Homeಮುಖಪುಟತಲೆಯ ಮೇಲೆ ಬಟ್ಟೆ, ಹಣೆಯ ಮೇಲೆ ಶ್ರೀಗಂಧ ಇದ್ದರೆ ಸಮಸ್ಯೆಯೇನು: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌‌...

ತಲೆಯ ಮೇಲೆ ಬಟ್ಟೆ, ಹಣೆಯ ಮೇಲೆ ಶ್ರೀಗಂಧ ಇದ್ದರೆ ಸಮಸ್ಯೆಯೇನು: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌‌ ಪ್ರಶ್ನೆ

ಹಿಜಾಬ್‌ಗೆ ಬೆಂಬಲ ವ್ಯಕ್ತಪಡಿಸಿದ ಬಿಜೆಪಿ ಮೈತ್ರಿ ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ಹಿಜಾಬ್‌‌ ವಿಚಾರವಾಗಿ ನಡೆಯುತ್ತಿರುವ ವಿವಾದದ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಪ್ರತಿಕ್ರಿಯಿಸಿ, “ತಲೆಯ ಮೇಲೆ ಬಟ್ಟೆ, ಹಣೆಯ ಮೇಲೆ ಶ್ರೀಗಂಧ ಹಾಕಿದರೆ ಸಮಸ್ಯೆಯೇನು?” ಎಂದು ಪ್ರಶ್ನಿಸಿದ್ದು, ವಿವಾದವೂ ಸಂಪೂರ್ಣವಾಗಿ ಅರ್ಥಹೀನವಾಗಿದ್ದು, ಇದರ ಬಗ್ಗೆ ಯಾವುದೇ ಚರ್ಚೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಪಕ್ಷದ ಬೆಂಬಲದೊಂದಿಗೆ ಬಿಹಾರದಲ್ಲಿ ಸರ್ಕಾರ ನಡೆಸುತ್ತಿರುವ ನಿತೀಶ್‌ ಕುಮಾರ್‌‌, ರಾಜ್ಯದ ವಿವಾದಕ್ಕೆ ಬಿಹಾರದ ಉದಾಹರಣೆಯನ್ನು ನೀಡಿದ್ದಾರೆ. “ಹಿಜಾಬ್ ವಿವಾದ ಅರ್ಥಹೀನ. ಬಿಹಾರದ ಶಾಲೆಯಲ್ಲಿ, ಎಲ್ಲರೂ ಒಂದೇ ರೀತಿಯ ಬಟ್ಟೆಗಳನ್ನು ಧರಿಸುತ್ತಾರೆ. ಆದರೆ ವಿದ್ಯಾರ್ಥಿನಿಯೊಬ್ಬಳು ತನ್ನ ತಲೆಯ ಮೇಲೆ ಏನೊ ಹಾಕುತ್ತಾರೆ ಅಥವಾ ಹಣೆಯ ಮೇಲೆ ಶ್ರೀಗಂಧವನ್ನು ಹಾಕಿದರೆ, ಅದರಲ್ಲಿ ಸಮಸ್ಯೆ ಏನಿದೆ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಹಿಜಾಬ್ ಧರಿಸಿದ ಶಿಕ್ಷಕಿಯರಿಗೂ ಇಲ್ಲ ಪ್ರವೇಶ: ಗೇಟ್‌ ಬಳಿಯೇ ಹಿಜಾಬ್, ಬುರ್ಕಾ ತೆಗೆದ ಶಿಕ್ಷಕಿಯರು

ಎಲ್ಲ ಜನರು ತಮ್ಮದೇ ಆದ ಜೀವನ ವಿಧಾನವನ್ನು ಹೊಂದಿದ್ದಾರೆ ಮತ್ತು ಅದರಲ್ಲಿ ಯಾರೂ ಹಸ್ತಕ್ಷೇಪ ಮಾಡಬಾರದು ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

“ಹಿಜಾಬ್ ವಿವಾದ ನಮ್ಮ ದೃಷ್ಟಿಯಲ್ಲಿ ವಿಶೇಷವೇನೂ ಅಲ್ಲ. ಕೆಲವರಿಗೆ ತಮ್ಮದೇ ಆದ ದಾರಿ ಇರುತ್ತದೆ. ಅದರಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ. ಅದರ ಬಗ್ಗೆ ನಾವು ಪ್ರತಿಕ್ರಿಯಿಸುವ ಅಗತ್ಯವಿಲ್ಲ. ನಾವು ಧಾರ್ಮಿಕ ಭಾವನೆಗಳಿಗೆ ಪರಸ್ಪರ ಗೌರವ ನೀಡಬೇಕು” ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಹಿಜಾಬ್ ವಿವಾದದಂತಹ ವಿಷಯಗಳ ಬಗ್ಗೆ ಚರ್ಚೆ ಅಥವಾ ಗಮನ ಅಗತ್ಯವಿಲ್ಲ ಎಂದು ನಿತೀಶ್ ಕುಮಾರ್ ಹೇಳಿದ್ದು, “ಕೆಲವು ವಿಷಯಗಳಿಗೆ ವಿಶೇಷ ಗಮನ ಅಗತ್ಯವಿಲ್ಲ. ಈ ಎಲ್ಲ ವಿಷಯಗಳ ಬಗ್ಗೆ ವಾದ ಮಾಡುವ ಅಗತ್ಯ ಏನಿದೆ” ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯದ ಉಡುಪಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶ ನಿರಾಕರಿಸಿದ ಹಿನ್ನಲೆಯಲ್ಲಿ, ಅದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಪ್ರಕರಣವನ್ನು ನ್ಯಾಯಾಲಯದ ಪೂರ್ಣ ಪೀಠ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: “ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ”: ಅಮೆರಿಕಾ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...