೋಪಿಸಿದ್ದಾರೆ.

“ಖಾಸಗಿ ಕಂಪನಿಗಳಲ್ಲಿ ಯಾವುದೇ ಸಾಮಾಜಿಕ ನ್ಯಾಯ ಇರುವುದಿಲ್ಲ. ಇದರಿಂದ ಈ ಭಾಗದ ಅಭಿವೃದ್ಧಿ ಕುಂಠಿತವಾಗಲಿದೆ. ಭೂಮಿ ಕಳೆದುಕೊಂಡ ಜನರು ತುಂಬಾ ತೊಂದರೆ ಅನುಭವಿಸುತ್ತಾರೆ. ಇಲ್ಲಿನ ಜನರಿಗೆ ಖಾಸಗೀಕರಣದ ವಿರುದ್ಧ ಹೋರಾಟ ಮಾಡದೆ ಬೇರೆ ದಾರಿ ಇಲ್ಲ. ಕಾಯಂ ನೌಕರರೊಂದಿಗೆ ಅಧಿಕಾರಿಗಳ ಸಂಘಗಳು, ಗುತ್ತಿಗೆ ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿ ‘ವಿಶಾಖ ಉಕ್ಕು ಪರಿರಕ್ಷಣಾ ಹೋರಾಟ ಸಮಿತಿ’ ರಚಿಸಲಾಗಿದೆ. ಈ ಸಮಿತಿಯಲ್ಲಿ ಬಿಜೆಪಿಯ ಅಂಗಸಂಸ್ಥೆಯಾದ ಬಿಎಂಎಸ್ ಕೂಡ ಇದೆ. ವೈಜಾಗ್ ಸ್ಟೀಲ್ ಪ್ಲಾಂಟ್ ಅನ್ನು ಮಾರಾಟ ಮಾಡಲು ನಾವು ಬಿಡುವುದಿಲ್ಲ ಎಂಬುದು ನಮ್ಮ ಏಕೈಕ ಅಜೆಂಡಾವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಮತಾ ಬ್ಯಾನರ್ಜಿ-ಅಭಿಷೇಕ್ ಬ್ಯಾನರ್ಜಿ ನಡುವೆ ಬಿರುಕು : ಮಧ್ಯದಲ್ಲಿ ಸಿಕ್ಕಿಕೊಂಡ ಪ್ರಶಾಂತ್ ಕಿಶೋರ್! 

ವೈಜಾಗ್ ಸ್ಟೀಲ್ ಪ್ಲಾಂಟ್‌ನಲ್ಲಿ ಸರ್ಕಾರಿ ಷೇರುಗಳನ್ನು 100% ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರ ನಿರ್ಧರಿಸಿದ್ದು, ಅಂದಿನಿಂದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಸರ್ಕಾರ 2ನೇ ಬಾರಿಗೆ ಆಡಳಿತಕ್ಕೆ ಬಂದ ನಂತರ ಪ್ರಮುಖ ಖಾಸಗೀ ಕೈಗಾರಿಕೆಗಳಿಗೆ ಆದ್ಯತೆ ನೀಡಲು ಆಕ್ರಮಣಕಾರಿಯಾಗಿ ಮುಂದುವರಿಯುತ್ತಿದೆ. ಆದರೆ, ವೈಜಾಗ್ ಸ್ಟೀಲ್ ಪ್ಲಾಂಟ್‌ನ ಖಾಸಗೀಕರಣದ ವಿರುದ್ಧ ಬೃಹತ್‌ ಹೋರಾಟ ನಡೆಯುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಕಾರ್ಖಾನೆಯು ಆಂಧ್ರಪ್ರದೇಶದ ಕೈಗಾರಿಕಾ ಕಿರೀಟದಲ್ಲಿರುವ ರತ್ನವಾಗಿದೆ. 32 ಜನರ ಜೀವ ತ್ಯಾಗದಿಂದ ಇದನ್ನು ಸ್ಥಾಪಿಸಲಾಗಿದೆ. ಭಾರತದ ಸಮುದ್ರ ತೀರದಲ್ಲಿರುವ ಏಕೈಕ ಸ್ಟೀಲ್ ಪ್ಲಾಂಟ್ ಇದು. ರೈತರ ತ್ಯಾಗದಿಂದ 22,000 ಎಕರೆ ಭೂಮಿಯಲ್ಲಿ ಸ್ಥಾಪನೆಯಾಗಿದೆ. ಈ ಕಾರ್ಖಾನೆ ವರ್ಷಕ್ಕೆ ಉತ್ತಮ ಗುಣಮಟ್ಟದ 60 ಲಕ್ಷ ಟನ್ ಉಕ್ಕನ್ನು ಉತ್ಪಾದಿಸುತ್ತದೆ. ಕಳೆದ ಒಂಬತ್ತು ತಿಂಗಳ ಅವಧಿಯಲ್ಲಿ 20,000 ಕೋಟಿ ರೂ. ವಹಿವಾಟು ನಡೆಸಿ 700 ಕೋಟಿ ರೂ. ಲಾಭ ಗಳಿಸಿದೆ. ಇಲ್ಲಿ ಸುಮಾರು 32,000 ಮಂದಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ವೈಜಾಗ್ ಸ್ಟೀಲ್ ಪ್ಲಾಂಟ್‌ನ ಏಕೈಕ ಸಮಸ್ಯೆ ಎಂದರೆ ಅದು ಯಾವುದೇ ಕಬ್ಬಿಣದ ಗಣಿಗಳನ್ನು ಹೊಂದಿರದ ಕಾರಣ ಕಬ್ಬಿಣದ ಅದಿರಿನ ಮೇಲೆ ವರ್ಷಕ್ಕೆ ಸುಮಾರು 3,000 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವಾಗುತ್ತಿದೆ ಎಂದು ಹೇಳಿರುವ ಸಿಐಟಿಯು ನಾಯಕ, “ಒಕ್ಕೂಟ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸಾರ್ವಜನಿಕ ಉಕ್ಕಿನ ಕಾರ್ಖಾನೆಗಳಿಗೆ ಸ್ವಂತ ಗಣಿಗಳನ್ನು ನೀಡಿದೆ. ಅಲ್ಲದೆ, ಯಾವುದೇ ಉದ್ಯಮವನ್ನು ಹೊಂದಿರದ ಗಾಲಿ ಜನಾರ್ದನ ರೆಡ್ಡಿಗೆ ಮತ್ತು ಪೋಸ್ಕೋ ಕಂಪನಿಗೂ ಸಹ ಗಣಿಗಳನ್ನು ಮಂಜೂರು ಮಾಡಿದೆ. ಆದರೆ, ವೈಜಾಗ್ ಸ್ಟೀಲ್ ಪ್ಲಾಂಟ್‌ಗೆ ಮಾತ್ರ ಯಾವುದೇ ಗಣಿಗಳನ್ನು ನೀಡಲಿಲ್ಲ. ಏಕೆಂದರೆ, ಇದನ್ನು ಖಾಸಗಿ ಕಾರ್ಪೊರೇಟ್‌ಗಳಿಗೆ ಮಾರಾಟ ಮಾಡುವ ಹುನ್ನಾರವನ್ನು ಸರ್ಕಾರ ಹೊಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...