Homeಮುಖಪುಟ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಗಿಫ್ಟ್‌ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಬಂದಿದೆಯೇ? ಎಚ್ಚರ!

‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಗಿಫ್ಟ್‌ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಬಂದಿದೆಯೇ? ಎಚ್ಚರ!

ಪ್ರೇಮಿಗಳ ದಿನಗಳ ನೆಪದಲ್ಲಿ ಖಾಸಗೀ ವಿವರಗಳನ್ನು ಕದಿಯುತ್ತಿರುವ ಬೆಳವಣಿಗೆ ಬೆಳಕಿಗೆ ಬಂದಿದೆ.

- Advertisement -
- Advertisement -

ಪ್ರೇಮಿಗಳ ದಿನಗಳ ನೆಪದಲ್ಲಿ ಖಾಸಗೀ ವಿವರಗಳನ್ನು ಕದಿಯುತ್ತಿರುವ ಬೆಳವಣಿಗೆ ಬೆಳಕಿಗೆ ಬಂದಿದೆ. ಈ ಕುರಿತು ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದ್ದು, ವಾಟ್ಸ್‌ಆಪ್‌ನಲ್ಲಿ ಬರುತ್ತಿರುವ ಮೋಸದ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ಎಚ್ಚರಿಕೆ ನೀಡಿದೆ.

ಮೋಸದ ಜಾಲವನ್ನು ಹೊಂದಿರುವ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಹರಿದಾಡಿದೆ. ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಭಾಗವಾಗಿ ಉಚಿತ ಉಡುಗೊರೆಯನ್ನು ಗೆಲ್ಲುವ ಅವಕಾಶ ಎಂದು ನಕಲಿ ಲಿಂಕ್‌ ಹರಡಲಾಗಿದೆ.

ಈ ಲಿಂಕ್‌ಗಳನ್ನು ನೀವು ಪ್ರವೇಶಿಸಿದರೆ, ಇಲ್ಲಿನ ಸೂಚನೆಗಳನ್ನು ಅನುಸರಿಸಿದರೆ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಮೂರನೇ ವ್ಯಕ್ತಿ ಕದಿಯಬಹುದು ಅಥವಾ ಮಾಲ್‌ವೇರ್‌ (ವೈರಸ್‌ ಸಾಫ್ಟ್‌ವೇರ್) ನಿಮ್ಮ ಮೊಬೈಲ್ ಪ್ರವೇಶಿಸಬಹುದು ಎಂದು CyberPeace Foundation ಮತ್ತು Autobot Infosec ಸಂಸ್ಥೆಗಳು ಎಚ್ಚರಿಸಿವೆ.

“ಒಬ್ಬ ಬಳಕೆದಾರನು ಈ ಬಲೆಗೆ ಸಿಲುಕಿದರೆ, ಅದು ಮೈಕ್ರೊಫೋನ್, ಕ್ಯಾಮೆರಾ, ಪಠ್ಯ ಸಂದೇಶಗಳು, ಸಂಪರ್ಕಗಳು, ಚಿತ್ರಗಳು, ವೀಡಿಯೊಗಳು, ಬ್ಯಾಂಕಿಂಗ್ ಅಪ್ಲಿಕೇಶನ್‌ಗಳು ಇತ್ಯಾದಿಗಳಿಗೆ ಅನ್ಯರು ಪ್ರವೇಶಿಸಲು ಸಾಧ್ಯವಾಗಬಹುದು. ಜೊತೆಗೆ ಹಣಕಾಸಿನ ನಷ್ಟಗಳು ಉಂಟಾಗಬಹುದು” ಎಂದು ವರದಿ ಹೇಳಿದೆ.

PC: The Quint

ಅಮೇಜಾನ್‌ ಸಂಸ್ಥೆಯ ಪ್ರತಿಕ್ರಿಯೆಗಾಗಿ ಕಾಯುತ್ತಿರುವುದಾಗಿ ದಿ ಕ್ವಿಂಟ್‌ ತಿಳಿಸಿದೆ.

ಅಮೇಜಾನ್ ಸಂಸ್ಥೆಯಿಂದ ಪ್ರೇಮಿಗಳ ದಿನದ ಉಡುಗೊರೆ… 15,000 ಉಚಿತ ಉಡುಗೊರೆಗಳು… ಎಂದು ಆ ಲಿಂಕ್‌‌ ನಿಮ್ಮ ಗಮನ ಸೆಳೆಯುತ್ತದೆ.

ನೀವು ತಲುಪುವ ಪುಟವು ಅಮೆಜಾನ್ ಬ್ಯಾನರ್, ವಿವಿಧ ಎಲೆಕ್ಟ್ರಾನಿಕ್ಸ್‌ಗಳ ಛಾಯಾಚಿತ್ರವನ್ನು ಹೊಂದಿದೆ. ವಿಶೇಷ ಉಡುಗೊರೆಯನ್ನು ಗೆಲ್ಲಲು ಸಣ್ಣ ರಸಪ್ರಶ್ನೆಯನ್ನು ಪೂರ್ಣಗೊಳಿಸಲು ಕೇಳಲಾಗುತ್ತದೆ.

ಇದರ ಕೆಳಭಾಗದಲ್ಲಿ ನಕಲಿ ಕಾಮೆಂಟ್‌ಗಳ ವಿಭಾಗವಿದೆ. ಅಲ್ಲಿ ಬಳಕೆದಾರರು ಗಿಫ್ಟ್‌ ಕೊಡುತ್ತಿರುವುದು ನಿಜವೆಂದು ದೃಢೀಕರಿಸುತ್ತಾರೆ. ಜೊತೆಗೆ ಸಕಾರಾತ್ಮಕ ಅನುಭವಗಳನ್ನು ಅಲ್ಲಿ ಹಂಚಿಕೊಳ್ಳಲಾಗಿದೆ.

ಒಮ್ಮೆ ನೀವು ಕೆಲವು ಮೂಲಭೂತ ಪ್ರಶ್ನೆಗಳಿಗೆ ಉತ್ತರಿಸಿದರೆ (ನಿಮಗೆ ಅಮೆಜಾನ್ ತಿಳಿದಿದೆಯೇ? ನಿಮ್ಮ ವಯಸ್ಸು ಎಷ್ಟು?) ಅಭಿನಂದನಾ ಸಂದೇಶ ನಿಮಗೆ ಕಾಣಿಸಿಕೊಳ್ಳುತ್ತದೆ. ಅದರ ನಂತರ ಬಳಕೆದಾರರು ಉಡುಗೊರೆಯನ್ನು ಆಯ್ಕೆ ಮಾಡಿ ಬಹುಮಾನಗಳನ್ನು ಗೆಲ್ಲಲು ಮೂರು ಅವಕಾಶಗಳನ್ನು ನೀಡಲಾಗುತ್ತದೆ.

ನೀವು “Apple iPhone 11 128GB” ಅನ್ನು ಗೆದ್ದಿರುವಿರಿ ಎಂದು ಅದು ನಿಮಗೆ ತಿಳಿಸುತ್ತದೆ ಮತ್ತು WhatsApp ನಲ್ಲಿ ಈ ಅಭಿಯಾನವನ್ನು ಹಂಚಿಕೊಳ್ಳಲು ನಿಮಗೆ ಸೂಚಿಸಲಾಗುತ್ತದೆ.

 

PC: The Quint

ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಬಳಕೆದಾರರು ವಾಟ್ಸಾಪ್ ಬಟನ್ ಅನ್ನು ಹಲವು ಬಾರಿ ಕ್ಲಿಕ್ ಮಾಡಬೇಕಾಗುತ್ತದೆ ಎಂದು ವರದಿಯು ಗಮನಿಸಿದೆ. ನಿಮ್ಮ “ನೋಂದಣಿ”ಯನ್ನು ನೀವು ಪೂರ್ಣಗೊಳಿಸಿದ ನಂತರ, ಅದು ನಿಮ್ಮನ್ನು ಬಹು ಜಾಹೀರಾತು ವೆಬ್‌ಪುಟಗಳಿಗೆ ಕರೆದೊಯ್ಯುತ್ತದೆ.

ಸಾಮಾಜಿಕ ಮಾಧ್ಯಮದ ಪ್ಲಾಟ್‌ಫಾರ್ಮ್‌ಗಳಲ್ಲಿ ಅಂತಹ ಯಾವುದೇ ಲಿಂಕ್‌ಗಳನ್ನು ಕ್ಲಿಕ್ ಮಾಡುವುದನ್ನು ತಪ್ಪಿಸಲು ಮತ್ತು ಬ್ಯಾಂಕಿಂಗ್ ಮಾಹಿತಿಯಂತಹ ಗೌಪ್ಯ ವಿವರಗಳನ್ನು ಹಂಚಿಕೊಳ್ಳುವುದನ್ನು ತಡೆಯಲು ವರದಿ ಎಚ್ಚರಿಸಿದೆ. ಜನರು ಲಿಂಕ್‌ಗಳನ್ನು ಮೊದಲು ಪರಿಶೀಲಿಸದೆ ಹಂಚಿಕೊಳ್ಳಬೇಡಿ ಎಂದೂ ತಿಳಿಸಿದೆ.


ಇದನ್ನೂ ಓದಿರಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...