Homeಮುಖಪುಟಬಂಗಾಳ ಪುರಸಭೆ ಚುನಾವಣೆ: ನಾಮಪತ್ರ ಹಿಂಪಡೆದಿದ್ದ ಮೂವರು ಬಿಜೆಪಿ ನಾಯಕರು ಟಿಎಂಸಿ ಸೇರ್ಪಡೆ

ಬಂಗಾಳ ಪುರಸಭೆ ಚುನಾವಣೆ: ನಾಮಪತ್ರ ಹಿಂಪಡೆದಿದ್ದ ಮೂವರು ಬಿಜೆಪಿ ನಾಯಕರು ಟಿಎಂಸಿ ಸೇರ್ಪಡೆ

- Advertisement -
- Advertisement -

ಪಶ್ಚಿಮ ಬಂಗಾಳದ ಗರುಲಿಯಾ ಪುರಸಭೆ ಚುನಾವಣೆಯಿಂದ ನಾಮಪತ್ರ ಹಿಂಪಡೆದಿದ್ದ ಮೂವರು ಬಿಜೆಪಿ ನಾಯಕರು ಭಾನುವಾರ ತೃಣಮೂಲ ಕಾಂಗ್ರೆಸ್‌ಗೆ ವಾಪಸ್ ಬಂದಿದ್ದಾರೆ. ಬಿಜೆಪಿ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗರುಲಿಯಾ ಸೇರಿದಂತೆ ಪಶ್ಚಿಮ ಬಂಗಾಳದ 108 ಪುರಸಭೆಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ಈ ಮೂವರನ್ನು ಬಿಜೆಪಿಯಿಂದ ಗರುಲಿಯಾ ಪುರಸಭೆಯ ವಾರ್ಡ್ ಸಂಖ್ಯೆ 12, 17 ಮತ್ತು 18 ರಿಂದ ಕಣಕ್ಕಿಳಿಸಲಾಗಿತ್ತು.

ಬಿಜೆಪಿಯ ಬ್ಯಾರಕ್‌ಪೋರ್ ಸಂಸದ ಅರ್ಜುನ್ ಸಿಂಗ್ ಅವರ ಸಂಬಂಧಿಕರಾದ ಮಾಜಿ ಶಾಸಕ ಸುನಿಲ್ ಸಿಂಗ್, ಅವರ ಮಗ ಆದಿತ್ಯ ಮತ್ತು ಗರುಲಿಯಾ ಪುರಸಭೆಯ ಮಾಜಿ ಅಧ್ಯಕ್ಷ ಸೌರಭ್ ಸಿಂಗ್ ಶನಿವಾರ ಬಿಜೆಪಿಯಿಂದ ಸಲ್ಲಿಸಿದ್ದ ತಮ್ಮ ನಾಮಪತ್ರಗಳನ್ನು ಹಿಂಪಡೆದಿದ್ದರು. ಇಂದು ತೃಣಮೂಲ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಪಶ್ಚಿಮ ಬಂಗಾಳದ ಸಚಿವ ಜ್ಯೋತಿಪ್ರಿಯೋ ಮಲ್ಲಿಕ್ ಮತ್ತು ನೈಹಾಟಿ ಶಾಸಕ ಪಾರ್ಥ ಭೌಮಿಕ್ ಅವರ ಸಮ್ಮುಖದಲ್ಲಿ ತಿತಾಘರ್ ಪಕ್ಷದ ಕಚೇರಿಯಲ್ಲಿ ಟಿಎಂಸಿಗೆ ಮರು ಸೇರ್ಪಡೆಗೊಂಡರು.

ಇದನ್ನೂ ಓದಿ: ಮೋದೀಜಿ, ಇದೇನಾ ಭಾರತೀಯ ಸಂಸ್ಕೃತಿ?: ಅಸ್ಸಾಂ ಸಿಎಂ ವಜಾಕ್ಕೆ ತೆಲಂಗಾಣ ಸಿಎಂ ಆಗ್ರಹ

“ಬಿಜೆಪಿಯ ಉತ್ತರ 24 ಪರಗಣ ಘಟಕವು ಕಾರ್ಯನಿರ್ವಹಿಸುತ್ತಿರುವ ರೀತಿಯ ಬಗ್ಗೆ ನಮಗೆ ಅತೃಪ್ತಿ ಇದೆ. ಜಿಲ್ಲೆಯಲ್ಲಿ ಪಕ್ಷದ ಸಂಘಟನಾ ನೆಲೆ ವೇಗವಾಗಿ ಕುಗ್ಗುತ್ತಿರುವಾಗಲೇ ಸ್ವಪಕ್ಷೀಯ ನಾಯಕರ ಸಂಖ್ಯೆ ಹೆಚ್ಚಿದೆ. ಅಂತಹ ಪಕ್ಷದೊಂದಿಗೆ ನಾವು ಸಂಬಂಧ ಹೊಂದಲು ಬಯಸುವುದಿಲ್ಲ” ಎಂದು ಸೌರಭ್ ಸಿಂಗ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಟಿಎಂಸಿ ತೊರೆದು ಬಿಜೆಪಿ ಸೇರಿದ್ದು ನಮ್ಮ ಕಡೆಯಿಂದ ತಪ್ಪಾಗಿದೆ ಎಂದು ಸುನಿಲ್ ಸಿಂಗ್ ಹೇಳಿದ್ದಾರೆ.

ಮೂವರ ನಡೆಯನ್ನು ಖಂಡಿಸಿರುವ ಬಿಜೆಪಿ ಸಂಸದ ಅರ್ಜುನ್ ಸಿಂಗ್ ಅವರನ್ನು “ದೇಶದ್ರೋಹಿಗಳು” ಎಂದು ಕರೆದಿದ್ದಾರೆ. ಅರ್ಜುನ್ ಸಿಂಗ್ 2019 ರಲ್ಲಿ ಟಿಎಂಸಿ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. “ಟಿಎಂಸಿಯಿಂದ ಕೊಡುಗೆಗಳನ್ನು ಪಡೆದ ಅವರು ನಮ್ಮ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಇವರೆಲ್ಲ ಅಕ್ಷರಶಃ ಬಿಜೆಪಿಯಿಂದ ಮುನ್ಸಿಪಲ್ ಚುನಾವಣೆ ಟಿಕೆಟ್‌ಗಾಗಿ ಭಿಕ್ಷೆ ಬೇಡಿದ್ದರು. ಇನ್ನು ಮುಂದೆ ಅವರು ನನ್ನ ಕುಟುಂಬವಲ್ಲ. ಬಿಜೆಪಿಯಲ್ಲಿರುವವರು ನನ್ನ ಕುಟುಂಬದ ಸದಸ್ಯರು” ಎಂದಿದ್ದಾರೆ.

ಇನ್ನು, ಇತ್ತೀಚಿನ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲು ಶ್ರಮಿಸುತ್ತಿದ್ದರೂ ತಮಗೆ ಸರಿಯಾದ ಮನ್ನಣೆ ಸಿಗುತ್ತಿಲ್ಲ ಎಂದು ಆರೋಪಿಸಿ 200 ಬಿಜೆಪಿ ಯುವ ಘಟಕದ ಸದಸ್ಯರು ಪಶ್ಚಿಮ ಮೇದಿನಿಪುರ್ ಜಿಲ್ಲೆಯ ಖರಗ್‌ಪುರ ಪ್ರದೇಶದಲ್ಲಿ ಟಿಎಂಸಿಗೆ ಇತ್ತಿಚೇಗೆ ಸೇರ್ಪಡೆಯಾಗಿದ್ದರು.


ಇದನ್ನೂ ಓದಿ: ದೆಹಲಿ: ಅಂಗವಿಕಲ ಯುವತಿಗೆ ಪ್ರವೇಶ ನಿರಾಕರಿಸಿದ ರೆಸ್ಟೋರೆಂಟ್‌ ಆರೋಪ, ಖಂಡನೆ ಬಳಿಕ ಕ್ಷಮೆಯಾಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...