Homeಕರ್ನಾಟಕಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ವಕೀಲರನ್ನು ಟೀಕಿಸುವುದು ತಪ್ಪು: ರಾಮಕೃಷ್ಣ ಆಶ್ರಮ

ಮುಸ್ಲಿಂ ವಿದ್ಯಾರ್ಥಿನಿಯರ ಪರ ವಾದಿಸುತ್ತಿರುವ ವಕೀಲರನ್ನು ಟೀಕಿಸುವುದು ತಪ್ಪು: ರಾಮಕೃಷ್ಣ ಆಶ್ರಮ

- Advertisement -
- Advertisement -

ರಾಜ್ಯದ ಕಾಲೇಜುಗಳಲ್ಲಿ ಮುಸ್ಲಿಂ ಹೆಣ್ಣು ಮಕ್ಕಳು ಧರಿಸುವ ಹಿಜಾಬ್‌ ಕುರಿತ ಈ ವಿರೋಧ ಅನಾವಶ್ಯಕವಾಗಿದೆ. ಶಾಂತಿ ಮತ್ತು ಸೌಹಾರ್ದತೆಯ ಹಿತದೃಷ್ಟಿಯಿಂದ ಸರಿಯಲ್ಲ ಎಂದು ಕಾರವಾರದ ರಾಮಕೃಷ್ಣ ಆಶ್ರಮ ತಿಳಿಸಿದ್ದು. ಮುಸ್ಲಿಂ ವಿದ್ಯಾರ್ಥಿನಿಯರ ಪರ ವಕಾಲತ್ತು ವಹಿಸಿ ಟೀಕೆಗಳನ್ನು ಎದುರಿಸುತ್ತಿರುವ ವಕೀಲರನ್ನು ಸಮರ್ಥಿಸಿಕೊಂಡಿದೆ.

ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ತಮ್ಮ ಹಕ್ಕಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿನಿಯರನ್ನು ಸಮರ್ಥಿಸಲು ಇಸ್ಲಾಮಿಕ್ ಧರ್ಮಗ್ರಂಥಗಳನ್ನು ಉಲ್ಲೇಖಿಸಿ ಬಲಪಂಥೀಯ ಟೀಕಾಕಾರರ ಕೆಂಗಣ್ಣಿಗೆ ಗುರಿಯಾಗಿರುವ ಹಿರಿಯ ವಕೀಲ ದೇವದತ್ತ ಕಾಮತ್ ಅವರು ಹಿಂದೂ ಧರ್ಮಕ್ಕೆ ಯಾವುದೇ ಹಾನಿ ಮಾಡಿಲ್ಲ ಎಂದು ರಾಮಕೃಷ್ಣ ಆಶ್ರಮದ ಪ್ರಧಾನ ಸ್ವಾಮೀಜಿ ತಿಳಿಸಿದ್ದಾರೆ.

“ಶಾಲೆ ಅಥವಾ ಕಾಲೇಜುಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ ಡ್ರೆಸ್ ಕೋಡ್ ಬಗ್ಗೆ ಅನಗತ್ಯ ಚರ್ಚೆ ನಡೆಯುತ್ತಿದೆ. ಸಮಾಜದ ವಿವಿಧ ಹಂತಗಳಲ್ಲಿ ಈ ವಿಷಯ ತೀವ್ರ ವಿವಾದ ಕಾರಣವಾಗುತ್ತಿರುವುದು ನನಗೆ ನೋವಾಗಿದೆ. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯ ಹಿತಾಸಕ್ತಿಯಿಂದ ಇದು ಖಂಡಿತವಾಗಿಯೂ ಒಳ್ಳೆಯದಲ್ಲ” ಸ್ವಾಮಿ ಭಾವೇಶಾನಂದ ಹೇಳಿದ್ದಾರೆ.

ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

”ಸುಪ್ರೀಂಕೋರ್ಟ್‌ನ ಹಿರಿಯ ವಕೀಲರಾದ ದೇವದತ್ತ ಕಾಮತ್ ಅವರ ಹೆಸರನ್ನು ಈ ವಿವಾದದಲ್ಲಿ ಎಳೆಯಲಾಗುತ್ತಿದೆ. ಇದರಿಂದ ನನಗೆ ಹೆಚ್ಚು ನೋವಾಗಿದೆ. ಅವರು ನ್ಯಾಯಾಲಯದಲ್ಲಿ ವಕೀಲರಾಗಿ ಒಂದು ಪಕ್ಷವನ್ನು ಪ್ರತಿನಿಧಿಸಿದ್ದಾರೆ. ಕೆಲವು ಅಂಶಗಳು ಅವರನ್ನು ಹಿಂದೂ ಧರ್ಮದ ವಿರೋಧಿ ಎಂದು ಬ್ರ್ಯಾಂಡ್ ಮಾಡಲು ಪ್ರಯತ್ನಿಸುತ್ತಿವೆ. ಈ ಗ್ರಹಿಕೆಯು ಸಂಪೂರ್ಣವಾಗಿ ಅನಗತ್ಯ ಮತ್ತು ಆಧಾರರಹಿತವಾಗಿದೆ” ಎಂದಿದ್ದಾರೆ.

“ನ್ಯಾಯಾಲಯದಲ್ಲಿ ಕಕ್ಷಿದಾರನನ್ನು ಪ್ರತಿನಿಧಿಸುವ ವಕೀಲರು ತಮ್ಮ ಕಕ್ಷಿದಾರರ ಕಾರಣಕ್ಕೆ ತಮ್ಮ ಕರ್ತವ್ಯ ಮತ್ತು ನ್ಯಾಯವನ್ನು ಕೊಡಿಸುವ ಕೆಲಸ ಮಾಡಬೇಕು. ಅದು ವೃತ್ತಿಪರ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ. ಇದನ್ನು ಹಿಂದೂ ಧರ್ಮದ ವಿರುದ್ಧ ಎಂದು ಬ್ರ್ಯಾಂಡ್ ಮಾಡಬಾರದು” ಎಂದು ಸ್ವಾಮಿ ಭಾವೇಶಾನಂದ ತಿಳಿಸಿದ್ದಾರೆ.

ವಕೀಲ ದೇವದತ್ತ ಕಾಮತ್ ಮೇಲಿನ ದಾಳಿ “ನ್ಯಾಯಸಮ್ಮತವಲ್ಲದ ಮತ್ತು ಆಧಾರರಹಿತ ಪ್ರಚಾರ” ಎಂದಿರುವ ಅವರು, ವಕೀಲರು ಶ್ರೀ ರಾಮಕೃಷ್ಣ ವಿವೇಕಾನಂದರ ನಿಷ್ಠಾವಂತ ಅನುಯಾಯಿ ಎಂದಿದ್ದಾರೆ.

ರಾಜ್ಯದ ಉಡುಪಿಯ ಕಾಲೇಜಿನಲ್ಲಿ ಹಿಜಾಬ್ ಧರಿಸದಂತೆ ಹೇಳಿರುವ ವಿದ್ಯಾರ್ಥಿಗಳ ಪರ ವಾದ ಮಂಡಿಸಿದ ದೆವದತ್ತ ಕಾಮತ್, ಧಾರ್ಮಿಕ ಶಿರಸ್ತ್ರಾಣಗಳು ಅವರ ಸಂಸ್ಕೃತಿಯ ಭಾಗವಾಗಿದ್ದು, ಅದನ್ನು ತಡೆಯಲು ಸಾಧ್ಯವಿಲ್ಲ. ನಿಕಟ ಕುಟುಂಬ ಸದಸ್ಯರನ್ನು ಹೊರತುಪಡಿಸಿ ಬೇರೆಯವರ ಮುಂದೆ ತಲೆಯನ್ನು ಮುಚ್ಚಿಕೊಳ್ಳುವುದು ಮಹಿಳೆಯರಿಗೆ ಕರ್ತವ್ಯವಾಗಿದೆ ಎಂದು ಹೇಳುವ ಕುರಾನ್‌ನ ಸಾಲುಗಳನ್ನು ಉಲ್ಲೇಖಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದರು.


ಇದನ್ನೂ ಓದಿ: ಸತ್ಯಶೋಧನೆ: ಕೇರಳ ಹೈಕೋರ್ಟ್‍ನ 2018ರ ಹಿಜಾಬ್ ಆದೇಶ ಮತ್ತು ಕರ್ನಾಟಕ ಹೈಕೋರ್ಟ್ ವಾದ ಏಕೆ ವಿಭಿನ್ನ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...