Homeಮುಖಪುಟ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಗಿಫ್ಟ್‌ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಬಂದಿದೆಯೇ? ಎಚ್ಚರ!

‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಗಿಫ್ಟ್‌ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಬಂದಿದೆಯೇ? ಎಚ್ಚರ!

ಪ್ರೇಮಿಗಳ ದಿನಗಳ ನೆಪದಲ್ಲಿ ಖಾಸಗೀ ವಿವರಗಳನ್ನು ಕದಿಯುತ್ತಿರುವ ಬೆಳವಣಿಗೆ ಬೆಳಕಿಗೆ ಬಂದಿದೆ.

- Advertisement -
- Advertisement -

ಪ್ರೇಮಿಗಳ ದಿನಗಳ ನೆಪದಲ್ಲಿ ಖಾಸಗೀ ವಿವರಗಳನ್ನು ಕದಿಯುತ್ತಿರುವ ಬೆಳವಣಿಗೆ ಬೆಳಕಿಗೆ ಬಂದಿದೆ. ಈ ಕುರಿತು ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದ್ದು, ವಾಟ್ಸ್‌ಆಪ್‌ನಲ್ಲಿ ಬರುತ್ತಿರುವ ಮೋಸದ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ಎಚ್ಚರಿಕೆ ನೀಡಿದೆ.

ಮೋಸದ ಜಾಲವನ್ನು ಹೊಂದಿರುವ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಹರಿದಾಡಿದೆ. ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಭಾಗವಾಗಿ ಉಚಿತ ಉಡುಗೊರೆಯನ್ನು ಗೆಲ್ಲುವ ಅವಕಾಶ ಎಂದು ನಕಲಿ ಲಿಂಕ್‌ ಹರಡಲಾಗಿದೆ.

ಈ ಲಿಂಕ್‌ಗಳನ್ನು ನೀವು ಪ್ರವೇಶಿಸಿದರೆ, ಇಲ್ಲಿನ ಸೂಚನೆಗಳನ್ನು ಅನುಸರಿಸಿದರೆ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಮೂರನೇ ವ್ಯಕ್ತಿ ಕದಿಯಬಹುದು ಅಥವಾ ಮಾಲ್‌ವೇರ್‌ (ವೈರಸ್‌ ಸಾಫ್ಟ್‌ವೇರ್) ನಿಮ್ಮ ಮೊಬೈಲ್ ಪ್ರವೇಶಿಸಬಹುದು ಎಂದು CyberPeace Foundation ಮತ್ತು Autobot Infosec ಸಂಸ್ಥೆಗಳು ಎಚ್ಚರಿಸಿವೆ.

“ಒಬ್ಬ ಬಳಕೆದಾರನು ಈ ಬಲೆಗೆ ಸಿಲುಕಿದರೆ, ಅದು ಮೈಕ್ರೊಫೋನ್, ಕ್ಯಾಮೆರಾ, ಪಠ್ಯ ಸಂದೇಶಗಳು, ಸಂಪರ್ಕಗಳು, ಚಿತ್ರಗಳು, ವೀಡಿಯೊಗಳು, ಬ್ಯಾಂಕಿಂಗ್ ಅಪ್ಲಿಕೇಶನ್‌ಗಳು ಇತ್ಯಾದಿಗಳಿಗೆ ಅನ್ಯರು ಪ್ರವೇಶಿಸಲು ಸಾಧ್ಯವಾಗಬಹುದು. ಜೊತೆಗೆ ಹಣಕಾಸಿನ ನಷ್ಟಗಳು ಉಂಟಾಗಬಹುದು” ಎಂದು ವರದಿ ಹೇಳಿದೆ.

PC: The Quint

ಅಮೇಜಾನ್‌ ಸಂಸ್ಥೆಯ ಪ್ರತಿಕ್ರಿಯೆಗಾಗಿ ಕಾಯುತ್ತಿರುವುದಾಗಿ ದಿ ಕ್ವಿಂಟ್‌ ತಿಳಿಸಿದೆ.

ಅಮೇಜಾನ್ ಸಂಸ್ಥೆಯಿಂದ ಪ್ರೇಮಿಗಳ ದಿನದ ಉಡುಗೊರೆ… 15,000 ಉಚಿತ ಉಡುಗೊರೆಗಳು… ಎಂದು ಆ ಲಿಂಕ್‌‌ ನಿಮ್ಮ ಗಮನ ಸೆಳೆಯುತ್ತದೆ.

ನೀವು ತಲುಪುವ ಪುಟವು ಅಮೆಜಾನ್ ಬ್ಯಾನರ್, ವಿವಿಧ ಎಲೆಕ್ಟ್ರಾನಿಕ್ಸ್‌ಗಳ ಛಾಯಾಚಿತ್ರವನ್ನು ಹೊಂದಿದೆ. ವಿಶೇಷ ಉಡುಗೊರೆಯನ್ನು ಗೆಲ್ಲಲು ಸಣ್ಣ ರಸಪ್ರಶ್ನೆಯನ್ನು ಪೂರ್ಣಗೊಳಿಸಲು ಕೇಳಲಾಗುತ್ತದೆ.

ಇದರ ಕೆಳಭಾಗದಲ್ಲಿ ನಕಲಿ ಕಾಮೆಂಟ್‌ಗಳ ವಿಭಾಗವಿದೆ. ಅಲ್ಲಿ ಬಳಕೆದಾರರು ಗಿಫ್ಟ್‌ ಕೊಡುತ್ತಿರುವುದು ನಿಜವೆಂದು ದೃಢೀಕರಿಸುತ್ತಾರೆ. ಜೊತೆಗೆ ಸಕಾರಾತ್ಮಕ ಅನುಭವಗಳನ್ನು ಅಲ್ಲಿ ಹಂಚಿಕೊಳ್ಳಲಾಗಿದೆ.

ಒಮ್ಮೆ ನೀವು ಕೆಲವು ಮೂಲಭೂತ ಪ್ರಶ್ನೆಗಳಿಗೆ ಉತ್ತರಿಸಿದರೆ (ನಿಮಗೆ ಅಮೆಜಾನ್ ತಿಳಿದಿದೆಯೇ? ನಿಮ್ಮ ವಯಸ್ಸು ಎಷ್ಟು?) ಅಭಿನಂದನಾ ಸಂದೇಶ ನಿಮಗೆ ಕಾಣಿಸಿಕೊಳ್ಳುತ್ತದೆ. ಅದರ ನಂತರ ಬಳಕೆದಾರರು ಉಡುಗೊರೆಯನ್ನು ಆಯ್ಕೆ ಮಾಡಿ ಬಹುಮಾನಗಳನ್ನು ಗೆಲ್ಲಲು ಮೂರು ಅವಕಾಶಗಳನ್ನು ನೀಡಲಾಗುತ್ತದೆ.

ನೀವು “Apple iPhone 11 128GB” ಅನ್ನು ಗೆದ್ದಿರುವಿರಿ ಎಂದು ಅದು ನಿಮಗೆ ತಿಳಿಸುತ್ತದೆ ಮತ್ತು WhatsApp ನಲ್ಲಿ ಈ ಅಭಿಯಾನವನ್ನು ಹಂಚಿಕೊಳ್ಳಲು ನಿಮಗೆ ಸೂಚಿಸಲಾಗುತ್ತದೆ.

 

PC: The Quint

ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಬಳಕೆದಾರರು ವಾಟ್ಸಾಪ್ ಬಟನ್ ಅನ್ನು ಹಲವು ಬಾರಿ ಕ್ಲಿಕ್ ಮಾಡಬೇಕಾಗುತ್ತದೆ ಎಂದು ವರದಿಯು ಗಮನಿಸಿದೆ. ನಿಮ್ಮ “ನೋಂದಣಿ”ಯನ್ನು ನೀವು ಪೂರ್ಣಗೊಳಿಸಿದ ನಂತರ, ಅದು ನಿಮ್ಮನ್ನು ಬಹು ಜಾಹೀರಾತು ವೆಬ್‌ಪುಟಗಳಿಗೆ ಕರೆದೊಯ್ಯುತ್ತದೆ.

ಸಾಮಾಜಿಕ ಮಾಧ್ಯಮದ ಪ್ಲಾಟ್‌ಫಾರ್ಮ್‌ಗಳಲ್ಲಿ ಅಂತಹ ಯಾವುದೇ ಲಿಂಕ್‌ಗಳನ್ನು ಕ್ಲಿಕ್ ಮಾಡುವುದನ್ನು ತಪ್ಪಿಸಲು ಮತ್ತು ಬ್ಯಾಂಕಿಂಗ್ ಮಾಹಿತಿಯಂತಹ ಗೌಪ್ಯ ವಿವರಗಳನ್ನು ಹಂಚಿಕೊಳ್ಳುವುದನ್ನು ತಡೆಯಲು ವರದಿ ಎಚ್ಚರಿಸಿದೆ. ಜನರು ಲಿಂಕ್‌ಗಳನ್ನು ಮೊದಲು ಪರಿಶೀಲಿಸದೆ ಹಂಚಿಕೊಳ್ಳಬೇಡಿ ಎಂದೂ ತಿಳಿಸಿದೆ.


ಇದನ್ನೂ ಓದಿರಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...