Homeಚಳವಳಿವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

ವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

- Advertisement -
- Advertisement -

ವಿಶಾಖಪಟ್ಟಣಂ ಉಕ್ಕು ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ಒಕ್ಕೂಟ ಸರ್ಕಾರದ ನಿರ್ಧಾರಗಳ ವಿರುದ್ಧ ಕಳೆದ ಒಂದು ವರ್ಷದಿಂದ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ಜಗನ್‌ಮೋಹನ್ ರೆಡ್ಡಿಯವರ ವೈಎಸ್‌ಆರ್ ಕಾಂಗ್ರೆಸ್ ಸರ್ಕಾರ ಈ ನಿರ್ಧಾರವನ್ನು ವಿರೋಧಿಸಿ, ಪ್ರತಿಭಟನಾಕಾರರಿಗೆ ಬೆಂಬಲಿಸಿದ್ದಾರೆ. ಈ ಹೋರಾಟವು ಭಾನುವಾರಕ್ಕೆ (ಫೆ.13) ಒಂದು ವರ್ಷವನ್ನು ಪೂರೈಸಲಿದ್ದು, ಅದರ ಭಾಗವಾಗಿ ಶನಿವಾರ ಬೃಹತ್ ಪ್ರತಿಭಟನೆಗಳು ಮತ್ತು ಭಾನುವಾರ ಜೈಲ್ ಭರೋ ಹೋರಾಟವನ್ನು ನಡೆಸಲು ನಿರ್ಧರಿಸಲಾಗಿದೆ.

ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ, ವಿಶಾಖಪಟ್ಟಣಂ ಸಂಸದ ಎಂವಿವಿ ಸತ್ಯನಾರಾಯಣ ಅವರು ಸೋಮವಾರ ಲೋಕಸಭೆಯಲ್ಲಿ ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಖಾಸಗೀಕರಣದ ವಿಷಯವನ್ನು ಪ್ರಸ್ತಾಪಿಸಿದ್ದು, “ವೈಜಾಗ್‌ ಸ್ಟೀಲ್ ಪ್ಲಾಂಟ್ ತೆಲುಗು ಜನರ ಸ್ವಾಭಿಮಾನವಾಗಿದೆ. ವಿಶಾಖ ಉಕ್ಕು-ಆಂಧ್ರ ಹಕ್ಕು ಎಂಬ ಘೋಷಣೆಯೊಂದಿಗೆ ಆಂಧ್ರ ಜನರ ಬಹುಕಾಲದ ಕನಸು 1982ರಲ್ಲಿ ವಿಶಾಖ ಉಕ್ಕು ಉದ್ಯಮದ ಸ್ಥಾಪನೆಯಿಂದ ನನಸಾಗಿದೆ. ಆ ಕಾರ್ಖಾನೆಯನ್ನು ಖಾಸಗೀಕರಣಗೊಳಿಸುವ ನಿರ್ಧಾರವನ್ನು ಒಕ್ಕೂಟ ಸರ್ಕಾರ ಹಿಂಪಡೆಯಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ಆದರೆ, ಆಂಧ್ರ ಜನರ ಪ್ರತಿಭಟನೆ ಮತ್ತು ಆಂಧ್ರ ಸರ್ಕಾರ ಹಾಗೂ ಸಂಸದರ ಒತ್ತಾಯದ ವಿಚಾರವಾಗಿ ಒಕ್ಕೂಟ ಸರ್ಕಾರ ಯಾವುದೇ ರೀತಿಯ ಸ್ಪಂದನೆಯನ್ನಾಗಿಲೀ, ಪ್ರತಿಕ್ರಿಯೆಯನ್ನಾಗಲೀ ನೀಡಿಲ್ಲ.

ಈ ಹಿನ್ನೆಲೆಯಲ್ಲಿ, ಎರಡು ದಿನಗಳ ತೀವ್ರ ಆಂದೋಲನ ನಡೆಸಲು ಆಂಧ್ರದ ಸಂಘಟನೆಗಳು ನಿರ್ಧರಿಸಿವೆ. ಈ ಆಂದೋಲನದಲ್ಲಿ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. ಒಕ್ಕೂಟ ಸರ್ಕಾರವು ವೈಜಾಗ್‌ ಸ್ಟೀಲ್‌ ಪ್ಲಾಂಟ್‌ ಅನ್ನು ಮಾರಾಟ ಮಾಡುವ ನಿರ್ಧಾರವನ್ನು ಹಿಂಪಡೆಯುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದು ಸಿಐಟಿಯು ರಾಜ್ಯ ಅಧ್ಯಕ್ಷ ಸಿ.ಎಚ್. ನರಸಿಂಗ ರಾವ್ ಹೇಳಿದ್ದಾರೆ.

“ಈ ಪ್ರಮುಖ ಉದ್ಯಮವನ್ನು ದಕ್ಷಿಣ ಕೊರಿಯಾದ ಪೋಸ್ಕೋ ಕಂಪನಿಗೆ ಮಾರಾಟ ಮಾಡಲು ಬಿಜೆಪಿ ಸರ್ಕಾರ ಪಿತೂರಿ ನಡೆಸುತ್ತಿದೆ. ಕೊರಿಯಾದ ಪ್ರಮುಖ ಖಾಸಗೀ ಕಂಪನಿಗಳು ರೋಬೋಟ್‌ಗಳನ್ನು ಬಳಸುತ್ತಿದ್ದಾರೆ. ಅವರು ಕಡಿಮೆ ಮಾನವಶಕ್ತಿಯನ್ನು ಬಳಸುತ್ತಿದ್ದಾರೆ” ಎಂದು ನರಸಿಂಗ ರಾವ್ ಆರೋಪಿಸಿದ್ದಾರೆ.

“ಖಾಸಗಿ ಕಂಪನಿಗಳಲ್ಲಿ ಯಾವುದೇ ಸಾಮಾಜಿಕ ನ್ಯಾಯ ಇರುವುದಿಲ್ಲ. ಇದರಿಂದ ಈ ಭಾಗದ ಅಭಿವೃದ್ಧಿ ಕುಂಠಿತವಾಗಲಿದೆ. ಭೂಮಿ ಕಳೆದುಕೊಂಡ ಜನರು ತುಂಬಾ ತೊಂದರೆ ಅನುಭವಿಸುತ್ತಾರೆ. ಇಲ್ಲಿನ ಜನರಿಗೆ ಖಾಸಗೀಕರಣದ ವಿರುದ್ಧ ಹೋರಾಟ ಮಾಡದೆ ಬೇರೆ ದಾರಿ ಇಲ್ಲ. ಕಾಯಂ ನೌಕರರೊಂದಿಗೆ ಅಧಿಕಾರಿಗಳ ಸಂಘಗಳು, ಗುತ್ತಿಗೆ ಕಾರ್ಮಿಕ ಸಂಘಟನೆಗಳನ್ನು ಒಗ್ಗೂಡಿಸಿ ‘ವಿಶಾಖ ಉಕ್ಕು ಪರಿರಕ್ಷಣಾ ಹೋರಾಟ ಸಮಿತಿ’ ರಚಿಸಲಾಗಿದೆ. ಈ ಸಮಿತಿಯಲ್ಲಿ ಬಿಜೆಪಿಯ ಅಂಗಸಂಸ್ಥೆಯಾದ ಬಿಎಂಎಸ್ ಕೂಡ ಇದೆ. ವೈಜಾಗ್ ಸ್ಟೀಲ್ ಪ್ಲಾಂಟ್ ಅನ್ನು ಮಾರಾಟ ಮಾಡಲು ನಾವು ಬಿಡುವುದಿಲ್ಲ ಎಂಬುದು ನಮ್ಮ ಏಕೈಕ ಅಜೆಂಡಾವಾಗಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ಮಮತಾ ಬ್ಯಾನರ್ಜಿ-ಅಭಿಷೇಕ್ ಬ್ಯಾನರ್ಜಿ ನಡುವೆ ಬಿರುಕು : ಮಧ್ಯದಲ್ಲಿ ಸಿಕ್ಕಿಕೊಂಡ ಪ್ರಶಾಂತ್ ಕಿಶೋರ್! 

ವೈಜಾಗ್ ಸ್ಟೀಲ್ ಪ್ಲಾಂಟ್‌ನಲ್ಲಿ ಸರ್ಕಾರಿ ಷೇರುಗಳನ್ನು 100% ಖಾಸಗೀಕರಣಗೊಳಿಸಲು ಬಿಜೆಪಿ ಸರ್ಕಾರ ನಿರ್ಧರಿಸಿದ್ದು, ಅಂದಿನಿಂದ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಸರ್ಕಾರ 2ನೇ ಬಾರಿಗೆ ಆಡಳಿತಕ್ಕೆ ಬಂದ ನಂತರ ಪ್ರಮುಖ ಖಾಸಗೀ ಕೈಗಾರಿಕೆಗಳಿಗೆ ಆದ್ಯತೆ ನೀಡಲು ಆಕ್ರಮಣಕಾರಿಯಾಗಿ ಮುಂದುವರಿಯುತ್ತಿದೆ. ಆದರೆ, ವೈಜಾಗ್ ಸ್ಟೀಲ್ ಪ್ಲಾಂಟ್‌ನ ಖಾಸಗೀಕರಣದ ವಿರುದ್ಧ ಬೃಹತ್‌ ಹೋರಾಟ ನಡೆಯುತ್ತಿದೆ” ಎಂದು ಅವರು ತಿಳಿಸಿದ್ದಾರೆ.

ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ಕಾರ್ಖಾನೆಯು ಆಂಧ್ರಪ್ರದೇಶದ ಕೈಗಾರಿಕಾ ಕಿರೀಟದಲ್ಲಿರುವ ರತ್ನವಾಗಿದೆ. 32 ಜನರ ಜೀವ ತ್ಯಾಗದಿಂದ ಇದನ್ನು ಸ್ಥಾಪಿಸಲಾಗಿದೆ. ಭಾರತದ ಸಮುದ್ರ ತೀರದಲ್ಲಿರುವ ಏಕೈಕ ಸ್ಟೀಲ್ ಪ್ಲಾಂಟ್ ಇದು. ರೈತರ ತ್ಯಾಗದಿಂದ 22,000 ಎಕರೆ ಭೂಮಿಯಲ್ಲಿ ಸ್ಥಾಪನೆಯಾಗಿದೆ. ಈ ಕಾರ್ಖಾನೆ ವರ್ಷಕ್ಕೆ ಉತ್ತಮ ಗುಣಮಟ್ಟದ 60 ಲಕ್ಷ ಟನ್ ಉಕ್ಕನ್ನು ಉತ್ಪಾದಿಸುತ್ತದೆ. ಕಳೆದ ಒಂಬತ್ತು ತಿಂಗಳ ಅವಧಿಯಲ್ಲಿ 20,000 ಕೋಟಿ ರೂ. ವಹಿವಾಟು ನಡೆಸಿ 700 ಕೋಟಿ ರೂ. ಲಾಭ ಗಳಿಸಿದೆ. ಇಲ್ಲಿ ಸುಮಾರು 32,000 ಮಂದಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ವಿವರಿಸಿದ್ದಾರೆ.

ವೈಜಾಗ್ ಸ್ಟೀಲ್ ಪ್ಲಾಂಟ್‌ನ ಏಕೈಕ ಸಮಸ್ಯೆ ಎಂದರೆ ಅದು ಯಾವುದೇ ಕಬ್ಬಿಣದ ಗಣಿಗಳನ್ನು ಹೊಂದಿರದ ಕಾರಣ ಕಬ್ಬಿಣದ ಅದಿರಿನ ಮೇಲೆ ವರ್ಷಕ್ಕೆ ಸುಮಾರು 3,000 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವಾಗುತ್ತಿದೆ ಎಂದು ಹೇಳಿರುವ ಸಿಐಟಿಯು ನಾಯಕ, “ಒಕ್ಕೂಟ ಸರ್ಕಾರವು ಎಲ್ಲಾ ಖಾಸಗಿ ಮತ್ತು ಸಾರ್ವಜನಿಕ ಉಕ್ಕಿನ ಕಾರ್ಖಾನೆಗಳಿಗೆ ಸ್ವಂತ ಗಣಿಗಳನ್ನು ನೀಡಿದೆ. ಅಲ್ಲದೆ, ಯಾವುದೇ ಉದ್ಯಮವನ್ನು ಹೊಂದಿರದ ಗಾಲಿ ಜನಾರ್ದನ ರೆಡ್ಡಿಗೆ ಮತ್ತು ಪೋಸ್ಕೋ ಕಂಪನಿಗೂ ಸಹ ಗಣಿಗಳನ್ನು ಮಂಜೂರು ಮಾಡಿದೆ. ಆದರೆ, ವೈಜಾಗ್ ಸ್ಟೀಲ್ ಪ್ಲಾಂಟ್‌ಗೆ ಮಾತ್ರ ಯಾವುದೇ ಗಣಿಗಳನ್ನು ನೀಡಲಿಲ್ಲ. ಏಕೆಂದರೆ, ಇದನ್ನು ಖಾಸಗಿ ಕಾರ್ಪೊರೇಟ್‌ಗಳಿಗೆ ಮಾರಾಟ ಮಾಡುವ ಹುನ್ನಾರವನ್ನು ಸರ್ಕಾರ ಹೊಂದಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್‌ಗೆ ಬೆಂಬಲ; ರಾಜ್ಯ ಸರ್ಕಾರವನ್ನು ‘ಸರ್ವಾಧಿಕಾರಿ’ ಎಂದ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...