Homeಮುಖಪುಟತಲೆಯ ಮೇಲೆ ಬಟ್ಟೆ, ಹಣೆಯ ಮೇಲೆ ಶ್ರೀಗಂಧ ಇದ್ದರೆ ಸಮಸ್ಯೆಯೇನು: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌‌...

ತಲೆಯ ಮೇಲೆ ಬಟ್ಟೆ, ಹಣೆಯ ಮೇಲೆ ಶ್ರೀಗಂಧ ಇದ್ದರೆ ಸಮಸ್ಯೆಯೇನು: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌‌ ಪ್ರಶ್ನೆ

ಹಿಜಾಬ್‌ಗೆ ಬೆಂಬಲ ವ್ಯಕ್ತಪಡಿಸಿದ ಬಿಜೆಪಿ ಮೈತ್ರಿ ಸರ್ಕಾರ

- Advertisement -
- Advertisement -

ರಾಜ್ಯದಲ್ಲಿ ಹಿಜಾಬ್‌‌ ವಿಚಾರವಾಗಿ ನಡೆಯುತ್ತಿರುವ ವಿವಾದದ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಪ್ರತಿಕ್ರಿಯಿಸಿ, “ತಲೆಯ ಮೇಲೆ ಬಟ್ಟೆ, ಹಣೆಯ ಮೇಲೆ ಶ್ರೀಗಂಧ ಹಾಕಿದರೆ ಸಮಸ್ಯೆಯೇನು?” ಎಂದು ಪ್ರಶ್ನಿಸಿದ್ದು, ವಿವಾದವೂ ಸಂಪೂರ್ಣವಾಗಿ ಅರ್ಥಹೀನವಾಗಿದ್ದು, ಇದರ ಬಗ್ಗೆ ಯಾವುದೇ ಚರ್ಚೆಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ಪಕ್ಷದ ಬೆಂಬಲದೊಂದಿಗೆ ಬಿಹಾರದಲ್ಲಿ ಸರ್ಕಾರ ನಡೆಸುತ್ತಿರುವ ನಿತೀಶ್‌ ಕುಮಾರ್‌‌, ರಾಜ್ಯದ ವಿವಾದಕ್ಕೆ ಬಿಹಾರದ ಉದಾಹರಣೆಯನ್ನು ನೀಡಿದ್ದಾರೆ. “ಹಿಜಾಬ್ ವಿವಾದ ಅರ್ಥಹೀನ. ಬಿಹಾರದ ಶಾಲೆಯಲ್ಲಿ, ಎಲ್ಲರೂ ಒಂದೇ ರೀತಿಯ ಬಟ್ಟೆಗಳನ್ನು ಧರಿಸುತ್ತಾರೆ. ಆದರೆ ವಿದ್ಯಾರ್ಥಿನಿಯೊಬ್ಬಳು ತನ್ನ ತಲೆಯ ಮೇಲೆ ಏನೊ ಹಾಕುತ್ತಾರೆ ಅಥವಾ ಹಣೆಯ ಮೇಲೆ ಶ್ರೀಗಂಧವನ್ನು ಹಾಕಿದರೆ, ಅದರಲ್ಲಿ ಸಮಸ್ಯೆ ಏನಿದೆ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಹಿಜಾಬ್ ಧರಿಸಿದ ಶಿಕ್ಷಕಿಯರಿಗೂ ಇಲ್ಲ ಪ್ರವೇಶ: ಗೇಟ್‌ ಬಳಿಯೇ ಹಿಜಾಬ್, ಬುರ್ಕಾ ತೆಗೆದ ಶಿಕ್ಷಕಿಯರು

ಎಲ್ಲ ಜನರು ತಮ್ಮದೇ ಆದ ಜೀವನ ವಿಧಾನವನ್ನು ಹೊಂದಿದ್ದಾರೆ ಮತ್ತು ಅದರಲ್ಲಿ ಯಾರೂ ಹಸ್ತಕ್ಷೇಪ ಮಾಡಬಾರದು ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

“ಹಿಜಾಬ್ ವಿವಾದ ನಮ್ಮ ದೃಷ್ಟಿಯಲ್ಲಿ ವಿಶೇಷವೇನೂ ಅಲ್ಲ. ಕೆಲವರಿಗೆ ತಮ್ಮದೇ ಆದ ದಾರಿ ಇರುತ್ತದೆ. ಅದರಲ್ಲಿ ನಾವು ಮಧ್ಯಪ್ರವೇಶಿಸುವುದಿಲ್ಲ. ಅದರ ಬಗ್ಗೆ ನಾವು ಪ್ರತಿಕ್ರಿಯಿಸುವ ಅಗತ್ಯವಿಲ್ಲ. ನಾವು ಧಾರ್ಮಿಕ ಭಾವನೆಗಳಿಗೆ ಪರಸ್ಪರ ಗೌರವ ನೀಡಬೇಕು” ಎಂದು ನಿತೀಶ್ ಕುಮಾರ್ ಹೇಳಿದ್ದಾರೆ.

ಹಿಜಾಬ್ ವಿವಾದದಂತಹ ವಿಷಯಗಳ ಬಗ್ಗೆ ಚರ್ಚೆ ಅಥವಾ ಗಮನ ಅಗತ್ಯವಿಲ್ಲ ಎಂದು ನಿತೀಶ್ ಕುಮಾರ್ ಹೇಳಿದ್ದು, “ಕೆಲವು ವಿಷಯಗಳಿಗೆ ವಿಶೇಷ ಗಮನ ಅಗತ್ಯವಿಲ್ಲ. ಈ ಎಲ್ಲ ವಿಷಯಗಳ ಬಗ್ಗೆ ವಾದ ಮಾಡುವ ಅಗತ್ಯ ಏನಿದೆ” ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯದ ಉಡುಪಿಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಕಾಲೇಜಿಗೆ ಪ್ರವೇಶ ನಿರಾಕರಿಸಿದ ಹಿನ್ನಲೆಯಲ್ಲಿ, ಅದನ್ನು ಪ್ರಶ್ನಿಸಿ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಪ್ರಕರಣವನ್ನು ನ್ಯಾಯಾಲಯದ ಪೂರ್ಣ ಪೀಠ ವಿಚಾರಣೆ ನಡೆಸುತ್ತಿದೆ.

ಇದನ್ನೂ ಓದಿ: “ಶಾಲೆಗಳಲ್ಲಿ ಹಿಜಾಬ್ ನಿಷೇಧ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ”: ಅಮೆರಿಕಾ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...