Homeಮುಖಪುಟಆಶೀಶ್‌ ಮಿಶ್ರಾಗೆ ಜಾಮೀನು: ಪಂಜಾಬ್‌ಗೆ ಪಿಎಂ ಭೇಟಿ ವೇಳೆ ಪ್ರತಿಭಟನೆಗೆ ಎಸ್‌ಕೆಎಂ ಕರೆ

ಆಶೀಶ್‌ ಮಿಶ್ರಾಗೆ ಜಾಮೀನು: ಪಂಜಾಬ್‌ಗೆ ಪಿಎಂ ಭೇಟಿ ವೇಳೆ ಪ್ರತಿಭಟನೆಗೆ ಎಸ್‌ಕೆಎಂ ಕರೆ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಆಶೀಶ್‌ ಮಿಶ್ರಾನಿಗೆ (ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ) ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದ ಬೆನ್ನಲ್ಲೇ, ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮುಖಂಡರು ಪ್ರಧಾನಿ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ಘೋಷಿಸಿದ್ದಾರೆ. ನರೇಂದ್ರ ಮೋದಿಯವರು ಫೆಬ್ರವರಿ 14ರಂದು ಜಲಂಧರ್‌ಗೆ ಭೇಟಿ ನೀಡಿದ್ದಾರೆ.

ಫೆಬ್ರವರಿ 16ರಂದು ಪಠಾಣ್‌ಕೋಟ್ ಮತ್ತು ಫೆಬ್ರವರಿ 18ರಂದು ಅಬೋಹರ್‌ಗೆ ಪ್ರಧಾನಿ ಭೇಟಿ ನೀಡಲಿದ್ದು, ಈ ವೇಳೆ ಶಾಂತಿಯುತ ಪ್ರತಿಭಟನೆಗಳನ್ನು ನಡೆಸುವುದಾಗಿ ಎಸ್‌ಕೆಎಂ ನಾಯಕರು ಘೋಷಿಸಿದರು. ರೈತ ಸಂಘಗಳ ಒಕ್ಕೂಟವಾದ ಎಸ್‌ಕೆಎಂ ದೆಹಲಿಯ ಗಡಿಯಲ್ಲಿ ವರ್ಷವಿಡೀ ನಡೆದ ರೈತ ಚಳವಳಿಯ ನೇತೃತ್ವ ವಹಿಸಿತ್ತು.

ಪಂಜಾಬ್‌ ವಿಧಾನಸಭಾ ಚುನಾವಣೆಯ ಕೊನೆಯ ಹಂತದ ಪ್ರಚಾರಗಳು ನಡೆಯುತ್ತಲಿವೆ. ಮೋದಿ ಮತ್ತು ಇತರ ಹಿರಿಯ ಬಿಜೆಪಿ ನಾಯಕರು ಚುನಾವಣಾ ರ್‍ಯಾಲಿಗಳಿಗಾಗಿ ಪಂಜಾಬ್‌ಗೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 20ರಂದು ಪಂಜಾಬ್ ಚುನಾವಣೆ ನಡೆಯಲಿದೆ.

ನವೆಂಬರ್ 19, 2021ರಂದು ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸಿದ ನಂತರ ಪ್ರಧಾನಿ ಮೋದಿಯವರು ಎರಡನೇ ಬಾರಿಗೆ ಪಂಜಾಬ್‌ಗೆ ಭೇಟಿ ನೀಡಿರುವುದು ವಿಶೇಷ. ಪ್ರಧಾನಿಯವರು ಜನವರಿ 5ರಂದು ಫಿರೋಜ್‌ಪುರದಲ್ಲಿ ಬಿಜೆಪಿ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲು ನಿರ್ಧರಿಸಿದ್ದರು. ಪ್ರತಿಭಟನೆಯ ಕಾರಣ ರ್‍ಯಾಲಿಯನ್ನು ರದ್ದು ಮಾಡಿದ್ದರು.

ಪಂಜಾಬ್‌ ಪ್ರವಾಸ ಕೈಗೊಳ್ಳಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಇತರ ಹಿರಿಯ ನಾಯಕರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಲು ಮತ್ತು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಎಸ್‌ಕೆಎಂ ಮುಖಂಡರು ತಿಳಿಸಿದ್ದಾರೆ. ಈ ಬಗ್ಗೆ ಎಸ್ ಕೆಎಂ ಪೋಸ್ಟರ್ ಕೂಡ ಬಿಡುಗಡೆ ಮಾಡಿದೆ.

ಇದನ್ನೂ ಓದಿರಿ: ಯುಪಿ: ಚುನಾವಣಾ ಅಧಿಕಾರಿಯ ಕೆನ್ನೆಗೆ ಹೊಡೆದ ಬಿಜೆಪಿ ಶಾಸಕನ ವಿರುದ್ಧ ಎಫ್‌ಐಆರ್‌

ದಿ ವೈರ್‌ನೊಂದಿಗೆ ಮಾತನಾಡಿರುವ ಪಂಜಾಬ್‌ನ ಕ್ರಾಂತಿಕಾರಿ ಕಿಸಾನ್ ಒಕ್ಕೂಟದ ನಾಯಕರಾದ ದರ್ಶನ್ ಪಾಲ್, “ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದರೂ ಆಶೀಶ್‌ ಮಿಶ್ರಾನಿಗೆ ಜಾಮೀನು ನೀಡಲಾಗಿದೆ. ಅದರ ವಿರುದ್ಧ ನಮ್ಮ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು. ಅಜಯ್ ಮಿಶ್ರಾ ಅವರನ್ನು ಕೇಂದ್ರ ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಲಾಗುವುದು. ಫಿರೋಜ್‌ಪುರಕ್ಕೆ ಪಿಎಂ ಮೋದಿ ಭೇಟಿಯನ್ನು ವಿರೋಧಿಸಿ ಪ್ರತಿಭಟಿಸಿದ ರೈತರಿಗೆ ನೀಡಲಾದ ಕಿರುಕುಳ ಖಂಡಿಸಲಾಗುವುದು. ಎಂಎಸ್‌ಪಿ ಸಮಿತಿಯನ್ನು ರಚಿಸುವಲ್ಲಿ ಮೋದಿ ಸರ್ಕಾರ ವಿಫಲವಾಗಿದೆ. ಅದನ್ನು ಪ್ರಶ್ನಿಸಲಾಗುತ್ತಿದೆ. ಯುಪಿ, ಹರಿಯಾಣ, ಉತ್ತರಾಖಂಡ ಮತ್ತು ಪಂಜಾಬ್‌ನಲ್ಲಿ ರೈತರ ವಿರುದ್ಧ ಬಾಕಿ ಉಳಿದಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಒತ್ತಾಯಿಸಲಾಗುವುದು” ಎಂದು ತಿಳಿಸಿದ್ದಾರೆ.

ಫೆಬ್ರವರಿ 14ರಂದು ಗ್ರಾಮಗಳಲ್ಲಿ ಮೋದಿಯವರ ಪ್ರತಿಕೃತಿಯನ್ನು ದಹಿಸಲಿದ್ದಾರೆ. ಫೆಬ್ರವರಿ 16ರಂದು ಪಂಜಾಬ್‌ನಲ್ಲಿ ಜಿಲ್ಲಾ ಮತ್ತು ತಹಸಿಲ್ ಮಟ್ಟದಲ್ಲಿ ಎಸ್‌ಕೆಎಂ ಮುಖಂಡರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಪಾಲ್ ಹೇಳಿದ್ದಾರೆ.

ಪ್ರಧಾನಿ ಭೇಟಿಗೂ ಮುನ್ನ ರೈತರ ಬೇಡಿಕೆಗಳನ್ನು ಈಡೇರಿಸುವ ಘೋಷಣೆ ಮಾಡಿದರೆ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಎಸ್‌ಕೆಎಂ ಹಿಂಪಡೆಯಬಹುದು ಎಂದು ರೈತ ಸಂಘದ ಹಿರಿಯ ಮುಖಂಡರು ತಿಳಿಸಿದ್ದಾರೆ. ನಮ್ಮ ಬೇಡಿಕೆಗಳನ್ನು ಕಡೆಗಣಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಜನವರಿ 5ರಂದು ಫಿರೋಜ್‌ಪುರದ ಪ್ಯಾರಿಯಾನಾ ಗ್ರಾಮದಲ್ಲಿ ಮೋದಿ ವಿರುದ್ಧ ಪ್ರತಿಭಟನೆ ನಡೆಸಿದ್ದ BKU ಕ್ರಾಂತಿಕಾರಿ ಅಧ್ಯಕ್ಷ ಸುರ್ಜಿತ್ ಸಿಂಗ್ ಫೂಲ್, “ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯ ವಿಶೇಷ ತನಿಖಾ ತಂಡ (SIT) ಲಖಿಂಪುರ ಹಿಂಸಾಚಾರ ಪ್ರಕರಣದಲ್ಲಿ ಆಶಿಶ್ ಮಿಶ್ರಾ ತಪ್ಪಿತಸ್ಥ ಎಂದು ಘೋಷಿಸಿದೆ. ಗಂಭೀರ ಆರೋಪಗಳನ್ನು ಸಾಬೀತುಪಡಿಸಲು ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ ಜಾಮೀನು ನೀಡಲಾಗಿದೆ. ಸರ್ಕಾರ ನಮ್ಮ ಗಾಯದ ಮೇಲೆ ಉಪ್ಪು ಸವರುತ್ತಿದೆ” ಎಂದಿದ್ದಾರೆ.

ಫಿರೋಜ್‌ಪುರದಲ್ಲಿ ಮೋದಿ ವಿರುದ್ಧ ಪ್ರತಿಭಟನೆ ನಡೆಸಿದ ರೈತರ ವಿರುದ್ಧದ ಎಫ್‌ಐಆರ್‌ಗಳ ಕುರಿತು ಮಾತನಾಡಿದ ಫೂಲ್, “ಫಿರೋಜ್‌ಪುರ ಜಿಲ್ಲೆಯ ಕುಲ್ಗಡಿ ಪೊಲೀಸ್ ಠಾಣೆಯಲ್ಲಿ 150 ಅಪರಿಚಿತರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಈಗ ಪಂಜಾಬ್ ಪೊಲೀಸರು ಜಾಮೀನು ಪಡೆಯುವಂತೆ ರೈತರ ಮೇಲೆ ಒತ್ತಡ ಹೇರುತ್ತಿದ್ದರು. ಆದರೆ ನಾವು ಪೊಲೀಸರ ಮೊರೆ ಹೋಗಿ ಜಾಮೀನಿಗೆ ಅರ್ಜಿ ಸಲ್ಲಿಸಲು ನಿರಾಕರಿಸಿದ್ದೇವೆ. ನಮ್ಮ ಯೂನಿಯನ್ ಸದಸ್ಯರನ್ನು ಬಂಧಿಸಿದರೆ ನಾವು ಪ್ರತಿಭಟನೆಗಳನ್ನು ನಡೆಸುತ್ತೇವೆ” ಎಂದು ಪ್ರತಿಕ್ರಿಯಿಸಿದ್ದಾರೆ.


ಇದನ್ನೂ ಓದಿರಿ: ಬಂಗಾಳ ಪುರಸಭೆ ಚುನಾವಣೆ: ನಾಮಪತ್ರ ಹಿಂಪಡೆದಿದ್ದ ಮೂವರು ಬಿಜೆಪಿ ನಾಯಕರು ಟಿಎಂಸಿ ಸೇರ್ಪಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...