Homeಕರ್ನಾಟಕಅತ್ಯಾಚಾರ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌‌

ಅತ್ಯಾಚಾರ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌‌

- Advertisement -
- Advertisement -

ಮಹಿಳೆಯರು ಹಿಜಾಬ್ ಧರಿಸದ ಕಾರಣ ಭಾರತದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದೆ ಎಂದು ಹೇಳಿ ವಿದಾದಕ್ಕೆ ಸಿಲುಕಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು, ತನ್ನ ಹೇಳಿಕೆಗೆ ಸೋಮವಾರ ವಿಷಾದ ವ್ಯಕ್ತಪಡಿಸಿದ್ದಾರೆ.

ತನ್ನ ಹೇಳಿಕೆಯ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಜಮೀರ್‌ ಅಹ್ಮದ್, “ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರಗಳನ್ನು ಕಂಡಾಗ ಭಯ ಆತಂಕ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಕನಿಷ್ಠ ಹಿಜಾಬ್‌, ಬುರ್ಖಾ ಧರಿಸುವುದರಿಂದಾದರೂ ಅತ್ಯಾಚಾರವನ್ನು ತಡೆಗಟ್ಟಬಹುದೇನೋ ಎಂಬ ಮಾತನ್ನು ನಾನು ಆಡಿದ್ದೆ” ಎಂದು ಅವರು ಹೇಳಿದ್ದಾರೆ.

“ಯಾರ ಮನಸ್ಸನ್ನಾದರೂ ನೋಯಿಸುವ ಇಲ್ಲವೇ ಅಗೌರವ ತೋರಿಸುವ ದುರುದ್ದೇಶ ನನಗಿಲ್ಲ. ಹೆಣ್ಣು ಮಕ್ಕಳ ಮೇಲಿನ ಕಾಳಜಿಯ ಸದುದ್ದೇಶದಿಂದ ಹೇಳಿರುವುದು. ನನ್ನ ಹೇಳಿಕೆಯನ್ನು ತಿರುಚಲಾಗಿದ್ದು, ಆ ಬಗ್ಗೆ ವಿಷಾದವಿದೆ” ಎಂದು ಅವರು ಹೇಳಿದ್ದಾರೆ.

“ಹಿಜಾಬ್ – ಬುರ್ಖಾ ಧರಿಸುವುದನ್ನು ಧಾರ್ಮಿಕ ಕಟ್ಟಳೆಯನ್ನಾಗಿ ಮಾಡಿದ ನಮ್ಮ ಹಿರಿಯರ ಉದ್ದೇಶವೂ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದೇ ಆಗಿದೆ. ಈ ಹಿನ್ನೆಲೆಯಲ್ಲಿ ನನ್ನಿಂದ ಆ ಮಾತುಗಳು ಬಂತು. ಇದರ ಹೊರತಾಗಿ ಬೇರೆ ಯಾವ ದುರುದ್ದೇಶವೂ ನನಗಿರಲಿಲ್ಲ.

ಇತ್ತೀಚೆಗೆ ಅರ್ಧ ಹೆಲ್ಮೆಟ್ ಬದಲು ಫುಲ್ ಹೆಲ್ಮೆಟ್ ಅನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಈ ನಿಲುವಿನ ಹಿಂದೆ ಜನರ ಜೀವ ರಕ್ಷಣೆಯ ಉದ್ದೇಶ ಹೇಗಿದೆಯೋ ಹಾಗೆಯೇ ನನ್ನ ಹೇಳಿಕೆ ಹಿಂದೆ ಹೆಣ್ಣು ಮಕ್ಕಳ ಬಗೆಗಿನ ಕಾಳಜಿ ಇದೆ” ಎಂದು ಜಮೀರ್‌ ತಿಳಿಸಿದ್ದಾರೆ.

“ಹೆಣ್ಣು ಮಕ್ಕಳ ಅತ್ಯಾಚಾರಕ್ಕೆ ಅವರ ಮೈಮೇಲಿನ ಬಟ್ಟೆ ಖಂಡಿತ ಕಾರಣ ಅಲ್ಲ. ಮೈ ತುಂಬಾ ಬಟ್ಟೆ ಹಾಕಿದರೂ, ಹಾಕದೆ ಇದ್ದರೂ ಅತ್ಯಾಚಾರ ನಡೆಯುತ್ತಲೇ ಇರುತ್ತದೆ. ಇದಕ್ಕೆ ಮುಖ್ಯ ಕಾರಣ ಕೆಲವು ಪುರುಷರಲ್ಲಿರುವ ರೇಪಿಸ್ಟ್ ಮನಸ್ಥಿತಿ. ಹೆಣ್ಣುಮಕ್ಕಳ ಅತ್ಯಾಚಾರ ಕಡಿಮೆಯಾಗಬೇಕಾದರೆ ಮೊದಲು ಪುರುಷರು ಬದಲಾಗಬೇಕು” ಎಂದು ಅವರು ಹೇಳಿದ್ದಾರೆ.

“ಹೆಣ್ಣುಮಕ್ಕಳಿಗೆ ನಿಜವಾದ ರಕ್ಷಣೆ ನೀಡುವುದು ಶಿಕ್ಷಣ ಮಾತ್ರ ಎಂದು ನನ್ನ ಅಭಿಪ್ರಾಯ. ಹಿಜಾಬ್ – ಬುರ್ಖಾ ಧರಿಸಿಯಾದರೂ ಒಮ್ಮೆ ಅವರು ಶಿಕ್ಷಣ ಪಡೆಯಲಿ. ಆ ಶಿಕ್ಷಣದ ಬಲದಿಂದ ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನನ್ನದು. ಶಿಕ್ಷಣಕ್ಕಿಂತ ಶಕ್ತಿಯುತವಾದ ಅಸ್ತ್ರ ಬೇರೆ ಇಲ್ಲ. ಆದ್ದರಿಂದ ಹಿಜಾಬ್ -ಬುರ್ಖಾದ ಕಾರಣ ನೀಡಿ ದಯವಿಟ್ಟು ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಬೇಡಿ ಎಂದು ನಾನು ಸರ್ಕಾರವನ್ನು ಮತ್ತು ಸಮಾಜವನ್ನು ಕೈಮುಗಿದು ಬೇಡಿಕೊಳ್ಳುತ್ತೇನೆ” ಎಂದು ಅವರು ವಿನಂತಿಸಿದ್ದಾರೆ.

ಹಿಂದಿನ ದಿನ, ತನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಪ್ರತಿಪಾದಿಸಿದ್ದ ಅವರು ಕ್ಷಮೆಯಾಚಿಸಲು ನಿರಾಕರಿಸಿದ್ದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಧ್ಯಮಗಳು ನನ್ನ ಹೇಳಿಕೆಯನ್ನು ತಿರುಚುತ್ತಿವೆ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ” ಎಂದು ಹೇಳಿದ್ದರು.

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ್ದ ಜಮೀರ್ ಅಹ್ಮದ್ ಖಾನ್, “ಹೆಣ್ಣುಮಕ್ಕಳು ಬೆಳೆದ ನಂತರ ತಮ್ಮ ಸೌಂದರ್ಯವನ್ನು ಮರೆಮಾಚಲು ‘ಪರ್ದಾ’ ಧರಿಸುವುದು ಹಿಜಾಬ್‌ನ ಪರಿಕಲ್ಪನೆಯಾಗಿದೆ. ಇಂದು ನಮ್ಮ ದೇಶದಲ್ಲಿ ಅತ್ಯಾಚಾರದ ಪ್ರಮಾಣವು ಅತ್ಯಧಿಕವಾಗಿರುವುದನ್ನು ನೀವು ನೋಡಬಹುದು. ಇದಕ್ಕೆ ಕಾರಣವೆಂದರೆ ಹಲವಾರು ಮಹಿಳೆಯರು, ಘೋಷಾ, ಹಿಜಾಬ್‌ನಲ್ಲಿ ಇಲ್ಲದಿರುವುದು. ಇನ್ನು ಹಿಜಾಬ್ ಧರಿಸಲೇ ಬೇಕು ಎಂಬುದಿಲ್ಲ. ಯಾರು ಇಷ್ಟ ಪಟ್ಟು ತೊಡುತ್ತಾರೆ, ತಮ್ಮ ಸೌಂದರ್ಯವನ್ನು ಮತ್ತೊಬ್ಬರಿಗೆ ತೋರಿಸಬಾರದು ಎಂಬುದಿರುತ್ತೋ ಅವರು ಧರಿಸುತ್ತಾರೆ. ಇದು ಇಂದಿನಿಂದ ಅಲ್ಲ ಜಮಾನದಿಂದಲೂ ಇದೆ” ಎಂದು ಹೇಳಿದ್ದರು.


ಇದನ್ನೂ ಓದಿ: ’ಮಹಿಳೆಯರು ಹಿಜಾಬ್ ಧರಿಸದಿರುವುದು ಅತ್ಯಾಚಾರ ಹೆಚ್ಚಾಗಲು ಕಾರಣ’: ಶಾಸಕ ಜಮೀರ್‌ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...