Homeಕರ್ನಾಟಕಉ.ಕರ್ನಾಟಕದ ಉರ್ದು ಶಾಲೆಗಳಿಗೂ ತಟ್ಟಿದ ಹಿಜಾಬ್ ಸಂಘರ್ಷ: ಶಾಲೆಗೆ ಬರದ 80 ವಿದ್ಯಾರ್ಥಿನಿಯರು

ಉ.ಕರ್ನಾಟಕದ ಉರ್ದು ಶಾಲೆಗಳಿಗೂ ತಟ್ಟಿದ ಹಿಜಾಬ್ ಸಂಘರ್ಷ: ಶಾಲೆಗೆ ಬರದ 80 ವಿದ್ಯಾರ್ಥಿನಿಯರು

- Advertisement -
- Advertisement -

ಹಿಜಾಬ್- ಕೇಸರಿ ಶಾಲು ಸಂಘರ್ಷದಿಂದ ರಜೆ ಘೋಷಿಸಲಾಗಿದ್ದ ಪ್ರೌಢಶಾಲೆಗಳು ನಿನ್ನೆಯಿಂದ ಆರಂಭಗೊಂಡಿವೆ. ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಹಿಜಾಬ್ ಕಳಚಿಟ್ಟು ಬರುವಂತೆ ತಿಳಿಸಿದ್ದರಿಂದ ಹಲವು ಮಕ್ಕಳು ಶಾಲೆಯಿಂದ ವಾಪಸ್ ತೆರಳಿವೆ. ಪರೀಕ್ಷೆ ಬಹಿಷ್ಕರಿಸಿದ್ದಾರೆ. ಇಂದು ಉತ್ತರ ಕರ್ನಾಟಕದ ಉರ್ದು ಶಾಲೆಗಳಿಗೂ ತಟ್ಟಿದ್ದು, ಶಾಲೆಗಳು ಖಾಲಿ ಹೊಡೆಯುತ್ತಿವೆ.

ಕಲಬುರ್ಗಿ ಸರ್ಕಾರಿ ಉರ್ದು ಶಾಲೆಯಲ್ಲಿ 8, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಲ್ಲಿ ನಿನ್ನೆ ಹಲವರು ಹಿಜಾಬ್ ಧರಿಸಿ ಬಂದಿದ್ದರು. ಆದರೆ, ಇದನ್ನು ಮಾಧ್ಯಮಗಳು ಪ್ರಶ್ನಿಸಿ ವರದಿ ಮಾಡಿದ್ದು. ಮಾಧ್ಯಮ ವರದಿಗಳ ನಂತರ ಬಿಇಒ ಅವರು ಹೈಕೋರ್ಟ್ ಆದೇಶವನ್ನು ಅನುಸರಿಸುವಂತೆ ಶಾಲಾ ಆಡಳಿತ ಮಂಡಳಿಯನ್ನು ಕೇಳಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಸುಮಾರು 80 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿಲ್ಲ. ಇದರಿಂದ ಶಿಕ್ಷಕರು ಆನ್‌ಲೈನ್ ತರಗತಿಯನ್ನು ನಡೆಸಬೇಕಾಯಿತು.

ಇದನ್ನೂ ಓದಿ: ತಲೆಯ ಮೇಲೆ ಬಟ್ಟೆ, ಹಣೆಯ ಮೇಲೆ ಶ್ರೀಗಂಧ ಇದ್ದರೆ ಸಮಸ್ಯೆಯೇನು: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌‌ ಪ್ರಶ್ನೆ

ಇನ್ನು ಗದಗದ ಸರ್ಕಾರಿ ಉರ್ದು ಶಾಲೆಯಲ್ಲಿ ತರಗತಿಯೊಳಗೆ ಹಿಜಾಬ್ ಧರಿಸಿ ಕುಳಿತಿದ್ದ ವಿದ್ಯಾರ್ಥಿಗಳನ್ನು ಅಪರಿಚಿತ ಮಹಿಳೆಯೊಬ್ಬರು ಹೊರಗೆ ಕರೆತಂದಿದ್ದಾರೆ. ಇದರಿಂದ ಕೆಲಕಾಲ ಶಾಲಾ ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ವಿದ್ಯಾರ್ಥಿನಿಯನ್ನು ಹೊರಗೆ ಕರೆತಂದ ಹಿನ್ನೆಲೆ ಪಾಲಕರು ಗೇಟ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಬಳಿಕ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.

ನಿನ್ನೆ, ಶಿವಮೊಗ್ಗದ ಬಿ.ಎಚ್.ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರೌಢಶಾಲೆಯ 13 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ (10 ನೇ ತರಗತಿ) ಪೂರ್ವಸಿದ್ಧತಾ ಪರೀಕ್ಷೆಯನ್ನು ಹಿಜಾಬ್ ಧರಿಸಿಯೇ ಬರೆಯುವುದಾಗಿ ತಿಳಿಸಿದ್ದರು. ಇದಕ್ಕೆ ಒಪ್ಪದ ಶಾಲೆಯವರು ಹಿಜಾಬ್ ತೆಗೆಯುವಂತೆ ತಿಳಿಸಿದ್ದಾರೆ. ಹಿಜಾಬ್ ತೆಗೆಯಲು ನಿರಾಕರಿಸಿದ 13 ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ವಾಪಸ್ ತೆರಳಿದ್ದರು.

ಈ ನಡುವೆ ರಾಜ್ಯದ ಅಲ್ಪಸಂಖ್ಯಾತರ ಶಾಸಕರ ನಿಯೋಗವು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ನಿಯೋಗದಲ್ಲಿ ಕಾಂಗ್ರೆಸ್ ಶಾಸಕರಾದ ಯು.ಟಿ ಖಾದರ್‍, ಜಮೀರ್‍ ಅಹ್ಮದ್, ತನ್ವೀರ್‌ ಸೇಠ್, ರಹೀಂ ಖಾನ್, ರಿಜ್ವಾನ್ ಅರ್ಷದ್ ಮತ್ತು ಇತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಶಿವಮೊಗ್ಗ: ಶಾಲೆಯಲ್ಲಿ ಹಿಜಾಬ್‌ಗೆ ನಿರಾಕರಣೆ, ಪರೀಕ್ಷೆ ಬರೆಯದೆ ವಾಪಸ್ ತೆರಳಿದ 13 ವಿದ್ಯಾರ್ಥಿನಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...