Homeಮುಖಪುಟಎರಡು ಲಕ್ಷ ಕೆ.ಜಿ. ಗಾಂಜಾ ಸುಟ್ಟು ಹಾಕಿದ ಆಂಧ್ರ ಸರ್ಕಾರ; ದಟ್ಟ ಹೊಗೆಯ ಪರಿಸ್ಥಿತಿ ಹೇಗಿತ್ತು?

ಎರಡು ಲಕ್ಷ ಕೆ.ಜಿ. ಗಾಂಜಾ ಸುಟ್ಟು ಹಾಕಿದ ಆಂಧ್ರ ಸರ್ಕಾರ; ದಟ್ಟ ಹೊಗೆಯ ಪರಿಸ್ಥಿತಿ ಹೇಗಿತ್ತು?

ಐದು ನೂರು ಕೋಟಿ ರೂ. ಮೌಲ್ಯದ ಗಾಂಜಾವನ್ನು ಆಂಧ್ರ ಪ್ರದೇಶ ಸರ್ಕಾರ ಸುಟ್ಟು ಹಾಕುವ ಮೂಲಕ ಗಮನ ಸೆಳೆದಿದೆ.

- Advertisement -
- Advertisement -

ಆಂಧ್ರಪ್ರದೇಶದ ಕೋಡೂರು ಗ್ರಾಮದ ತೆರೆದ ಮೈದಾನದಲ್ಲಿ ಎರಡು ಲಕ್ಷ ಕೆ.ಜಿ. ಗಾಂಜಾವನ್ನು ಸುಟ್ಟು ಹಾಕುವ ಮೂಲಕ ಆಂಧ್ರ ಪ್ರದೇಶ ಸರ್ಕಾರ ಗಮನ ಸೆಳೆದಿದೆ.

ರಾಜ್ಯದಲ್ಲಿ ಡ್ರಗ್ಸ್ ಹಾವಳಿಯನ್ನು ನಿರ್ಮೂಲನೆ ಮಾಡುವುದಕ್ಕೆ ಸರ್ಕಾರ ಮುಂದಾಗಿದ್ದು ‘ಆಪರೇಷನ್ ಪರಿವರ್ತನಾ’ದ ಭಾಗವಾಗಿ ಎರಡು ಲಕ್ಷ ಕೆ.ಜಿ. ಗಾಂಜಾವನ್ನು ಸುಡಲಾಗಿದೆ. ನಾಶಪಡಿಸಿದ ನಿಷೇಧಿತ ವಸ್ತುವಿನ ಮೌಲ್ಯ ಸುಮಾರು 500 ಕೋಟಿ ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ. ಇಷ್ಟು ದೊಡ್ಡ ಪ್ರಮಾಣದ ಡ್ರಗ್ಸ್ ನಾಶಪಡಿಸಿರುವುದು ದೇಶದಲ್ಲೇ ಇದೇ ಮೊದಲು ಎಂದು ಪೊಲೀಸರು ಹೇಳಿದ್ದಾರೆ.

ವಿಶಾಖಪಟ್ಟಣದ ಅನಕಪಲ್ಲಿ ಮಂಡಲದಲ್ಲಿರುವ ಕೋಡೂರಿನ ಮೈದಾನದಲ್ಲಿ ಬೃಹತ್  ಮಟ್ಟದ ರಾಶಿಗಳನ್ನು ನಿರ್ಮಿಸಿ ಬೆಂಕಿ ಹಂಚಲಾಯಿತು. ಈ ಘಟನೆಯನ್ನು ಹಲವರು ಕುತೂಹಲ ಹಾಗೂ ಹಲವು ನಿರೀಕ್ಷೆಯಿಂದ ವೀಕ್ಷಿಸಿದರು.

ಸ್ಥಳದಲ್ಲಿದ್ದ ಪೋಲಿಸರು, ಪತ್ರಕರ್ತರು ಹಾಗೂ ಇತರರಿಗೆ ಏನಾದರೂ ಸಮಸ್ಯೆಯಾಗಬಹುದೇ ಎಂದು ಕುತೂಹಲಭರಿತರಾಗಿದ್ದರು. ಬೃಹತ್ ಹೊಗೆಯು ಅನೇಕರಿಗೆ ತಲೆನೋವನ್ನು ತಂದಿತು. ಆದರೆ ಅಂತಹ ಪರಿಣಾಮಗಳೇನೂ ಆಗಿಲ್ಲ ಎಂದು ‘ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

ಗಾಂಜಾ ಸುಟ್ಟಿದ್ದರ ಪರಿಣಾಮಗಳು ನಮಗೆ ಕಂಡುಬರಲಿಲ್ಲ. ಆದರೆ ಕೆಲವರಿಗೆ ಸ್ವಲ್ಪ ತಲೆ ನೋವು ಕಾಣಿಸಿಕೊಂಡಿದ್ದು, ಇದಕ್ಕೆ ಉರಿಯುತ್ತಿದ್ದ ಬೆಂಕಿ ಮತ್ತು ದಟ್ಟ ಹೊಗೆ ಕಾರಣ ಎನ್ನಬಹುದು ಎಂದು ಘಟನೆಯನ್ನು ವರದಿ ಮಾಡಿದ ವರದಿಗಾರರು ತಿಳಿಸಿದ್ದಾರೆ. ಗಾಂಜಾ ಹೊಗೆಯ ಪರಿಣಾಮವನ್ನು ಕಡಿಮೆ ಮಾಡಲು ಸಕ್ಕರೆ ಮತ್ತು ಕರ್ಪೂರವನ್ನು ಬಳಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

4 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಜನವಾಸವಿಲ್ಲದ ಕಾರಣ ಪೊಲೀಸರು ಕೋಡೂರ್ ಅನ್ನು ಆಯ್ಕೆ ಮಾಡಿದರು. ಸುಟ್ಟಾಗ ಬರುವ ಹೊಗೆಯಿಂದಾಗಿ ತಲೆನೋವು ಅಥವಾ ಮಾದಕತೆ ಉಂಟಾಗಬಹುದು ಎಂಬ ಕಾರಣದಿಂದ ಸುತ್ತಮುತ್ತಲಿನ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡಿ ಮನೆಯೊಳಗೆಯೇ ಇರುವಂತೆ ಸೂಚಿಸಲಾಗಿತ್ತು.

ಆಪರೇಷನ್ ಪರಿವರ್ತನಾ ಕಾರ್ಯಾಚರಣೆಯನ್ನು ನವೆಂಬರ್ 1, 2021ರಂದು ಪ್ರಾರಂಭಿಸಲಾಯಿತು. ಈ ಕಾರ್ಯಾಚರಣೆಯ ಭಾಗವಾಗಿ ಇದುವರೆಗೆ, 47,986.934 ಕೆಜಿ ಗಾಂಜಾ ಮತ್ತು 46.41 ಲೀಟರ್ ಹಶಿಶ್ ಎಣ್ಣೆಯನ್ನು 314 ವಾಹನಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ. 577 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 1500 ಜನರನ್ನು ಬಂಧಿಸಲಾಗಿದೆ. 1985ರ ನಾರ್ಕೋಟಿಕ್ಸ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ಅಡಿಯಲ್ಲಿ ಗಾಂಜಾವನ್ನು ನಿಷೇಧಿಸಲಾಗಿದೆ. ಈ ಕಾಯಿದೆಯು ಗಾಂಜಾ ಮಾರಾಟ ಮತ್ತು ಖರೀದಿಯನ್ನು ನಿಷೇಧಿಸುತ್ತದೆ. 406 ತಂಡಗಳು ಆಪರೇಷನ್ ಪರಿವರ್ತನಾ ಭಾಗವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

PC: News Minute

ಪೊಲೀಸರ ಪ್ರಕಾರ, ಒಡಿಶಾದ ಗಡಿಭಾಗದ ಜಿಲ್ಲೆಗಳಾದ ಶ್ರೀಕಾಕುಳಂ, ವಿಜಯನಗರ, ವಿಶಾಖಪಟ್ಟಣ ಮತ್ತು ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಗಾಂಜಾ ಬೆಳೆಯಲಾಗುತ್ತಿದೆ. ಒಡಿಶಾದ 23 ಜಿಲ್ಲೆಗಳು ಮತ್ತು ವಿಶಾಖಪಟ್ಟಣಂನ 11 ಮಂಡಲಗಳಲ್ಲಿ ನಿಷೇಧಿತ ಬೆಳೆ ಬೆಳೆಯುತ್ತಿರುವುದನ್ನು ಉಪಗ್ರಹ ಚಿತ್ರಗಳನ್ನು ಬಳಸಿ ಪೊಲೀಸರು ಪತ್ತೆ ಮಾಡಿದ್ದಾರೆ. ಆಪರೇಷನ್‌ ಪರಿವರ್ತನೆಯ ಭಾಗವಾಗಿ ಅಧಿಕಾರಿಗಳು 7,552 ಎಕರೆ ಗಾಂಜಾವನ್ನು ನಾಶಪಡಿಸಿದ್ದಾರೆ. ಇದರಲ್ಲಿ 400 ಎಕರೆ ಬೆಳೆಯನ್ನು ರೈತರೇ ನಾಶಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚಾಗಿ ಬುಡಕಟ್ಟು ಸಮುದಾಯಗಳು ಗಾಂಜಾವನ್ನು ಬೆಳೆಸುತ್ತಿರುವುದರಿಂದ, ಪೊಲೀಸರು ಸಾರ್ವಜನಿಕ ಜಾಗೃತಿ ಅಭಿಯಾನವನ್ನೂ ಮಾಡುತ್ತಿದ್ದಾರೆ. ಕಾರ್ಯಕ್ರಮದ ಆರಂಭದಿಂದಲೂ, 1,963 ಜಾಗೃತಿ ಅಭಿಯಾನಗಳನ್ನು ನಡೆಸಲಾಗಿದ್ದು, ಇದರಲ್ಲಿ 70,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ಗಾಂಜಾ ಹಾವಳಿ ತಡೆಯಲು ಪೊಲೀಸರು 120 ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿದ್ದಾರೆ.

ತೆಲಂಗಾಣ ಮತ್ತು ಕರ್ನಾಟಕದಂತಹ ನೆರೆಯ ರಾಜ್ಯಗಳು ಗಾಂಜಾವನ್ನು ನಿಯಂತ್ರಿಸದಿದ್ದಕ್ಕಾಗಿ ಅವರತ್ತ ಬೆರಳು ತೋರಿಸಿದ ನಂತರ ಆಂಧ್ರಪ್ರದೇಶವು ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ತೆಲಂಗಾಣ ಪೊಲೀಸರು ಡ್ರಗ್ಸ್ ವಿರುದ್ಧದ ಅಭಿಯಾನದ ಭಾಗವಾಗಿ ತಮ್ಮ ವ್ಯಾಪ್ತಿಯಲ್ಲಿ ಕೆಲವರನ್ನು ಬಂಧಿಸಿ ಆಂಧ್ರಪ್ರದೇಶ ಪೊಲೀಸರಿಗೆ ಮುಜುಗರ ಉಂಟು ಮಾಡಿದ್ದರು. ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ರಾಜ್ಯವು ಡ್ರಗ್ ಹಬ್ ಆಗಿ ಬದಲಾಗುತ್ತಿದೆ ಎಂದು ರಾಜ್ಯದ ವಿರೋಧ ಪಕ್ಷದ ನಾಯಕ ಎನ್ ಚಂದ್ರಬಾಬು ನಾಯ್ಡು ಆರೋಪಿಸಿದ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಅದರ ಭಾಗಿ ಎರಡು ಲಕ್ಷ ಕೆ.ಜಿ. ಗಾಂಜಾವನ್ನು ಸುಡಲಾಗಿದೆ.


ಇದನ್ನೂ ಓದಿರಿ: ವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...