Homeಕರ್ನಾಟಕಉ.ಕರ್ನಾಟಕದ ಉರ್ದು ಶಾಲೆಗಳಿಗೂ ತಟ್ಟಿದ ಹಿಜಾಬ್ ಸಂಘರ್ಷ: ಶಾಲೆಗೆ ಬರದ 80 ವಿದ್ಯಾರ್ಥಿನಿಯರು

ಉ.ಕರ್ನಾಟಕದ ಉರ್ದು ಶಾಲೆಗಳಿಗೂ ತಟ್ಟಿದ ಹಿಜಾಬ್ ಸಂಘರ್ಷ: ಶಾಲೆಗೆ ಬರದ 80 ವಿದ್ಯಾರ್ಥಿನಿಯರು

- Advertisement -
- Advertisement -

ಹಿಜಾಬ್- ಕೇಸರಿ ಶಾಲು ಸಂಘರ್ಷದಿಂದ ರಜೆ ಘೋಷಿಸಲಾಗಿದ್ದ ಪ್ರೌಢಶಾಲೆಗಳು ನಿನ್ನೆಯಿಂದ ಆರಂಭಗೊಂಡಿವೆ. ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಹಿಜಾಬ್ ಕಳಚಿಟ್ಟು ಬರುವಂತೆ ತಿಳಿಸಿದ್ದರಿಂದ ಹಲವು ಮಕ್ಕಳು ಶಾಲೆಯಿಂದ ವಾಪಸ್ ತೆರಳಿವೆ. ಪರೀಕ್ಷೆ ಬಹಿಷ್ಕರಿಸಿದ್ದಾರೆ. ಇಂದು ಉತ್ತರ ಕರ್ನಾಟಕದ ಉರ್ದು ಶಾಲೆಗಳಿಗೂ ತಟ್ಟಿದ್ದು, ಶಾಲೆಗಳು ಖಾಲಿ ಹೊಡೆಯುತ್ತಿವೆ.

ಕಲಬುರ್ಗಿ ಸರ್ಕಾರಿ ಉರ್ದು ಶಾಲೆಯಲ್ಲಿ 8, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಲ್ಲಿ ನಿನ್ನೆ ಹಲವರು ಹಿಜಾಬ್ ಧರಿಸಿ ಬಂದಿದ್ದರು. ಆದರೆ, ಇದನ್ನು ಮಾಧ್ಯಮಗಳು ಪ್ರಶ್ನಿಸಿ ವರದಿ ಮಾಡಿದ್ದು. ಮಾಧ್ಯಮ ವರದಿಗಳ ನಂತರ ಬಿಇಒ ಅವರು ಹೈಕೋರ್ಟ್ ಆದೇಶವನ್ನು ಅನುಸರಿಸುವಂತೆ ಶಾಲಾ ಆಡಳಿತ ಮಂಡಳಿಯನ್ನು ಕೇಳಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಇಂದು ಸುಮಾರು 80 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿಲ್ಲ. ಇದರಿಂದ ಶಿಕ್ಷಕರು ಆನ್‌ಲೈನ್ ತರಗತಿಯನ್ನು ನಡೆಸಬೇಕಾಯಿತು.

ಇದನ್ನೂ ಓದಿ: ತಲೆಯ ಮೇಲೆ ಬಟ್ಟೆ, ಹಣೆಯ ಮೇಲೆ ಶ್ರೀಗಂಧ ಇದ್ದರೆ ಸಮಸ್ಯೆಯೇನು: ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌‌ ಪ್ರಶ್ನೆ

ಇನ್ನು ಗದಗದ ಸರ್ಕಾರಿ ಉರ್ದು ಶಾಲೆಯಲ್ಲಿ ತರಗತಿಯೊಳಗೆ ಹಿಜಾಬ್ ಧರಿಸಿ ಕುಳಿತಿದ್ದ ವಿದ್ಯಾರ್ಥಿಗಳನ್ನು ಅಪರಿಚಿತ ಮಹಿಳೆಯೊಬ್ಬರು ಹೊರಗೆ ಕರೆತಂದಿದ್ದಾರೆ. ಇದರಿಂದ ಕೆಲಕಾಲ ಶಾಲಾ ಆವರಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ವಿದ್ಯಾರ್ಥಿನಿಯನ್ನು ಹೊರಗೆ ಕರೆತಂದ ಹಿನ್ನೆಲೆ ಪಾಲಕರು ಗೇಟ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಬಳಿಕ ಪೊಲೀಸರು ಮಧ್ಯಪ್ರವೇಶಿಸಿದ್ದಾರೆ.

ನಿನ್ನೆ, ಶಿವಮೊಗ್ಗದ ಬಿ.ಎಚ್.ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರೌಢಶಾಲೆಯ 13 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ (10 ನೇ ತರಗತಿ) ಪೂರ್ವಸಿದ್ಧತಾ ಪರೀಕ್ಷೆಯನ್ನು ಹಿಜಾಬ್ ಧರಿಸಿಯೇ ಬರೆಯುವುದಾಗಿ ತಿಳಿಸಿದ್ದರು. ಇದಕ್ಕೆ ಒಪ್ಪದ ಶಾಲೆಯವರು ಹಿಜಾಬ್ ತೆಗೆಯುವಂತೆ ತಿಳಿಸಿದ್ದಾರೆ. ಹಿಜಾಬ್ ತೆಗೆಯಲು ನಿರಾಕರಿಸಿದ 13 ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ವಾಪಸ್ ತೆರಳಿದ್ದರು.

ಈ ನಡುವೆ ರಾಜ್ಯದ ಅಲ್ಪಸಂಖ್ಯಾತರ ಶಾಸಕರ ನಿಯೋಗವು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು. ನಿಯೋಗದಲ್ಲಿ ಕಾಂಗ್ರೆಸ್ ಶಾಸಕರಾದ ಯು.ಟಿ ಖಾದರ್‍, ಜಮೀರ್‍ ಅಹ್ಮದ್, ತನ್ವೀರ್‌ ಸೇಠ್, ರಹೀಂ ಖಾನ್, ರಿಜ್ವಾನ್ ಅರ್ಷದ್ ಮತ್ತು ಇತರರು ಉಪಸ್ಥಿತರಿದ್ದರು.


ಇದನ್ನೂ ಓದಿ: ಶಿವಮೊಗ್ಗ: ಶಾಲೆಯಲ್ಲಿ ಹಿಜಾಬ್‌ಗೆ ನಿರಾಕರಣೆ, ಪರೀಕ್ಷೆ ಬರೆಯದೆ ವಾಪಸ್ ತೆರಳಿದ 13 ವಿದ್ಯಾರ್ಥಿನಿಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...