Homeಕರ್ನಾಟಕರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

ರಾತ್ರಿ ವೇಳೆ ಅಪರಿಚಿತರಿಂದ ಫೋನ್‌ ಕಾಲ್‌: ನಟಿ ಸಂಜನಾ ತರಾಟೆ

"ನಾನು ಒಬ್ಬ ನಟಿ, ಮಿಗಿಲಾಗಿ ಒಬ್ಬ ಮಹಿಳೆ. ನನ್ನ ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸಿ ನನಗೆ ಸಾಕಾಗಿದೆ" ಎಂದು ಬೇಸರ ವ್ಯಕ್ತಪಡಿಸಿರುವ ಅವರು, ಅಪರಿಚಿತನಿಗೆ ಕ್ಲಾಸ್‌ ತೆಗೆದುಕೊಂಡಿರುವ ಆಡಿಯೊ ಹಂಚಿಕೊಂಡಿದ್ದಾರೆ.

- Advertisement -
- Advertisement -

ಅರ್ಧ ರಾತ್ರಿಯಲ್ಲಿ ಬರುತ್ತಿರುವ ಅಪರಿಚಿತರ ಕರೆಗಳಿಂದ ಬಹುಭಾಷಾ ನಟಿ ಸಂಜನಾ ಗಲ್ರಾನಿ ಬೇಸತ್ತಿದ್ದಾರೆ. “ನಾನೊಬ್ಬ ನಟಿ, ಅದಕ್ಕಿಂತ ಮಿಗಿಲಾಗಿ ನಾನು ಮಹಿಳೆ” ಎಂದು ನಟಿ ತಿಳಿಸಿದ್ದಾರೆ.

“ಸ್ನೇಹಿತರೇ, ನಾನು ಸಂಜನಾ ಗಲ್ರಾನಿ, ನಾನೊಬ್ಬ ನಟಿ. ಆದರೆ ಅದಕ್ಕಿಂತ ಹೆಚ್ಚಾಗಿ ನಾನು ಮಹಿಳೆ. ಕುಟುಂಬವನ್ನು ಹೊಂದಿರುವ ಮಹಿಳೆ. ನನಗೆ ರಾತ್ರಿ 1ರಿಂದ 2 ಗಂಟೆಯ ಸಮಯದಲ್ಲಿ ಬೇರೆ ಬೇರೆ ನಂಬರ್‌ಗಳಿಂದ ಕರೆಗಳು ಬರುತ್ತಲೇ ಇವೆ” ಎಂದು ಹೇಳಿದ್ದಾರೆ.

“ನಿನ್ನೆ ರಾತ್ರಿ ಶನಿವಾರ ಕುಡಿದು ಕೆಲವರು ಕರೆ ಮಾಡಿದ್ದಾರೆ. ಶನಿವಾರವಷ್ಟೇ ಅಲ್ಲ, ಪ್ರತಿದಿನ ನಾನು ಅಪರಿಚಿತ ನಂಬರ್‌ಗಳನ್ನು ಬ್ಲಾಕ್ ಮಾಡುತ್ತಲೇ ಇದ್ದೇನೆ. ಮತ್ತು ಮತ್ತೆ ಹೊಸ ಸಂಖ್ಯೆಗಳಿಂದ ನನಗೆ ಕರೆಗಳು ಬರುತ್ತಿವೆ” ಎಂದು ಮಾಧ್ಯಮಗಳೊಂದಿಗೆ ಹಂಚಿಕೊಂಡಿದ್ದಾರೆ.

“ಅಸಹಾಯಕತೆ, ತೊಂದರೆ ಮತ್ತು ಹತಾಶೆಯನ್ನು ನಾನು ಅನುಭವಿಸುತ್ತೇನೆ. ನನ್ನ ತಪ್ಪೇನು? ನಾನು ಎಷ್ಟು ಮೊಬೈಲ್ ಸಂಖ್ಯೆಗಳನ್ನು ಬದಲಾಯಿಸಬೇಕು, ಯಾರಾದರೂ ಈ ವ್ಯಕ್ತಿಗೆ ಪಾಠ ಕಲಿಸಬಹುದೇ? ನಾನು ಮಾನಸಿಕ ಶಾಂತಿ ಬಯಸುತ್ತಿದ್ದೇನೆ” ಎಂಬ ಬರಹವನ್ನು ಹಂಚಿಕೊಂಡಿದ್ದಾರೆ.

ನನ್ನ ಮೊಬೈಲ್‌ ಸಂಖ್ಯೆಯನ್ನು ಬದಲಾಯಿಸಿ ನನಗೆ ಸಾಕಾಗಿದೆ. ನಂಬರ್‌ಗಳನ್ನು ಬದಲಿಸಿದ್ದರಿಂದ ನನ್ನ ವೃತ್ತಿಗೆ ಸಂಬಂಧಿಸಿದ ಸಂಪರ್ಕಗಳ ಮೇಲೂ ಪರಿಣಾಮ ಬೀರುತ್ತಿದೆ. ರಾತ್ರಿ 2.00 ಗಂಟೆಯಲ್ಲಿ ಕರೆ ಮಾಡಿ ಕಿರುಕುಳ ನೀಡುತ್ತಿರುವ ಅಪರಿಚಿತ ವ್ಯಕ್ತಿ ತನ್ನ ಸಂಖ್ಯೆಯನ್ನು ಶಾಶ್ವತವಾಗಿ ಬದಲಾಯಿಸಲು ಹಾಗೂ ಆತನ ಕಿರುಕುಳವನ್ನು ತಡೆಯಲು ನಾನು ಬಯಸುತ್ತೇನೆ. ನನಗೆ ಮಾತ್ರವಲ್ಲ. ಬೇರೆ ಯಾವ ಮಹಿಳೆಗೂ ತೊಂದರೆ ಕೊಡಬಾರದು ಎಂದು ಕೋರಿದ್ದಾರೆ.

ಜೊತೆಗೆ ಆಡಿಯೊ ಕೂಡ ಶೇರ್‌ ಮಾಡಿಕೊಂಡಿರುವ ಅವರು ಅವರು, ರಾತ್ರಿ ವೇಳೆ ಕರೆ ಮಾಡಿರುವ ವ್ಯಕ್ತಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. “ರಾತ್ರಿ ವೇಳೆ ಏಕೆ ಕರೆ ಮಾಡುತ್ತಿದ್ದೀರಿ. ಪ್ರತಿದಿನ ಹೀಗೆ ಆಗುತ್ತಿದೆ. ಕುಡಿದು ಕರೆ ಮಾಡ್ತೀರಾ?” ಎಂದು ಸಂಜನಾ ಕೇಳುತ್ತಾರೆ. “ನಾನು ಕುಡಿಯಲ್ಲ ಮೇಡಂ, ಮಿಸ್ಸಾಗಿ ಕರೆ ಬಂದಿದೆ” ಎಂದು ವ್ಯಕ್ತಿಯು ಸಮಜಾಯಿಷಿ ನೀಡುತ್ತಾನೆ. “ಮಿಸ್ಸಾಗಿ ಹೇಗೆ ಕರೆ ಬರುತ್ತದೆ. ಪದೇ ಪದೇ ಕರೆ ಹೇಗೆ ಬರುತ್ತದೆ” ಎಂದು ಸಂಜನಾ ಪ್ರಶ್ನಿಸಿದ್ದಾರೆ. ಜೊತೆ ಆ ವ್ಯಕ್ತಿಯು ಮಾತನಾಡುತ್ತಾ ತನ್ನನ್ನು ಕ್ಯಾಬ್‌ ಡ್ರೈವರ್‌ ಎಂದು ಹೇಳಿಕೊಳ್ಳುತ್ತಾನೆ. “ನಿಮ್ಮ ಡಿ.ಎಲ್‌. ಕಳುಹಿಸಿ” ಎಂದು ಸಂಜನಾ ಕೇಳುತ್ತಾರೆ. ಜೊತೆಗೆ ಆ ವ್ಯಕ್ತಿಯು ಕ್ಷಮೆಯನ್ನು ಕೇಳುವುದನ್ನು ಈ ಆಡಿಯೊದಲ್ಲಿ ಕೇಳಬಹುದು.

ಮಹಿಳೆಯರು ಹಾಗೂ ಮಹಿಳಾ ಕಲಾವಿದರ ಮೇಲೆ ಆಗುವ ದೌರ್ಜನ್ಯಗಳನ್ನು ಮೊದಲಿನಿಂದಲೂ ಖಂಡಿಸುತ್ತ ಬಂದಿರುವ ನಟಿ ಸಂಜನಾ ಈಗ ತುಂಬು ಗರ್ಭಿಣಿಯೂ ಹೌದು. ಮಾಧ್ಯಮ ಸಂಸ್ಥೆಯೊಂದು ಇಲ್ಲಸಲ್ಲದ ಸುದ್ದಿ ಬರೆದಿದ್ದಾಗ, ಕಟುವಾಗಿಯೇ ಪ್ರತಿಕ್ರಿಯಿಸಿದ್ದ ಸಂಜನಾ ಸ್ಪೆಷಲ್‌ ಕ್ಲಾಸ್‌ ತೆಗೆದುಕೊಂಡಿದ್ದರು.

ಸಂಜನಾ ಅವರು ಹಂಚಿಕೊಂಡಿರುವ ನಂಬರ್‌ಗೆ ಕರೆ ಮಾಡಿದಾಗ, 19 ವರ್ಷದ ಯುವಕ ಕರೆ ಮಾಡಿರುವುದೆಂದು ತಿಳಿದುಬಂದಿದೆ. ಮಿಸ್ಸಾಗಿ ಕರೆ ಹೋಗಿದೆ. ಇವರು ಯಾರೆಂಬುದು ನನಗೆ ಗೊತ್ತಿಲ್ಲ. ತಪ್ಪಾಗಿದ್ದಕ್ಕೆ ಕ್ಷಮೆ ಇರಲಿ ಎಂದಿದ್ದಾನೆ.


ಇದನ್ನೂ ಓದಿರಿ: ನಿಮ್ಮಿಂದಾಗಿ ನಾನು ನೇಣು ಹಾಕಿಕೊಳ್ಬೇಕಾ? ಸುವರ್ಣ ಟಿ.ವಿ. ವಿರುದ್ಧ ನಟಿ ಸಂಜನಾ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...