Homeಕರ್ನಾಟಕಕೋಲಾರ - ಪೊಲೀಸ್‌‌ ಬಲದೊಂದಿಗೆ ಅನಧೀಕೃತವಾಗಿ ಚರ್ಚ್‌ ಧ್ವಂಸ ಮಾಡಿದ ತಹಸಿಲ್ದಾರ್‌: ಆರೋಪ

ಕೋಲಾರ – ಪೊಲೀಸ್‌‌ ಬಲದೊಂದಿಗೆ ಅನಧೀಕೃತವಾಗಿ ಚರ್ಚ್‌ ಧ್ವಂಸ ಮಾಡಿದ ತಹಸಿಲ್ದಾರ್‌: ಆರೋಪ

ನಾವು ಪ್ರಾರ್ಥಿಸುವ ಏಸುವಿನ ಪ್ರತಿಮೆಯನ್ನು ಧ್ವಂಸ ಮಾಡಬೇಡಿ, ಹಾಗೆ ಇಳಿಸಿಕೊಡಿ ಎಂದು ಪರಿಪರಿಯಾಗಿ ವಿನಂತಿಸಿದರೂ, ಪ್ರತಿಮೆಯನ್ನು ಕೆಳಕ್ಕೆ ಬೀಳಿಸಿ ಚೂರು ಚೂರು ಮಾಡಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ

- Advertisement -
- Advertisement -

ಕೋಲಾರ ಜಿಲ್ಲೆಯ ಮುಳಬಾಗಿಲಿನ ತಹಸಿಲ್ದಾರ್‌ ನೇತೃತ್ವದಲ್ಲಿ ಪೊಲೀಸರ ಬಂದೊಬಸ್ತ್‌ನೊಂದಿಗೆ ಸುಮಾರು 20 ಅಡಿಯ ಕ್ರಿಸ್ತ ಪ್ರತಿಮೆ ಮತ್ತು ಕ್ರೈಸ್ತರ ಪ್ರಾರ್ಥನಾ ಮಂದಿರವನ್ನು ಸೋಮವಾರದಂದು ಜೆಸಿಬಿ ಮೂಲಕ ಕೆಡವಿ ಹಾಕಲಾಗಿದೆ. ತಹಸಿಲ್ದಾರ್‌ ಅವರ ಕ್ರಮಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಭೂಮಿಯ ಪ್ರಕರಣವು ಇನ್ನೂ ಹೈಕೋರ್ಟ್‌ನಲ್ಲಿದ್ದು, ಏಕಾಏಕಿಯಾಗಿ ಬಂದು ಚರ್ಚ್‌ ಧ್ವಂಸ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಮುಳಬಾಗಿಲು ತಾಲುಕಿನ ಗೋಕುಂಟೆ ಗ್ರಾಮದ ಸಣ್ಣಗುಡ್ಡವೊಂದರಲ್ಲಿ ಕ್ರಿಶ್ಚಿಯನ್‌ ಸಮುದಾಯವು ಪ್ರಾರ್ಥನಾ ಮಂದಿರವೊಂದನ್ನು ಕಟ್ಟಿಕೊಂಡು ಸುಮಾರು 40 ವರ್ಷದಿಂದ ಪ್ರಾರ್ಥನೆ ನಡೆಸುತ್ತಾ ಬರುತ್ತಿದೆ. ಈ ಜಾಗದಲ್ಲಿ ದೊಡ್ಡದಾದ ಕ್ರಿಸ್ತ ಮೂರ್ತಿಯನ್ನು 2004ರಲ್ಲಿ ಸ್ಥಾಪಿಸಲಾಗಿತ್ತು. “ಈ ಪ್ರಾರ್ಥನಾ ಸ್ಥಳಕ್ಕೆ ಕ್ರಿಶ್ಚಿಯನ್ನರು ಮಾತ್ರವಲ್ಲದೆ, ಎಲ್ಲಾ ಸಮುದಾಯದವರೂ ಬಂದು ಪ್ರಾರ್ಥಿಸಿ ಹೋಗುತ್ತಿದ್ದರು” ಎಂದು ಗ್ರಾಮಸ್ಥರಾದ ಜೆ. ರಾಯಪ್ಪ ಅವರು ನಾನುಗೌರಿ.ಕಾಂ ಜೊತೆ ಮಾತನಾಡುತ್ತಾ ಹೇಳಿದ್ದಾರೆ.

ಈ ನಡುವೆ, ಕ್ರಿಶ್ಚಿಯನ್ನರು 300 ಎಕರೆ ಜಾಗವನ್ನು ಕಬಳಿಸುತ್ತಿದ್ದಾರೆ ಎಂದು ದುಷ್ಕರ್ಮಿಗಳು ಸುಳ್ಳು ಮಾಹಿತಿಯನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಬ್ಬಿಸಿದ್ದರು. ವಾಸ್ತವದಲ್ಲಿ ಪ್ರಾರ್ಥನಾ ಮಂದಿರ ಸರ್ವೇ ನಂಬರ್‌‌ 168 ಮತ್ತು 58 ನಲ್ಲಿ ಇದ್ದು, ಇದರಲ್ಲಿ ಕೇವಲ 3 ಎಕರೆ 26 ಗುಂಟೆ ಅಷ್ಟೇ ಇದೆ ಎಂದು ರಾಯಪ್ಪ ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಈ ಜಮೀನಿಗೆ ಸಂಬಂಧಪಟ್ಟಂತೆ ನಮ್ಮಲ್ಲಿ ಹಕ್ಕು ಪತ್ರ ಇದೆ, ಪಂಚಾಯತ್‌ನಿಂದ ಖಾತೆ ಮಾಡಿಕೊಟ್ಟಿದ್ದಾರೆ. ತಾಲೂಕು ಪಂಚಾಯತ್‌ನಿಂದ ಇ-ಸೊತ್ತು ಮಾಡಿಕೊಟ್ಟಿದ್ದಾರೆ. ಈ ಎಲ್ಲಾ ದಾಖಲೆಯನ್ನು ಮಾಡಿಕೊಟ್ಟು ದಾಖಲೆ ಸರಿಯಿಲ್ಲ ಎಂದು ಕೇಸು ಹಾಕಲಾಗಿದೆ. ಈ ಹಿನ್ನಲೆಯಲ್ಲಿ ನಾವು ಕೂಡಾ ನ್ಯಾಯಾಲಯದಲ್ಲಿ ದಾವೆ ಹೂಡಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

“ಜಮೀನಿಗೆ ಸಂಬಂಧಪಟ್ಟಂತೆ ಜನವರಿ 16ರ ಬುಧವಾರದಂದು ಹೈಕೊರ್ಟ್‌ನಲ್ಲಿ ವಿಚಾರಣೆ ಬಾಕಿಯಿದೆ. ವಿಚಾರಣೆ ನ್ಯಾಯಾಲಯದಲ್ಲಿ ಇರುವಾಗ ಸೋಮವಾರದಂದು ತಾಲೂಕು ದಂಡಾಧಿಕಾರಿಗಳು ಜೆಸಿಬಿಯೊಂದಿಗೆ ಏಕಾಏಕಿ ಬಂದು ನ್ಯಾಯಾಲಯದ ಆದೇಶ ಇದೆ ಎಂದು ಹೇಳಿ ಚರ್ಚ್ ಧ್ವಂಸ ಮಾಡಿದ್ದಾರೆ” ಎಂದು ರಾಯಪ್ಪ ಹೇಳಿದ್ದಾರೆ.

“ತಹಸಿಲ್ದಾರ್‌ ಅವರು ನ್ಯಾಯಾಲಯದ ಆದೇಶ ಇದೆ ಎಂದು ಯಾವುದೋ ಚಿತ್ರವನ್ನು ಮೊಬೈಲ್‌ನಲ್ಲಿ ತೋರಿಸಿದ್ದಾರೆ. ಸರ್ಕಾರಿ ಅಧಿಕಾರಿ ನ್ಯಾಯಾಲಯದ ಆದೇಶವನ್ನು ಪತ್ರದ ಮೂಲಕ ತೋರಿಸಬೇಕಲ್ಲವೇ? ಅವರು ಮೊಬೈಲ್‌ನಲ್ಲಿ ತೋರಿಸಿದ ಪತ್ರದಲ್ಲಿ ನ್ಯಾಯಾಲಯದ ಮೊಹರು ಇರಲಿಲ್ಲ, ನ್ಯಾಯಧೀಶರ ಸಹಿ ಇರಲಿಲ್ಲ. ಏಕಾಏಕಿ ಬಂದು ಚರ್ಚ್‌ ಧ್ವಂಸ ಮಾಡಿದ್ದಾರೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

“ಆರ್ಚ್‌, ಏಸುವಿನ ಪ್ರತಿಮೆ, ಪ್ರಾರ್ಥನಾ ಮಂದಿರವನ್ನು ಧ್ವಂಸ ಮಾಡಿದ್ದಾರೆ. ನಾವು ಅವರಿಗೆ, ಕನಿಷ್ಠ ಪಕ್ಷ ನಾವು ಪ್ರಾರ್ಥಿಸುವ ಏಸುವಿನ ಪ್ರತಿಮೆಯನ್ನು ಧ್ವಂಸ ಮಾಡಬೇಡಿ, ಹಾಗೆ ಇಳಿಸಿಕೊಡಿ ಎಂದು ಪರಿಪರಿಯಾಗಿ ವಿನಂತಿಸಿದೆವು. ಆದರೆ ಅವರು ಅದನ್ನು ಕೇಳದೇ, ಏಸುವಿನ ಪ್ರತಿಮೆಯನ್ನು ಕೆಳಕ್ಕೆ ಬೀಳಿಸಿ, ಚೂರು ಚೂರು ಮಾಡಿದ್ದಾರೆ. ಏಸುವಿನ ಪ್ರತಿಮೆಯ ಅರ್ಧ ಭಾಗವನ್ನು ತಹಸಿಲ್ದಾರ್‌ ಅವರೇ ಟ್ರಾಕ್ಟರ್‌ಗೆ ಹಾಕಿಕೊಂಡು ಹೋಗಿದ್ದಾರೆ” ಎಂದು ಜೆ. ರಾಯಪ್ಪ ಅವರು ಬೇಸರದಿಂದ ಹೇಳಿದ್ದಾರೆ.

ಪ್ರಾರ್ಥನಾ ಮಂದಿರ ಮತ್ತು ಕ್ರಿಸ್ತ ಪ್ರತಿಮೆ ಸರ್ಕಾರಿ ಭೂಮಿಯಲ್ಲಿ ಇರುವುದರಿಂದ, ನ್ಯಾಯಾಲಯದ ಆದೇಶದಂತೆ ಅದನ್ನು ಕೆಡವಲಾಗಿದೆ ಎಂದು ಮುಳಬಾಗಲು ತಹಸಿಲ್ದಾರ್‌‌ ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಪ್ರತಿಕ್ರಿಯೆಗಾಗಿ ನಾನುಗೌರಿ.ಕಾಂ ಮುಳಬಾಗಿಲು ತಹಸಿಲ್ದಾರ್‌ ಅವರಿಗೆ ಕರೆ ಮಾಡಿತ್ತಾದರೂ, ಅವರು ಕರೆಯನ್ನು ಸ್ವೀಕರಿಸಿಲ್ಲ.

ಈ ವರದಿಗಳನ್ನೂ ಓದಿ

ಕ್ರಿಶ್ಚಿಯನ್ನರ ಮೇಲೆ ಹಿಂಸಾಚಾರ: ಉತ್ತರ ಪ್ರದೇಶದಲ್ಲೇ ಹೆಚ್ಚು

ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ಕೋಲಾರ: ಕ್ರಿಶ್ಚಿಯನ್ನರ ಮೇಲೆ ಹಲ್ಲೆ, ಧರ್ಮಗ್ರಂಥಗಳಿಗೆ ಬೆಂಕಿ

ಬೇಲೂರು: ಕ್ರಿಶ್ಚಿಯನ್ನರ ಪ್ರಾರ್ಥನೆಗೆ ಬಜರಂಗದಳ ಕಾರ್ಯಕರ್ತರಿಂದ ಅಡ್ಡಿ, ಮಹಿಳೆಯರಿಂದ ಛೀಮಾರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...