Homeಮುಖಪುಟದೆಹಲಿ: ಅಂಗವಿಕಲ ಯುವತಿಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್‌ ಆರೋಪ, ಖಂಡನೆ ಬಳಿಕ ಕ್ಷಮೆಯಾಚನೆ

ದೆಹಲಿ: ಅಂಗವಿಕಲ ಯುವತಿಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್‌ ಆರೋಪ, ಖಂಡನೆ ಬಳಿಕ ಕ್ಷಮೆಯಾಚನೆ

- Advertisement -
- Advertisement -

ಇತರ ಗ್ರಾಹಕರಿಗೆ ತೊಂದರೆ ಉಂಟಾಗುತ್ತದೆ ಎಂದು ಗಾಲಿಕುರ್ಚಿ ಬಳಸುವ ಅಂಗವಿಕಲೆಯಾಗಿರುವ ನನಗೆ ಜನಪ್ರಿಯ ರೆಸ್ಟೋರೆಂಟ್‌ ಒಂದು ಪ್ರವೇಶ ನಿರಾಕರಿಸಿದೆ ಎಂದು ಯುವತಿ ಆರೋಪಿಸಿರುವ ಘಟನೆ ದೆಹಲಿಯ ಗುರ್ಗಾಂವ್‌ನಲ್ಲಿ ನಡೆದಿದೆ.

ತನ್ನ ಆತ್ಮೀಯ ಸ್ನೇಹಿತ ಮತ್ತು ಅವರ ಕುಟುಂಬದೊಂದಿಗೆ ಗುರ್ಗಾಂವ್‌ನ ಜನಪ್ರಿಯ ರೆಸ್ಟೋರೆಂಟ್‌ ರಾಸ್ತಾಗೆ ತೆರಳಿದ್ದು, ಗಾಲಿಕುರ್ಚಿಗೆ ಒಳಗೆ ಹೋಗಲು ಅನುಮತಿಯಿಲ್ಲ ಎಂದು ತನಗೆ ಪ್ರವೇಶ ನಿರಾಕರಿಸಿದೆ ಎಂದು ಯುವತಿ ಸೃಷ್ಟಿ ಪಾಂಡೆ ತಮ್ಮ ಟ್ವಿಟರ್‌ನಲ್ಲಿ ನೋವು ತೋಡಿಕೊಂಡಿದ್ದಾರೆ.

“ಗಾಲಿಕುರ್ಚಿ ಒಳಗೆ ಹೋಗಲು ಸಮಸ್ಯೆಯಾಗಬಹುದು ಎಂದು ಹೇಳುತ್ತಿದ್ದಾರೆ ಎಂದು ನಾವು ಭಾವಿಸಿದ್ದೇವು. ಆದರೆ ಸಮಸ್ಯೆ ಅದಾಗಿರಲಿಲ್ಲ. ನಾವು ಮ್ಯಾನೆಜ್ ಮಾಡಿಕೊಳ್ಳುತ್ತೇವೆ, ನಮಗೆ ಟೇಬಲ್ ರಿಸರ್ವ ಮಾಡಿ ಎಂದು ಅವರಿಗೆ ಹೇಳಿದೆವು. ಆದರೆ, ಮುಂದೆ ಅವರು ಹೇಳಿದ ಮಾತು ನಮ್ಮೆಲ್ಲರನ್ನೂ ಕೆಲಕಾಲ ಬೆಚ್ಚಿಬೀಳುವಂತೆ ಮಾಡಿತು” ಎಂದು ಟ್ವೀಟ್‌ನಲ್ಲಿ ಹೇಳಲಾಗಿದೆ.

“ಒಳಗೆ ಬೇರೆ ಗ್ರಾಹಕರು ತೊಂದರೆಗೊಳಗಾಗುತ್ತಾರೆ ಎಂದು ಅವರು ನನ್ನ ಕಡೆಗೆ ತೋರಿಸುತ್ತಾ ನಮಗೆ ಹೇಳಿದರು. ಜೊತೆಗೆ ತುಂಬಾ ಸುಲಭವಾಗಿ ನಮಗೆ ಪ್ರವೇಶವನ್ನು ನಿರಾಕರಿಸಿದ ಅವರು, ಹೊರಗೆ ಟೇಬಲ್ ನೀಡುತ್ತೇವೆ ಎಂದು ಸಿಬ್ಬಂದಿ ತಿಳಿಸಿದರು. ಆದರೆ, ಹೊರಗಡೆ ಟೇಬಲ್ ಸರಿಯಿರಲಿಲ್ಲ. ನನ್ನ ದೇಹವು ದುರ್ಬಲವಾಗಿರುವ ಕಾರಣ ಹೆಚ್ಚು ಕಾಲ ಶೀತದಲ್ಲಿ ಕುಳಿತುಕೊಳ್ಳಲು ಸಾಧ್ಯವಿರಲಿಲ್ಲ” ಎಂದು ಸೃಷ್ಟಿ ಪಾಂಡೆ ಹೇಳಿದ್ದರು.

ಇದನ್ನೂ ಓದಿ: ಉತ್ತರ ಪ್ರದೇಶ: ಹತ್ರಾಸ್ ಅತ್ಯಾಚಾರ ಪ್ರಕರಣ ಚುನಾವಣೆಯನ್ನು ಪ್ರಭಾವಿಸುವುದೇ?

ನನಗೆ ಘಟನೆಯಿಂದ ತುಂಬಾ ನೋವಾಗಿದೆ ಎಂಬುದನ್ನು ತಮ್ಮ ಟ್ವೀಟ್‌ಗಳಲ್ಲಿ ಸೃಷ್ಟಿ ಪಾಂಡೆ ವ್ಯಕ್ತಪಡಿಸಿದ್ದರು. ಹೀಗೆ ಒಬ್ಬ ಅಂಕವಿಕಲ ಯುವತಿಗೆ ಅಪಮಾನ ಮಾಡಿದರ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ರಾಷ್ಟ್ರ ಪ್ರಶಸ್ತಿ ವಿಜೇತ ಫಿಲ್ಮಂ ಮೇಕರ್‌ ವಿನೋದ್ ಕಪ್ರಿ, ನಟಿ, ನಿದೇಶಕಿ ಪೂಜಾ ಭಟ್, ಪತ್ರಕರ್ತೆ ನವಿಕಾ ಕುಮಾರ್‌ ಸೇರಿದಂತೆ ಹಲವು ಮಂದಿ ಘಟನೆಯನ್ನು ಖಂಡಿಸಿದ್ದಾರೆ.

ಈ ಬೆನ್ನಲ್ಲೇ ರಾಸ್ತಾ ರೆಸ್ಟೋರೆಂಟ್ ಮ್ಯಾನೇಜ್‌ಮೆಂಟ್ ಘಟನೆಗೆ ಕ್ಷಮೆಯಾಚಿಸಿದೆ. ಜೊತೆಗೆ ತಮ್ಮ ಸಿಬ್ಬಂದಿಗೆ ಸೂಕ್ಷ್ಮತೆ ಮತ್ತು ಸಹಾನುಭೂತಿಯನ್ನು ಹೆಚ್ಚಿಸುವಂತಹ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ. ಈ ವಿಷಯವನ್ನು ಪರಿಶೀಲಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದೆ.

ಇದನ್ನೂ ಓದಿ: ಬೀಬಿ ಮುಸ್ಕಾನ್‌ ಘೋಷಣೆ: ಒಂದೆಡೆ RSS ಮುಸ್ಲಿಂ ಘಟಕದ ಬೆಂಬಲ, ಇನ್ನೊಂದೆಡೆ RSS ಮುಖಂಡರ ಖಂಡನೆ

ರಾಸ್ತಾದ ಸಂಸ್ಥಾಪಕ-ಪಾಲುದಾರ ಗೌಮ್ತೇಶ್ ಸಿಂಗ್ ಯುವತಿಯ ಟ್ವೀಟ್‌ಗಳಿಗೆ ಪ್ರತಿಕ್ರಿಯಿಸಿದ್ದಾರೆ. “ನಾನು ಘಟನೆಯನ್ನು ವೈಯಕ್ತಿಕವಾಗಿ ಪರಿಶೀಲಿಸುತ್ತಿದ್ದೇನೆ. ನೀವು ಅನುಭವಿಸಿದ ಕೆಟ್ಟ ಅನುಭವಕ್ಕಾಗಿ ಇಡೀ ತಂಡದ ಪರವಾಗಿ ಕ್ಷಮೆಯಾಚಿಸುತ್ತೇನೆ. ನಮ್ಮ ಸದಸ್ಯರಲ್ಲಿ ಯಾರಾದರೂ ತಪ್ಪು ಮಾಡಿರುವುದು ಕಂಡುಬಂದರೆ, ಅವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ಘಟನೆ ಬಗ್ಗೆ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಗುರ್ಗಾಂವ್ ಪೊಲೀಸರ ಟ್ವಿಟರ್ ಖಾತೆಯು ಮುಂದಿನ ಕ್ರಮಕ್ಕಾಗಿ ಅವರ ಸಂಪರ್ಕ ವಿವರಗಳನ್ನು ನೀಡುವಂತೆ ಕೋರಿದೆ.

ಕಳೆದ ವರ್ಷ, ದೆಹಲಿಯ ಅತ್ಯಾಧುನಿಕ ರೆಸ್ಟೋರೆಂಟ್‌ನಲ್ಲಿ ಮಹಿಳೆಯೊಬ್ಬರು ತಮ್ಮ ಡ್ರೆಸ್ ಕೋಡ್ ಅನ್ನು ಉಲ್ಲಂಘಿಸಿ ಸೀರೆ ಧರಿಸಿದ್ದಕ್ಕಾಗಿ ಪ್ರವೇಶ ನಿರಾಕರಿಸಿದ್ದ ಆರೋಪ ಕೇಳಿ ಬಂದಿತ್ತು. ಆದರೆ, ಮಹಿಳೆ ಸರ್ವರ್‌ನ ಮೇಲೆ ಹಲ್ಲೆ ನಡೆಸಿದ್ದರಿಂದ ಮಹಿಳೆಗೆ ಪ್ರವೇಶ ನಿರಾಕರಿಸಲಾಗಿತ್ತು, ಘಟನೆಯನ್ನು ವೀಡಿಯೊದಲ್ಲಿ ಸೆರೆಹಿಡಿಯಲಾಗಿದೆ ಎಂದು ರೆಸ್ಟೋರೆಂಟ್ ನಂತರ ಸ್ಪಷ್ಟಪಡಿಸಿತ್ತು.


ಇದನ್ನೂ ಓದಿ: ಕೋವಿಡ್‌ ಅವಧಿಯಲ್ಲಿ ಮೋದಿಯ ವಾರಣಾಸಿ ಕಂಡ ಸಾವು ನೋವು: ಬೆಚ್ಚಿಬೀಳಿಸುವ ವರದಿ ಬಹಿರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...