Homeಮುಖಪುಟಎರಡು ಲಕ್ಷ ಕೆ.ಜಿ. ಗಾಂಜಾ ಸುಟ್ಟು ಹಾಕಿದ ಆಂಧ್ರ ಸರ್ಕಾರ; ದಟ್ಟ ಹೊಗೆಯ ಪರಿಸ್ಥಿತಿ ಹೇಗಿತ್ತು?

ಎರಡು ಲಕ್ಷ ಕೆ.ಜಿ. ಗಾಂಜಾ ಸುಟ್ಟು ಹಾಕಿದ ಆಂಧ್ರ ಸರ್ಕಾರ; ದಟ್ಟ ಹೊಗೆಯ ಪರಿಸ್ಥಿತಿ ಹೇಗಿತ್ತು?

ಐದು ನೂರು ಕೋಟಿ ರೂ. ಮೌಲ್ಯದ ಗಾಂಜಾವನ್ನು ಆಂಧ್ರ ಪ್ರದೇಶ ಸರ್ಕಾರ ಸುಟ್ಟು ಹಾಕುವ ಮೂಲಕ ಗಮನ ಸೆಳೆದಿದೆ.

- Advertisement -
- Advertisement -

ಆಂಧ್ರಪ್ರದೇಶದ ಕೋಡೂರು ಗ್ರಾಮದ ತೆರೆದ ಮೈದಾನದಲ್ಲಿ ಎರಡು ಲಕ್ಷ ಕೆ.ಜಿ. ಗಾಂಜಾವನ್ನು ಸುಟ್ಟು ಹಾಕುವ ಮೂಲಕ ಆಂಧ್ರ ಪ್ರದೇಶ ಸರ್ಕಾರ ಗಮನ ಸೆಳೆದಿದೆ.

ರಾಜ್ಯದಲ್ಲಿ ಡ್ರಗ್ಸ್ ಹಾವಳಿಯನ್ನು ನಿರ್ಮೂಲನೆ ಮಾಡುವುದಕ್ಕೆ ಸರ್ಕಾರ ಮುಂದಾಗಿದ್ದು ‘ಆಪರೇಷನ್ ಪರಿವರ್ತನಾ’ದ ಭಾಗವಾಗಿ ಎರಡು ಲಕ್ಷ ಕೆ.ಜಿ. ಗಾಂಜಾವನ್ನು ಸುಡಲಾಗಿದೆ. ನಾಶಪಡಿಸಿದ ನಿಷೇಧಿತ ವಸ್ತುವಿನ ಮೌಲ್ಯ ಸುಮಾರು 500 ಕೋಟಿ ರೂಪಾಯಿ ಎಂದು ಪೊಲೀಸರು ತಿಳಿಸಿದ್ದಾರೆ. ಇಷ್ಟು ದೊಡ್ಡ ಪ್ರಮಾಣದ ಡ್ರಗ್ಸ್ ನಾಶಪಡಿಸಿರುವುದು ದೇಶದಲ್ಲೇ ಇದೇ ಮೊದಲು ಎಂದು ಪೊಲೀಸರು ಹೇಳಿದ್ದಾರೆ.

ವಿಶಾಖಪಟ್ಟಣದ ಅನಕಪಲ್ಲಿ ಮಂಡಲದಲ್ಲಿರುವ ಕೋಡೂರಿನ ಮೈದಾನದಲ್ಲಿ ಬೃಹತ್  ಮಟ್ಟದ ರಾಶಿಗಳನ್ನು ನಿರ್ಮಿಸಿ ಬೆಂಕಿ ಹಂಚಲಾಯಿತು. ಈ ಘಟನೆಯನ್ನು ಹಲವರು ಕುತೂಹಲ ಹಾಗೂ ಹಲವು ನಿರೀಕ್ಷೆಯಿಂದ ವೀಕ್ಷಿಸಿದರು.

ಸ್ಥಳದಲ್ಲಿದ್ದ ಪೋಲಿಸರು, ಪತ್ರಕರ್ತರು ಹಾಗೂ ಇತರರಿಗೆ ಏನಾದರೂ ಸಮಸ್ಯೆಯಾಗಬಹುದೇ ಎಂದು ಕುತೂಹಲಭರಿತರಾಗಿದ್ದರು. ಬೃಹತ್ ಹೊಗೆಯು ಅನೇಕರಿಗೆ ತಲೆನೋವನ್ನು ತಂದಿತು. ಆದರೆ ಅಂತಹ ಪರಿಣಾಮಗಳೇನೂ ಆಗಿಲ್ಲ ಎಂದು ‘ನ್ಯೂಸ್‌ ಮಿನಿಟ್’ ವರದಿ ಮಾಡಿದೆ.

ಗಾಂಜಾ ಸುಟ್ಟಿದ್ದರ ಪರಿಣಾಮಗಳು ನಮಗೆ ಕಂಡುಬರಲಿಲ್ಲ. ಆದರೆ ಕೆಲವರಿಗೆ ಸ್ವಲ್ಪ ತಲೆ ನೋವು ಕಾಣಿಸಿಕೊಂಡಿದ್ದು, ಇದಕ್ಕೆ ಉರಿಯುತ್ತಿದ್ದ ಬೆಂಕಿ ಮತ್ತು ದಟ್ಟ ಹೊಗೆ ಕಾರಣ ಎನ್ನಬಹುದು ಎಂದು ಘಟನೆಯನ್ನು ವರದಿ ಮಾಡಿದ ವರದಿಗಾರರು ತಿಳಿಸಿದ್ದಾರೆ. ಗಾಂಜಾ ಹೊಗೆಯ ಪರಿಣಾಮವನ್ನು ಕಡಿಮೆ ಮಾಡಲು ಸಕ್ಕರೆ ಮತ್ತು ಕರ್ಪೂರವನ್ನು ಬಳಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

4 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಜನವಾಸವಿಲ್ಲದ ಕಾರಣ ಪೊಲೀಸರು ಕೋಡೂರ್ ಅನ್ನು ಆಯ್ಕೆ ಮಾಡಿದರು. ಸುಟ್ಟಾಗ ಬರುವ ಹೊಗೆಯಿಂದಾಗಿ ತಲೆನೋವು ಅಥವಾ ಮಾದಕತೆ ಉಂಟಾಗಬಹುದು ಎಂಬ ಕಾರಣದಿಂದ ಸುತ್ತಮುತ್ತಲಿನ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡಿ ಮನೆಯೊಳಗೆಯೇ ಇರುವಂತೆ ಸೂಚಿಸಲಾಗಿತ್ತು.

ಆಪರೇಷನ್ ಪರಿವರ್ತನಾ ಕಾರ್ಯಾಚರಣೆಯನ್ನು ನವೆಂಬರ್ 1, 2021ರಂದು ಪ್ರಾರಂಭಿಸಲಾಯಿತು. ಈ ಕಾರ್ಯಾಚರಣೆಯ ಭಾಗವಾಗಿ ಇದುವರೆಗೆ, 47,986.934 ಕೆಜಿ ಗಾಂಜಾ ಮತ್ತು 46.41 ಲೀಟರ್ ಹಶಿಶ್ ಎಣ್ಣೆಯನ್ನು 314 ವಾಹನಗಳೊಂದಿಗೆ ವಶಪಡಿಸಿಕೊಳ್ಳಲಾಗಿದೆ. 577 ಪ್ರಕರಣಗಳನ್ನು ದಾಖಲಿಸಲಾಗಿದೆ ಮತ್ತು 1500 ಜನರನ್ನು ಬಂಧಿಸಲಾಗಿದೆ. 1985ರ ನಾರ್ಕೋಟಿಕ್ಸ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ಅಡಿಯಲ್ಲಿ ಗಾಂಜಾವನ್ನು ನಿಷೇಧಿಸಲಾಗಿದೆ. ಈ ಕಾಯಿದೆಯು ಗಾಂಜಾ ಮಾರಾಟ ಮತ್ತು ಖರೀದಿಯನ್ನು ನಿಷೇಧಿಸುತ್ತದೆ. 406 ತಂಡಗಳು ಆಪರೇಷನ್ ಪರಿವರ್ತನಾ ಭಾಗವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

PC: News Minute

ಪೊಲೀಸರ ಪ್ರಕಾರ, ಒಡಿಶಾದ ಗಡಿಭಾಗದ ಜಿಲ್ಲೆಗಳಾದ ಶ್ರೀಕಾಕುಳಂ, ವಿಜಯನಗರ, ವಿಶಾಖಪಟ್ಟಣ ಮತ್ತು ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಗಾಂಜಾ ಬೆಳೆಯಲಾಗುತ್ತಿದೆ. ಒಡಿಶಾದ 23 ಜಿಲ್ಲೆಗಳು ಮತ್ತು ವಿಶಾಖಪಟ್ಟಣಂನ 11 ಮಂಡಲಗಳಲ್ಲಿ ನಿಷೇಧಿತ ಬೆಳೆ ಬೆಳೆಯುತ್ತಿರುವುದನ್ನು ಉಪಗ್ರಹ ಚಿತ್ರಗಳನ್ನು ಬಳಸಿ ಪೊಲೀಸರು ಪತ್ತೆ ಮಾಡಿದ್ದಾರೆ. ಆಪರೇಷನ್‌ ಪರಿವರ್ತನೆಯ ಭಾಗವಾಗಿ ಅಧಿಕಾರಿಗಳು 7,552 ಎಕರೆ ಗಾಂಜಾವನ್ನು ನಾಶಪಡಿಸಿದ್ದಾರೆ. ಇದರಲ್ಲಿ 400 ಎಕರೆ ಬೆಳೆಯನ್ನು ರೈತರೇ ನಾಶಪಡಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚಾಗಿ ಬುಡಕಟ್ಟು ಸಮುದಾಯಗಳು ಗಾಂಜಾವನ್ನು ಬೆಳೆಸುತ್ತಿರುವುದರಿಂದ, ಪೊಲೀಸರು ಸಾರ್ವಜನಿಕ ಜಾಗೃತಿ ಅಭಿಯಾನವನ್ನೂ ಮಾಡುತ್ತಿದ್ದಾರೆ. ಕಾರ್ಯಕ್ರಮದ ಆರಂಭದಿಂದಲೂ, 1,963 ಜಾಗೃತಿ ಅಭಿಯಾನಗಳನ್ನು ನಡೆಸಲಾಗಿದ್ದು, ಇದರಲ್ಲಿ 70,000 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ. ಗಾಂಜಾ ಹಾವಳಿ ತಡೆಯಲು ಪೊಲೀಸರು 120 ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿದ್ದಾರೆ.

ತೆಲಂಗಾಣ ಮತ್ತು ಕರ್ನಾಟಕದಂತಹ ನೆರೆಯ ರಾಜ್ಯಗಳು ಗಾಂಜಾವನ್ನು ನಿಯಂತ್ರಿಸದಿದ್ದಕ್ಕಾಗಿ ಅವರತ್ತ ಬೆರಳು ತೋರಿಸಿದ ನಂತರ ಆಂಧ್ರಪ್ರದೇಶವು ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ತೆಲಂಗಾಣ ಪೊಲೀಸರು ಡ್ರಗ್ಸ್ ವಿರುದ್ಧದ ಅಭಿಯಾನದ ಭಾಗವಾಗಿ ತಮ್ಮ ವ್ಯಾಪ್ತಿಯಲ್ಲಿ ಕೆಲವರನ್ನು ಬಂಧಿಸಿ ಆಂಧ್ರಪ್ರದೇಶ ಪೊಲೀಸರಿಗೆ ಮುಜುಗರ ಉಂಟು ಮಾಡಿದ್ದರು. ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ರಾಜ್ಯವು ಡ್ರಗ್ ಹಬ್ ಆಗಿ ಬದಲಾಗುತ್ತಿದೆ ಎಂದು ರಾಜ್ಯದ ವಿರೋಧ ಪಕ್ಷದ ನಾಯಕ ಎನ್ ಚಂದ್ರಬಾಬು ನಾಯ್ಡು ಆರೋಪಿಸಿದ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಅದರ ಭಾಗಿ ಎರಡು ಲಕ್ಷ ಕೆ.ಜಿ. ಗಾಂಜಾವನ್ನು ಸುಡಲಾಗಿದೆ.


ಇದನ್ನೂ ಓದಿರಿ: ವಿಶಾಖಪಟ್ಟಣಂ ಉಕ್ಕು ಕಾರ್ಖಾನೆ ಖಾಸಗೀಕರಣದ ವಿರುದ್ದ ಜೈಲ್‌ ಭರೋ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...