Homeಮುಖಪುಟದೆಹಲಿ: ಅಂಗವಿಕಲ ಯುವತಿಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್‌ ಆರೋಪ, ಖಂಡನೆ ಬಳಿಕ ಕ್ಷಮೆಯಾಚನೆ

ದೆಹಲಿ: ಅಂಗವಿಕಲ ಯುವತಿಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್‌ ಆರೋಪ, ಖಂಡನೆ ಬಳಿಕ ಕ್ಷಮೆಯಾಚನೆ

- Advertisement -
- Advertisement -

ಇತರ ಗ್ರಾಹಕರಿಗೆ ತೊಂದರೆ ಉಂಟಾಗುತ್ತದೆ ಎಂದು ಗಾಲಿಕುರ್ಚಿ ಬಳಸುವ ಅಂಗವಿಕಲೆಯಾಗಿರುವ ನನಗೆ ಜನಪ್ರಿಯ ರೆಸ್ಟೋರೆಂಟ್‌ ಒಂದು ಪ್ರವೇಶ ನಿರಾಕರಿಸಿದೆ ಎಂದು ಯುವತಿ ಆರೋಪಿಸಿರುವ ಘಟನೆ ದೆಹಲಿಯ ಗುರ್ಗಾಂವ್‌ನಲ್ಲಿ ನಡೆದಿದೆ.

ತನ್ನ ಆತ್ಮೀಯ ಸ್ನೇಹಿತ ಮತ್ತು ಅವರ ಕುಟುಂಬದೊಂದಿಗೆ ಗುರ್ಗಾಂವ್‌ನ ಜನಪ್ರಿಯ ರೆಸ್ಟೋರೆಂಟ್‌ ರಾಸ್ತಾಗೆ ತೆರಳಿದ್ದು, ಗಾಲಿಕುರ್ಚಿಗೆ ಒಳಗೆ ಹೋಗಲು ಅನುಮತಿಯಿಲ್ಲ ಎಂದು ತನಗೆ ಪ್ರವೇಶ ನಿರಾಕರಿಸಿದೆ ಎಂದು ಯುವತಿ ಸೃಷ್ಟಿ ಪಾಂಡೆ ತಮ್ಮ ಟ್ವಿಟರ್‌ನಲ್ಲಿ ನೋವು ತೋಡಿಕೊಂಡಿದ್ದಾರೆ.

“ಗಾಲಿಕುರ್ಚಿ ಒಳಗೆ ಹೋಗಲು ಸಮಸ್ಯೆಯಾಗಬಹುದು ಎಂದು ಹೇಳುತ್ತಿದ್ದಾರೆ ಎಂದು ನಾವು ಭಾವಿಸಿದ್ದೇವು. ಆದರೆ ಸಮಸ್ಯೆ ಅದಾಗಿರಲಿಲ್ಲ. ನಾವು ಮ್ಯಾನೆಜ್ ಮಾಡಿಕೊಳ್ಳುತ್ತೇವೆ, ನಮಗೆ ಟೇಬಲ್ ರಿಸರ್ವ ಮಾಡಿ ಎಂದು ಅವರಿಗೆ ಹೇಳಿದೆವು. ಆದರೆ, ಮುಂದೆ ಅವರು ಹೇಳಿದ ಮಾತು ನಮ್ಮೆಲ್ಲರನ್ನೂ ಕೆಲಕಾಲ ಬೆಚ್ಚಿಬೀಳುವಂತೆ ಮಾಡಿತು” ಎಂದು ಟ್ವೀಟ್‌ನಲ್ಲಿ ಹೇಳಲಾಗಿದೆ.

“ಒಳಗೆ ಬೇರೆ ಗ್ರಾಹಕರು ತೊಂದರೆಗೊಳಗಾಗುತ್ತಾರೆ ಎಂದು ಅವರು ನನ್ನ ಕಡೆಗೆ ತೋರಿಸುತ್ತಾ ನಮಗೆ ಹೇಳಿದರು. ಜೊತೆಗೆ ತುಂಬಾ ಸುಲಭವಾಗಿ ನಮಗೆ ಪ್ರವೇಶವನ್ನು ನಿರಾಕರಿಸಿದ ಅವರು, ಹೊರಗೆ ಟೇಬಲ್ ನೀಡುತ್ತೇವೆ ಎಂದು ಸಿಬ್ಬಂದಿ ತಿಳಿಸಿದರು. ಆದರೆ, ಹೊರಗಡೆ ಟೇಬಲ್ ಸರಿಯಿರಲಿಲ್ಲ. ನನ್ನ ದೇಹವು ದುರ್ಬಲವಾಗಿರುವ ಕಾರಣ ಹೆಚ್ಚು ಕಾಲ ಶೀತದಲ್ಲಿ ಕುಳಿತುಕೊಳ್ಳಲು ಸಾಧ್ಯವಿರಲಿಲ್ಲ” ಎಂದು ಸೃಷ್ಟಿ ಪಾಂಡೆ ಹೇಳಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ನನಗೆ ಘಟನೆಯಿಂದ ತುಂಬಾ ನೋವಾಗಿದೆ ಎಂಬುದನ್ನು ತಮ್ಮ ಟ್ವೀಟ್‌ಗಳಲ್ಲಿ ಸೃಷ್ಟಿ ಪಾಂಡೆ ವ್ಯಕ್ತಪಡಿಸಿದ್ದರು. ಹೀಗೆ ಒಬ್ಬ ಅಂಕವಿಕಲ ಯುವತಿಗೆ ಅಪಮಾನ ಮಾಡಿದರ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ರಾಷ್ಟ್ರ ಪ್ರಶಸ್ತಿ ವಿಜೇತ ಫಿಲ್ಮಂ ಮೇಕರ್‌ ವಿನೋದ್ ಕಪ್ರಿ, ನಟಿ, ನಿದೇಶಕಿ ಪೂಜಾ ಭಟ್, ಪತ್ರಕರ್ತೆ ನವಿಕಾ ಕುಮಾರ್‌ ಸೇರಿದಂತೆ ಹಲವು ಮಂದಿ ಘಟನೆಯನ್ನು ಖಂಡಿಸಿದ್ದಾರೆ.

ಈ ಬೆನ್ನಲ್ಲೇ ರಾಸ್ತಾ ರೆಸ್ಟೋರೆಂಟ್ ಮ್ಯಾನೇಜ್‌ಮೆಂಟ್ ಘಟನೆಗೆ ಕ್ಷಮೆಯಾಚಿಸಿದೆ. ಜೊತೆಗೆ ತಮ್ಮ ಸಿಬ್ಬಂದಿಗೆ ಸೂಕ್ಷ್ಮತೆ ಮತ್ತು ಸಹಾನುಭೂತಿಯನ್ನು ಹೆಚ್ಚಿಸುವಂತಹ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಈ ವಿಷಯವನ್ನು ಪರಿಶೀಲಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದೆ.

ಇದನ್ನೂ ಓದಿ: ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ

ರಾಸ್ತಾದ ಸಂಸ್ಥಾಪಕ-ಪಾಲುದಾರ ಗೌಮ್ತೇಶ್ ಸಿಂಗ್ ಯುವತಿಯ ಟ್ವೀಟ್‌ಗಳಿಗೆ ಪ್ರತಿಕ್ರಿಯಿಸಿದ್ದಾರೆ. “ನಾನು ಘಟನೆಯನ್ನು ವೈಯಕ್ತಿಕವಾಗಿ ಪರಿಶೀಲಿಸುತ್ತಿದ್ದೇನೆ. ನೀವು ಅನುಭವಿಸಿದ ಕೆಟ್ಟ ಅನುಭವಕ್ಕಾಗಿ ಇಡೀ ತಂಡದ ಪರವಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಸದಸ್ಯರಲ್ಲಿ ಯಾರಾದರೂ ತಪ್ಪು ಮಾಡಿರುವುದು ಕಂಡುಬಂದರೆ, ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಘಟನೆ ಬಗ್ಗೆ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಗುರ್ಗಾಂವ್ ಪೊಲೀಸರ ಟ್ವಿಟರ್ ಖಾತೆಯು ಮುಂದಿನ ಕ್ರಮಕ್ಕಾಗಿ ಅವರ ಸಂಪರ್ಕ ವಿವರಗಳನ್ನು ನೀಡುವಂತೆ ಕೋರಿದೆ.

ಕಳೆದ ವರ್ಷ, ದೆಹಲಿಯ ಅತ್ಯಾಧುನಿಕ ರೆಸ್ಟೋರೆಂಟ್‌ನಲ್ಲಿ ಮಹಿಳೆಯೊಬ್ಬರು ತಮ್ಮ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿ ಸೀರೆ ಧರಿಸಿದ್ದಕ್ಕಾಗಿ ಪ್ರವೇಶ ನಿರಾಕರಿಸಿದ್ದ ಆರೋಪ ಕೇಳಿ ಬಂದಿತ್ತು. ಆದರೆ, ಮಹಿಳೆ ಸರ್ವರ್‌ನ ಮೇಲೆ ಹಲ್ಲೆ ನಡೆಸಿದ್ದರಿಂದ ಮಹಿಳೆಗೆ ಪ್ರವೇಶ ನಿರಾಕರಿಸಲಾಗಿತ್ತು, ಘಟನೆಯನ್ನು ವೀಡಿಯೊದಲ್ಲಿ ಸೆರೆಹಿಡಿಯಲಾಗಿದೆ ಎಂದು ರೆಸ್ಟೋರೆಂಟ್ ನಂತರ ಸ್ಪಷ್ಟಪಡಿಸಿತ್ತು.


ಇದನ್ನೂ ಓದಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...