Homeಮುಖಪುಟ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಗಿಫ್ಟ್‌ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಬಂದಿದೆಯೇ? ಎಚ್ಚರ!

‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಗಿಫ್ಟ್‌ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಬಂದಿದೆಯೇ? ಎಚ್ಚರ!

ಪ್ರೇಮಿಗಳ ದಿನಗಳ ನೆಪದಲ್ಲಿ ಖಾಸಗೀ ವಿವರಗಳನ್ನು ಕದಿಯುತ್ತಿರುವ ಬೆಳವಣಿಗೆ ಬೆಳಕಿಗೆ ಬಂದಿದೆ.

- Advertisement -
- Advertisement -

ಪ್ರೇಮಿಗಳ ದಿನಗಳ ನೆಪದಲ್ಲಿ ಖಾಸಗೀ ವಿವರಗಳನ್ನು ಕದಿಯುತ್ತಿರುವ ಬೆಳವಣಿಗೆ ಬೆಳಕಿಗೆ ಬಂದಿದೆ. ಈ ಕುರಿತು ‘ದಿ ಕ್ವಿಂಟ್‌’ ಜಾಲತಾಣ ವರದಿ ಮಾಡಿದ್ದು, ವಾಟ್ಸ್‌ಆಪ್‌ನಲ್ಲಿ ಬರುತ್ತಿರುವ ಮೋಸದ ಲಿಂಕ್‌ಗಳನ್ನು ಕ್ಲಿಕ್ ಮಾಡದಂತೆ ಎಚ್ಚರಿಕೆ ನೀಡಿದೆ.

ಮೋಸದ ಜಾಲವನ್ನು ಹೊಂದಿರುವ ಲಿಂಕ್‌ ವಾಟ್ಸ್‌ಆಪ್‌ನಲ್ಲಿ ಹರಿದಾಡಿದೆ. ‘ಅಮೆಜಾನ್‌ ವ್ಯಾಲೆಂಟೈನ್ಸ್ ಡೇ’ ಭಾಗವಾಗಿ ಉಚಿತ ಉಡುಗೊರೆಯನ್ನು ಗೆಲ್ಲುವ ಅವಕಾಶ ಎಂದು ನಕಲಿ ಲಿಂಕ್‌ ಹರಡಲಾಗಿದೆ.

ಈ ಲಿಂಕ್‌ಗಳನ್ನು ನೀವು ಪ್ರವೇಶಿಸಿದರೆ, ಇಲ್ಲಿನ ಸೂಚನೆಗಳನ್ನು ಅನುಸರಿಸಿದರೆ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಮೂರನೇ ವ್ಯಕ್ತಿ ಕದಿಯಬಹುದು ಅಥವಾ ಮಾಲ್‌ವೇರ್‌ (ವೈರಸ್‌ ಸಾಫ್ಟ್‌ವೇರ್) ನಿಮ್ಮ ಮೊಬೈಲ್ ಪ್ರವೇಶಿಸಬಹುದು ಎಂದು CyberPeace Foundation ಮತ್ತು Autobot Infosec ಸಂಸ್ಥೆಗಳು ಎಚ್ಚರಿಸಿವೆ.

“ಒಬ್ಬ ಬಳಕೆದಾರನು ಈ ಬಲೆಗೆ ಸಿಲುಕಿದರೆ, ಅದು ಮೈಕ್ರೊಫೋನ್, ಕ್ಯಾಮೆರಾ, ಪಠ್ಯ ಸಂದೇಶಗಳು, ಸಂಪರ್ಕಗಳು, ಚಿತ್ರಗಳು, ವೀಡಿಯೊಗಳು, ಬ್ಯಾಂಕಿಂಗ್ ಅಪ್ಲಿಕೇಶನ್‌ಗಳು ಇತ್ಯಾದಿಗಳಿಗೆ ಅನ್ಯರು ಪ್ರವೇಶಿಸಲು ಸಾಧ್ಯವಾಗಬಹುದು. ಜೊತೆಗೆ ಹಣಕಾಸಿನ ನಷ್ಟಗಳು ಉಂಟಾಗಬಹುದು” ಎಂದು ವರದಿ ಹೇಳಿದೆ.

PC: The Quint

ಅಮೇಜಾನ್‌ ಸಂಸ್ಥೆಯ ಪ್ರತಿಕ್ರಿಯೆಗಾಗಿ ಕಾಯುತ್ತಿರುವುದಾಗಿ ದಿ ಕ್ವಿಂಟ್‌ ತಿಳಿಸಿದೆ.

ಅಮೇಜಾನ್ ಸಂಸ್ಥೆಯಿಂದ ಪ್ರೇಮಿಗಳ ದಿನದ ಉಡುಗೊರೆ… 15,000 ಉಚಿತ ಉಡುಗೊರೆಗಳು… ಎಂದು ಆ ಲಿಂಕ್‌‌ ನಿಮ್ಮ ಗಮನ ಸೆಳೆಯುತ್ತದೆ.

ನೀವು ತಲುಪುವ ಪುಟವು ಅಮೆಜಾನ್ ಬ್ಯಾನರ್, ವಿವಿಧ ಎಲೆಕ್ಟ್ರಾನಿಕ್ಸ್‌ಗಳ ಛಾಯಾಚಿತ್ರವನ್ನು ಹೊಂದಿದೆ. ವಿಶೇಷ ಉಡುಗೊರೆಯನ್ನು ಗೆಲ್ಲಲು ಸಣ್ಣ ರಸಪ್ರಶ್ನೆಯನ್ನು ಪೂರ್ಣಗೊಳಿಸಲು ಕೇಳಲಾಗುತ್ತದೆ.

ಇದರ ಕೆಳಭಾಗದಲ್ಲಿ ನಕಲಿ ಕಾಮೆಂಟ್‌ಗಳ ವಿಭಾಗವಿದೆ. ಅಲ್ಲಿ ಬಳಕೆದಾರರು ಗಿಫ್ಟ್‌ ಕೊಡುತ್ತಿರುವುದು ನಿಜವೆಂದು ದೃಢೀಕರಿಸುತ್ತಾರೆ. ಜೊತೆಗೆ ಸಕಾರಾತ್ಮಕ ಅನುಭವಗಳನ್ನು ಅಲ್ಲಿ ಹಂಚಿಕೊಳ್ಳಲಾಗಿದೆ.

ಒಮ್ಮೆ ನೀವು ಕೆಲವು ಮೂಲಭೂತ ಪ್ರಶ್ನೆಗಳಿಗೆ ಉತ್ತರಿಸಿದರೆ (ನಿಮಗೆ ಅಮೆಜಾನ್ ತಿಳಿದಿದೆಯೇ? ನಿಮ್ಮ ವಯಸ್ಸು ಎಷ್ಟು?) ಅಭಿನಂದನಾ ಸಂದೇಶ ನಿಮಗೆ ಕಾಣಿಸಿಕೊಳ್ಳುತ್ತದೆ. ಅದರ ನಂತರ ಬಳಕೆದಾರರು ಉಡುಗೊರೆಯನ್ನು ಆಯ್ಕೆ ಮಾಡಿ ಬಹುಮಾನಗಳನ್ನು ಗೆಲ್ಲಲು ಮೂರು ಅವಕಾಶಗಳನ್ನು ನೀಡಲಾಗುತ್ತದೆ.

ನೀವು “Apple iPhone 11 128GB” ಅನ್ನು ಗೆದ್ದಿರುವಿರಿ ಎಂದು ಅದು ನಿಮಗೆ ತಿಳಿಸುತ್ತದೆ ಮತ್ತು WhatsApp ನಲ್ಲಿ ಈ ಅಭಿಯಾನವನ್ನು ಹಂಚಿಕೊಳ್ಳಲು ನಿಮಗೆ ಸೂಚಿಸಲಾಗುತ್ತದೆ.

 

PC: The Quint

ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಬಳಕೆದಾರರು ವಾಟ್ಸಾಪ್ ಬಟನ್ ಅನ್ನು ಹಲವು ಬಾರಿ ಕ್ಲಿಕ್ ಮಾಡಬೇಕಾಗುತ್ತದೆ ಎಂದು ವರದಿಯು ಗಮನಿಸಿದೆ. ನಿಮ್ಮ “ನೋಂದಣಿ”ಯನ್ನು ನೀವು ಪೂರ್ಣಗೊಳಿಸಿದ ನಂತರ, ಅದು ನಿಮ್ಮನ್ನು ಬಹು ಜಾಹೀರಾತು ವೆಬ್‌ಪುಟಗಳಿಗೆ ಕರೆದೊಯ್ಯುತ್ತದೆ.

ಸಾಮಾಜಿಕ ಮಾಧ್ಯಮದ ಪ್ಲಾಟ್‌ಫಾರ್ಮ್‌ಗಳಲ್ಲಿ ಅಂತಹ ಯಾವುದೇ ಲಿಂಕ್‌ಗಳನ್ನು ಕ್ಲಿಕ್ ಮಾಡುವುದನ್ನು ತಪ್ಪಿಸಲು ಮತ್ತು ಬ್ಯಾಂಕಿಂಗ್ ಮಾಹಿತಿಯಂತಹ ಗೌಪ್ಯ ವಿವರಗಳನ್ನು ಹಂಚಿಕೊಳ್ಳುವುದನ್ನು ತಡೆಯಲು ವರದಿ ಎಚ್ಚರಿಸಿದೆ. ಜನರು ಲಿಂಕ್‌ಗಳನ್ನು ಮೊದಲು ಪರಿಶೀಲಿಸದೆ ಹಂಚಿಕೊಳ್ಳಬೇಡಿ ಎಂದೂ ತಿಳಿಸಿದೆ.


ಇದನ್ನೂ ಓದಿರಿ: ಗೂಡಾಚರ್ಯೆಯ ಪೆಗಾಸಸ್‌‌ ಸ್ಪೈವೇರ್‌‌ಅನ್ನು ಭಾರತ ಖರೀದಿಸಿದೆ: ನ್ಯೂಯಾರ್ಕ್ ಟೈಮ್ಸ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...