Homeಕರ್ನಾಟಕಸುಡುಗಾಡುಸಿದ್ದರಿಗೆ ಅವಮಾನ: ಸಚಿವ ವಿ.ಸೋಮಣ್ಣ ವಿರುದ್ಧ ದೂರು ದಾಖಲು

ಸುಡುಗಾಡುಸಿದ್ದರಿಗೆ ಅವಮಾನ: ಸಚಿವ ವಿ.ಸೋಮಣ್ಣ ವಿರುದ್ಧ ದೂರು ದಾಖಲು

- Advertisement -
- Advertisement -

“ಸುಡುಗಾಡುಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ” ಎಂದು ವಸತಿ ಸಚಿವ ವಿ.ಸೋಮಣ್ಣ ನೀಡಿರುವ ಹೇಳಿಕೆಯ ವಿರುದ್ಧ ಕರ್ನಾಟಕ ರಾಜ್ಯ ಸುಡುಗಾಡುಸಿದ್ಧ ಮಹಾ ಸಂಘವು ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗಕ್ಕೆ ದೂರು ನೀಡಿದೆ.

“ಸುಡುಗಾಡುಸಿದ್ದ ಮಾಡಿದ್ದನ್ನು ನಾವು ಸರಿ ಮಾಡಿದ್ದೇವೆ” ಎಂದು ರಾಜ್ಯ ಸರ್ಕಾರದ ವಸತಿ ಸಚಿವ ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಅವರು ಯಾರ ಮೇಲೆಯೇ ನೀಡಿರಲಿ ಅಥವಾ ಯಾವ ಕಾರಣಕ್ಕೆ ನೀಡಿರಲಿ ಅದು ಸುಡುಗಾಡುಸಿದ್ದ ಸಮುದಾಯದ ಮೇಲೆ ಕಳಂಕ ನೀಡುವಂತಹ ಹೇಯ ಹೇಳಿಕೆಯಾಗಿದೆ” ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಹನುಮಂತಪ್ಪ ದೂರಿನಲ್ಲಿ ಆರೋಪಿಸಿದ್ದಾರೆ.

ಸುಡುಗಾಡುಸಿದ್ಧ ಸಮುದಾಯ ಈ ನೆಲದ ಅತ್ಯಂತ ಪ್ರಾಚೀನ ಸಮುದಾಯವಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿದ್ದು, ಪಾರಂಪರಿಕ ಸಿದ್ಧ ಔಷಧಿಯನ್ನು ನೀಡುತ್ತಾ ತಲೆತಲಾಂತರಗಳಿಂದ ಸಮಾಜದ ಆರೋಗ್ಯ ಮತ್ತು ಸ್ವಾಸ್ಥ್ಯವನ್ನು ಕಾಪಾಡಿಕೊಂಡು ಬಂದಿದೆ. ನಾಡಿನಲ್ಲಿ ಸುಮಾರು 20 ಲಕ್ಷ ಜನರು ಈ ಪರಂಪರೆಯಿಂದ ಬಂದವರಾಗಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ನನ್ನ ಸಮುದಾಯದ ಕುರಿತು ಅತ್ಯಂತ ನೀಚವಾಗಿ ಮಾತನಾಡಿರುವುದರಿಂದ ನನ್ನ ಇಡೀ ಸಮುದಾಯಕ್ಕೆ ಜಾತಿ ನಿಂದನೆಯಾಗಿದೆ. ಅಪಾರ ಅವಮಾನ, ಮಾನನಷ್ಟ ಹಾಗೂ ಜನಾಂಗಕ್ಕೆ ಕಳಂಕ ಉಂಟಾಗಿದೆ. ಈ ಕಾರಣಕ್ಕೆ ತಪ್ಪಿತಸ್ಥ ವಿ.ಸೋಮಣ್ಣನವರ ವಿರುದ್ಧ ತೀವ್ರ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ವಿನಂತಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡುತ್ತಾ ವಿ.ಸೋಮಣ್ಣ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಹೇಳಿಕೆ ನೀಡಿದ್ದರು. “ಅವರ ಕಾಲದಲ್ಲಿ ಬರೀ ಘೋಷಣೆ ಆಗಿತ್ತು. ನಾವು ಮನೆ ಕಟ್ಟಿಕೊಡುತ್ತಿದ್ದೇವೆ. ಇದು ನಿರಂತರ ಪ್ರಕ್ರಿಯೆಯಾಗಿದೆ. ರಾಜಕಾರಣಕ್ಕಾಗಿ ನನ್ನ ಮೇಲೆ ಆರೋಪ ಮಾಡಬೇಡಿ” ಎನ್ನುತ್ತಾ, ಸುಡುಗಾಡು ಸಿದ್ಧ ಜಾತಿಯನ್ನು ಅಪಮಾನಿಸಿ ಹೇಳಿಕೆ ನೀಡಿದ್ದರು.

ಇದನ್ನೂ ಓದಿರಿ: ಬೆಂಗಳೂರು: ವಿಕಲಾಂಗ ಮಹಿಳೆಯ ಮೇಲೆ ಟ್ರಾಫಿಕ್‌ ಎಎಸ್‌ಐ ಹಲ್ಲೆ; ಮಹಿಳೆಯ ಮೇಲೆಯೇ ಪ್ರಕರಣ ದಾಖಲು!

ಬೈಗುಳಗಳಿಗೂ ಈ ಸಮುದಾಯಗಳೇ ಬೇಕಾ?: ಸಿ.ಎಸ್.ದ್ವಾರಕನಾಥ್‌

ವಿ.ಸೋಮಣ್ಣ ಅವರ ಹೇಳಿಕೆಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು, ಅಲೆಮಾರಿ ಬುಡಕಟ್ಟು ಮಹಾಸಭಾ ಗೌರವಾಧ್ಯಕ್ಷರೂ ಆದ ಸಿ.ಎಸ್.ದ್ವಾರಕನಾಥ್‌ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, “ಯಾರನ್ನು ಬೈಯಬೇಕಾದರೂ ಸುಡುಗಾಡು ಸಿದ್ದರನ್ನು ತೆಗೆದುಕೊಳ್ಳುತ್ತಾರೆ, ದೊಂಬರನ್ನು ತೆಗೆದುಕೊಳ್ಳುತ್ತಾರೆ, ದರ್ವೇಸಿಗಳನ್ನು ತೆಗೆದುಕೊಳ್ಳುತ್ತಾರೆ, ಸವಿತಾ ಸಮಾಜವನ್ನು ತೆಗೆದುಕೊಳ್ಳುತ್ತಾರೆ. ಬೈಗುಳಗಳಿಗೂ ಇದೇ ಸಮುದಾಯಗಳು ಇವರಿಗೆ ಬೇಕಾ?” ಎಂದು ಪ್ರಶ್ನಿಸಿದರು.

“ಆ ಸಮುದಾಯಗಳ ಬಗ್ಗೆ ಇವರಿಗೆ ಸ್ಪಷ್ಟವಾದ ಅರಿವು ಹಾಗೂ ಗೌರವ ಇರಬೇಕು. ಇಲ್ಲದಿದ್ದರೆ ಜಾತಿ ಅಹಂಕಾರದಿಂದ ಹೀಗೆ ಮಾತನಾಡುತ್ತಾರೆ. ಸೋಮಣ್ಣ ಅವರ ಅವರ ಹೇಳಿಕೆ ಜಾತಿ ನಿಂದನೆಯ ಅಡಿಯಲ್ಲಿ ಬರುತ್ತದೆ” ಎಂದರು.

‘ಸಹಜವಾಗಿ ಸುಡುಗಾಡುಸಿದ್ದರು ತಪ್ಪು ಮಾಡಿತ್ತಾರೆ ನಾವು ಅದನ್ನು ಸರಿಪಡಿಸಿದ್ದೇವೆ’ ಎಂಬ ಅರ್ಥ ಸೋಮಣ್ಣನವರ ಹೇಳಿಕೆಯಲ್ಲಿದೆ. ಇದರ ಮೂಲಾರ್ಥ ‘ಸುಡುಗಾಡುಸಿದ್ದರು ಸದಾ ತಪ್ಪು ಮಾಡುವವರು’ ಎಂದಾಗುತ್ತದೆ. ಹೀಗೆ ಒಂದು ಇಡೀ ಸಮುದಾಯವನ್ನು ತಪ್ಪಿತಸ್ಥರು ಎಂದು ಪರಿಗಣಿಸಿ ಕಟಕಟೆಯಲ್ಲಿ ನಿಲ್ಲಿಸಿರುವ ಸೋಮಣ್ಣನವರ ಹೇಳಿಕೆ ಅಕ್ಷಮ್ಯವಾದುದು ಎಂದು ಅಭಿಪ್ರಾಯಪಟ್ಟಿದ್ದಾರೆ.

“ಒಬ್ಬ ಸಚಿವರಾಗಿ ಸಂವಿಧಾನದ ಮೇಲೆ ಪ್ರಮಾಣ ಮಾಡಿ ಸರ್ಕಾರಿ ಆಡಳಿತಕ್ಕೆ ಬಂದಿರುವ ಮಂತ್ರಿಗೆ ಸಂವಿಧಾನದತ್ತವಾಗಿ ಈ ದೇಶದ ಸಭ್ಯ ನಾಗರಿಕರೆಂದು ಪರಿಗಣಿಸಲ್ಪಟ್ಟ ಇಡೀ ಒಂದು ಸಮುದಾಯವನ್ನೇ ತಪ್ಪಿತಸ್ಥರೆಂದು ಅಪಾದಿಸಿ ಹೇಳಿಕೆ ನೀಡಿರುವುದು ಆ ವ್ಯಕ್ತಿಯ ಅರಿವುಗೇಡಿತನ ಮತ್ತು ದುಷ್ಟತನವನ್ನು ತೋರುತ್ತದೆ” ಎಂದು ಟೀಕಿಸಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಸುಡುಗಾಡುಸಿದ್ದ ಸಮುದಾಯದ ಸಾಮಾಜಿಕ ಕಾರ್ಯಕರ್ತ ಮಂಜುನಾಥ ಕಡೂರು, “ಸೋಮಣ್ಣ ಅವರ ಮೇಲೆ ಗೌರವವಿದೆ. ಅತ್ಯಂತ ಶೋಷಿತ ಸಮುದಾಯದ ಕುರಿತು ಯಾಕೆ ಹೀಗೆ ಮಾತನಾಡುತ್ತಾರೆ. ಇದು ನೋವು ತಂದಿದೆ. ಸೋಮಣ್ಣ ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದ್ದೆವು. ಆದರೆ ನಮ್ಮ ಆಗ್ರಹಕ್ಕೆ ಬೆಲೆಯನ್ನೇ ನೀಡಲಿಲ್ಲ. ಹೀಗಾಗಿ ಆಯೋಗಕ್ಕೆ ದೂರು ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗಳನ್ನು ನಡೆಸಲಿದ್ದೇವೆ” ಎಂದು ಎಚ್ಚರಿಸಿದ್ದಾರೆ.


ಇದನ್ನೂ ಓದಿರಿ: ಗುಜರಾತ್: ಮದುವೆಯಲ್ಲಿ ಸಾಂಪ್ರದಾಯಿಕ ಪೇಟ ಧರಿಸಿದ ದಲಿತರ ಮೇಲೆ ಸವರ್ಣೀಯರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ರಾಜಕೀಯ ವೆಕ್ತಿಗಳಿಗೆ ಇಂತಹ ಸಮುದಾಯದ ಬಗ್ಗೆ ಮಾತಿಗೂ ಹೀಯಾಳಿಸುವ ನೀಚ ರಾಜಕಾರಣಿ ಗೇ ಧಿಕ್ಕಾರ ಚುನಾವಣೆ ಸಮಯದಲ್ಲಿ ಜನಸಾಮಾನ್ಯರು ಮತದಾರರು ದೇವರು ಎನ್ನುತ್ತಾರೆ ಗೆದ್ದಮೇಲೆ ಜಾತಿ ನಿಂದಿಸುತ್ತಾರೆ ಇಂತಹವರನ್ನು ಸುಮ್ಮನೆ ಬಿಡಬಾರದು 🙏🌹🌹🌹🙏ಜೈ ಸುಡುಗಾಡು ಸಿದ್ದ ಜೈ ಅಲೆಮಾರಿ ಇಂತಿ ಧನಂಜಯ ಎಸ್ ಕಲ್ಯಾಣದವರ್ ಜಿಲ್ಲಾ ಅಧ್ಯಕ್ಷರು ಕರ್ನಾಟಕ ರಾಜ್ಯ ಸುಡುಗಾಡು ಸಿದ್ದ ಮಹಾ ಸಂಘ ಬೆಂಗಳೂರು ಜಿಲ್ಲಾ ಶಾಖೆ

  2. ಸಚಿವ ವಿ ಸೋಮಣ್ಣನವರು ಸುಡುಗಾಡು ಸಿದ್ಧ ಸಮುದಾಯದ ಬಗ್ಗೆ ಅತಿ ಕೀಳಾಗಿ ಮಾತನಾಡಿ ಆ ಸಮುದಾಯದ ಜನರಿಗೆ ತುಂಬಾ ನೋವುಂಟು ಮಾಡಿದ್ದಾರೆ ಹೀಗಾಗಿ ಅವರು ಅತಿ ಶೀಘ್ರದಲ್ಲಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಇಲ್ಲವಾದರೆ ರಾಜ್ಯದ ತಾಲೂಕು ಜಿಲ್ಲಾ ಮಟ್ಟದಲ್ಲಿ ಹೋರಾಟ ಮಾಡಬೇಕಾಗುತ್ತದೆ ಇಂತಿ ಹನುಮಂತ ಒಂಟೆತ್ತನವರ ರಾಜ್ಯ ಸಂಘಟನಾ ಕಾರ್ಯದರ್ಶಿ ಕರ್ನಾಟಕ ರಾಜ್ಯ ಸುಡುಗಾಡು ಸಿದ್ದ ಮಹಾಸಂಘ ಬೆಂಗಳೂರು

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...