Homeಕರ್ನಾಟಕಅತ್ಯಾಚಾರ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌‌

ಅತ್ಯಾಚಾರ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌‌

- Advertisement -
- Advertisement -

ಮಹಿಳೆಯರು ಹಿಜಾಬ್ ಧರಿಸದ ಕಾರಣ ಭಾರತದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದೆ ಎಂದು ಹೇಳಿ ವಿದಾದಕ್ಕೆ ಸಿಲುಕಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು, ತನ್ನ ಹೇಳಿಕೆಗೆ ಸೋಮವಾರ ವಿಷಾದ ವ್ಯಕ್ತಪಡಿಸಿದ್ದಾರೆ.

ತನ್ನ ಹೇಳಿಕೆಯ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಜಮೀರ್‌ ಅಹ್ಮದ್, “ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರಗಳನ್ನು ಕಂಡಾಗ ಭಯ ಆತಂಕ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಕನಿಷ್ಠ ಹಿಜಾಬ್‌, ಬುರ್ಖಾ ಧರಿಸುವುದರಿಂದಾದರೂ ಅತ್ಯಾಚಾರವನ್ನು ತಡೆಗಟ್ಟಬಹುದೇನೋ ಎಂಬ ಮಾತನ್ನು ನಾನು ಆಡಿದ್ದೆ” ಎಂದು ಅವರು ಹೇಳಿದ್ದಾರೆ.

“ಯಾರ ಮನಸ್ಸನ್ನಾದರೂ ನೋಯಿಸುವ ಇಲ್ಲವೇ ಅಗೌರವ ತೋರಿಸುವ ದುರುದ್ದೇಶ ನನಗಿಲ್ಲ. ಹೆಣ್ಣು ಮಕ್ಕಳ ಮೇಲಿನ ಕಾಳಜಿಯ ಸದುದ್ದೇಶದಿಂದ ಹೇಳಿರುವುದು. ನನ್ನ ಹೇಳಿಕೆಯನ್ನು ತಿರುಚಲಾಗಿದ್ದು, ಆ ಬಗ್ಗೆ ವಿಷಾದವಿದೆ” ಎಂದು ಅವರು ಹೇಳಿದ್ದಾರೆ.

“ಹಿಜಾಬ್ – ಬುರ್ಖಾ ಧರಿಸುವುದನ್ನು ಧಾರ್ಮಿಕ ಕಟ್ಟಳೆಯನ್ನಾಗಿ ಮಾಡಿದ ನಮ್ಮ ಹಿರಿಯರ ಉದ್ದೇಶವೂ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದೇ ಆಗಿದೆ. ಈ ಹಿನ್ನೆಲೆಯಲ್ಲಿ ನನ್ನಿಂದ ಆ ಮಾತುಗಳು ಬಂತು. ಇದರ ಹೊರತಾಗಿ ಬೇರೆ ಯಾವ ದುರುದ್ದೇಶವೂ ನನಗಿರಲಿಲ್ಲ.

ಇತ್ತೀಚೆಗೆ ಅರ್ಧ ಹೆಲ್ಮೆಟ್ ಬದಲು ಫುಲ್ ಹೆಲ್ಮೆಟ್ ಅನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಈ ನಿಲುವಿನ ಹಿಂದೆ ಜನರ ಜೀವ ರಕ್ಷಣೆಯ ಉದ್ದೇಶ ಹೇಗಿದೆಯೋ ಹಾಗೆಯೇ ನನ್ನ ಹೇಳಿಕೆ ಹಿಂದೆ ಹೆಣ್ಣು ಮಕ್ಕಳ ಬಗೆಗಿನ ಕಾಳಜಿ ಇದೆ” ಎಂದು ಜಮೀರ್‌ ತಿಳಿಸಿದ್ದಾರೆ.

“ಹೆಣ್ಣು ಮಕ್ಕಳ ಅತ್ಯಾಚಾರಕ್ಕೆ ಅವರ ಮೈಮೇಲಿನ ಬಟ್ಟೆ ಖಂಡಿತ ಕಾರಣ ಅಲ್ಲ. ಮೈ ತುಂಬಾ ಬಟ್ಟೆ ಹಾಕಿದರೂ, ಹಾಕದೆ ಇದ್ದರೂ ಅತ್ಯಾಚಾರ ನಡೆಯುತ್ತಲೇ ಇರುತ್ತದೆ. ಇದಕ್ಕೆ ಮುಖ್ಯ ಕಾರಣ ಕೆಲವು ಪುರುಷರಲ್ಲಿರುವ ರೇಪಿಸ್ಟ್ ಮನಸ್ಥಿತಿ. ಹೆಣ್ಣುಮಕ್ಕಳ ಅತ್ಯಾಚಾರ ಕಡಿಮೆಯಾಗಬೇಕಾದರೆ ಮೊದಲು ಪುರುಷರು ಬದಲಾಗಬೇಕು” ಎಂದು ಅವರು ಹೇಳಿದ್ದಾರೆ.

“ಹೆಣ್ಣುಮಕ್ಕಳಿಗೆ ನಿಜವಾದ ರಕ್ಷಣೆ ನೀಡುವುದು ಶಿಕ್ಷಣ ಮಾತ್ರ ಎಂದು ನನ್ನ ಅಭಿಪ್ರಾಯ. ಹಿಜಾಬ್ – ಬುರ್ಖಾ ಧರಿಸಿಯಾದರೂ ಒಮ್ಮೆ ಅವರು ಶಿಕ್ಷಣ ಪಡೆಯಲಿ. ಆ ಶಿಕ್ಷಣದ ಬಲದಿಂದ ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನನ್ನದು. ಶಿಕ್ಷಣಕ್ಕಿಂತ ಶಕ್ತಿಯುತವಾದ ಅಸ್ತ್ರ ಬೇರೆ ಇಲ್ಲ. ಆದ್ದರಿಂದ ಹಿಜಾಬ್ -ಬುರ್ಖಾದ ಕಾರಣ ನೀಡಿ ದಯವಿಟ್ಟು ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಬೇಡಿ ಎಂದು ನಾನು ಸರ್ಕಾರವನ್ನು ಮತ್ತು ಸಮಾಜವನ್ನು ಕೈಮುಗಿದು ಬೇಡಿಕೊಳ್ಳುತ್ತೇನೆ” ಎಂದು ಅವರು ವಿನಂತಿಸಿದ್ದಾರೆ.

ಹಿಂದಿನ ದಿನ, ತನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಪ್ರತಿಪಾದಿಸಿದ್ದ ಅವರು ಕ್ಷಮೆಯಾಚಿಸಲು ನಿರಾಕರಿಸಿದ್ದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಧ್ಯಮಗಳು ನನ್ನ ಹೇಳಿಕೆಯನ್ನು ತಿರುಚುತ್ತಿವೆ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ” ಎಂದು ಹೇಳಿದ್ದರು.

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ್ದ ಜಮೀರ್ ಅಹ್ಮದ್ ಖಾನ್, “ಹೆಣ್ಣುಮಕ್ಕಳು ಬೆಳೆದ ನಂತರ ತಮ್ಮ ಸೌಂದರ್ಯವನ್ನು ಮರೆಮಾಚಲು ‘ಪರ್ದಾ’ ಧರಿಸುವುದು ಹಿಜಾಬ್‌ನ ಪರಿಕಲ್ಪನೆಯಾಗಿದೆ. ಇಂದು ನಮ್ಮ ದೇಶದಲ್ಲಿ ಅತ್ಯಾಚಾರದ ಪ್ರಮಾಣವು ಅತ್ಯಧಿಕವಾಗಿರುವುದನ್ನು ನೀವು ನೋಡಬಹುದು. ಇದಕ್ಕೆ ಕಾರಣವೆಂದರೆ ಹಲವಾರು ಮಹಿಳೆಯರು, ಘೋಷಾ, ಹಿಜಾಬ್‌ನಲ್ಲಿ ಇಲ್ಲದಿರುವುದು. ಇನ್ನು ಹಿಜಾಬ್ ಧರಿಸಲೇ ಬೇಕು ಎಂಬುದಿಲ್ಲ. ಯಾರು ಇಷ್ಟ ಪಟ್ಟು ತೊಡುತ್ತಾರೆ, ತಮ್ಮ ಸೌಂದರ್ಯವನ್ನು ಮತ್ತೊಬ್ಬರಿಗೆ ತೋರಿಸಬಾರದು ಎಂಬುದಿರುತ್ತೋ ಅವರು ಧರಿಸುತ್ತಾರೆ. ಇದು ಇಂದಿನಿಂದ ಅಲ್ಲ ಜಮಾನದಿಂದಲೂ ಇದೆ” ಎಂದು ಹೇಳಿದ್ದರು.


ಇದನ್ನೂ ಓದಿ: ’ಮಹಿಳೆಯರು ಹಿಜಾಬ್ ಧರಿಸದಿರುವುದು ಅತ್ಯಾಚಾರ ಹೆಚ್ಚಾಗಲು ಕಾರಣ’: ಶಾಸಕ ಜಮೀರ್‌ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...