Homeಕರ್ನಾಟಕತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ಇವತ್ತು ಮನುಷ್ಯರು ಧರ್ಮ ಹಾಗೂ ದೇವರಿಗೆ ತಮ್ಮ ರೋಗವನ್ನು ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮ ಜಾಡ್ಯ ಎನ್ನುತ್ತಾರೆ: ದೇಮ

- Advertisement -
- Advertisement -

“ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನೂ ತೊಂದರೆ? ಯೂನಿಫಾರ್ಮ್ ಜೊತೆಯಲ್ಲಿ ಹಿಜಾಬ್‌ ಧರಿಸಿದರೆ ತಪ್ಪೇನು? ಮುಖವನ್ನೇನು ಮುಚ್ಚುವುದಿಲ್ಲವಲ್ಲ?” ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಪ್ರಶ್ನಿಸಿದ್ದಾರೆ.

ಟಿ.ವಿ.9 ವಾಹಿನಿಯೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿನ ಬೆಳವಣಿಗೆಗಳಿಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಹಿಜಾಬ್‌ ವಿವಾದದ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳಿವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಯೂನಿಫಾರ್ಮ್‌ ಜೊತೆ ಹಿಜಾಬ್‌ ಹಾಕಿಕೊಂಡರೆ ಯೂನಿಫಾರ್ಮ್‌ಗೆ ಯಾವುದೇ ತೊಂದರೆ ಆಗಲ್ಲ. ಯೂನಿಫರ್ಮ್‌ನೂ ಹಾಕಿಕೊಳ್ಳಿ, ಹಿಜಾಬ್‌ನೂ ಹಾಕಿಕೊಳ್ಳಲಿ. ಹಿಜಾಬ್- ಹೆಚ್ಚಿಗೆ ಅಲಂಕಾರವೇ ಆಗಿಬಿಡಬಹುದು. ಇದನ್ನು ವಿವಾದ ಮಾಡಿಕೊಳ್ಳುವುದು ಬೇಡ” ಎಂದು ಆಶಿಸಿದ್ದಾರೆ.

ಇಲ್ಲಿ ಏನಾಗಿದೆ ಎಂದರೆ- ಅಹಂಕಾರದ ಸಮಸ್ಯೆ ಬಂದಿದೆ. ದ್ವೇಷದ ಸಮಸ್ಯೆ ಇದೆ. ಪಟ್ಟಭದ್ರ ಹಿತಾಸಕ್ತಿಗಳ ರಾಜಕಾರಣ ಇದೆ. ಆದರೆ ಹಿಜಾಬ್ ಹಾಕಿಕೊಂಡರೆ ಏನು ತಪ್ಪಾಗುತ್ತದೆ? ಬೇರೆ ಬೇರೆ ಹುಡುಗಿಯರು ವೇಲ್‌ ಹಾಕಿಕೊಳ್ಳುವಂತೆ ತಲೆಯ ಮೇಲೆ ಹಾಕಿಕೊಳ್ಳುತ್ತಾರಪ್ಪ. ಯೂನಿಫಾರ್ಮ್‌ ಜೊತೆ ಹಿಜಾಬ್‌ ಬರಲೆಂದು ಆಪೇಕ್ಷೆ ಪಡುತ್ತೇನೆ ಎಂದು ತಿಳಿಸಿದ್ದಾರೆ.

ನ್ಯಾಯಾಲಯದ ಮುಂದೆ ಈ ಪ್ರಕರಣವಿದೆ. ಇದಕ್ಕೆ ಒಂದು ಪರಿಹಾರ ಕೊಡಬೇಕು. ಅಲ್ಲಿಯವರೆಗೂ ತೂಗುಗತ್ತಿ ಆಡುತ್ತಲೇ ಇರುತ್ತದೆ ಎಂದು ತಿಳಿಸಿದ್ದಾರೆ.

ಇವತ್ತು ಮನುಷ್ಯರು ಧರ್ಮ ಹಾಗೂ ದೇವರಿಗೆ ತಮ್ಮ ರೋಗವನ್ನು ಅಂಟಿಸುತ್ತಿದ್ದಾರೆ. ಇದಕ್ಕೆ ಧರ್ಮ ಜಾಡ್ಯ ಎನ್ನುತ್ತಾರೆ. ವಿದ್ಯಾರ್ಥಿಗಳು ಇನ್ನೂ ಎಳೆಯವರು, ಯಾವುದೇ ರಾಗ ದ್ವೇಷ ಇಲ್ಲದೆ ಇರುವವರು. ಈ ಧರ್ಮ ಜಾಡ್ಯದಿಂದ ಬಿಡುಗಡೆ ಪಡೆಯಲಿ ಎಂದು ಆಶಿಸಿದ್ದಾರೆ.

ಇದನ್ನೂ ಓದಿರಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

“ತರಗತಿ ಒಳಗಡೆ ಹಿಜಾಬ್‌ ಇರಬಾರದೆಂಬುದು ಸದ್ಯದ ಆಕ್ಷೇಪ” ಎಂದು ಮಾಧ್ಯಮ ಪ್ರತಿನಿಧಿ ಕೇಳಿದಾಗ, “ಕೂದಲು ಹಾರಾಡಬಾರದು ಅಂತ ತಾನೇ ಹಿಜಾಬ್ ಹಾಕೋದು? ಬಿಟ್ಟು ಬಿಡಿ, ಇದನ್ನೇಕೆ ದೊಡ್ಡದು ಮಾಡ್ತಾ ಇದ್ದೀರಿ. ಅದು ತನ್ನಷ್ಟಕ್ಕೆ ತಾನೇ ಕಡಿಮೆಯಾಗುತ್ತಾ ಹೋಗುತ್ತದೆ. ನೀವು ನಿಷೇಧ ಮಾಡಿದರೆ, ಪ್ರತಿಭಟನಾತ್ಮಕವಾಗಿ ಬೇರೆಯವರೂ ಹಿಜಾಬ್ ಹಾಕುತ್ತಾರೆ. ಅದು ಹೆಚ್ಚಿಗೆ ಆಗುತ್ತಾ ಹೋಗುತ್ತದೆ” ಎಂದು ಎಚ್ಚರಿಸಿದ್ದಾರೆ.

ವಿದ್ಯಾರ್ಥಿಗಳ ಮುಂದೆ ದೇಶದ ಸಮಸ್ಯೆಗಳನ್ನು ಬಿಚ್ಚಿಟ್ಟಿರುವ ಅವರು, “ಗಮನಿಸಿ, ಮಧ್ಯಮ ವರ್ಗ ಬಡತನದ ಕಡೆಗೆ ಹೋಗುತ್ತಿದೆ. ಬಡವರು ಹಸಿವಿನ ಕಡೆಗೆ ಹೋಗುತ್ತಿದ್ದಾರೆ. ಈ ಸಮಸ್ಯೆಯನ್ನು ವಿದ್ಯಾರ್ಥಿಗಳಲ್ಲವೇ ಕೈಗೆ ತೆಗೆದುಕೊಳ್ಳಬೇಕಾದದ್ದು?” ಎಂದು ಕೇಳಿದ್ದಾರೆ.

ಮತ್ತೊಂದು ಕಡೆ ಬಂಡವಾಳಶಾಹಿಗಳ ಕೈಗೆ ಸಂಪತ್ತು ಹೋಗುತ್ತಿದೆ. ದೇಶದ ಸಂಪತ್ತಿನ ಅರ್ಧ ಭಾಗ ಹತ್ತು ಜನರ ಕೈಲಿ ಇದೆ. ಅಂಥವರ ಸಂಪತ್ತು ಕೊರೊನಾ ಇದ್ದಾಗ, ಜಿಎಸ್‌ಟಿ ಇದ್ದಾಗ, ನೋಟ್ ಬ್ಯಾನ್‌ ಆಗಿ ಜನರು ತತ್ತರಿಸುವಾಗ ಹೆಚ್ಚಾಯಿತ್ತಲ್ಲಪ್ಪ? ಇದಕ್ಕೆ ಕಾರಣವೇನು? ಲೂಟಿ ಎಲ್ಲಾಗುತ್ತಿದೆ? ಇದನ್ನು ಎಚ್ಚೆತ್ತ ವಿದ್ಯಾರ್ಥಿಗಳು ಸಮಾಜಕ್ಕೆ ಹೇಳಬೇಕು. ನಾವು ಅವರಿಗೆ ಹೇಳೋದಲ್ಲ, ಅವರೇ ಸಮಾಜಕ್ಕೆ ಹೇಳಬೇಕು. ಈ ಜವಾಬ್ದಾರಿ ಯುವಜನಾಂಗದ ಮೇಲಿದೆ ಎಂದು ಕಿವಿಮಾತು ಹೇಳಿದ್ದಾರೆ.

ನೋಟ್ ಬ್ಯಾನ್‌ ಅವಾಂತರ, ಜಿಎಸ್‌ಟಿ ಅವಿವೇಕತನ- ದೇಶವನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿವೆ. ಆರ್ಥಿಕ ತಜ್ಞರು, ತಿಳಿದವರು ಹೇಳುತ್ತಿರುವುದು ಏನಂದರೆ ಈ ಬಂಡವಾಳಶಾಹಿಗಳ ಸಂಪತ್ತಿನ ಮೇಲೆ ಶೇ. 2ರಷ್ಟು ತೆರಿಗೆ ವಿಧಿಸಿದರೆ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಬಹುದು. ಪ್ರಾಥಮಿಕ ಆರೋಗ್ಯವನ್ನು ಅಭಿವೃದ್ಧಿಪಡಿಸಬಹುದು. ಶೇ. 2ಕ್ಕಿಂತ ಹೆಚ್ಚಿನ ತೆರಿಗೆಯನ್ನು ಕಾರ್ಪೋರೇಟ್‌ಗಳ ಮೇಲೆ ಕೇಂದ್ರ ಸರ್ಕಾರ ಹಾಕಲಿಲ್ಲ. ಬದಲಾಗಿ ಅವರ ಟ್ಯಾಕ್ಸ್‌ ಕಮ್ಮಿ ಮಾಡಿತು. ಇಲ್ಲದವರಿಗಲ್ಲ, ಉಳ್ಳವರಿಗೆ ಟ್ಯಾಕ್ಸ್‌ ಕಡಿಮೆ ಮಾಡಿತು. ಉಳ್ಳವರ ಸಾಲವನ್ನು ಮನ್ನಾ ಮಾಡುತ್ತೆ. ರೈತರು ಕೇಳಿದರೂ ಮಾಡಲ್ಲ. ಉಳ್ಳವರಿಗೆ ಭೂಮಿ ರಿಯಾಯಿತಿ, ನೀರಿನ ರಿಯಾಯಿತಿ, ವಿದ್ಯುತ್ ರಿಯಾರಿತಿ ನೀಡಲಾಗುತ್ತಿದೆ. ಇಲ್ಲದವರಿಗೆ ಯಾಕಿಲ್ಲ ಎಂದು ಸರ್ಕಾರವನ್ನು ಪ್ರಶ್ನಿಸಬೇಕಾದದ್ದು ವಿದ್ಯಾರ್ಥಿಗಳ ಜವಾಬ್ದಾರಿ ಎಂದು ತಿಳಿಸಿದ್ದಾರೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್‌: ರಾಹುಲ್‌ ಗಾಂಧಿ ಜೊತೆಯಲ್ಲಿ ದಿಟ್ಟ ಹುಡುಗಿ ಮುಸ್ಕಾನ್‌ ಫೋಟೋ ತೆಗೆದುಕೊಂಡಿದ್ದರೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...