Homeಮುಖಪುಟನೆಲ್ಸನ್ ಮಂಡೇಲಾರವರಿಗೆ ಜೈಲಿನಲ್ಲಾದ ಅವಮಾನ ಇಂದು ಭಾರತದ ಪ್ರತಿ ಬೀದಿಯಲ್ಲಾಗುತ್ತಿದೆ.

ನೆಲ್ಸನ್ ಮಂಡೇಲಾರವರಿಗೆ ಜೈಲಿನಲ್ಲಾದ ಅವಮಾನ ಇಂದು ಭಾರತದ ಪ್ರತಿ ಬೀದಿಯಲ್ಲಾಗುತ್ತಿದೆ.

- Advertisement -
- Advertisement -

| ಸಲೀಮ್ ಮಲ್ಲಿಕ್ |

ನೆಲ್ಸನ್ ಮಂಡೇಲಾ ದಕ್ಷಿಣ ಆಫ್ರಿಕಾ ದೇಶಕ್ಕೆ ಮೊದಲನೆಯ ಸಲ ರಾಷ್ಟ್ರಪತಿ ಅದ ನಂತರ, ತನ್ನ ಸುರಕ್ಷೆಯ ಸೈನಿಕರ ಜೊತೆಯಲ್ಲಿ ಒಂದು ಹೋಟೆಲಿಗೆ ಊಟ ಮಾಡುವುದಕ್ಕೆ ಹೋಗಿದ್ದರು. ಎಲ್ಲರೂ ತಮಗೆ ಇಷ್ಟವಾದ ಊಟವನ್ನು ಆರ್ಡರ್ ಮಾಡಿ ಊಟಕ್ಕೆ ಎದುರು ನೋಡುತ್ತಿದ್ದರು.

ಅದೆ ಸಮಯದಲ್ಲಿ ಮಂಡೇಲಾ ಅವರ ಕುರ್ಚಿಯ ಎದುರುಗಡೆ ಒಬ್ಬ ವ್ಯಕ್ತಿ ಊಟಕ್ಕೆ ಅಪ್ಪಣೆ ಕೊಟ್ಟು ಊಟಕ್ಕೋಸ್ಕರ ಎದುರು ನೋಡುತ್ತಿದ್ದನು. ನೆಲ್ಸನ್ ಮಂಡೇಲಾರವರು ತನ್ನ ಸುರಕ್ಷೆಯ ಸೈನಿಕರಿಗೆ ಈ ರೀತಿ ಹೇಳಿದರು; “ಆ ವ್ಯಕ್ತಿಯನ್ನು ಕರೆಯಿರಿ, ಇಲ್ಲಿ ನನ್ನ ಟೇಬಲ್ ಬಳಿಯಲ್ಲಿಯೇ ಕುಳಿತು ಕೊಳ್ಳಲಿ”.

ಆ ವ್ಯಕ್ತಿ ಬಂದು ನೆಲ್ಸನ್ ಮಂಡೇಲಾರವರ ಟೇಬಲ್‌ನಲ್ಲಿಯೇ ಕುಳಿತುಕೊಂಡನು. ಎಲ್ಲರೂ ಊಟ ಮಾಡಲು ಶುರು ಮಾಡಿದರು. ಆ ವ್ಯಕ್ತಿಯೂ ಕೂಡ ಊಟ ಮಾಡಲು ಶುರು ಮಾಡಿದನು. ಅದರೆ ಆ ವ್ಯಕ್ತಿಯ ಕೈಗಳು ನಡುಗುತ್ತಿದ್ದವು. ಬೇಗನೆ ಊಟ ಮಾಡಿ ಆ ವ್ಯಕ್ತಿ ತಲೆ ಬಗ್ಗಿಸಿಕೊಂಡು ಆ ಹೋಟೆಲ್ ನಿಂದ ಹೊರಗಡೆ ಹೋದನು.

ಆ ವ್ಯಕ್ತಿ ಹೊರಗಡೆ ಹೋದ ನಂತರ ಮಂಡೇಲಾ ಅವರ ಸುರಕ್ಷೆಯ ಅಧಿಕಾರಿ ಮಂಡೇಲಾರನ್ನು ಕೇಳಿದನು; “ಸರ್ ಆತನಿಗೆ ಜ್ವರ ಬಂದಿರಬಹುದು, ಹಾಗಾಗಿ ಊಟ ಮಾಡುವಾಗ ಅವರ ಕೈಗಳು ನಡುಗುತ್ತಿದ್ದವು”.

ನೆಲ್ಸನ್ ಮಂಡೇಲಾ ನಸು ನಗುತ್ತಾ ಹೇಳಿದರು. ಆ ವ್ಯಕ್ತಿ ಆರೋಗ್ಯವಾಗಿಯೇ ಇದ್ದಾನೆ, ರೋಗಗ್ರಸ್ತನಲ್ಲ. ನಾನು ಯಾವ ಜೈಲಿನಲ್ಲಿ ಬಂಧಿಯಾಗಿದ್ದನೋ, ಆ ಜೈಲಿನ ಜೈಲರ್ ಅಗಿದ್ದನು ಆ ವ್ಯಕ್ತಿ. ನನಗೆ ಬಹಳ ಹಿಂಸೆ ಕೊಟ್ಟಿದ್ದನು. ಎಟು ತಿಂದೂ ತಿಂದೂ ಸುಸ್ತಾಗಿ ನೀರು ಕೇಳಿದಾಗ, ಆ ವ್ಯಕ್ತಿ ನೀರು ಬೇಕಾ…? ಕುಡಿ ಎಂದು, ನನ್ನ ಮುಖದ ಮೇಲೆ ಮೂತ್ರ ಮಾಡುತ್ತಿದ್ದನು.

ಈಗ ನಾನು ರಾಷ್ಟ್ರಪತಿ ಅಗಿದ್ದೇನೆ …!!

ಆ ವ್ಯಕ್ತಿಗೆ ಮನವರಿಕೆ ಅಗಿದೆ. ತಾನು ಮಾಡಿದ ಕೆಲಸಕ್ಕೆ ಈಗ ತನಗೆ ಭಯಂಕರ ಶಿಕ್ಷೆ ಆಗಬಹುದು ಎಂದು. ಅದರೆ ಅದು ನನ್ನ ಸಂಸ್ಕಾರವಲ್ಲ. ನನಗೆ ಅನಿಸುತ್ತದೆ ದ್ವೇಷದ ಭಾವನೆಯಿಂದ ಕೆಲಸ ಮಾಡಿದರೆ ಅದು ವಿನಾಶಕ್ಕೆ ದಾರಿ ಮಾಡಿ ಕೊಡುತ್ತದೆ. ಧೈರ್ಯ ಮತ್ತು ಸಹಿಷ್ಣುತೆ ಇದ್ದರೆ ಮಾನಸಿಕ ಪರಿಪಕ್ವತೆ ಪೂರ್ಣವಾಗಿ ಸಾಧಿಸುತ್ತದೆ.

ನೋಡಿ ಎಂತಹ ವ್ಯಕ್ತಿತ್ವ ನೆಲ್ಸನ್ ಮಂಡೇಲಾರದ್ದು. ಮಹಾನ್ ವ್ಯಕ್ತಿಗಳ ಈ ತರಹದ ಕ್ಷಮಾ ಗುಣ, ಉದಾರತೆಗಳೇ ಅವರನ್ನು ಆ ಮೇರುತನಕ್ಕೆ ಕೊಂಡೊಯ್ಯುವವು ಅಲ್ಲವೆ?

ಈಗ ಈ ಘಟನೆಯನ್ನು ನೆನಪಿಸಿಕೊಳ್ಳುವುದಕ್ಕೆ ಕಾರಣವಿದೆ. ಮೊನ್ನೆ ಉತ್ತರ ಪ್ರದೇಶದಲ್ಲಿ ಪತ್ರಕರ್ತರನ್ನು ಬಂಧಿಸಿದ ಅಲ್ಲಿನ ಪೊಲೀಸರರು ಅವರ ಮುಖದ ಮೇಲೆ ಮೂತ್ರ ಮಾಡಿ ವಿಕೃತಿ ಮೆರೆದಿದ್ದಾರೆ.

ಉತ್ತರ ಪ್ರದೇಶದ ಶರ್ಮಿ ಎಂಬಲ್ಲಿ ಹಳಿ ತಪ್ಪಿದ ರೈಲಿನ ಬಗ್ಗೆ ವರದಿ  ಮಾಡಲು ಹೋದ ನ್ಯೂಸ್ 24 ಟಿವಿಯ ವರದಿಗಾರ ಅಮಿತ್ ಶರ್ಮಾ ಎಂಬುವವರ ಮೇಲೆ ರೈಲ್ವೆ ಪೊಲೀಸರು ಹಲ್ಲೆ ಮಾಡಿದ್ದಲ್ಲದೇ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದರು. ಈ ಕುರಿತು ದೇಶಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗಿತ್ತು

ಅಂದರೆ ನೆಲ್ಲನ್ ಮಂಡೇಲಾರವರಿಗೆ ಜೈಲಿನಲ್ಲಿ ಕೊಡುತ್ತಿದ್ದ ಚಿತ್ರಹಿಂಸೆಗಳನ್ನು ಇಂದು ಭಾರತದಲ್ಲಿ ಬಹಿರಂಗವಾಗಿ ಕೊಡಲಾಗುತ್ತಿದೆ ಎಂದರೆ ನಮ್ಮ ದೇಶ ಯಾವ ಕಡೆ ಚಲಿಸುತ್ತಿದೆ ಎಂಬುದನ್ನು ಅರ್ಥ್ ಮಾಡಿಕೊಳ್ಳಬೇಕಿದೆ. ಉತ್ತರ ಪ್ರದೇಸದಲ್ಲಂತೂ ವಾರವೊಂದರಲ್ಲೇ 7 ಜನ ಪತ್ರಕರ್ತರ ಮೇಲೆ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಇದಕ್ಕೆ ಅಲ್ಲಿನ ಮುಖ್ಯಮಂತ್ರಿಗಳು ಯಾವುದೇ ಕ್ರಮ ತೆಗೆದುಕೊಳ್ಳದೇ ಇರುವುದು ಮತ್ತಷ್ಟು ಹಲ್ಲೆಗಳಿಗೆ ಬೆಂಬಲ ನೀಡಿದಂತಾಗಿದೆ.

ಕರ್ನಾಟಕದ ರಾಮನಗರದಲ್ಲಿ ಸಾಲದ ಕಾರಣಕ್ಕೆ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹೊಡೆದು ಅವಮಾನ ಮಾಡಿರುವುದು, ಗುಂಡ್ಲುಪೇಟೆಯಲ್ಲಿ ದಲಿತನೆಂಬ ಕಾರಣಕ್ಕೆ ಬೆತ್ತಲೆ ಮೆರವಣಿಗೆ ಮಾಡಿರುವುದು, ಹಾಸನದಲ್ಲಿ ದಲಿತ ನೀರುಗಂಟೆಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಯುತ್ತಲೇ ಇವೆ.

ಸಜ್ಜನರು ಮೌನವಾಗಿದ್ದಷ್ಟು ದುರ್ಜನರು ಈ ರೀತಿಯ ದೌರ್ಜನ್ಯಗಳನ್ನು ನಿರಂತರವಾಗಿ ಎಸಗುತ್ತಲೇ ಇರುತ್ತಾರೆ. ಈ ಸಂದರ್ಭದಲ್ಲಿ ತತ್ವಜ್ಞಾನಿಯೊಬ್ಬನ ಈ ಮಾತು ನಮ್ಮನ್ನು ಎಚ್ಚರಿಸಬೇಕಲ್ಲವೇ?

“ಅಪರಾಧವೇ ಅಧಿಕಾರವಾಗಿ,

ಜನರನ್ನು ಅಪರಾಧಿಗಳನ್ನಾಗಿಸಿ ಬೇಟೆಯಾಡುತ್ತಿರುವಾಗ,

ಕಣ್ಣು ಬಾಯಿದ್ದು ಸುಮ್ಮನಿರುವ ಪ್ರತಿಯೊಬ್ಬರು ಅಪರಾಧಿಗಳೇ”..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮುಂಬೈ ಮೇಯರ್ ಅಭ್ಯರ್ಥಿಯಾಗಿ ಬಿಜೆಪಿಯ ರಿತು ತಾವ್ಡೆ, ಉಪಮೇಯರ್ ಹುದ್ದೆಗೆ ಶಿವಸೇನೆಯ ಸಂಜಯ್ ಶಂಕರ್ ಘಾಡಿ ಹೆಸರು ಘೋಷಣೆ

ಮುಂಬೈ: ಭಾರತೀಯ ಜನತಾ ಪಕ್ಷ (ಬಿಜೆಪಿ) ಶನಿವಾರ ಮುಂಬೈ ಮೇಯರ್ ಚುನಾವಣೆಗೆ ಕಾರ್ಪೊರೇಟರ್ ರಿತು ತವಾಡೆ ಅವರನ್ನು ನಾಮನಿರ್ದೇಶನ ಮಾಡಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ ಸಂಜಯ್ ಘಾಡಿ ಅವರನ್ನು ಉಪ ಮೇಯರ್...

ಪಾಕಿಸ್ತಾನದ ಶಿಯಾ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿ ಹೊಣೆ ಹೊತ್ತ ಐಸಿಸ್ 

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಎಂದು ಕರೆಯಲ್ಪಡುವ ಗುಂಪು ಹೊತ್ತುಕೊಂಡಿದೆ, ಈ ಬಾಂಬ್ ಸ್ಫೋಟದಲ್ಲಿ ಕನಿಷ್ಠ 31 ಜನರು ಸಾವನ್ನಪ್ಪಿದ್ದಾರೆ ಮತ್ತು 169...

ಸಮನ್ಸ್ ಚರ್ಚೆ ನಡುವೆ ‘ಸಹಯೋಗ್’ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಕುನಾಲ್ ಕಾಮ್ರಾ

ಮಹಾರಾಷ್ಟ್ರದ ಮಾಜಿ ಉಪಮುಖ್ಯಮಂತ್ರಿ ಹಾಗೂ ಹಾಲಿ ಉಪ ಮುಖ್ಯಮಂತ್ರಿ ಏಕನಾಥ್ ಶಿಂದೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಹಾರಾಷ್ಟ್ರ ವಿಧಾನಪರಿಷತ್ತಿನ ಹಕ್ಕುಚ್ಯುತಿ ಸಮಿತಿ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ಅವರಿಗೆ...

ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ ಹಾಕಲು AI ತಂತ್ರಜ್ಞಾನ ಬಳಕೆಗೆ ಮುಂದಾದ ರಾಜ್ಯ ಸರ್ಕಾರ: 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್‌ವೇರ್ ಅಭಿವೃದ್ಧಿ..!

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳು (ತಡೆಗಟ್ಟುವಿಕೆ) ಮಸೂದೆ, 2025 ಬಾಕಿ ಉಳಿದಿರುವುದರಿಂದ, ದ್ವೇಷ ಭಾಷಣ, ನಕಲಿ ಸುದ್ದಿ ಮತ್ತು ಸಂಘಟಿತ ಆನ್‌ಲೈನ್ ತಪ್ಪು ಮಾಹಿತಿಯ ಹೆಚ್ಚಳವನ್ನು ನಿಭಾಯಿಸಲು ರಾಜ್ಯ ಸರ್ಕಾರ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ. ಈ ಒಪ್ಪಂದದ ಅಡಿಯಲ್ಲಿ,...

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...