Homeಮುಖಪುಟಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

ಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

- Advertisement -
- Advertisement -

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಅತ್ಯಂತ ತುಚ್ಛವಾಗಿ ಮಾತನಾಡಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಹಿಮಂತ ಬಿಸ್ವಾ ಅವರನ್ನು ವಜಾಗೊಳಿಸಬೇಕು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಒತ್ತಾಯಿಸಿದ್ದಾರೆ.

ಶರ್ಮಾ ಅವರ ಹೇಳಿಕೆಗಳಿಗೆ ಬೇಸರ ವ್ಯಕ್ತಪಡಿಸಿರುವ ಕೆಸಿಆರ್‌, “ಮೋದಿಜಿ! ಇದೇನಾ ನಮ್ಮ ಭಾರತೀಯ ಸಂಸ್ಕೃತಿ? ವೇದಗಳು, ಮಹಾಭಾರತ, ರಾಮಾಯಣ ಮತ್ತು ಭಗವದ್ಗೀತೆಗಳಲ್ಲಿ ಇದನ್ನೇ ಕಲಿಸಲಾಗಿದೆಯೇ? ನಾನು ಬಿಜೆಪಿ ಅಧ್ಯಕ್ಷ ನಡ್ಡಾಜಿ ಅವರನ್ನು ಕೇಳುತ್ತಿದ್ದೇನೆ. ಇದು ನಮ್ಮ ಸಂಸ್ಕೃತಿಯೇ?” ಎಂದು ಪ್ರಶ್ನಿಸಿದ್ದಾರೆ.

ಶುಕ್ರವಾರ, ಫೆಬ್ರವರಿ 11ರಂದು ಉತ್ತರಾಖಂಡ್‌ನಲ್ಲಿ ಚುನಾವಣಾ ರ್‍ಯಾಲಿಯಲ್ಲಿ ಮಾತನಾಡುತ್ತಾ ಶರ್ಮಾ ಅವರು ರಾಹುಲ್ ಗಾಂಧಿಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಸೆಪ್ಟೆಂಬರ್ 2016ರ ಸರ್ಜಿಕಲ್ ಸ್ಟ್ರೈಕ್‌ನ ಪುರಾವೆಯನ್ನು ಕೋರಿದ್ದಕ್ಕಾಗಿ ಮತ್ತು ಕೋವಿಡ್-19 ಲಸಿಕೆಗಳ ಪರಿಣಾಮಕಾರಿವನ್ನು ಪ್ರಶ್ನಿಸಿದ್ದಕ್ಕಾಗಿ ರಾಹುಲ್‌ ಅವರನ್ನು ಅಸಂವಿಧಾನಿಕವಾಗಿ ನಿಂದಿಸಿದ್ದರು. “ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ ಮಗ ಎಂಬುದಕ್ಕೆ ಬಿಜೆಪಿ ಎಂದಾದರೂ ಪುರಾವೆ ಕೇಳಿದೆಯೇ?” ಎಂದು ಶರ್ಮಾ ಹೇಳಿದ್ದರು.

ಹೈದರಾಬಾದ್‌ನಿಂದ ಸುಮಾರು 55 ಕಿ.ಮೀ. ದೂರದಲ್ಲಿರುವ ರಾಯಗಿರಿಯಲ್ಲಿ ಸಾರ್ವಜನಿಕ ವೇದಿಕೆಯಲ್ಲಿ ಮಾತನಾಡಿದ ಅವರು, “ನೀವು ಅವರನ್ನು (ಅಸ್ಸಾಂ ಸಿಎಂ) ವಜಾ ಮಾಡಿ ಎಂದು ನಾನು ಒತ್ತಾಯಿಸುತ್ತಿದ್ದೇನೆ. ಮುಖ್ಯಮಂತ್ರಿಯೊಬ್ಬರು ಈ ರೀತಿ ಮಾತನಾಡಬಹುದೇ? ಎಲ್ಲಕ್ಕೂ ಮಿತಿಗಳಿರುತ್ತವೆ. ನೀವು ಅಹಂಕಾರ ತೋರಿಸುತ್ತಿರಿ. ತಮಾಷೆ ಮಾಡುತ್ತೀರಾ? ಜನರು ಮೌನವಾಗಿರುತ್ತಾರೆ ಎಂದು ನೀವು ಭಾವಿಸುತ್ತೀರಿ” ಎಂದು ಹೇಳಿದರು.

“ಇದು ಬಿಜೆಪಿಯ ಸಂಸ್ಕೃತಿಯೇ? ಇದು ಹಿಂದೂ ಧರ್ಮ ಮತ್ತು ಭಾರತೀಯ ಸಂಸ್ಕೃತಿಯೇ? ನಾನು ಭಾರತೀಯನಾಗಿ ಬೇಡಿಕೆ ಇಡುತ್ತಿದ್ದೇನೆ. ನನಗೆ ನಾಚಿಕೆಯಾಗುತ್ತಿದೆ. ಇದು ದೇಶಕ್ಕೆ ಒಳ್ಳೆಯದಲ್ಲ. ನಾವು ಕೈಮುಗಿದು ಸುಮ್ಮನಿರುತ್ತೇವೆ ಎಂದು ನೀವು ಭಾವಿಸುತ್ತೀರಾ?” ಎಂದು ಕೆಸಿಆರ್ ಪ್ರಶ್ನಿಸಿದ್ದಾರೆ.

ಉತ್ತರಾಖಂಡ್‌ನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದ ಶರ್ಮಾ, ಲಸಿಕೆಗಳು ಮತ್ತು ಸರ್ಜಿಕಲ್ ಸ್ಟ್ರೈಕ್‌ಗಳ ಪರಿಣಾಮಕಾರಿತ್ವದ ಪುರಾವೆಯನ್ನು ಒತ್ತಾಯಿಸಿ ಕಾಂಗ್ರೆಸ್ ನಕಾರಾತ್ಮಕ ರಾಜಕೀಯ ಮಾಡುತ್ತಿದೆ. ವೀರ ಸೈನಿಕರ ಶೌರ್ಯವನ್ನು ಪ್ರಶ್ನಿಸುತ್ತಿದೆ ಎಂದಿದ್ದರು.

“ರಾಜೀವ್ ಗಾಂಧಿಯವರ ಮಗ ಎಂಬುದಕ್ಕೆ ನಾವು ಎಂದಾದರೂ ರಾಹುಲ್ ಗಾಂಧಿ ಅವರಿಂದ ಪುರಾವೆ ಕೇಳಿದ್ದೇವೆಯೇ?” ಫೆಬ್ರವರಿ 14 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದ ಶರ್ಮಾ ಅವರು ಸುದ್ದಿಗಾರರನ್ನು ಕೇಳಿದ್ದರು.

“ಉತ್ತರಾಖಂಡದಲ್ಲಿ ಮುಸ್ಲಿಂ ವಿಶ್ವವಿದ್ಯಾನಿಲಯ ಸ್ಥಾಪನೆಗೆ ಕಾಂಗ್ರೆಸ್ ಮುಚ್ಚಿದ ಆಶ್ವಾಸನೆಗಳನ್ನು ನೀಡಿದೆ” ಎಂದಿದ್ದ ಶರ್ಮಾ, “ಜಿನ್ನಾ ಅವರ ಆತ್ಮ ಕಾಂಗ್ರೆಸ್ ಪಕ್ಷವನ್ನು ಪ್ರವೇಶಿಸಿದೆ ಎಂದು ತೋರುತ್ತದೆ. ಇದು ಜಿನ್ನಾ ಮಾತನಾಡುವ ಭಾಷೆಯನ್ನೇ ಮಾತನಾಡುತ್ತಿದೆ” ಎಂದು ದೂರಿದ್ದರು.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಹೇಳಿಕೆಗಳನ್ನು ವಿರೋಧಿಸಿ ಕಾಂಗ್ರೆಸ್‌ನ ಯುವ ಮತ್ತು ವಿದ್ಯಾರ್ಥಿ ಘಟಕಗಳ ಸದಸ್ಯರು ಫೆಬ್ರವರಿ 12ರ ಶನಿವಾರ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದರು.

ಭಾರತೀಯ ಯುವ ಕಾಂಗ್ರೆಸ್ ಘಟಕದ (ಐವೈಸಿ) ಕಾರ್ಯಕರ್ತರು ಘಟಕದ ಅಧ್ಯಕ್ಷ ಶ್ರೀನಿವಾಸ್ ಬಿವಿ ನೇತೃತ್ವದಲ್ಲಿ ಅಸ್ಸಾಂ ಭವನದ ಬಳಿ ಪ್ರತಿಭಟನೆ ನಡೆಸಿದರೆ, ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟವು ತನ್ನ ರಾಷ್ಟ್ರೀಯ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿತ್ತು.


ಇದನ್ನೂ ಓದಿರಿ: ತಲೆ ಮೇಲೆ ಬಟ್ಟೆ ಇದ್ದರೆ ನಿಮಗೇನು ತೊಂದರೆ?: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...