Homeಕರ್ನಾಟಕಅತ್ಯಾಚಾರ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌‌

ಅತ್ಯಾಚಾರ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌‌

- Advertisement -
- Advertisement -

ಮಹಿಳೆಯರು ಹಿಜಾಬ್ ಧರಿಸದ ಕಾರಣ ಭಾರತದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದೆ ಎಂದು ಹೇಳಿ ವಿದಾದಕ್ಕೆ ಸಿಲುಕಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರು, ತನ್ನ ಹೇಳಿಕೆಗೆ ಸೋಮವಾರ ವಿಷಾದ ವ್ಯಕ್ತಪಡಿಸಿದ್ದಾರೆ.

ತನ್ನ ಹೇಳಿಕೆಯ ಬಗ್ಗೆ ಸರಣಿ ಟ್ವೀಟ್‌ಗಳನ್ನು ಮಾಡಿರುವ ಜಮೀರ್‌ ಅಹ್ಮದ್, “ದೇಶದಲ್ಲಿ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರಗಳನ್ನು ಕಂಡಾಗ ಭಯ ಆತಂಕ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಕನಿಷ್ಠ ಹಿಜಾಬ್‌, ಬುರ್ಖಾ ಧರಿಸುವುದರಿಂದಾದರೂ ಅತ್ಯಾಚಾರವನ್ನು ತಡೆಗಟ್ಟಬಹುದೇನೋ ಎಂಬ ಮಾತನ್ನು ನಾನು ಆಡಿದ್ದೆ” ಎಂದು ಅವರು ಹೇಳಿದ್ದಾರೆ.

“ಯಾರ ಮನಸ್ಸನ್ನಾದರೂ ನೋಯಿಸುವ ಇಲ್ಲವೇ ಅಗೌರವ ತೋರಿಸುವ ದುರುದ್ದೇಶ ನನಗಿಲ್ಲ. ಹೆಣ್ಣು ಮಕ್ಕಳ ಮೇಲಿನ ಕಾಳಜಿಯ ಸದುದ್ದೇಶದಿಂದ ಹೇಳಿರುವುದು. ನನ್ನ ಹೇಳಿಕೆಯನ್ನು ತಿರುಚಲಾಗಿದ್ದು, ಆ ಬಗ್ಗೆ ವಿಷಾದವಿದೆ” ಎಂದು ಅವರು ಹೇಳಿದ್ದಾರೆ.

“ಹಿಜಾಬ್ – ಬುರ್ಖಾ ಧರಿಸುವುದನ್ನು ಧಾರ್ಮಿಕ ಕಟ್ಟಳೆಯನ್ನಾಗಿ ಮಾಡಿದ ನಮ್ಮ ಹಿರಿಯರ ಉದ್ದೇಶವೂ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದೇ ಆಗಿದೆ. ಈ ಹಿನ್ನೆಲೆಯಲ್ಲಿ ನನ್ನಿಂದ ಆ ಮಾತುಗಳು ಬಂತು. ಇದರ ಹೊರತಾಗಿ ಬೇರೆ ಯಾವ ದುರುದ್ದೇಶವೂ ನನಗಿರಲಿಲ್ಲ.

ಇತ್ತೀಚೆಗೆ ಅರ್ಧ ಹೆಲ್ಮೆಟ್ ಬದಲು ಫುಲ್ ಹೆಲ್ಮೆಟ್ ಅನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಈ ನಿಲುವಿನ ಹಿಂದೆ ಜನರ ಜೀವ ರಕ್ಷಣೆಯ ಉದ್ದೇಶ ಹೇಗಿದೆಯೋ ಹಾಗೆಯೇ ನನ್ನ ಹೇಳಿಕೆ ಹಿಂದೆ ಹೆಣ್ಣು ಮಕ್ಕಳ ಬಗೆಗಿನ ಕಾಳಜಿ ಇದೆ” ಎಂದು ಜಮೀರ್‌ ತಿಳಿಸಿದ್ದಾರೆ.

“ಹೆಣ್ಣು ಮಕ್ಕಳ ಅತ್ಯಾಚಾರಕ್ಕೆ ಅವರ ಮೈಮೇಲಿನ ಬಟ್ಟೆ ಖಂಡಿತ ಕಾರಣ ಅಲ್ಲ. ಮೈ ತುಂಬಾ ಬಟ್ಟೆ ಹಾಕಿದರೂ, ಹಾಕದೆ ಇದ್ದರೂ ಅತ್ಯಾಚಾರ ನಡೆಯುತ್ತಲೇ ಇರುತ್ತದೆ. ಇದಕ್ಕೆ ಮುಖ್ಯ ಕಾರಣ ಕೆಲವು ಪುರುಷರಲ್ಲಿರುವ ರೇಪಿಸ್ಟ್ ಮನಸ್ಥಿತಿ. ಹೆಣ್ಣುಮಕ್ಕಳ ಅತ್ಯಾಚಾರ ಕಡಿಮೆಯಾಗಬೇಕಾದರೆ ಮೊದಲು ಪುರುಷರು ಬದಲಾಗಬೇಕು” ಎಂದು ಅವರು ಹೇಳಿದ್ದಾರೆ.

“ಹೆಣ್ಣುಮಕ್ಕಳಿಗೆ ನಿಜವಾದ ರಕ್ಷಣೆ ನೀಡುವುದು ಶಿಕ್ಷಣ ಮಾತ್ರ ಎಂದು ನನ್ನ ಅಭಿಪ್ರಾಯ. ಹಿಜಾಬ್ – ಬುರ್ಖಾ ಧರಿಸಿಯಾದರೂ ಒಮ್ಮೆ ಅವರು ಶಿಕ್ಷಣ ಪಡೆಯಲಿ. ಆ ಶಿಕ್ಷಣದ ಬಲದಿಂದ ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನನ್ನದು. ಶಿಕ್ಷಣಕ್ಕಿಂತ ಶಕ್ತಿಯುತವಾದ ಅಸ್ತ್ರ ಬೇರೆ ಇಲ್ಲ. ಆದ್ದರಿಂದ ಹಿಜಾಬ್ -ಬುರ್ಖಾದ ಕಾರಣ ನೀಡಿ ದಯವಿಟ್ಟು ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಬೇಡಿ ಎಂದು ನಾನು ಸರ್ಕಾರವನ್ನು ಮತ್ತು ಸಮಾಜವನ್ನು ಕೈಮುಗಿದು ಬೇಡಿಕೊಳ್ಳುತ್ತೇನೆ” ಎಂದು ಅವರು ವಿನಂತಿಸಿದ್ದಾರೆ.

ಹಿಂದಿನ ದಿನ, ತನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಪ್ರತಿಪಾದಿಸಿದ್ದ ಅವರು ಕ್ಷಮೆಯಾಚಿಸಲು ನಿರಾಕರಿಸಿದ್ದರು. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಾಧ್ಯಮಗಳು ನನ್ನ ಹೇಳಿಕೆಯನ್ನು ತಿರುಚುತ್ತಿವೆ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ” ಎಂದು ಹೇಳಿದ್ದರು.

ರಾಜ್ಯದಲ್ಲಿ ನಡೆಯುತ್ತಿರುವ ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿದ್ದ ಜಮೀರ್ ಅಹ್ಮದ್ ಖಾನ್, “ಹೆಣ್ಣುಮಕ್ಕಳು ಬೆಳೆದ ನಂತರ ತಮ್ಮ ಸೌಂದರ್ಯವನ್ನು ಮರೆಮಾಚಲು ‘ಪರ್ದಾ’ ಧರಿಸುವುದು ಹಿಜಾಬ್‌ನ ಪರಿಕಲ್ಪನೆಯಾಗಿದೆ. ಇಂದು ನಮ್ಮ ದೇಶದಲ್ಲಿ ಅತ್ಯಾಚಾರದ ಪ್ರಮಾಣವು ಅತ್ಯಧಿಕವಾಗಿರುವುದನ್ನು ನೀವು ನೋಡಬಹುದು. ಇದಕ್ಕೆ ಕಾರಣವೆಂದರೆ ಹಲವಾರು ಮಹಿಳೆಯರು, ಘೋಷಾ, ಹಿಜಾಬ್‌ನಲ್ಲಿ ಇಲ್ಲದಿರುವುದು. ಇನ್ನು ಹಿಜಾಬ್ ಧರಿಸಲೇ ಬೇಕು ಎಂಬುದಿಲ್ಲ. ಯಾರು ಇಷ್ಟ ಪಟ್ಟು ತೊಡುತ್ತಾರೆ, ತಮ್ಮ ಸೌಂದರ್ಯವನ್ನು ಮತ್ತೊಬ್ಬರಿಗೆ ತೋರಿಸಬಾರದು ಎಂಬುದಿರುತ್ತೋ ಅವರು ಧರಿಸುತ್ತಾರೆ. ಇದು ಇಂದಿನಿಂದ ಅಲ್ಲ ಜಮಾನದಿಂದಲೂ ಇದೆ” ಎಂದು ಹೇಳಿದ್ದರು.


ಇದನ್ನೂ ಓದಿ: ’ಮಹಿಳೆಯರು ಹಿಜಾಬ್ ಧರಿಸದಿರುವುದು ಅತ್ಯಾಚಾರ ಹೆಚ್ಚಾಗಲು ಕಾರಣ’: ಶಾಸಕ ಜಮೀರ್‌ ಅಹ್ಮದ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...

ಕರ್ನಾಟಕ ಎಸ್‌ಐಆರ್: ತಡವಾಗಿ ತಲುಪಿದ ನೋಟಿಸ್‌ಗಳಿಂದ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ; ಮತದಾರರಲ್ಲಿ ಗೊಂದಲ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗಳನ್ನು ಮತದಾರರಿಗೆ ತಲುಪಿಸುವಲ್ಲಿ ಉಂಟಾಗುತ್ತಿರುವ ವಿಳಂಬವು ಹಲವು ಕಡೆ ವಿಚಾರಣಾ ಕೇಂದ್ರಗಳಲ್ಲಿ ಜನದಟ್ಟಣೆ ಮತ್ತು ಗೊಂದಲಕ್ಕೆ ಕಾರಣವಾಗುತ್ತಿದೆ. ‘ನೋ-ಮ್ಯಾಪಿಂಗ್’...

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...