Homeಮುಖಪುಟದೆಹಲಿ: ಅಂಗವಿಕಲ ಯುವತಿಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್‌ ಆರೋಪ, ಖಂಡನೆ ಬಳಿಕ ಕ್ಷಮೆಯಾಚನೆ

ದೆಹಲಿ: ಅಂಗವಿಕಲ ಯುವತಿಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್‌ ಆರೋಪ, ಖಂಡನೆ ಬಳಿಕ ಕ್ಷಮೆಯಾಚನೆ

- Advertisement -
- Advertisement -

ಇತರ ಗ್ರಾಹಕರಿಗೆ ತೊಂದರೆ ಉಂಟಾಗುತ್ತದೆ ಎಂದು ಗಾಲಿಕುರ್ಚಿ ಬಳಸುವ ಅಂಗವಿಕಲೆಯಾಗಿರುವ ನನಗೆ ಜನಪ್ರಿಯ ರೆಸ್ಟೋರೆಂಟ್‌ ಒಂದು ಪ್ರವೇಶ ನಿರಾಕರಿಸಿದೆ ಎಂದು ಯುವತಿ ಆರೋಪಿಸಿರುವ ಘಟನೆ ದೆಹಲಿಯ ಗುರ್ಗಾಂವ್‌ನಲ್ಲಿ ನಡೆದಿದೆ.

ತನ್ನ ಆತ್ಮೀಯ ಸ್ನೇಹಿತ ಮತ್ತು ಅವರ ಕುಟುಂಬದೊಂದಿಗೆ ಗುರ್ಗಾಂವ್‌ನ ಜನಪ್ರಿಯ ರೆಸ್ಟೋರೆಂಟ್‌ ರಾಸ್ತಾಗೆ ತೆರಳಿದ್ದು, ಗಾಲಿಕುರ್ಚಿಗೆ ಒಳಗೆ ಹೋಗಲು ಅನುಮತಿಯಿಲ್ಲ ಎಂದು ತನಗೆ ಪ್ರವೇಶ ನಿರಾಕರಿಸಿದೆ ಎಂದು ಯುವತಿ ಸೃಷ್ಟಿ ಪಾಂಡೆ ತಮ್ಮ ಟ್ವಿಟರ್‌ನಲ್ಲಿ ನೋವು ತೋಡಿಕೊಂಡಿದ್ದಾರೆ.

“ಗಾಲಿಕುರ್ಚಿ ಒಳಗೆ ಹೋಗಲು ಸಮಸ್ಯೆಯಾಗಬಹುದು ಎಂದು ಹೇಳುತ್ತಿದ್ದಾರೆ ಎಂದು ನಾವು ಭಾವಿಸಿದ್ದೇವು. ಆದರೆ ಸಮಸ್ಯೆ ಅದಾಗಿರಲಿಲ್ಲ. ನಾವು ಮ್ಯಾನೆಜ್ ಮಾಡಿಕೊಳ್ಳುತ್ತೇವೆ, ನಮಗೆ ಟೇಬಲ್ ರಿಸರ್ವ ಮಾಡಿ ಎಂದು ಅವರಿಗೆ ಹೇಳಿದೆವು. ಆದರೆ, ಮುಂದೆ ಅವರು ಹೇಳಿದ ಮಾತು ನಮ್ಮೆಲ್ಲರನ್ನೂ ಕೆಲಕಾಲ ಬೆಚ್ಚಿಬೀಳುವಂತೆ ಮಾಡಿತು” ಎಂದು ಟ್ವೀಟ್‌ನಲ್ಲಿ ಹೇಳಲಾಗಿದೆ.

“ಒಳಗೆ ಬೇರೆ ಗ್ರಾಹಕರು ತೊಂದರೆಗೊಳಗಾಗುತ್ತಾರೆ ಎಂದು ಅವರು ನನ್ನ ಕಡೆಗೆ ತೋರಿಸುತ್ತಾ ನಮಗೆ ಹೇಳಿದರು. ಜೊತೆಗೆ ತುಂಬಾ ಸುಲಭವಾಗಿ ನಮಗೆ ಪ್ರವೇಶವನ್ನು ನಿರಾಕರಿಸಿದ ಅವರು, ಹೊರಗೆ ಟೇಬಲ್ ನೀಡುತ್ತೇವೆ ಎಂದು ಸಿಬ್ಬಂದಿ ತಿಳಿಸಿದರು. ಆದರೆ, ಹೊರಗಡೆ ಟೇಬಲ್ ಸರಿಯಿರಲಿಲ್ಲ. ನನ್ನ ದೇಹವು ದುರ್ಬಲವಾಗಿರುವ ಕಾರಣ ಹೆಚ್ಚು ಕಾಲ ಶೀತದಲ್ಲಿ ಕುಳಿತುಕೊಳ್ಳಲು ಸಾಧ್ಯವಿರಲಿಲ್ಲ” ಎಂದು ಸೃಷ್ಟಿ ಪಾಂಡೆ ಹೇಳಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ನನಗೆ ಘಟನೆಯಿಂದ ತುಂಬಾ ನೋವಾಗಿದೆ ಎಂಬುದನ್ನು ತಮ್ಮ ಟ್ವೀಟ್‌ಗಳಲ್ಲಿ ಸೃಷ್ಟಿ ಪಾಂಡೆ ವ್ಯಕ್ತಪಡಿಸಿದ್ದರು. ಹೀಗೆ ಒಬ್ಬ ಅಂಕವಿಕಲ ಯುವತಿಗೆ ಅಪಮಾನ ಮಾಡಿದರ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ರಾಷ್ಟ್ರ ಪ್ರಶಸ್ತಿ ವಿಜೇತ ಫಿಲ್ಮಂ ಮೇಕರ್‌ ವಿನೋದ್ ಕಪ್ರಿ, ನಟಿ, ನಿದೇಶಕಿ ಪೂಜಾ ಭಟ್, ಪತ್ರಕರ್ತೆ ನವಿಕಾ ಕುಮಾರ್‌ ಸೇರಿದಂತೆ ಹಲವು ಮಂದಿ ಘಟನೆಯನ್ನು ಖಂಡಿಸಿದ್ದಾರೆ.

ಈ ಬೆನ್ನಲ್ಲೇ ರಾಸ್ತಾ ರೆಸ್ಟೋರೆಂಟ್ ಮ್ಯಾನೇಜ್‌ಮೆಂಟ್ ಘಟನೆಗೆ ಕ್ಷಮೆಯಾಚಿಸಿದೆ. ಜೊತೆಗೆ ತಮ್ಮ ಸಿಬ್ಬಂದಿಗೆ ಸೂಕ್ಷ್ಮತೆ ಮತ್ತು ಸಹಾನುಭೂತಿಯನ್ನು ಹೆಚ್ಚಿಸುವಂತಹ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಈ ವಿಷಯವನ್ನು ಪರಿಶೀಲಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದೆ.

ಇದನ್ನೂ ಓದಿ: ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ

ರಾಸ್ತಾದ ಸಂಸ್ಥಾಪಕ-ಪಾಲುದಾರ ಗೌಮ್ತೇಶ್ ಸಿಂಗ್ ಯುವತಿಯ ಟ್ವೀಟ್‌ಗಳಿಗೆ ಪ್ರತಿಕ್ರಿಯಿಸಿದ್ದಾರೆ. “ನಾನು ಘಟನೆಯನ್ನು ವೈಯಕ್ತಿಕವಾಗಿ ಪರಿಶೀಲಿಸುತ್ತಿದ್ದೇನೆ. ನೀವು ಅನುಭವಿಸಿದ ಕೆಟ್ಟ ಅನುಭವಕ್ಕಾಗಿ ಇಡೀ ತಂಡದ ಪರವಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಸದಸ್ಯರಲ್ಲಿ ಯಾರಾದರೂ ತಪ್ಪು ಮಾಡಿರುವುದು ಕಂಡುಬಂದರೆ, ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಘಟನೆ ಬಗ್ಗೆ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಗುರ್ಗಾಂವ್ ಪೊಲೀಸರ ಟ್ವಿಟರ್ ಖಾತೆಯು ಮುಂದಿನ ಕ್ರಮಕ್ಕಾಗಿ ಅವರ ಸಂಪರ್ಕ ವಿವರಗಳನ್ನು ನೀಡುವಂತೆ ಕೋರಿದೆ.

ಕಳೆದ ವರ್ಷ, ದೆಹಲಿಯ ಅತ್ಯಾಧುನಿಕ ರೆಸ್ಟೋರೆಂಟ್‌ನಲ್ಲಿ ಮಹಿಳೆಯೊಬ್ಬರು ತಮ್ಮ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿ ಸೀರೆ ಧರಿಸಿದ್ದಕ್ಕಾಗಿ ಪ್ರವೇಶ ನಿರಾಕರಿಸಿದ್ದ ಆರೋಪ ಕೇಳಿ ಬಂದಿತ್ತು. ಆದರೆ, ಮಹಿಳೆ ಸರ್ವರ್‌ನ ಮೇಲೆ ಹಲ್ಲೆ ನಡೆಸಿದ್ದರಿಂದ ಮಹಿಳೆಗೆ ಪ್ರವೇಶ ನಿರಾಕರಿಸಲಾಗಿತ್ತು, ಘಟನೆಯನ್ನು ವೀಡಿಯೊದಲ್ಲಿ ಸೆರೆಹಿಡಿಯಲಾಗಿದೆ ಎಂದು ರೆಸ್ಟೋರೆಂಟ್ ನಂತರ ಸ್ಪಷ್ಟಪಡಿಸಿತ್ತು.


ಇದನ್ನೂ ಓದಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...